ಬ್ರಿಟಿಷರ ಕುರುಹುಗಳ ಬದಲಾವಣೆ: ಕಾಲಘಟ್ಟದ ಅನಿವಾರ್ಯ


Team Udayavani, Sep 9, 2022, 6:00 AM IST

tdy-28

ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳು ಕಳೆದು 76ನೇ ವರ್ಷದಲ್ಲಿ ನಡೆಯುತ್ತಿದ್ದೇವೆ. ಇಂಥ ಹೊತ್ತಿನಲ್ಲೂ ನಮ್ಮನ್ನು 200 ವರ್ಷಗಳ ಕಾಲ ಆಳಿದ ಬ್ರಿಟಿಷರ ಕುರುಹುಗಳನ್ನು ಹಾಗೇ ಇರಿಸಿಕೊಳ್ಳುವುದರಲ್ಲಿ ಯಾವುದೇ ಅರ್ಥವಿಲ್ಲ. ಇದಕ್ಕೆ ಪೂರಕವೆಂಬಂತೆ ಕೇಂದ್ರ ಸರ‌ಕಾರ ಬ್ರಿಟಿಷರ ಕಾಲದ ಕಾನೂನುಗಳಿಂದ ಹಿಡಿದು ಹಲವಾರು ವಿಷಯಗಳಲ್ಲಿ ಸ್ವಂತಿಕೆಯನ್ನು ತಂದಿದೆ.

2014ರಲ್ಲಿ ಅಧಿಕಾರಕ್ಕೆ ಬಂದ ಮೋದಿ ಸರಕಾರ ಮೊದಲಿಗೆ ಮಾಡಿದ ಕೆಲಸವೇ, ಬ್ರಿಟಿಷರ ಕಾಲದಿಂದಲೂ ಜಾರಿಯಲ್ಲಿದ್ದ 1,800ಕ್ಕೂ ಹೆಚ್ಚು ಕಾನೂನುಗಳನ್ನು ರದ್ದು ಮಾಡಿದ್ದು. ವಿಚಿತ್ರವೆಂದರೆ ಇವುಗಳಲ್ಲಿ ಎಷ್ಟೋ ಕಾನೂನುಗಳು ಏಕೆ ಬಳಕೆಯಾಗುತ್ತಿವೆ? ಎಲ್ಲಿ ಬಳಕೆಯಾಗುತ್ತಿವೆ ಎಂಬುದೇ ಯಾರಿಗೂ ಗೊತ್ತಿರಲಿಲ್ಲ. ಹೀಗಾಗಿ, ಇವುಗಳನ್ನು ರದ್ದು ಮಾಡ ಲಾಗಿದೆ. ಆದರೆ, ಇದಕ್ಕಿಂತ ಪ್ರಮುಖವಾಗಿ ದೇಶದ್ರೋಹ ಕಾನೂನು ಮಾತ್ರ ಇನ್ನೂ ಜಾರಿಯಲ್ಲಿದ್ದು, ಪ್ರಸ್ತುತ ಸನ್ನಿವೇಶದಲ್ಲಿ ಇದರ ಅಗತ್ಯವಿಲ್ಲ. ಇದನ್ನು ರದ್ದು ಮಾಡಬೇಕು ಎಂಬ ಒತ್ತಾಯವೂ ಕೇಳಿಬರುತ್ತಿದೆ.  ಬ್ರಿಟಿಷರ ಕಾಲದಲ್ಲಿ ಈ ದೇಶದ್ರೋಹ ಕಾನೂನನ್ನು ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡುತ್ತಿದ್ದವರ ಮೇಲೆ ಹಾಕಲಾಗುತ್ತಿತ್ತು. ಈಗಲೂ ಈ ಕಾನೂನನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂಬ ಆರೋಪ ಗಳಿವೆ. ಹೀಗಾಗಿ ಇದನ್ನು ನಿಷೇಧಿಸಿದರೆ ಉತ್ತಮ ನಿರ್ಧಾರವಾದೀತು.

ಈ ಸಂಗತಿಗಳಿಗಿಂತ ಪ್ರಮುಖವಾಗಿ ಇನ್ನೂ ನಾಲ್ಕು ಅಂಶಗಳನ್ನು ಹಾಲಿ ಮೋದಿ ಸರಕಾರ ಬದಲಾವಣೆ ಮಾಡಿದೆ. ಪ್ರಮುಖವಾಗಿ ಇಂಡಿಯಾ ಗೇಟ್‌ ಬಳಿ 5ನೇ ಕಿಂಗ್‌ ಜಾರ್ಜ್‌ ಪ್ರತಿಮೆ ಇದ್ದ ಸ್ಥಳದಲ್ಲಿ ಈಗ ನೇತಾಜಿ ಸುಭಾಷ್‌ಚಂದ್ರ ಬೋಸ್‌ ಅವರ ಪ್ರತಿಮೆಯನ್ನು ಅನಾವರಣ ಮಾಡಲಾಗಿದೆ. ವಿಚಿತ್ರವೆಂದರೆ, ಈ ಪ್ರತಿಮೆ ಬ್ರಿಟಿಷರ ಆಳ್ವಿಕೆ ಅಂತ್ಯಗೊಂಡ ಮೇಲೂ 1968ರ ವರೆಗೆ ಇಂಡಿಯಾ ಗೇಟ್‌ ಬಳಿಯೇ ಇತ್ತು. ಮೊದಲಿಗೆ ನೇತಾಜಿ ಅವರ ಹಾಲೋಗ್ರಾಮ್‌ ಪ್ರತಿಮೆಯನ್ನು ಇರಿಸಿ, ಈಗ ಶಾಶ್ವತವಾದ ಪ್ರತಿಮೆ ನಿರ್ಮಿಸಲಾಗಿದೆ.

ಮೊದಲನೇ ವಿಶ್ವಯುದ್ಧದಲ್ಲಿ ಭಾಗಿಯಾಗಿ ಹುತಾತ್ಮರಾಗಿದ್ದವರ ನೆನಪಿಗಾಗಿ ಸ್ಥಾಪಿಸಲಾಗಿದ್ದ ಅಮರ ಜವಾನ್‌ ಜ್ಯೋತಿ ಸ್ಮಾರಕವನ್ನು ಈಗ ರಾಷ್ಟ್ರೀಯ ಯುದ್ಧ ಸ್ಮಾರಕದೊಳಗೆ ವಿಲೀನ ಮಾಡಲಾಗಿದೆ. ಇಂಡಿಯಾ ಗೇಟ್‌ ಬಳಿ ಇದ್ದ ಈ ಸ್ಮಾರಕದಲ್ಲಿ ಕೇವಲ ಮೊದಲನೇ ಮಹಾಸಮರ ಮತ್ತು ಆಂಗ್ಲೋ-ಅಫ್ಘಾನ್‌ ಯುದ್ಧದಲ್ಲಿ ಭಾಗಿಯಾಗಿದ್ದವರ ಹೆಸರುಗಳಷ್ಟೇ ಇದ್ದವು. ಬಳಿಕ 1971ರಲ್ಲಿ ನಡೆದ ಬಾಂಗ್ಲಾ ವಿಮೋಚನಾ ಸಮರದಲ್ಲಿ ಹುತಾತ್ಮರಾದವರ ಹೆಸರುಗಳನ್ನು ಇಂದಿರಾ ಗಾಂಧಿಯವರ ಅವಧಿಯಲ್ಲಿ ಸೇರಿಸಲಾಗಿತ್ತು. ಈಗ ಭಾರತದಲ್ಲಿ ಇದುವರೆಗೆ ಆಗಿರುವ ಎಲ್ಲ ಯುದ್ಧಗಳ ಹುತಾತ್ಮರ ಹೆಸರುಗಳನ್ನು ಸೇರಿಸಿ ರಾಷ್ಟ್ರೀಯ ಸ್ಮಾರಕ ಮಾಡಲಾಗಿದ್ದು, ಎಲ್ಲವನ್ನು ಅಲ್ಲಿಗೆ ಸ್ಥಳಾಂತರಿಸಲಾಗಿದೆ.

ದಿಲ್ಲಿಯ ರೇಸ್‌ ಕೋರ್ಸ್‌ ರಸ್ತೆಯನ್ನು ಲೋಕ ಕಲ್ಯಾಣ ಮಾರ್ಗ ಎಂಬುದಾಗಿ ಬ್ರಿಟಿಷರ ಕಾಲದ ಪ್ರತ್ಯೇಕ ರೈಲ್ವೇ ಬಜೆಟ್‌ ಅನ್ನು ಸಾಮಾನ್ಯ ಬಜೆಟ್‌ನೊಳಗೇ ಸಮ್ಮಿಳಿತ ಮಾಡಲಾಗಿದೆ. ವಸಾಹತುಶಾಹಿಯ ಕುರುಹುಗಳಂತಿದ್ದ ಈ ಸಂಗತಿಗಳನ್ನು ತೆಗೆದುಹಾಕಿರುವುದು ಪ್ರಸ್ತುತ ಸಂದರ್ಭದಲ್ಲಿ ಸರಿಯಾದ ನಿರ್ಧಾರವೇ ಆಗಿದೆ.

ಇವೆಲ್ಲದರ ಜತೆಗೆ ಈಗ ಬ್ರಿಟಿಷರ ಕಾಲದ ರಾಜಪಥವನ್ನು ಕರ್ತವ್ಯ ಪಥವಾಗಿ ಬದಲಾವಣೆ ಮಾಡಿರುವುದು ದೇಶೀಯತೆಯ ಕುರುಹಾಗಿದೆ. ಈ ಬಗ್ಗೆ ಇಡೀ ದೇಶವೇ ಹೆಮ್ಮೆ ಪಡಬೇಕಾದ ಅಗತ್ಯತೆಯೂ ಇದೆ.

ಟಾಪ್ ನ್ಯೂಸ್

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

MRPL: ಕರಾವಳಿಗೆ ಮೊದಲ “ಗ್ರೀನ್‌ ಹೈಡ್ರೋಜನ್‌’ ಘಟಕ

MRPL: ಕರಾವಳಿಗೆ ಮೊದಲ “ಗ್ರೀನ್‌ ಹೈಡ್ರೋಜನ್‌’ ಘಟಕ

AFGvsSA; ಐತಿಹಾಸಿಕ ಸರಣಿ ಗೆದ್ದ ಅಫ್ಘಾನ್:‌ ದ.ಆಫ್ರಿಕಾಗೆ 177 ರನ್‌ ಅಂತರದ ಸೋಲು

AFGvsSA; ಐತಿಹಾಸಿಕ ಸರಣಿ ಗೆದ್ದ ಅಫ್ಘಾನ್:‌ ದ.ಆಫ್ರಿಕಾಗೆ 177 ರನ್‌ ಅಂತರದ ಸೋಲು

Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮುಲ್ ಸ್ಪಷ್ಟನೆ

Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮೂಲ್ ಸ್ಪಷ್ಟನೆ

Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ

Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ

atishi

Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Assembly Election: ಜಮ್ಮು-ಕಾಶ್ಮೀರದಲ್ಲಿ ಪ್ರಜಾಪ್ರಭುತ್ವದ ಹಬ್ಬ

Assembly Election: ಜಮ್ಮು-ಕಾಶ್ಮೀರದಲ್ಲಿ ಪ್ರಜಾಪ್ರಭುತ್ವದ ಹಬ್ಬ

Namma-clinic

Karnataka; ಬಸ್‌ ನಿಲ್ದಾಣಗಳಲ್ಲಿ ನಮ್ಮ ಕ್ಲಿನಿಕ್‌ ಸಮುಚಿತ ನಿರ್ಧಾರ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್‌ ಗಾಂಧಿ

Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್‌ ಗಾಂಧಿ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ

Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

ಕುಶಾಲನಗರ ಪ.ಪಂ ಚುನಾವಣೆ ಗೊಂದಲ: ವಿಪಕ್ಷ ನಾಯಕ ಅಶೋಕ್‌ ಅಸಮಾಧಾನ

ಕುಶಾಲನಗರ ಪ.ಪಂ ಚುನಾವಣೆ ಗೊಂದಲ: ವಿಪಕ್ಷ ನಾಯಕ ಅಶೋಕ್‌ ಅಸಮಾಧಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.