ಬ್ರಿಟನ್‌ ನೂತನ ಪ್ರಧಾನಿಗೆ ಇದೆ ಕಠಿನ ಹಂತಗಳ ಹಾದಿ


Team Udayavani, Oct 24, 2022, 6:00 AM IST

ಬ್ರಿಟನ್‌ ನೂತನ ಪ್ರಧಾನಿಗೆ ಇದೆ ಕಠಿನ ಹಂತಗಳ ಹಾದಿ

ಬ್ರಿಟನ್‌ನ ವಿತ್ತ ಖಾತೆ ಮಾಜಿ ಸಚಿವ, ಇನ್ಫೋಸಿಸ್‌ ಸಂಸ್ಥಾಪಕ ಡಾ| ಎನ್‌.ಆರ್‌.ನಾರಾಯಣಮೂರ್ತಿ ಅವರ ಅಳಿಯ ರಿಷಿ ಸುನಕ್‌ ಪ್ರಧಾನಮಂತ್ರಿ ಹುದ್ದೆಯ ಅಭ್ಯರ್ಥಿಯಾಗುತ್ತೇನೆ ಎಂದು ರವಿವಾರ ಘೋಷಣೆ ಮಾಡಿದ್ದಾರೆ.

ವಿತ್ತೀಯ ಬಿಕ್ಕಟ್ಟು ನಿರ್ವಹಣೆಯನ್ನು ಸೂಕ್ತವಾಗಿ ನಿರ್ವಹಿಸಲು ವಿಫ‌ಲರಾಗಿರುವ ಹಿನ್ನೆಲೆಯಲ್ಲಿ ಹಾಲಿ ಪ್ರಧಾನಿ ಲಿಜ್‌ ಟ್ರಸ್‌ ಈಗಾಗಲೇ ರಾಜೀನಾಮೆ ನೀಡಿದ್ದಾರೆ ಮತ್ತು ಅ.28ರ ಒಳಗಾಗಿ ಆಡಳಿತ ಪಕ್ಷ ಕನ್ಸರ್ವೇಟಿವ್‌ ಪಕ್ಷದ ನಾಯಕನ ಸ್ಥಾನ ಮತ್ತು ಪ್ರಧಾನಿ ಹುದ್ದೆ ಭರ್ತಿಯಾಗಬೇಕಾಗಿದೆ.

ಪ್ರಧಾನಮಂತ್ರಿಯ ಅಧಿಕೃತ ನಿವಾಸದಲ್ಲಿಯೇ ಪಾರ್ಟಿ ಮಾಡಿ, ನಿಯಮ ಉಲ್ಲಂಘನೆ ಮಾಡಿರುವ ಆರೋಪಕ್ಕೆ ಗುರಿಯಾಗಿ ರಾಜೀನಾಮೆ ನೀಡಿರುವ ಬೋರಿಸ್‌ ಜಾನ್ಸನ್‌ ಎರಡನೇ ಬಾರಿಗೆ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ. ಸ್ಪರ್ಧೆಯ ಕಣಕ್ಕೆ ಜಾನ್ಸನ್‌ ಇಳಿಯುವ ಬಗ್ಗೆ ಜಾನ್ಸನ್‌ ಮಾತನಾಡದೇ ಇದ್ದರೂ ತಮ್ಮ ಬೆಂಬಲಿಗರ ಮೂಲಕ ಅಭ್ಯರ್ಥಿತನವನ್ನು ಹೇಳಿಸಿದ್ದಾರೆ. ಜತೆಗೆ 100ಕ್ಕೂ ಅಧಿಕ ಮಂದಿ ಸಂಸದರ ಬೆಂಬಲ ಇದೆ ಎಂದು ಪ್ರತಿಪಾದಿಸಿಕೊಂಡಿದ್ದಾರೆ. ಆದರೆ, ಸದ್ಯ ಪ್ರಕಟವಾಗಿರುವ ಸಂಖ್ಯಾಬಲವನ್ನು ನೋಡಿದರೆ ಮಾಜಿ ಸಚಿವ ರಿಷಿ ಸುನಕ್‌ ಅವರಿಗೆ 124ಕ್ಕಿಂತ ಅಧಿಕ ಸಂಸದರು ಬೆಂಬಲ ನೀಡಿದ್ದಾರೆ.

ಪ್ರಧಾನಮಂತ್ರಿ ಮತ್ತು ಸರಕಾರದ ಬದಲಾವಣೆ ಬ್ರಿಟನ್‌ನ ಆಂತರಿಕ ವಿಚಾರವಾದರೂ, ಭಾರತಕ್ಕೆ ಆ ದೇಶದ ಜತೆಗೆ ವಿಶೇಷ ಬಾಂಧವ್ಯ ಇದೆ. ನಮ್ಮ ದೇಶದ ನೂರಾರು ಮಂದಿ ವಿದ್ಯಾರ್ಥಿಗಳು, ತಂತ್ರಜ್ಞರು ಸೇರಿದಂತೆ ಹತ್ತು ಹಲವು ಕ್ಷೇತ್ರಗಳ ಪರಿಣತರು ಅಲ್ಲಿ ಇದ್ದಾರೆ. ಸದ್ಯ ಇರುವ ಸರಕಾರದಲ್ಲಿ ಕೂಡ ಭಾರತ ಮೂಲದವರೂ ಸಚಿವರಾಗಿ ಕಾರ್ಯನಿರ್ವಹಿಸಿದ್ದಾರೆ. ಬೋರಿಸ್‌ ಜಾನ್ಸನ್‌ ಪ್ರಧಾನಿಯಾಗಿ ಇದ್ದಾಗಲೇ ಭಾರತ ಮತ್ತು ಬ್ರಿಟನ್‌ ನಡುವೆ ಮುಕ್ತ ವ್ಯಾಪಾರ ಒಪ್ಪಂದ (ಎಫ್ಟಿಎ)ಕ್ಕೆ ಸಹಿ ಹಾಕಲು ತೀರ್ಮಾನಿಸಲಾಗಿತ್ತು. ಆ ದೇಶದಲ್ಲಿ ಉಂಟಾಗಿದ್ದ ರಾಜಕೀಯ ಬಿಕ್ಕಟ್ಟಿನಿಂದ ಅದು ಅಂತಿಮಗೊಳ್ಳಲು ತಡವಾಯಿತು. ಅದರಿಂದಾಗಿ 2 ದೇಶಗಳ ನಡುವೆ ಆಮದು ಮತ್ತು ರಫ್ತು ಕ್ಷೇತ್ರಗಳಲ್ಲಿ ಕಡಿಮೆ ಪ್ರಮಾಣದ ಸುಂಕ, ಸೇವಾ ಕ್ಷೇತ್ರಗಳಲ್ಲಿ ಹೆಚ್ಚಿನ ವ್ಯಾಪಾರದ ಅವಕಾಶಕ್ಕೆ ಇಂಬು ಸಿಗಲಿದೆ. ಇನ್ನೀಗ ಹೊಸ ಹೊಸ ಸರಕಾರ ಅಸ್ತಿತ್ವಕ್ಕೆ ಬಂದ ಬಳಿಕವಷ್ಟೇ ಈ ಬಗ್ಗೆ ಗಮನ ಹರಿಸುವ ಸಾಧ್ಯತೆ ಇದೆ.

2020ರ ಸಾರ್ವತ್ರಿಕ ಚುನಾವಣೆಯ ಬಳಿಕ ಸತತ 2ನೇ ಬಾರಿಗೆ ಕನ್ಸರ್ವೇಟಿವ್‌ ಪಕ್ಷದ ಸರಕಾರ ಅಸ್ತಿತ್ವಕ್ಕೆ ಬಂದಿದೆ. ಇನ್ನೀಗ ಹೊಸ ಪ್ರಧಾನಿಯಾಗಿ ಯಾರೇ ಆಯ್ಕೆಯಾಗಲಿ, ಅವರಿಗೆ ಯುನೈಟೆಡ್‌ ಕಿಂಗ್‌ಡಮ್‌ನ ಅರ್ಥ ವ್ಯವಸ್ಥೆಯನ್ನು ಹಳಿಗೆ ತರುವ ಸವಾಲು ಇದೆ. ಆ ದೇಶದಲ್ಲಿ ಹಣದುಬ್ಬರ ಪ್ರಮಾಣ ಸೆಪ್ಟಂಬರ್‌ನಲ್ಲಿ ಶೇ.13.2ರ ವರೆಗೆ ಏರಿಕೆಯಾಗಿದೆ. ಅಮೆರಿಕದ ಡಾಲರ್‌ ಎದುರು ಪೌಂಡ್‌ ಸ್ಟರ್ಲಿಂಗ್‌ ದಾಖಲೆ ಪ್ರಮಾಣದಲ್ಲಿ ಕುಸಿದಿದೆ. ಒಟ್ಟಾರೆಯಾಗಿ ಅಲ್ಲಿನ ಅರ್ಥವ್ಯವಸ್ಥೆಯನ್ನು ಸುಧಾರಿಸುವುದೇ ನೂತನ ಪ್ರಧಾನಿಗೆ ಸವಾಲಿನ ಕೆಲಸವಾಗುವುದು ಖಚಿತ.

ಈಗಾಗಲೇ ಹಾಲಿ ಅವಧಿಯಲ್ಲಿ ಎರಡು ವರ್ಷಗಳು ಸಂದು ಹೋಗಿವೆ. 2025ರ ಜನವರಿಯಲ್ಲಿ ಹಾಲಿ ಸಂಸತ್‌ನ ಅವಧಿ ಮುಕ್ತಾಯವಾಗುವುದರಿಂದ ಹೊಸ ಪ್ರಧಾನಿಯಾಗಲಿರುವವರಿಗೆ ಬಿಡುವಿಲ್ಲದಂತೆ ಗುರುತರ ಹೊಣೆಗಾರಿಕೆಗಳು ಕಾಯುತ್ತಿವೆ.

ಟಾಪ್ ನ್ಯೂಸ್

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Earthquake…! ರೋಡ್‌ ರೋಲರ್‌ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

Earthquake…! ರೋಡ್‌ ರೋಲರ್‌ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

WTC 25; India’s Test Championship finals road gets tough; Here’s the calculation

WTC 25; ಕಠಿಣವಾಯ್ತು ಭಾರತದ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ ಹಾದಿ; ಹೀಗಿದೆ ಲೆಕ್ಕಾಚಾರ

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

Jammu – Kashmir: ಬೆಳ್ಳಂಬೆಳಗ್ಗೆ ಕುಲ್ಗಾಮ್ ನಲ್ಲಿ ಎನ್‌ಕೌಂಟರ್‌… 5 ಭಯೋತ್ಪಾದಕರು ಹತ

Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

hdd

Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ

ಹೈನುಗಾರರ ಅಳಲಿಗೆ ಸರಕಾರ ತತ್‌ಕ್ಷಣ ಸ್ಪಂದಿಸಲಿ

Karnataka Govt.,: ಹೈನುಗಾರರ ಅಳಲಿಗೆ ಸರಕಾರ ತತ್‌ಕ್ಷಣ ಸ್ಪಂದಿಸಲಿ

ಪಡಿತರ ವ್ಯವಸ್ಥೆ ಸಮರ್ಪಕವಾಗಲಿ

ಪಡಿತರ ವ್ಯವಸ್ಥೆ ಸಮರ್ಪಕವಾಗಲಿ

MONEY (2)

Loan; ಅಡಮಾನ ರಹಿತ ಸಾಲ ಹೆಚ್ಚಳ: ಬ್ಯಾಂಕ್‌ಗಳ ಸ್ಪಂದನೆ ಮುಖ್ಯ

Karnataka ಹೈಕೋರ್ಟ್‌ನಲ್ಲಿ ಕನ್ನಡದಲ್ಲಿ ತೀರ್ಪು ಇನ್ನಾದರೂ ಸರಕಾರ ಎಚ್ಚೆತ್ತುಕೊಳ್ಳಲಿ

Karnataka ಹೈಕೋರ್ಟ್‌ನಲ್ಲಿ ಕನ್ನಡದಲ್ಲಿ ತೀರ್ಪು ಇನ್ನಾದರೂ ಸರಕಾರ ಎಚ್ಚೆತ್ತುಕೊಳ್ಳಲಿ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Earthquake…! ರೋಡ್‌ ರೋಲರ್‌ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

Earthquake…! ರೋಡ್‌ ರೋಲರ್‌ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

WTC 25; India’s Test Championship finals road gets tough; Here’s the calculation

WTC 25; ಕಠಿಣವಾಯ್ತು ಭಾರತದ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ ಹಾದಿ; ಹೀಗಿದೆ ಲೆಕ್ಕಾಚಾರ

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

Jammu – Kashmir: ಬೆಳ್ಳಂಬೆಳಗ್ಗೆ ಕುಲ್ಗಾಮ್ ನಲ್ಲಿ ಎನ್‌ಕೌಂಟರ್‌… 5 ಭಯೋತ್ಪಾದಕರು ಹತ

Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.