ಸಂಪುಟ ಭರ್ತಿ: ರಾಜ್ಯದ ಅಭಿವೃದ್ಧಿಗೆ ಆದ್ಯತೆಯಿರಲಿ


Team Udayavani, Jan 15, 2021, 6:36 AM IST

ಸಂಪುಟ ಭರ್ತಿ: ರಾಜ್ಯದ ಅಭಿವೃದ್ಧಿಗೆ ಆದ್ಯತೆಯಿರಲಿ

ಕಳೆದ ಒಂದೂವರೆ ವರ್ಷದಿಂದ ಸರಕಾರ ರಚನೆಗೆ ಕಾರಣಕರ್ತ ರಾದವರಿಗೆ ಸ್ಥಾನಮಾನ ಕಲ್ಪಿಸುವುದು ಬಿ.ಎಸ್‌.ಯಡಿಯೂರಪ್ಪ ಅವರಿಗೆ ಬಹುಮುಖ್ಯವಾಗಿತ್ತು. ಇದರ ಜತೆಗೆ ಪ್ರವಾಹ, ಕೋವಿಡ್ ನಿರ್ವಹಣೆ ಸವಾಲು ಸಹ ಸರಕಾರಕ್ಕೆ ಎದುರಾಗಿತ್ತು. ಪ್ರವಾಹ, ಕೊರೊನಾ ನಿರ್ವಹಣೆ ನಡುವೆಯೂ ಎದುರಾದ ಉಪ ಚುನಾವಣೆ ಯಲ್ಲಿ ಬಿಜೆಪಿ ಮೇಲುಗೈ ಸಾಧಿಸಿ ಸರಕಾರ ಭದ್ರಪಡಿಸಿಕೊಂಡಿದೆ. ಒಂದಿಬ್ಬರು ಹೊರತುಪಡಿಸಿದರೆ ಉಳಿದವರೆಲ್ಲರಿಗೂ ಸ್ಥಾನಮಾನಗಳೂ ಲಭಿಸಿವೆ. ಸಂಪುಟ ಇದೀಗ ಭರ್ತಿಯಾಗಿದೆ. ಉಳಿದ  ಎರಡೂಕಾಲು ವರ್ಷ ಅಭಿವೃದ್ಧಿಯತ್ತ ಚಿತ್ತ ಹರಿಸಬೇಕಾಗಿದೆ. ಕೊರೊನಾ, ಪ್ರವಾಹದಿಂದ ರಾಜ್ಯದ ಆರ್ಥಿಕ ಪರಿಸ್ಥಿತಿ ಕಷ್ಟಕರವಾಗಿದ್ದು ಸಂಪನ್ಮೂಲ ಕ್ರೋಡೀಕರಣಕ್ಕೆ ಹೆಚ್ಚು ಒತ್ತು ನೀಡಿ ಅಭಿವೃದ್ಧಿಗೆ ವೇಗ ಕೊಡಬೇಕಾಗಿದೆ.

ಸಂಪುಟ ವಿಸ್ತರಣೆ ಅನಂತರದ ವಿದ್ಯಮಾನಗಳು ಬಿಜೆಪಿ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮುಜುಗರ ತಂದಿರುವು ದಂತೂ ಹೌದು. ಆದರೆ ಇದನ್ನು ನಿಭಾಯಿಸುವ ಸಾಮರ್ಥ್ಯ ಬಿಜೆಪಿ ಹಾಗೂ ಯಡಿಯೂರಪ್ಪ ಅವರಿಗೆ ಇದೆ. ದಿಲ್ಲಿ ವರಿಷ್ಠರಿಗೆ ಏನು ಬೇಕಾದರೂ ದೂರು ಕೊಡಿ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಹೇಳಿರುವುದರ ಹಿಂದೆ ಕಠಿನ ಎಚ್ಚರಿಕೆ ಅಥವಾ ಸಂದೇಶ ಇರಬಹುದು.  ಆದರೆ ಆಡಳಿತ ಯಂತ್ರ ಸುಸೂತ್ರವಾಗಿ

ನಡೆಯಬೇಕಾದರೆ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗುವ ಜವಾಬ್ದಾರಿ ಅವರ ಮೇಲೆ ಇದೆ.ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಅಸಮಾಧಾನ ಸಹಜ. ಆದರೆ ಅದನ್ನು ಯಾವ ರೀತಿ ನಿರ್ವಹಿಸಬೇಕು ಎಂಬುದು ಮುಖ್ಯ. ಯಡಿಯೂರಪ್ಪ ಅವರು ಬೇಸರಗೊಂಡಿರುವವರನ್ನು ಕರೆದು ಮಾತನಾಡಬೇಕು. ಪರಿಸ್ಥಿತಿ ಮನವರಿಕೆ ಮಾಡಿಕೊಡಬೇಕು. ದಿಲ್ಲಿ ವರಿಷ್ಠರು ಸಹ  ಬಹಿರಂಗ ಅಸಮಾಧಾನ, ಹೇಳಿಕೆ, ಆರೋಪಗಳಿಗೆ ಅವಕಾಶ ಮಾಡಿಕೊಡಬಾರದು.  ಈ ಹಿಂದೆ ಕಾಂಗ್ರೆಸ್‌ ಸರಕಾರದಲ್ಲಿ ಐದು ವರ್ಷ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಒಂದೇ ಒಂದು ದಿನವೂ ತಮ್ಮ ವಿರುದ್ಧ ದಿಲ್ಲಿವರೆಗೂ ದೂರು ಹೋಗಲು ಬಿಟ್ಟಿರಲಿಲ್ಲ. ಒಂದೊಮ್ಮೆ ದೂರು ಹೋದರೂ ಅಲ್ಲಿ ಅದಕ್ಕೆ ಸ್ಪಂದನೆ ದೊರೆಯುತ್ತಿರಲಿಲ್ಲ. ನಿಮ್ಮದೇನಿದ್ದರೂ ಅಲ್ಲೇ ಮಾತನಾಡಿ ಬಗೆಹರಿಸಿಕೊಳ್ಳಿ ಎಂಬ ಕಿವಿಮಾತು ಹೇಳಲಾಗುತ್ತಿತ್ತು. ಆ ರೀತಿ ಹೈಕಮಾಂಡ್‌ ಕಟ್ಟುನಿಟ್ಟಾಗಿ ಇದ್ದ ಕಾರಣ ಸಿದ್ದರಾಮಯ್ಯ ಸುಸೂತ್ರವಾಗಿ ಆಡಳಿತ ನಡೆಸಲು ಸಾಧ್ಯವಾಯಿತು. ಸಂಪುಟ ವಿಸ್ತರಣೆ ವಿಚಾರದಲ್ಲಿನ ಅಸಮಾಧಾನ ಬೇರೆ ರೀತಿಯ ಸ್ವರೂಪ ಪಡೆದುಕೊಳ್ಳುವ ಮುನ್ನ ಬಿಜೆಪಿ ವರಿಷ್ಠರು ಮಧ್ಯಪ್ರವೇಶ ಮಾಡಬೇಕು. ಅಭಿವೃದ್ಧಿ ದೃಷ್ಟಿಯಿಂದ ಹೊಂದಿಕೊಂಡು ಹೋಗುವಂತೆ ಸೂಚನೆ ನೀಡಬೇಕು.

ಈಗ ಸಂಪುಟವೂ ಯಡಿಯೂರಪ್ಪ ಅವರ ಆಶಯದಂತೆ ಬಹುತೇಕ ಭರ್ತಿ ಆಗಿದೆ.  ಮುಖ್ಯಮಂತ್ರಿ ಯಡಿಯೂರಪ್ಪ  ಮತ್ತವರ ಸಂಪುಟ  ಅಭಿವೃದ್ಧಿಗೆ ಹೆಚ್ಚು ಒತ್ತು ನೀಡುವ ಬಗ್ಗೆ ಗಮನಹರಿಸಬೇಕಾಗಿದೆ.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-editorial

Editorial: ವಿದ್ಯಾರ್ಹತೆಗೆ ದೇಶವ್ಯಾಪಿ ಮಾನ್ಯತೆ, ಹೈಕೋರ್ಟ್‌ ತೀರ್ಪು ನ್ಯಾಯೋಚಿತ

13-editorial

Temperature: ಸಂಪಾದಕೀಯ-ತಾಪಮಾನ ಹೆಚ್ಚಳದ ಆತಂಕ: ಮುಂಜಾಗ್ರತೆಯೇ ಮದ್ದು

ಉಚಿತಗಳ ಆಮಿಷಗಳಿಗೆ ಕಡಿವಾಣ: ಚು.ಆಯೋಗ ಬದ್ಧತೆ ತೋರಲಿ

ಉಚಿತಗಳ ಆಮಿಷಗಳಿಗೆ ಕಡಿವಾಣ: ಚು.ಆಯೋಗ ಬದ್ಧತೆ ತೋರಲಿ

vidhana-Soudha

Editorial: ಪ್ರಾಥಮಿಕ ಶಾಲಾ ಶಿಕ್ಷಕರ ಪಠ್ಯೇತರ ಹೊರೆ ಇಳಿಸಿ

ಮಹಿಳಾ ಆರೋಪಿಗಳ ಬಂಧನ ವೇಳೆ ವಿವೇಚನೆ ಅತ್ಯವಶ್ಯ

ಮಹಿಳಾ ಆರೋಪಿಗಳ ಬಂಧನ ವೇಳೆ ವಿವೇಚನೆ ಅತ್ಯವಶ್ಯ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.