ಹೆಚ್ಚುವರಿ ಹುದ್ದೆ, ಅನಗತ್ಯ ವೆಚ್ಚಕ್ಕೆ ಬ್ರೇಕ್‌: ಸಮಯೋಚಿತ ನಿರ್ಧಾರ


Team Udayavani, Oct 12, 2022, 6:00 AM IST

ಹೆಚ್ಚುವರಿ ಹುದ್ದೆ, ಅನಗತ್ಯ ವೆಚ್ಚಕ್ಕೆ ಬ್ರೇಕ್‌: ಸಮಯೋಚಿತ ನಿರ್ಧಾರ

ರಾಜ್ಯದ ಆರ್ಥಿಕ ಪರಿಸ್ಥಿತಿ ಸುಧಾರಣೆ ಮತ್ತು ಅನಗತ್ಯ ಹುದ್ದೆ ಹಾಗೂ ವೆಚ್ಚ ಕಡಿತಕ್ಕಾಗಿ ಕೃಷಿ, ತೋಟಗಾರಿಕೆ ಹಾಗೂ ರೇಷ್ಮೆ ಇಲಾಖೆಗಳ 2000 ಹುದ್ದೆ ರದ್ದುಗೊಳಿಸಲು ಸಂಪುಟ ಉಪ ಸಮಿತಿ ಕೈಗೊಂಡಿರುವ ತೀರ್ಮಾನ ಸ್ವಾಗತಾರ್ಹ.

ಮೂರು ಇಲಾಖೆಗಳಲ್ಲಿ ವರ್ಷಗಳ ಕಾಲ ಅನಗತ್ಯ ಹಾಗೂ ಹೆಚ್ಚುವರಿ ಹುದ್ದೆಗಳಿಂದ ಆರ್ಥಿಕವಾಗಿ ಸರಕಾರಕ್ಕೆ ದೊಡ್ಡ ಹೊರೆಯೇ ಆಗಿತ್ತು. ಸಂಪುಟ ಉಪ ಸಮಿತಿ ರಚಿಸಿ ಸಾಕಷ್ಟು ದಿನಗಳಾದರೂ ಹಲವು ಸಭೆಗಳ ಅನಂತರ ಅಂತಿಮವಾಗಿ ಉತ್ತಮ ತೀರ್ಮಾನ ಕೈಗೊಳ್ಳಲಾಗಿದೆ.

ಇದೇ ಸಂದರ್ಭದಲ್ಲಿ ಸರಕಾರಕ್ಕೆ ಹೊರೆಯಾಗಿ ಪರಿಣಮಿಸಿರುವ ಕೃಷಿ ಇಲಾಖೆ ವ್ಯಾಪ್ತಿಯ ಮೂರು ನಿಗಮಗಳನ್ನು ಮುಚ್ಚುವ ನಿರ್ಧಾರ ಕೈಗೊಂಡಿರುವುದು ಒಳ್ಳೆಯ ಬೆಳವಣಿಗೆ.

ಅಧಿಕಾರಕ್ಕೆ ಬಂದವರು ರಾಜಕೀಯ ಕಾರಣಗಳಿಗೆ ನಿಗಮ -ಮಂಡಳಿ ರಚಿಸಿ ವಾರ್ಷಿಕವಾಗಿ ನೂರಾರು ಕೋ. ರೂ.ಗಳನ್ನು ಅವುಗಳ ನಿರ್ವಹಣೆಗಾಗಿಯೇ ವೆಚ್ಚ ಮಾಡಲಾಗುತ್ತಿದೆ. ಆದರೆ ಎಷ್ಟೋ ನಿಗಮಗಳಿಂದ ಸರಕಾರಕ್ಕೆ ಯಾವುದೇ ರೀತಿಯ ಪ್ರಯೋಜನ ಆಗುತ್ತಿಲ್ಲ. ಜತೆಗೆ ನಿಗಮ ರಚನೆಯ ಹಿಂದಿನ ಉದ್ದೇಶವೂ ಸಾಕಾರವಾಗುತ್ತಿಲ್ಲ. ಸಿಎಜಿ ವರದಿಯಲ್ಲೂ ಸಾಕಷ್ಟು ನಿಗಮ ಮಂಡಳಿಗಳು ಸರಕಾರಕ್ಕೆ ಆರ್ಥಿಕವಾಗಿ ಬಹುದೊಡ್ಡ ಹೊರೆಯಾಗಿರುವ ಬಗ್ಗೆ ಪ್ರಸ್ತಾವಿಸಲಾಗಿತ್ತು.

ಮೂರು ಇಲಾಖೆ ಹೊರತುಪಡಿಸಿ ರಾಜ್ಯದ 20 ಕ್ಕೂ ಹೆಚ್ಚು ಇಲಾಖೆಗಳಲ್ಲಿ ಇದೇ ರೀತಿ ಅನಗತ್ಯ ಹಾಗೂ ಹೆಚ್ಚುವರಿ ಹುದ್ದೆಗಳನ್ನು ಸೃಜಿಸಲಾಗಿದೆ. ಆ ಬಗ್ಗೆಯೂ ಸರಕಾರ ತೀರ್ಮಾನ ಕೈಗೊಳ್ಳಬೇಕು. ಉಪ ಸಮಿತಿಯು ಕೆಲವೊಂದು ಇಲಾಖೆಗಳ ಹುದ್ದೆ ಕಡಿತದ ಬಗ್ಗೆ ಸಲಹೆ ಕೇಳಿದೆ. ಇದೇ ರೀತಿ ರಾಜ್ಯದ ಎಲ್ಲ ಇಲಾಖೆಗಳಲ್ಲಿಯೂ ಇರುವ ಅನಗತ್ಯ ಹಾಗೂ ಹೆಚ್ಚುವರಿ ಹುದ್ದೆ ರದ್ದು ಮಾಡುವ ಬಗ್ಗೆ ಸರಕಾರ ಗಂಭೀರವಾಗಿ ಚಿಂತನೆ ನಡೆಸಬೇಕಾಗಿದೆ.

ಇದರ ಜತೆಗೆ ಇಲಾಖೆಗಳಲ್ಲಿ ಇತ್ತೀಚಿನ ದಿನಗಳಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಸಾವಿರಾರು ಸಿಬ್ಬಂದಿ ನೇಮಿಸಿಕೊಳ್ಳುವ ಚಾಳಿ ಆರಂಭವಾಗಿದೆ. ವಿಧಾನಸೌಧ- ವಿಕಾಸಸೌಧ, ಬಹುಮಹಡಿ ಕಟ್ಟಡ, ಸಚಿವಾಲಯ, ವಿಧಾನಸಭೆ ಹಾಗೂ ವಿಧಾನಪರಿಷತ್‌ ಸಚಿವಾಲಯ, ಶಾಸಕರ ಭವನ ಇಲ್ಲಿ ಸಾವಿರಾರು ಮಂದಿ ಅನಗತ್ಯವಾಗಿ ಹೊರಗುತ್ತಿಗೆಯಲ್ಲಿ ನೇಮಕಗೊಂಡು ಮಾಡಲು ಕೆಲಸ ಇಲ್ಲದಂತಾಗಿದೆ. ಇದರ ಬಗ್ಗೆ ಸರಕಾರ ತತ್‌ಕ್ಷಣ ಗಮನಹರಿಸಬೇಕು.

ವಿಧಾನಸೌಧ- ವಿಕಾಸಸೌಧ, ಸಚಿವರ ನಿವಾಸ, ಶಾಸಕರ ಭವನ ನವೀಕರಣ, ಪೀಠೊಪಕರಣ ಬದಲಾವಣೆ, ಹೊರಗುತ್ತಿಗೆಯ ಸಿಬಂದಿ ವಾಹನ ಖರೀದಿ ಹಾಗೂ ಬಾಡಿಗೆಗೆ ವಾಹನ ಪಡೆಯುವುದು ಸರಕಾರಕ್ಕೆ ಅತೀ ದೊಡ್ಡ ಹೊರೆಯಾಗಿದೆ. ಕೋಟ್ಯಂತರ ರೂ. ವಾರ್ಷಿಕವಾಗಿ ಇದಕ್ಕೆ ವ್ಯಯಿಸಲಾಗುತ್ತಿದೆ. ಇದರ ಬಗ್ಗೆ ಸರಕಾರ ಅಗತ್ಯ ಗಮನಹರಿಸಬೇಕಾಗಿದೆ.

ರಾಜ್ಯದ ಬೊಕ್ಕಸಕ್ಕೆ ಹೊರೆಯಾಗಿರುವ ಅನಗತ್ಯ ಹುದ್ದೆ ಹಾಗೂ ವೆಚ್ಚಕ್ಕೆ ಕಡಿವಾಣ ಹಾಕಲೇಬೇಕಾಗಿದೆ. ಇಲ್ಲದಿದ್ದರೆ ಆರ್ಥಿಕ ಪರಿಸ್ಥಿತಿ ಸುಧಾರಣೆ ಸಾಧ್ಯವೇ ಇಲ್ಲ. ಸಂಪುಟ ಉಪ ಸಮಿತಿ ಕೈಗೊಂಡಿರುವ ಮಹತ್ವದ ತೀರ್ಮಾನದ ಜತೆಗೆ ಮುಂದಿನ ದಿನಗಳಲ್ಲಿ ಇತರ ಇಲಾಖೆಗಳ ಬಗ್ಗೆಯೂ ವರದಿ ತರಿಸಿಕೊಂಡು ಹುದ್ದೆ ಕಡಿತ ಹಾಗೂ ಅನಗತ್ಯ ವೆಚ್ಚ ಕಡಿತಕ್ಕೆ ಕ್ರಮ ಕೈಗೊಳ್ಳಲೇಬೇಕಾಗಿದೆ.

ಟಾಪ್ ನ್ಯೂಸ್

Manipal: ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ: ಫೆ. 22-26: “ಶಿವಪಾಡಿ ವೈಭವ’

Manipal: ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ: ಫೆ. 22-26: “ಶಿವಪಾಡಿ ವೈಭವ’

Special Train: ಉಡುಪಿ-ಪ್ರಯಾಗರಾಜ್‌ ವಿಶೇಷ ರೈಲಿಗೆ ಪೇಜಾವರ ಶ್ರೀ ಚಾಲನೆ

Special Train: ಉಡುಪಿ-ಪ್ರಯಾಗರಾಜ್‌ ವಿಶೇಷ ರೈಲಿಗೆ ಪೇಜಾವರ ಶ್ರೀ ಚಾಲನೆ

New-CEC

CEC Appoint: ಜ್ಞಾನೇಶ್‌ ಕುಮಾರ್‌ ನೂತನ ಮುಖ್ಯ ಚುನಾವಣಾ ಆಯುಕ್ತರಾಗಿ ನೇಮಕ 

Udupi: ಮತ್ಸ್ಯಗಂಧ ರೈಲಿಗೆ ನೂತನ ಎಲ್‌ಎಚ್‌ಬಿ ಬೋಗಿ ಅಳವಡಿಕೆ

Udupi: ಮತ್ಸ್ಯಗಂಧ ರೈಲಿಗೆ ನೂತನ ಎಲ್‌ಎಚ್‌ಬಿ ಬೋಗಿ ಅಳವಡಿಕೆ

ಕಾಂಞಂಗಾಡ್‌ – ಕಾಣಿಯೂರು ಹಳಿ ನಿರ್ಮಾಣಕ್ಕೆ ಕರ್ನಾಟಕ ಅನುಮತಿ ನಿರೀಕ್ಷೆ: ಸಂಸದ ಉಣ್ಣಿತ್ತಾನ್‌

ಕಾಂಞಂಗಾಡ್‌ -ಕಾಣಿಯೂರು ಹಳಿ ನಿರ್ಮಾಣಕ್ಕೆ ಕರ್ನಾಟಕ ಅನುಮತಿ ನಿರೀಕ್ಷೆ: ಸಂಸದ ಉಣ್ಣಿತ್ತಾನ್‌

Aranthodu: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕಾರು ಅಪಘಾತ

Aranthodu: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕಾರು ಅಪಘಾತ

Udupi-Kasaragod: ಪರ್ಯಾಯ ಮಾರ್ಗ ಮೂಲಕ ಅನುಷ್ಠಾನಕ್ಕೆ ಒತ್ತಾಯಿಸಿ ಫೆ.20ರಂದು ಬೃಹತ್‌ ಜಾಥಾ

Udupi-Kasaragod: ಪರ್ಯಾಯ ಮಾರ್ಗ ಮೂಲಕ ಅನುಷ್ಠಾನಕ್ಕೆ ಒತ್ತಾಯಿಸಿ ಫೆ.20ರಂದು ಬೃಹತ್‌ ಜಾಥಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4

Editorial: ನೀರಿನ ಸಂರಕ್ಷಣೆಗಾಗಿ ಈಗಿನಿಂದಲೇ ಎಚ್ಚರ ಅಗತ್ಯ

1

Editorial: ಬೇಸಗೆ ಸಮೀಪಿಸುತ್ತಿದೆ ಜಲಮೂಲಗಳತ್ತ ಇರಲಿ ಚಿತ್ತ

Parliment New

ಅಭಿವೃದ್ಧಿ, ಜನಕಲ್ಯಾಣ ಯೋಜನೆಗಳ ಅನುಷ್ಠಾನದಲ್ಲಿ ರಾಜಕೀಯ ಸಲ್ಲದು

10-editorial

Editorial: ವಿದ್ಯಾರ್ಹತೆಗೆ ದೇಶವ್ಯಾಪಿ ಮಾನ್ಯತೆ, ಹೈಕೋರ್ಟ್‌ ತೀರ್ಪು ನ್ಯಾಯೋಚಿತ

13-editorial

Temperature: ಸಂಪಾದಕೀಯ-ತಾಪಮಾನ ಹೆಚ್ಚಳದ ಆತಂಕ: ಮುಂಜಾಗ್ರತೆಯೇ ಮದ್ದು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Manipal: ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ: ಫೆ. 22-26: “ಶಿವಪಾಡಿ ವೈಭವ’

Manipal: ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ: ಫೆ. 22-26: “ಶಿವಪಾಡಿ ವೈಭವ’

Special Train: ಉಡುಪಿ-ಪ್ರಯಾಗರಾಜ್‌ ವಿಶೇಷ ರೈಲಿಗೆ ಪೇಜಾವರ ಶ್ರೀ ಚಾಲನೆ

Special Train: ಉಡುಪಿ-ಪ್ರಯಾಗರಾಜ್‌ ವಿಶೇಷ ರೈಲಿಗೆ ಪೇಜಾವರ ಶ್ರೀ ಚಾಲನೆ

New-CEC

CEC Appoint: ಜ್ಞಾನೇಶ್‌ ಕುಮಾರ್‌ ನೂತನ ಮುಖ್ಯ ಚುನಾವಣಾ ಆಯುಕ್ತರಾಗಿ ನೇಮಕ 

Udupi: ಮತ್ಸ್ಯಗಂಧ ರೈಲಿಗೆ ನೂತನ ಎಲ್‌ಎಚ್‌ಬಿ ಬೋಗಿ ಅಳವಡಿಕೆ

Udupi: ಮತ್ಸ್ಯಗಂಧ ರೈಲಿಗೆ ನೂತನ ಎಲ್‌ಎಚ್‌ಬಿ ಬೋಗಿ ಅಳವಡಿಕೆ

ಕಾಂಞಂಗಾಡ್‌ – ಕಾಣಿಯೂರು ಹಳಿ ನಿರ್ಮಾಣಕ್ಕೆ ಕರ್ನಾಟಕ ಅನುಮತಿ ನಿರೀಕ್ಷೆ: ಸಂಸದ ಉಣ್ಣಿತ್ತಾನ್‌

ಕಾಂಞಂಗಾಡ್‌ -ಕಾಣಿಯೂರು ಹಳಿ ನಿರ್ಮಾಣಕ್ಕೆ ಕರ್ನಾಟಕ ಅನುಮತಿ ನಿರೀಕ್ಷೆ: ಸಂಸದ ಉಣ್ಣಿತ್ತಾನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.