Karnataka: ಶಾಲೆಗಳು ಎದುರಿಸುತ್ತಿರುವ ನೈಜ ಸಮಸ್ಯೆಗಳನ್ನು ಪರಿಹರಿಸಿ


Team Udayavani, Sep 23, 2024, 6:00 AM IST

Karnataka: ಶಾಲೆಗಳು ಎದುರಿಸುತ್ತಿರುವ ನೈಜ ಸಮಸ್ಯೆಗಳನ್ನು ಪರಿಹರಿಸಿ

ರಾಜ್ಯದಲ್ಲಿನ ಸರಕಾರಿ ಮತ್ತು ಅನುದಾನಿತ ಶಾಲೆಗಳ ಮಕ್ಕಳ ಹಾಜರಾತಿ ದಾಖಲಾತಿಗಾಗಿ ಆ್ಯಪ್‌ ಆಧಾರಿತ ವಿಧಾನ ಅಳವಡಿಸುವ ಪ್ರಸ್ತಾವವನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸರಕಾರದ ಮುಂದಿರಿಸಿದೆ.

ಮಕ್ಕಳ ಹಾಜರಾತಿಯನ್ನು ಖಾತರಿಪಡಿಸಲು ಮತ್ತು ಪ್ರತೀದಿನ ಎರಡು ಹೊತ್ತು ಮಕ್ಕಳ ಹಾಜರಿಯನ್ನು ಕರೆದು ಹಾಜರಾತಿ ಪುಸ್ತಕದಲ್ಲಿ ದಾಖಲಿಸುವ ಹೊಣೆಗಾರಿಕೆಯಿಂದ ಶಿಕ್ಷಕರು ಮುಕ್ತವಾಗಲಿದ್ದಾರೆ. ಆ್ಯಪ್‌ ಆಧಾರಿತ ಹಾಜರಾತಿ ವ್ಯವಸ್ಥೆಯನ್ನು ಇಲಾಖೆ ಈಗಾಗಲೇ ಜಿಲ್ಲೆಯ ಒಂದೊಂದು ಶಾಲೆಯಲ್ಲಿ ಪ್ರಾಯೋಗಿಕವಾಗಿ ಜಾರಿಗೊಳಿಸಿದ್ದು, ಇದು ಉದ್ದೇಶಿತ ಗುರಿ ಸಾಧನೆಯಲ್ಲಿ ಯಶ ಕಂಡಿದೆ. ಈ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ ಈ ವ್ಯವಸ್ಥೆಯನ್ನು ರಾಜ್ಯದ ಎಲ್ಲ ಸರಕಾರಿ ಮತ್ತು ಅನುದಾನಿತ ಶಾಲೆಗಳಿಗೆ ವಿಸ್ತರಿಸಲು ಗಂಭೀರ ಚಿಂತನೆ ನಡೆಸಿದೆ. ಶಿಕ್ಷಣ ಇಲಾಖೆಯ ಈ ಪ್ರಸ್ತಾವ ವಿದ್ಯಾರ್ಥಿಗಳ ಹಾಜರಾತಿಯನ್ನು ಹೆಚ್ಚಿಸುವುದರ ಜತೆಯಲ್ಲಿ ಶಿಕ್ಷಣದ ಗುಣಮಟ್ಟವನ್ನು ವೃದ್ಧಿಸುವಲ್ಲಿಯೂ ಸಹಕಾರಿಯಾಗಲಿದೆ.

ಸದ್ಯ ಸರಕಾರಿ ಶಾಲೆಗಳಲ್ಲಿ ಪ್ರತೀದಿನ ಬೆಳಗ್ಗೆ ಮತ್ತು ಅಪರಾಹ್ನದ ತರಗತಿ ಆರಂಭಕ್ಕೂ ಮುನ್ನ ಮಕ್ಕಳ ಹಾಜರಿಯನ್ನು ಕರೆದು ಹಾಜರಾತಿಯನ್ನು ದಾಖಲಿಸಿಕೊ­ಳ್ಳಲಾಗುತ್ತಿದೆ. ಇದರಿಂದಾಗಿ ಹಾಜರಿ ಕರೆಯುವ ಸಂದರ್ಭದಲ್ಲಿ ಶಾಲೆಯಲ್ಲಿರುವ ವಿದ್ಯಾರ್ಥಿಗಳು ಆ ಬಳಿಕ ತರಗತಿಗಳಿಗೆ ಗೈರಾಗುತ್ತಿರುವ ಪ್ರಕರಣಗಳು ಹೆಚ್ಚಿವೆ. ಇದನ್ನೇ ಚಾಳಿಯನ್ನಾಗಿರಿಸಿಕೊಂಡಿರುವ ಮಕ್ಕಳು ಕಲಿಕೆಯಲ್ಲಿ ಹಿಂದುಳಿಯುವುದೇ ಅಲ್ಲದೆ ಅವರ ಶೈಕ್ಷಣಿಕ ಭವಿಷ್ಯವೂ ಮಸುಕಾಗುತ್ತಿದೆ. ಸದ್ಯ ರಾಜ್ಯದಲ್ಲಿ ಒಂದರಿಂದ ಎಂಟನೇ ತರಗತಿ ವಿದ್ಯಾರ್ಥಿಗಳನ್ನು ಅನುತ್ತೀರ್ಣಗೊಳಿಸುವಂತಿಲ್ಲ. ಆದರೆ ಆ ಬಳಿಕದ ತರಗತಿಗಳಲ್ಲಿ ವಾರ್ಷಿಕ ಪರೀಕ್ಷೆಯ ಅಂಕಗಳನ್ನು ಆಧರಿಸಿ ವಿದ್ಯಾರ್ಥಿಗಳನ್ನು ತೇರ್ಗಡೆಗೊಳಿಸುವುದರಿಂದ ಇದು ವಿದ್ಯಾರ್ಥಿಗಳ ಮೇಲೆ ಹೆಚ್ಚಿನ ಒತ್ತಡ ಬೀಳುವಂತೆ ಮಾಡುವುದಲ್ಲದೆ ಫ‌ಲಿತಾಂಶದಲ್ಲೂ ಏರುಪೇರುಗಳಾಗುತ್ತಿವೆ. ಅಷ್ಟು ಮಾತ್ರವಲ್ಲದೆ ಇದು ಎಸೆಸೆಲ್ಸಿಯಲ್ಲಿನ ಒಟ್ಟಾರೆ ಫ‌ಲಿತಾಂಶದ ಮೇಲೂ ಪರಿಣಾಮ ಬೀರುತ್ತಿದೆ. ಇವೆಲ್ಲವನ್ನು ಪರಿಗಣಿಸಿ ಶಿಕ್ಷಣ ಇಲಾಖೆ ಆ್ಯಪ್‌ ಆಧಾರಿತ ಹಾಜರಾತಿ ವಿಧಾನವನ್ನು ಅಳವಡಿಸಿಕೊಳ್ಳಲು ಮುಂದಾಗಿದೆ.

ಶಿಕ್ಷಣ ಇಲಾಖೆಯ ಈ ಪ್ರಸ್ತಾವನೆ ಸ್ವಾಗತಾರ್ಹವಾಗಿದ್ದು ಮಕ್ಕಳ ಹಾಜರಾತಿ, ಕಲಿಕಾ ಗುಣಮಟ್ಟವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಉತ್ತೇಜನದಾಯಕ ಕ್ರಮವಾಗಿದೆ. ಇದೇ ವೇಳೆ ಶಿಕ್ಷಣ ಇಲಾಖೆ ಸದ್ಯ ರಾಜ್ಯದ ಸರಕಾರಿ ಮತ್ತು ಅನುದಾನಿತ ಶಾಲೆಗಳು ಎದುರಿಸುತ್ತಿರುವ ಕೆಲವು ಜ್ವಲಂತ ಸಮಸ್ಯೆಗಳನ್ನು ಪರಿಹರಿಸುವ ದಿಸೆಯಲ್ಲಿ ತುರ್ತಾಗಿ ಕಾರ್ಯೋನ್ಮುಖವಾಗಬೇಕು. ಸದ್ಯ ಪ್ರಾಥಮಿಕ ಶಾಲೆಗಳಂತೂ ದಿನಾಚರಣೆ, ಪಠ್ಯೇತರ ಚಟುವಟಿಕೆ, ಪ್ರವಾಸ ಮತ್ತಿತರ ಕಾರ್ಯಚಟುವಟಿಕೆಗಳಿಗೇ ಮೀಸಲಾಗುತ್ತಿವೆ. ಶಾಲೆಗಳಿಗೆ ಮಕ್ಕಳನ್ನು ಆಕರ್ಷಿಸುವ ಮತ್ತು ಬಡ ಮಕ್ಕಳಿಗೆ ಪೌಷ್ಟಿಕ ಆಹಾರ ಪೂರೈಸುವ ನಿಟ್ಟಿನಲ್ಲಿ ದಶಕಗಳ ಹಿಂದೆ ಆರಂಭಿಸಲಾಗಿರುವ ಬಿಸಿಯೂಟ ಯೋಜನೆ, ಅದಕ್ಕೆ ಪೂರಕವಾಗಿ ಸೇರ್ಪಡೆಗೊಳ್ಳುತ್ತಲೇ ಬಂದಿರುವ ಮೊಟ್ಟೆ ವಿತರಣೆ ಸಹಿತ ವಿವಿಧ ಯೋಜನೆಗಳು ಶಿಕ್ಷಕರು ಮತ್ತು ಅಡುಗೆ ಸಿಬಂದಿಗೆ ಬಲುದೊಡ್ಡ ಹೊರೆಯಾಗಿ ಪರಿಣಮಿಸಿದೆ. ಬೆರಳೆಣಿಕೆ ಸಂಖ್ಯೆಯ ಶಾಲೆಗಳನ್ನು ಹೊರತುಪಡಿಸಿದಂತೆ ಬಹುತೇಕ ಸರಕಾರಿ ಶಾಲೆಗಳನ್ನು ಶಿಕ್ಷಕರ ಕೊರತೆ ಇನ್ನಿಲ್ಲದಂತೆ ಕಾಡುತ್ತಿದ್ದು ಇವೆಲ್ಲದರ ಪರಿಣಾಮ ಬೋಧನೆಯ ಮೇಲೆ ಬೀಳುತ್ತಿದೆ. ಇನ್ನು ಅನುದಾನಿತ ಶಾಲೆಗಳ ಬಗೆಗಿನ ಸರಕಾರದ ತಾರತಮ್ಯ ಧೋರಣೆ ಇನ್ನೂ ಮುಂದುವರಿದಿದೆ.

ಇನ್ನಾದರೂ ಶಿಕ್ಷಣ ಇಲಾಖೆ ಮತ್ತು ಸರಕಾರ ಹೊಸ ಯೋಜನೆಗಳ ಅನುಷ್ಠಾನಕ್ಕೂ ಮುನ್ನ ಪ್ರಾಥಮಿಕ ಶಾಲೆಗಳಲ್ಲಿನ ಹಾಲಿ ಗೊಂದಲ, ಅವ್ಯವಸ್ಥೆ ಮತ್ತು ಕೊರತೆಗಳನ್ನು ನಿವಾರಿಸಲು ಮುಂದಾಗಬೇಕು. ಶಿಕ್ಷಕರ ಮೇಲಣ ಒತ್ತಡ ಕಡಿಮೆ ಮಾಡಬೇಕು. ಇವೆಲ್ಲವೂ ಬಗೆಹರಿದಲ್ಲಿ ಮಾತ್ರವೇ ಎಲ್ಲ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವ ಸರಕಾರದ ಮಹತ್ವಾಕಾಂಕ್ಷೆ ಈಡೇರಲು ಸಾಧ್ಯ.

ಟಾಪ್ ನ್ಯೂಸ್

Belagavi: ಈದ್ ಮಿಲಾದ್ ಮೆರವಣಿಗೆ ಮುಗಿಸಿ ಹೋಗುವಾಗ ತಲವಾರ್ ದಿಂದ ಹೊಡೆದಾಟ: ಮೂವರಿಗೆ ಗಾಯ

Belagavi: ಈದ್ ಮಿಲಾದ್ ಮೆರವಣಿಗೆ ಮುಗಿಸಿ ಹೋಗುವಾಗ ತಲವಾರ್ ದಿಂದ ಹೊಡೆದಾಟ: ಮೂವರಿಗೆ ಗಾಯ

Mudhol: ಬಾಲಕಿಗೆ ಲೈಂಗಿಕ‌‌ ಕಿರುಕುಳ… ಫೋಕ್ಸೊ ಪ್ರಕರಣ ದಾಖಲು

Mudhol: ಬಾಲಕಿಗೆ ಲೈಂಗಿಕ‌‌ ಕಿರುಕುಳ… ಫೋಕ್ಸೊ ಪ್ರಕರಣ ದಾಖಲು

Santhekatte-Road

Udupi Santhekatte Road: ನಾಲ್ಕಲ್ಲ, ಕನಿಷ್ಠ ಒಂದು ರಸ್ತೆಯನ್ನಾದರೂ ಕೊಡಿ

Horoscope: ಭಗವಂತನ ಮೇಲೆ ಪೂರ್ಣ ವಿಶ್ವಾಸವಿರಲಿ

Horoscope: ಭಗವಂತನ ಮೇಲೆ ಪೂರ್ಣ ವಿಶ್ವಾಸವಿರಲಿ

1-pragyan

Pragyan rover; ಚಂದ್ರನ ಮೇಲೆ 160 ಕಿ.ಮೀ. ಕುಳಿ ಪತ್ತೆ!

ಪ್ರಧಾನಿ ಮೋದಿ ಶಾಂತಿಮಂತ್ರಕ್ಕೆ ಅಮೆರಿಕ ಶ್ಲಾಘನೆ

PM Modi ಶಾಂತಿಮಂತ್ರಕ್ಕೆ ಅಮೆರಿಕ ಶ್ಲಾಘನೆ

PRAVASI-Mandir

Udupi: ಬ್ರಹ್ಮಗಿರಿಯಲ್ಲಿರುವ ಪ್ರವಾಸಿ ಮಂದಿರಕ್ಕೆ ಕತ್ತಲ ಭಾಗ್ಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Assembly Election: ಜಮ್ಮು-ಕಾಶ್ಮೀರದಲ್ಲಿ ಪ್ರಜಾಪ್ರಭುತ್ವದ ಹಬ್ಬ

Assembly Election: ಜಮ್ಮು-ಕಾಶ್ಮೀರದಲ್ಲಿ ಪ್ರಜಾಪ್ರಭುತ್ವದ ಹಬ್ಬ

Namma-clinic

Karnataka; ಬಸ್‌ ನಿಲ್ದಾಣಗಳಲ್ಲಿ ನಮ್ಮ ಕ್ಲಿನಿಕ್‌ ಸಮುಚಿತ ನಿರ್ಧಾರ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Belagavi: ಈದ್ ಮಿಲಾದ್ ಮೆರವಣಿಗೆ ಮುಗಿಸಿ ಹೋಗುವಾಗ ತಲವಾರ್ ದಿಂದ ಹೊಡೆದಾಟ: ಮೂವರಿಗೆ ಗಾಯ

Belagavi: ಈದ್ ಮಿಲಾದ್ ಮೆರವಣಿಗೆ ಮುಗಿಸಿ ಹೋಗುವಾಗ ತಲವಾರ್ ದಿಂದ ಹೊಡೆದಾಟ: ಮೂವರಿಗೆ ಗಾಯ

Mudhol: ಬಾಲಕಿಗೆ ಲೈಂಗಿಕ‌‌ ಕಿರುಕುಳ… ಫೋಕ್ಸೊ ಪ್ರಕರಣ ದಾಖಲು

Mudhol: ಬಾಲಕಿಗೆ ಲೈಂಗಿಕ‌‌ ಕಿರುಕುಳ… ಫೋಕ್ಸೊ ಪ್ರಕರಣ ದಾಖಲು

Santhekatte-Road

Udupi Santhekatte Road: ನಾಲ್ಕಲ್ಲ, ಕನಿಷ್ಠ ಒಂದು ರಸ್ತೆಯನ್ನಾದರೂ ಕೊಡಿ

Horoscope: ಭಗವಂತನ ಮೇಲೆ ಪೂರ್ಣ ವಿಶ್ವಾಸವಿರಲಿ

Horoscope: ಭಗವಂತನ ಮೇಲೆ ಪೂರ್ಣ ವಿಶ್ವಾಸವಿರಲಿ

1-pragyan

Pragyan rover; ಚಂದ್ರನ ಮೇಲೆ 160 ಕಿ.ಮೀ. ಕುಳಿ ಪತ್ತೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.