8 ವರ್ಷಗಳ ಹರ್ಷ : ದೇಶ ಮತ್ತಷ್ಟು ಅಭಿವೃದ್ಧಿಯಾಗಲಿ


Team Udayavani, May 30, 2022, 6:00 AM IST

8 ವರ್ಷಗಳ ಹರ್ಷ : ದೇಶ ಮತ್ತಷ್ಟು ಅಭಿವೃದ್ಧಿಯಾಗಲಿ

ಸೋಮವಾರಕ್ಕೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎರಡನೇ ಅವಧಿಯ ಸರಕಾರಕ್ಕೆ ಮೂರು ವರ್ಷ ಹಾಗೂ ಒಟ್ಟಾರೆಯಾಗಿ ಎಂಟು ವರ್ಷಗಳು ತುಂಬಲಿವೆ. 2014ರಲ್ಲಿ ಅಭೂತಪೂರ್ವವಾಗಿ ಗೆದ್ದು ಅಧಿಕಾರದ ಚುಕ್ಕಾಣಿ ಹಿಡಿದಿದ್ದ, ಮೋದಿ ಅವರು ಎರಡನೇ ಅವಧಿಯಲ್ಲಿಯೂ ಅದಕ್ಕಿಂತ ಹೆಚ್ಚು ಸ್ಥಾನ ಪಡೆದು ಪುನಾರಾಯ್ಕೆಯಾಗಿದ್ದರು.

ಕಳೆದ ಎಂಟು ವರ್ಷಗಳಿಂದಲೂ ಸ್ಥಿರ ಸರಕಾರ ಕೊಡುವಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತ ಯಶಸ್ವಿಯಾಗಿದೆ. 1991ರ ಅನಂತರ ದೇಶದಲ್ಲಿ ಇದ್ದ ಸಮ್ಮಿಶ್ರ ಸರಕಾರದ ಗೊಂದಲಗಳಿಗೆ ಇತಿಶ್ರೀ ಹಾಡಿದ್ದು 2014ರಲ್ಲಿ ಆಯ್ಕೆಯಾದ ಎನ್‌ಡಿಎ ಸರಕಾರ. ಈ ಚುನಾವಣೆಯಲ್ಲಿ ಬಿಜೆಪಿಯೇ ಬಹುಮತಕ್ಕೆ ಬೇಕಾದ ಸ್ಥಾನ ಪಡೆದಿತ್ತು ಎಂಬುದು ಬೇರೆ ವಿಚಾರ. ಹಾಗೆಯೇ 2019ರಲ್ಲಿಯೂ ಬಿಜೆಪಿಯೇ ಸ್ವತಂತ್ರವಾಗಿ ಅಧಿಕಾರಕ್ಕೇರುವಷ್ಟು ಸ್ಥಾನಗಳಲ್ಲಿ ಗೆದ್ದಿತ್ತು.

ಸ್ವತಂತ್ರವಾದ ಸರಕಾರ ರಚನೆಗೆ ಬೇಕಾದ ಸ್ಥಾನಗಳನ್ನು ಹೊಂದಿದ್ದರೂ, ಈಗಲೂ ಕೇಂದ್ರದಲ್ಲಿನ ಎನ್‌ಡಿಎ ಸರಕಾರ ಮೈತ್ರಿಧರ್ಮ ಪಾಲನೆ ಮಾಡಿಕೊಂಡು ಎನ್‌ಡಿಎ ಹೆಸರಿನಲ್ಲಿಯೇ ಅಧಿಕಾರ ನಡೆಸುತ್ತಿದೆ. ಜತೆಗೆ, ಸ್ವತ್ಛಭಾರತ ಯೋಜನೆಯಿಂದ ಹಿಡಿದು, ಇತ್ತೀಚಿನ ರಸಗೊಬ್ಬರಕ್ಕೆ ಹೆಚ್ಚಿನ ಸಬ್ಸಿಡಿ ನೀಡುವ ಕುರಿತ ನಿರ್ಧಾರ ಜನಸಾಮಾನ್ಯರ ಉಪಯೋಗಕ್ಕಾಗಿ ತೆಗೆದುಕೊಂಡಂಥವುಗಳೇ ಆಗಿವೆ. ಅದರಲ್ಲೂ ಈಗ ಮುಂಗಾರು ಆರಂಭದ ಹೊತ್ತಿನಲ್ಲೇ ರಸಗೊಬ್ಬರಕ್ಕೆ ಹೆಚ್ಚಿನ ಸಬ್ಸಿಡಿ ನೀಡಲು ಹೊರಟಿರುವುದು ರೈತಾಪಿ ವರ್ಗಕ್ಕೆ ಅನುಕೂಲವಾಗುವ ನಿರ್ಧಾರ.

2014ರ ಮೊದಲ ಅವಧಿಯ ಸರಕಾರಕ್ಕಿಂತ 2019ರಲ್ಲಿ ರಚನೆಯಾದ ಎರಡನೇ ಅವಧಿಯ ಸರಕಾರ ಎದುರಿಸಿದ ಸವಾಲುಗಳು ಹೆಚ್ಚು. ಅಧಿಕಾರಕ್ಕೇರಿದ ಏಳೆಂಟು ತಿಂಗಳಲ್ಲಿ ಇಡೀ ಜಗತ್ತು ಕೊರೊನಾದ ಪಾಶಕ್ಕೆ ಸಿಕ್ಕಿ ಒದ್ದಾಡಿತು. ಕೊರೊನಾದಿಂದ ಪಾರಾಗಲು ಸಣ್ಣಪುಟ್ಟ ರಾಷ್ಟ್ರಗಳೂ ಪರದಾಡಿದವು. ಆದರೆ, ಇಲ್ಲಿಯೂ ಕೊರೊನಾ ಆರಂಭದ ದಿನಗಳು, ಅಂದರೆ, ಲಾಕ್‌ಡೌನ್‌ ಘೋಷಿಸಿದ ವೇಳೆಯಲ್ಲಿ ಜನರ ಸಾಮೂಹಿಕ ವಲಸೆ ಒಂದಷ್ಟು ಸಮಸ್ಯೆಗೆ ಕಾರಣವಾಯಿತಾದರೂ ಅನಂತರದಲ್ಲಿ ಕೊರೊನಾ ನಿಯಂತ್ರಣ ವಿಚಾರದಲ್ಲಿ ತೆಗೆದುಕೊಂಡ ಕ್ರಮಗಳು ಮಾತ್ರ ಉತ್ತಮವಾಗಿದ್ದವು. ಅದರಲ್ಲೂ ಅತ್ಯಂತ ಕಡಿಮೆ ಅವಧಿಯಲ್ಲಿ ಲಸಿಕೆ ಕಂಡುಹಿಡಿದು, ಇದನ್ನು ಭಾರತದಲ್ಲೇ ಉತ್ಪಾದಿಸಿ ಎಲ್ಲರಿಗೂ ಕೊಟ್ಟಿದ್ದು ಮಾತ್ರ ಗಮನಾರ್ಹ.

ಅಷ್ಟೇ ಅಲ್ಲ, ಕೊರೊನಾ ಆರಂಭದಲ್ಲಿ ದೇಶದಲ್ಲಿ ಎಲ್ಲಿಯೂ ಪಿಪಿಇ ಕಿಟ್‌ ಇರಲಿಲ್ಲ. ಆಸ್ಪತ್ರೆಗಳಲ್ಲಿ ಮೂಲಸೌಕರ್ಯಗಳು ಇರಲಿಲ್ಲ. ಅಲ್ಲದೆ ಆಮ್ಲಜನಕದ ಅವ್ಯವಸ್ಥೆಯು ಎರಡನೇ ಅಲೆ ವೇಳೆ ಕಾಡಿತು. ಆದರೂ, ಭಾರತದಂಥ ಅಪಾರ ಪ್ರಮಾಣದ ಜನಸಂಖ್ಯೆ ಇರುವ ದೇಶದಲ್ಲಿ ಎಲ್ಲರಿಗೂ ಆರೋಗ್ಯ ಕೈಗೆಟಕುವಂತೆ ಮಾಡಿದ್ದು ಮತ್ತು  ಮೂಲಸೌಕರ್ಯಗಳ ವ್ಯವಸ್ಥೆ ಮಾಡಿದ್ದು ಹೆಗ್ಗಳಿಕೆಯೇ ಸರಿ.

ಕೊರೊನಾ ಇನ್ನೂ ಹೋಗಿಲ್ಲ. ಇದರ ನಡುವೆಯೇ ಇಡೀ ಜಗತ್ತು ಜೀವಿಸುತ್ತಿದೆ. ಸರಿದಾರಿಯಿಂದ ಪಕ್ಕಕ್ಕೆ ಜರಗಿದ್ದ ಆರ್ಥಿಕತೆ, ನಿಧಾನಕ್ಕೆ ಚೇತರಿಕೆಯಾಗುತ್ತಿದೆ. ಆದರೆ ಇನ್ನೂ ಕೊರೊನಾ ಸಮಸ್ಯೆಗಳು ಇವೆ. ಹೀಗಾಗಿ ಮುಂದಿನ ದಿನಗಳಲ್ಲಿ ನಿರುದ್ಯೋಗ ಸಮಸ್ಯೆ ಇತ್ಯರ್ಥ, ಕೊರೊನಾದಿಂದಾಗಿ ನಷ್ಟಕ್ಕೀಡಾದವರಿಗೆ ಬದುಕು ಕಟ್ಟಿಕೊಡುವುದು ಸೇರಿದಂತೆ ಪ್ರಮುಖವಾದ ಕೆಲಸಗಳನ್ನು ಮಾಡಬೇಕಾಗಿದೆ. ಇದರಲ್ಲಿ ಯಶಸ್ವಿ­­ಯಾಗಲಿ ಎಂದು ಈ ಸಂದರ್ಭದಲ್ಲಿ ಹೇಳಬಹುದು.

ಟಾಪ್ ನ್ಯೂಸ್

Mudigere: 30 ಅಡಿ ಎತ್ತರದಿಂದ ಪಂಚಾಯಿತಿ ಆವರಣಕ್ಕೆ ಬಿದ್ದ ಕಾರು… ಮೂವರ ಸ್ಥಿತಿ ಗಂಭೀರ

Mudigere: 30 ಅಡಿ ಎತ್ತರದಿಂದ ಪಂಚಾಯಿತಿ ಆವರಣಕ್ಕೆ ಬಿದ್ದ ಕಾರು… ಮೂವರ ಸ್ಥಿತಿ ಗಂಭೀರ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

MRPL: ಕರಾವಳಿಗೆ ಮೊದಲ “ಗ್ರೀನ್‌ ಹೈಡ್ರೋಜನ್‌’ ಘಟಕ

MRPL: ಕರಾವಳಿಗೆ ಮೊದಲ “ಗ್ರೀನ್‌ ಹೈಡ್ರೋಜನ್‌’ ಘಟಕ

AFGvsSA; ಐತಿಹಾಸಿಕ ಸರಣಿ ಗೆದ್ದ ಅಫ್ಘಾನ್:‌ ದ.ಆಫ್ರಿಕಾಗೆ 177 ರನ್‌ ಅಂತರದ ಸೋಲು

AFGvsSA; ಐತಿಹಾಸಿಕ ಸರಣಿ ಗೆದ್ದ ಅಫ್ಘಾನ್:‌ ದ.ಆಫ್ರಿಕಾಗೆ 177 ರನ್‌ ಅಂತರದ ಸೋಲು

Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮುಲ್ ಸ್ಪಷ್ಟನೆ

Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮೂಲ್ ಸ್ಪಷ್ಟನೆ

Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ

Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Assembly Election: ಜಮ್ಮು-ಕಾಶ್ಮೀರದಲ್ಲಿ ಪ್ರಜಾಪ್ರಭುತ್ವದ ಹಬ್ಬ

Assembly Election: ಜಮ್ಮು-ಕಾಶ್ಮೀರದಲ್ಲಿ ಪ್ರಜಾಪ್ರಭುತ್ವದ ಹಬ್ಬ

Namma-clinic

Karnataka; ಬಸ್‌ ನಿಲ್ದಾಣಗಳಲ್ಲಿ ನಮ್ಮ ಕ್ಲಿನಿಕ್‌ ಸಮುಚಿತ ನಿರ್ಧಾರ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Mudigere: 30 ಅಡಿ ಎತ್ತರದಿಂದ ಪಂಚಾಯಿತಿ ಆವರಣಕ್ಕೆ ಬಿದ್ದ ಕಾರು… ಮೂವರ ಸ್ಥಿತಿ ಗಂಭೀರ

Mudigere: 30 ಅಡಿ ಎತ್ತರದಿಂದ ಪಂಚಾಯಿತಿ ಆವರಣಕ್ಕೆ ಬಿದ್ದ ಕಾರು… ಮೂವರ ಸ್ಥಿತಿ ಗಂಭೀರ

Langoti Man Movie Review

Langoti Man Movie Review: ಸಂಪ್ರದಾಯದ ಕೊಂಡಿಯಲ್ಲಿ ಲಂಗೋಟಿ!

Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್‌ ಗಾಂಧಿ

Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್‌ ಗಾಂಧಿ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ

Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.