ಉದ್ಯಾನನಗರಿಯಲ್ಲಿ ಅಭಿವೃದ್ಧಿ ಜತೆ ಪರಿಸರವೃದ್ಧಿಯೂ ಬೇಕು


Team Udayavani, Oct 26, 2022, 6:00 AM IST

ಉದ್ಯಾನನಗರಿಯಲ್ಲಿ ಅಭಿವೃದ್ಧಿ ಜತೆ ಪರಿಸರವೃದ್ಧಿಯೂ ಬೇಕು

ಉದ್ಯಾನನಗರಿ ಎಂಬ ಖ್ಯಾತಿಗೆ ಒಳಗಾಗಿದ್ದ ರಾಜಧಾನಿ ಬೆಂಗಳೂರಿನಲ್ಲಿ ಪರಿಸರದ ಕುರಿತು ಆಡಳಿತ ನಿರ್ಲಕ್ಷ್ಯ ತೋರುತ್ತಿದೆ. ಕಳೆದ ನಾಲ್ಕು ವರ್ಷಗಳಲ್ಲಿ ಅಭಿವೃದ್ಧಿ ಕಾಮಗಾರಿಗಳ ಹಿನ್ನೆಲೆಯಲ್ಲಿ 1,671 ಮರ ಕಡಿದು ಹಾಕಿರುವುದು ಆ ಮೂಲಕ ಹಸುರು ಪ್ರಮಾಣ ಕಡಿಮೆಯಾಗಿರುವುದು ಆತಂಕದ ಸಂಗತಿಯೇ.
ಅಭಿವೃದ್ಧಿ ಯೋಜನೆಗಳು ಅಗತ್ಯ ಆದರೆ ಆ ಯೋಜನೆಗಳಿಗೆ ತೆರವುಗೊಳಿಸುವ ಮರಗಳ ಹತ್ತು ಪಟ್ಟು ಸಸಿ ನೆಡುವ ಕಾರ್ಯಕ್ರಮ ಆಗಬೇಕಿದೆ. ಆಗ ಮಾತ್ರ ಹಸುರು ಪ್ರಮಾಣ ಸರಿತೂಗಿಸಲು ಸಾಧ್ಯ.

ಕಳೆದ ಹತ್ತಿಪ್ಪತ್ತು ವರ್ಷಗಳಲ್ಲಿ ಪ್ರತೀವರ್ಷ ಪರಿಸರ ದಿನಾಚರಣೆ ಸಂದರ್ಭದಲ್ಲಿ ಲಕ್ಷ ವೃಕ್ಷ, ಕೋಟಿ ವೃಕ್ಷ ಆಂದೋಲನ, ಅಭಿಯಾನ ನಡೆಯುತ್ತದೆ. ಆದರೆ ಅಂತಿಮವಾಗಿ ನೆಟ್ಟ ಗಿಡಗಳೆಷ್ಟು ಉಳಿದ ಗಿಡಗಳೆಷ್ಟು ಎಂಬುದರ ಲೆಕ್ಕ ಮಾತ್ರ ಸಿಗುವುದಿಲ್ಲ. ಇಪ್ಪತ್ತು ವರ್ಷಗಳಿಂದ ಅರಣ್ಯ ಇಲಾಖೆ, ಬಿಬಿಎಂಪಿ ನೆಟ್ಟ ಕೋಟ್ಯಂತರ ಸಸಿಗಳು ಮರಗಳಾಗಿದ್ದರೆ ಇಂದು ಇಡೀ ಬೆಂಗಳೂರು ಮತ್ತಷ್ಟು ಹಸುರು ಮಯವಾಗಿರುತ್ತಿತ್ತು. ಆದರೆ ಗಿಡ ನೆಡುವುದು ಆ ದಿನಕ್ಕೆ ಮಾತ್ರ ಸೀಮಿತ ಎಂಬಂತಾಗಿದೆ. ಬೆಂಗಳೂರಿನ ಅಂದವೇ ಹಸುರು. ಅದಕ್ಕೆ ಧಕ್ಕೆಯಾಗಲು ರಾಜ್ಯ ಸರಕಾರ ಅಥವಾ ಬೆಂಗಳೂರು ಮಹಾನಗರ ಪಾಲಿಕೆ ಬಿಡಬಾರದು.

ಏಕೆಂದರೆ 2014ರಲ್ಲಿ ಐಐಎಸ್ಸಿ ಸಿದ್ಧಪಡಿಸಿದ ವರದಿಯಂತೆ ಬೆಂಗಳೂರಿನಲ್ಲಿ 14 ಲಕ್ಷ ಮರಗಳಿದ್ದು 16 ಜನರಿಗೆ ಒಂದು ಮರ ಇತ್ತು. ಪ್ರತೀವರ್ಷ ಮರಗಳ ಸಂಖ್ಯೆ ಕಡಿಮೆಯಾಗುತ್ತಲೇ ಇದೆ. ಇದು ಹೀಗೆ ಮುಂದುವರಿದರೆ ಹಸುರೀಕರಣ ಕುಸಿಯುವುದರ ಜತೆಗೆ ಮಾಲಿನ್ಯ ಪ್ರಮಾಣವೂ ಹೆಚ್ಚಲಿದೆ. ಬೆಂಗಳೂರಿನಲ್ಲಿ ಮೇಲ್ಸೇತುವೆ ನಿರ್ಮಾಣ, ರಸ್ತೆ ಅಗಲೀಕರಣ, ನಮ್ಮ ಮೆಟ್ರೋ ಕಾಮಗಾರಿ ಹೀಗೆ ಹಲವು ಯೋಜನೆಗಳ ಕಾಮಗಾರಿಗಾಗಿ ಮರಗಳನ್ನು ಕಡಿಯಲಾಗುತ್ತದೆ. ಒಂದು ಮರ ಕಡಿದರೆ ಅದಕ್ಕೆ ಬದಲಾಗಿ 5 ಸಸಿಗಳನ್ನು ನೆಡಬೇಕು ಎಂಬ ನಿಯಮವಿದೆ. ಸಸಿ ನೆಡುವ ಬಿಬಿಎಂಪಿ ಅದರ ನಿರ್ವಹಣೆಯನ್ನು ಸಮರ್ಪಕವಾಗಿ ಮಾಡುತ್ತಿಲ್ಲ. ಇದಕ್ಕೆ ಉದಾಹರಣೆ ಎಂದರೆ ಬಿಬಿಎಂಪಿ ನೆಟ್ಟ 3.94 ಲಕ್ಷ ಸಸಿಗಳ ಪೈಕಿ ಶೇ. 20ಕ್ಕೂ ಹೆಚ್ಚಿನ ಸಸಿಗಳು ನಾಶವಾಗಿರುವುದು. 2018-19, 2021-22ರಲ್ಲಿ ಒಂದೇ ಒಂದು ಸಸಿ ನೆಟ್ಟಿಲ್ಲ ಎನ್ನುವುದು ಖೇದಕರ.

ಈ ಹಿಂದೆ ನಗರದಲ್ಲಿರುವ ಮರಗಳ ಸಂಖ್ಯೆ ಹಾಗೂ ಯಾವ ಜಾತಿ, ತಳಿಯ ಮರಗಳಿವೆೆ ಎಂಬುದನ್ನು ಪತ್ತೆ ಮಾಡಲು ಮರಗಣತಿ ಮಾಡಲು ಬಿಬಿಎಂಪಿ ಯೋಜನೆ ರೂಪಿಸಿತ್ತು. ಆದರೆ ಅದು ಕಾರ್ಯಗತ ಆಗಲಿಲ್ಲ. ಈಗಲೂ ಕಾಲ ಮಿಂಚಿಲ್ಲ, ತತ್‌ಕ್ಷಣ ಆ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಬೇಕಾಗಿದೆ. ಕೆಎಚ್‌ಬಿ, ಬಿಡಿಎ ಅಭಿವೃದ್ಧಿಪಡಿಸುವ ಬಡಾವಣೆಗಳಲ್ಲಿ ಮಿನಿ ಅರಣ್ಯ ನಿರ್ಮಾಣ ಕಡ್ಡಾಯಗೊಳಿಸಬೇಕಾಗಿದೆ. ಹೀಗಾದಾಗ ಮಾತ್ರ ಹಸುರು ಉಳಿಯಲು ಸಾಧ್ಯ.

ರಾಜಧಾನಿ ಬೆಂಗಳೂರಿನಲ್ಲಿ ಹಸುರು ಉಳಿಸುವ ಹಾಗೂ ಹಸುರು ಪ್ರಮಾಣ ಹೆಚ್ಚಿಸುವ ವಿಚಾರದಲ್ಲಿ ಸರಕಾರ ಹಾಗೂ ಬಿಬಿಎಂಪಿಯಷ್ಟೇ ಅಲ್ಲದೆ ನಗರದ ನಾಗರಿಕರ ಹೊಣೆಗಾರಿಯೂ ಇದೆ. ರಸ್ತೆ ಬದಿ ಗಿಡ ನೆಡುವ, ತಮ್ಮ ಸುತ್ತಮುತ್ತಲ ಪರಿಸರದಲ್ಲಿ ಅವಕಾಶ ಇರುವ ಕಡೆ ಹಣ್ಣು, ಹೂವು ಗಿಡ ನೆಡುವ ಕೆಲಸ ಮಾಡಬೇಕಿದೆ.

ಟಾಪ್ ನ್ಯೂಸ್

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Assembly Election: ಜಮ್ಮು-ಕಾಶ್ಮೀರದಲ್ಲಿ ಪ್ರಜಾಪ್ರಭುತ್ವದ ಹಬ್ಬ

Assembly Election: ಜಮ್ಮು-ಕಾಶ್ಮೀರದಲ್ಲಿ ಪ್ರಜಾಪ್ರಭುತ್ವದ ಹಬ್ಬ

Namma-clinic

Karnataka; ಬಸ್‌ ನಿಲ್ದಾಣಗಳಲ್ಲಿ ನಮ್ಮ ಕ್ಲಿನಿಕ್‌ ಸಮುಚಿತ ನಿರ್ಧಾರ

ರೈತರ ಹಿತರಕ್ಷಣೆ ನೆಪದಲ್ಲಿ ಗ್ರಾಹಕರಿಗೆ ಬರೆ ಸಲ್ಲದು

ರೈತರ ಹಿತರಕ್ಷಣೆ ನೆಪದಲ್ಲಿ ಗ್ರಾಹಕರಿಗೆ ಬರೆ ಸಲ್ಲದು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

1-japp

Japan ಆ್ಯನಿಮೇಟೆಡ್‌ ರಾಮಾಯಣ ಅ.18ಕ್ಕೆ ಮರು ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.