ಭೂ ಕಬಳಿಕೆ ಕಾಯ್ದೆ ತಿದ್ದುಪಡಿ ರೈತಸ್ನೇಹಿ ನಿರ್ಧಾರ


Team Udayavani, Aug 27, 2022, 6:00 AM IST

ಭೂ ಕಬಳಿಕೆ ಕಾಯ್ದೆ ತಿದ್ದುಪಡಿ ರೈತಸ್ನೇಹಿ ನಿರ್ಧಾರ

ರಾಜ್ಯದಲ್ಲಿ ಸರಕಾರ ಗ್ರಾಮೀಣ ಪ್ರದೇಶದಲ್ಲಿ ಅನಧಿಕೃತವಾಗಿ ಸಾಗು ವಳಿ ಮಾಡಿರುವ ರೈತರ ಭೂ ಒತ್ತುವರಿ ಪ್ರಕರಣಗಳನ್ನು ಭೂ ಕಬಳಿಕೆ ಪ್ರಕರಣಗಳ ವ್ಯಾಜ್ಯ ವಿಲೇವಾರಿಗೆ ಸ್ಥಾಪಿಸಿರುವ ತ್ವರಿತ ನ್ಯಾಯಾಲಯದ ವ್ಯಾಪ್ತಿಯಿಂದ ಹೊರಗಿಡುವ ತೀರ್ಮಾನ ರೈತ ಸಮುದಾಯ ನೆಮ್ಮದಿಯ ನಿಟ್ಟುಸಿರು ಬಿಡುವಂತೆ ಮಾಡಿದೆ.

ಭೂ ಕಬಳಿಕೆ ತಡೆಯಲು ಕರ್ನಾಟಕ ಭೂ ಕಬಳಿಕೆ (ನಿಷೇಧ) ಕಾಯ್ದೆ 2011ನ್ನು ಜಾರಿಗೆ ತಂದಿದ್ದು, ಈ ಪ್ರಕರಣಗಳನ್ನು ಇತ್ಯರ್ಥ ಪಡಿಸಲು ವಿಶೇಷ ತ್ವರಿತ ನ್ಯಾಯಾಲಯ ಸ್ಥಾಪನೆ ಮಾಡಿದೆ. ಈ ನ್ಯಾಯಾಲಯದಲ್ಲಿ ರಾಜ್ಯದಲ್ಲಿ ಒತ್ತುವರಿಯಾಗಿರುವ ಅಥವಾ ಕಬಳಿಸಿರುವ ಎಲ್ಲ ಸರಕಾರಿ ಜಮೀನುಗಳ ಪ್ರಕರಣಗಳು ತ್ವರಿತ ನ್ಯಾಯಾಲಯದ ವ್ಯಾಪ್ತಿಗೆ ಒಳ ಪಡಿಸಿದ್ದರಿಂದ ಗ್ರಾಮೀಣ ಪ್ರದೇಶದಲ್ಲಿ ಜೀವನ ನಿರ್ವಹಣೆಗೆ ವ್ಯವಸಾಯ ಮಾಡಲು ರೈತರು ಅರಣ್ಯ ಅಥವಾ ಕಂದಾಯ ಭೂಮಿ ಯನ್ನು ಒತ್ತುವರಿ ಮಾಡಿದವರು ಸಾಕಷ್ಟು ತೊಂದರೆ ಅನುಭವಿಸುವಂತಾಗಿತ್ತು.

ವಿಶೇಷವಾಗಿ ಅರಣ್ಯ ಪ್ರದೇಶದಲ್ಲಿ ಅನಧಿಕೃತವಾಗಿ ಸಾಗುವಳಿ ಮಾಡಿರುವ ಸಣ್ಣ ಮತ್ತು ಅತೀ ಸಣ್ಣ ರೈತರು ಕೋರ್ಟ್‌ ಪ್ರಕರಣಕ್ಕಾಗಿ ಬೆಂಗಳೂರಿಗೆ ಅಲೆದಾಡುವುದು ದೊಡ್ಡ ಶಿಕ್ಷೆಯಂತಾಗಿ ಪರಿಣಮಿಸಿತ್ತು. ರಾಜ್ಯದಲ್ಲಿ ಭೂ ಒತ್ತುವರಿಯಲ್ಲಿ ಎರಡು ರೀತಿಯ ಮಾನದಂಡಗಳಿವೆ. ರೈತರು ಉಳುಮೆ ಮಾಡುವ ಉದ್ದೇಶದಿಂದ ಅನಧಿಕೃತ ಸಾಗುವಳಿ ಮಾಡುವುದು ಒಂದು ಭಾಗವಾದರೆ, ಸರಕಾರಿ ಜಮೀನಿಗೆ ಬೇಲಿ ಹಾಕಿಕೊಂಡು ಯಾವುದೇ ಕೃಷಿ ಚಟುವಟಿಕೆ ನಡೆಸದೆ ಅಕ್ರಮವಾಗಿ ಕಬಳಿಕೆ ಮಾಡುವುದು ಇನ್ನೊಂದು ಭಾಗ.

ರಾಜ್ಯದಲ್ಲಿ ರೈತರು ಗ್ರಾಮೀಣ ಪ್ರದೇಶದಲ್ಲಿ ಸುಮಾರು 7 ಲಕ್ಷ ಎಕರೆ ಕಂದಾಯ ಭೂಮಿಯಲ್ಲಿ, ಸುಮಾರು 3 ಲಕ್ಷ ಎಕರೆ ಅರಣ್ಯ ಭೂಮಿ ಯಲ್ಲಿ ಅನಧಿಕೃತ ಸಾಗುವಳಿ ಮಾಡುತ್ತಿದ್ದಾರೆ ಎಂದು ಅಂದಾಜಿಸಲಾಗಿದೆ. ಆದರೆ ನಗರ ಪ್ರದೇಶದಲ್ಲಿ ಸುಮಾರು ಲಕ್ಷ ಎಕರೆ ಪ್ರದೇಶವನ್ನು ಅಕ್ರಮವಾಗಿ ಕಬಳಿಕೆ ಮಾಡಿದ್ದಾರೆಂದು ಅಂದಾಜಿಸಲಾಗಿದ್ದು, ಅಕ್ರಮ ಕಬಳಿಕೆ ಮತ್ತು ಭೂ ಒತ್ತುವರಿ ನಡುವಿನ ವ್ಯತ್ಯಾಸವನ್ನು ರಾಜ್ಯ ಸರಕಾರ ಅರ್ಥ ಮಾಡಿಕೊಂಡಿರುವುದು ರೈತ ಪರ ನಿರ್ಧಾರವಾದಂತಾಗಿದೆ. ರಾಜ್ಯ ಸರಕಾರ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕ ಭೂ ಕಬಳಿಕೆ (ನಿಷೇಧ) ಕಾಯ್ದೆ 2011 ಕಲಂ 2ಡಿಗೆ ತಿದ್ದುಪಡಿ ತರಲು ನಿರ್ಧರಿಸಿದ್ದು, ಗ್ರಾಮೀಣ ಪ್ರದೇಶ ಭೂ ಒತ್ತುವರಿ ಪ್ರಕರಣಗಳನ್ನು ಸ್ಥಳೀಯವಾಗಿ ಎಸಿ ಅಥವಾ ಡಿಸಿ ವ್ಯಾಪ್ತಿಯಲ್ಲಿಯೇ ಪರಿಹರಿಸಿಕೊಳ್ಳಲು ಅವಕಾಶ ಕಲ್ಪಿಸಿರುವುದರಿಂದ ರೈತರು ನೂರಾರು ಕಿಲೋಮೀಟರ್‌ ಬೆಂಗಳೂರಿಗೆ ಅಲೆದಾಡುವುದು ತಪ್ಪಿದಂತಾಗಿದೆ.

ಈಗಾಗಲೇ ಸರಕಾರದ ನಿಯಮದಂತೆಯೇ ಅತಿಕ್ರಮಣ ಮಾಡಿ ರುವ ಜಮೀನನ್ನು ರೈತರಿಗೆ ಮಂಜೂರು ಮಾಡಲು ಫಾರ್ಮ್ 57 ಮೂಲಕ ಅವಕಾಶ ಕಲ್ಪಿಸಲಾಗಿದ್ದು, ಕೃಷಿಗಾಗಿ ಒತ್ತುವರಿ ಮಾಡಿ, ಸಾಗುವಳಿ ಮಾಡುತ್ತಿರುವ ರೈತರಿಗೆ ಆದಷ್ಟು ಶೀಘ್ರ ಜಮೀನು ಮಂಜೂರು ಮಾಡುವ ಕೆಲಸ ಮಾಡಬೇಕು. ಆಗ ರಾಜ್ಯ ಸರಕಾರದ ರೈತ ಪರ ನಿಲುವಿಗೆ ಮತ್ತಷ್ಟು ಅರ್ಥ ಬಂದಂತಾಗುತ್ತದೆ. ಅಲ್ಲದೆ ಕೃಷಿಗಾಗಿ ಒತ್ತುವರಿ ಮಾಡಿ ಸಾಗುವಳಿ ಮಾಡುತ್ತಿರುವ ರೈತರ ಜೀವನಕ್ಕೂ ಒಂದು ಆಸರೆಯಾದಂತಾಗುತ್ತದೆ. ರಾಜ್ಯ ಸರಕಾರ ಈ ನಿಟ್ಟಿನಲ್ಲಿಯೂ ಯೋಚನೆ ಮಾಡುವುದು ಸೂಕ್ತ.

ಟಾಪ್ ನ್ಯೂಸ್

MOdi (3)

Jammu and Kashmir ಜನತೆ ಭ್ರಷ್ಟ ಮುಕ್ತ ಸರಕಾರ ಬಯಸಿದ್ದಾರೆ: ಮೋದಿ

UNITED NATIONS

UN ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸ್ಥಾನ: ಪೋರ್ಚುಗಲ್‌ ಬೆಂಬಲ

1-wewewq

PM ರೇಸ್‌ನಲ್ಲಿ ನಾನು ಇಲ್ಲ; ಬೇಕಿದ್ದರೇ ಮೋದಿ ಕೇಳಿ: ಗಡ್ಕರಿ

Manglrui

Mangaluru: ಸಂಸ್ಥೆಯ ಬೆಳವಣಿಗೆಯಲ್ಲಿ ಮಾನವ ಸಂಪನ್ಮೂಲ ಪಾತ್ರ ಪ್ರಮುಖ: ಮಂಜುನಾಥ ಭಂಡಾರಿ

1-asasa

Test; ನ್ಯೂಜಿಲ್ಯಾಂಡ್‌ ಆಲೌಟ್‌ 88 : ಲಂಕೆಗೆ 514 ರನ್‌ ದಾಖಲೆ ಮುನ್ನಡೆ

dinesh-gu

Dinesh Gundurao; ತಿಂಗಳೊಳಗೆ ಗೃಹ ಆರೋಗ್ಯ ಯೋಜನೆ ಜಾರಿ

leopard

leopard: ಮೂಲ್ಕಿ ಕೊಯ್ಯಾರಿನಲ್ಲಿ ಸಣ್ಣ ಮರಿಯೊಂದಿಗೆ ಚಿರತೆ ಪ್ರತ್ಯಕ್ಷ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WHO

Permanent Member: ಭದ್ರತಾ ಮಂಡಳಿ ಖಾಯಂ ಸದಸ್ಯತ್ವ: ಭಾರತಕ್ಕೆ ಆನೆಬಲ

Fake-Medicine

Quality Poor Medicine: ಮಾರುಕಟ್ಟೆಗೆ ನಕಲಿ ಔಷಧ ಪ್ರವೇಶ ತಪ್ಪಿಸಿ

railaw

Indian Railway: ರೈಲು ಹಳಿ ತಪ್ಪಿಸುವ ಯತ್ನ ಆಮೂಲಾಗ್ರ ತನಿಖೆ ಅಗತ್ಯ

traffic

Traffic Rules: ಸಂಚಾರ ನಿಯಮಾವಳಿಗಳು ಕಟ್ಟುನಿಟ್ಟಾಗಿ ಅನುಷ್ಠಾನಗೊಳ್ಳಲಿ

supreme-Court

Supreme Court: ಪೋಕ್ಸೋ ವ್ಯಾಪ್ತಿ ವಿಸ್ತರಣೆ: ಸುಪ್ರೀಂ ತೀರ್ಪು ಐತಿಹಾಸಿಕ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

congress

Haryana ಅನ್ನದಾತರ ಕಲ್ಯಾಣಕ್ಕೆ ಆಯೋಗ ರಚನೆ: ಕಾಂಗ್ರೆಸ್‌ ವಾಗ್ಧಾನ

MOdi (3)

Jammu and Kashmir ಜನತೆ ಭ್ರಷ್ಟ ಮುಕ್ತ ಸರಕಾರ ಬಯಸಿದ್ದಾರೆ: ಮೋದಿ

court

Jama Masjid:ಮಾಜಿ ಪಿಎಂ ಸಹಿ ಕಡತ ಸಲ್ಲಿಸದ್ದಕ್ಕೆ ಕೋರ್ಟ್‌ ಟೀಕೆ

UNITED NATIONS

UN ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸ್ಥಾನ: ಪೋರ್ಚುಗಲ್‌ ಬೆಂಬಲ

1-wewewq

PM ರೇಸ್‌ನಲ್ಲಿ ನಾನು ಇಲ್ಲ; ಬೇಕಿದ್ದರೇ ಮೋದಿ ಕೇಳಿ: ಗಡ್ಕರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.