ಪೌರತ್ವ ನೀತಿಗೆ ತಿದ್ದುಪಡಿ: ಐಟಿ ವೃತ್ತಿಪರರಿಗೆ ಶುಭಸುದ್ದಿ


Team Udayavani, Jul 11, 2019, 5:36 AM IST

s-34

ಅಮೆರಿಕವು ತನ್ನ ಪೌರತ್ವ ನೀತಿಯಲ್ಲಿ ಅತ್ಯಂತ ಮಹತ್ವಪೂರ್ಣ ಬದಲಾವಣೆ ತರಲು ಮುಂದಾಗಿದ್ದು ಪ್ರಸ್ತಾವಿತ ತಿದ್ದುಪಡಿ ಕಾಯಿದೆ ಜಾರಿಗೆ ಬಂದದ್ದೇ ಆದಲ್ಲಿ ಅಲ್ಲಿ ನೆಲೆ ನಿಂತಿರುವ ಭಾರತೀಯರ ದಶಕಗಳ ಬೇಡಿಕೆ ಈಡೇರಲಿದೆ. ಸದ್ಯ ಅಮೆರಿಕದ ಪೌರತ್ವ ನೀತಿಯ ಪ್ರಕಾರ ಗ್ರೀನ್‌ಕಾರ್ಡ್‌ಗಾಗಿ ಒಂದು ದೇಶಕ್ಕೆ ಗರಿಷ್ಠ ಶೇ. 7ರ ಮಿತಿಯನ್ನು ವಿಧಿಸಲಾಗಿದೆ. ಎಚ್‌-1ಬಿ ವೀಸಾ ಪಡೆದು ಅಮೆರಿಕಕ್ಕೆ ತೆರಳಿರುವ ಭಾರತೀಯರಿಗಂತೂ ಈ ನೀತಿ ಅಲ್ಲಿನ ಪೌರತ್ವ ಪಡೆಯಲು ತಡೆಯಾಗಿ ಪರಿಣಮಿಸಿತ್ತು. ವಿವಿಧ ಕ್ಷೇತ್ರಗಳಲ್ಲಿ ಅದರಲ್ಲೂ ಐಟಿ ಕ್ಷೇತ್ರದಲ್ಲಿ ಉನ್ನತ ಕೌಶಲವನ್ನು ಪಡೆದು ಅಮೆರಿಕದಲ್ಲಿ ನೆಲೆಯಾಗಿರುವ ಭಾರತೀಯರಿಗೆ ಅಲ್ಲಿನ ಪೌರತ್ವ ಪಡೆಯುವುದು ಕಷ್ಟಸಾಧ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ಭಾರತೀಯ ವೃತ್ತಿಪರರು ಪೌರತ್ವ ನೀತಿಗೆ ತಿದ್ದುಪಡಿ ತರುವಂತೆ ಅಮೆರಿಕ ಸರಕಾರದ ಮೇಲೆ ಒತ್ತಡ ಹೇರುತ್ತಲೇ ಬಂದಿದ್ದರು. ಅಷ್ಟು ಮಾತ್ರವಲ್ಲದೆ ಕೆನಡಾ ಸಹಿತ ಇನ್ನಿತರ ಕೆಲವು ದೇಶಗಳು ತಮ್ಮ ಗ್ರೀನ್‌ಕಾರ್ಡ್‌ ನಿಯಮಾವಳಿಗಳಲ್ಲಿ ಸಡಿಲಿಕೆಗಳನ್ನು ಮಾಡಿ ವಿದೇಶಿ ತಂತ್ರಜ್ಞರನ್ನು ತಮ್ಮತ್ತ ಆಕರ್ಷಿಸಲಾರಂಭಿಸಿವೆ. ಭಾರತೀಯ ಟೆಕ್ಕಿಗಳೂ ಕೆನಡಾದತ್ತ ಮುಖ ಮಾಡಲಾರಂಭಿಸಿದ್ದಾರೆ. ಈ ಕಾರಣದಿಂದಾಗಿ ಕೊಂಚ ವಿಚಲಿತವಾಗಿರುವ ಅಮೆರಿಕ ಗ್ರೀನ್‌ ಕಾರ್ಡ್‌ ವಿತರಣೆಗೆ ಸಂಬಂಧಿಸಿದ ದೇಶಗಳ ಕೋಟಾವನ್ನು ರದ್ದುಪಡಿಸುವ ತಿದ್ದುಪಡಿ ಮಸೂದೆಯನ್ನು ಸಂಸತ್‌ನಲ್ಲಿ ಮಂಡಿಸಿದೆ.

ಭಾರತೀಯ ಮೂಲದ ಟೆಕ್ಕಿಗಳು ಮತ್ತು ತಂತ್ರಜ್ಞರು ಎಚ್‌-1ಬಿ ವೀಸಾ ಪಡೆದು ಅಮೆರಿಕಕ್ಕೆ ತೆರಳಿ ಅಲ್ಲಿ ವೃತ್ತಿನಿರತರಾಗಿದ್ದಾರೆ. ಇವರೆಲ್ಲರೂ ಅಲ್ಲಿನ ಗ್ರೀನ್‌ಕಾರ್ಡ್‌ ಪಡೆಯಲು ಹರಸಾಹಸ ಪಡುತ್ತಿದ್ದಾರೆ. ಸದ್ಯ ಅಮೆರಿಕದಲ್ಲಿ ವಿತರಣೆಯಾಗುತ್ತಿರುವ ಗ್ರೀನ್‌ಕಾರ್ಡ್‌ಗಳ ಪೈಕಿ ಶೇ. 0.25ರಷ್ಟು ಭಾರತೀಯರಿಗೆ ಲಭಿಸುತ್ತಿದೆ. ಇದೀಗ ಅಮೆರಿಕ ಸರಕಾರ ಸಂಸತ್‌ನಲ್ಲಿ ಮಂಡಿಸಿರುವ ಮಸೂದೆ ಅಂಗೀಕಾರವಾದರೆ ಮುಂದಿನ ಒಂದು ದಶಕದ ಅವಧಿಯಲ್ಲಿ ಶೇ. 90ರಷ್ಟು ಗ್ರೀನ್‌ ಕಾರ್ಡ್‌ಗಳು ಭಾರತೀಯರ ಪಾಲಾಗಲಿದೆ ಎಂದು ಅಲ್ಲಿನ ವಲಸೆ ಇಲಾಖೆ ಅಂದಾಜಿಸಿದೆ. ಅಷ್ಟು ಮಾತ್ರವಲ್ಲದೆ ಅಮೆರಿಕದ ಖಾಯಂ ನಿವಾಸಿಗಳಾಗಲು ಕಳೆದ ಹಲವಾರು ವರ್ಷಗಳಿಂದ ಚಾತಕಪಕ್ಷಿಗಳಂತೆ ಕಾಯುತ್ತಿರುವ ಭಾರತೀಯ ವಲಸಿಗರಿಗೆ ಅನುಕೂಲ ಆಗಲಿದೆ. ಇನ್ನೊಂದು ಅಂದಾಜಿನ ಪ್ರಕಾರ ಅಮೆರಿಕದಲ್ಲಿ ನೆಲೆಸಿರುವ 3 ಲಕ್ಷ ಭಾರತೀಯ ವಲಸಿಗರಿಗೆ ಗ್ರೀನ್‌ಕಾರ್ಡ್‌ ಲಭಿಸಲಿದೆ.

ಭಾರತದಲ್ಲಿ ಭಾರೀ ಸಂಖ್ಯೆಯಲ್ಲಿ ಉನ್ನತ ಕೌಶಲ ಹೊಂದಿರುವ ವೃತ್ತಿಪರರಿದ್ದು ಇವರನ್ನು ಸೆಳೆಯುವ ದೃಷ್ಟಿಯಿಂದ ಅಮೆರಿಕ ತನ್ನ ಪೌರತ್ವ ನೀತಿಗೆ ತಿದ್ದುಪಡಿ ತರಲು ಮುಂದಾಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ಅಮೆರಿಕದ ಕಂಪೆನಿಗಳು ಮತ್ತು ಹೂಡಿಕೆದಾರರಿಗೆ ವೃತ್ತಿಪರ ಉದ್ಯೋಗಿಗಳ ಆವಶ್ಯಕತೆ ಇರುವುದರಿಂದ ಮತ್ತು ಇತರ ದೇಶಗಳ ವೃತ್ತಿಪರರಿಗೆ ಹೋಲಿಸಿದರೆ ಭಾರತೀಯರಿಗೆ ಕಡಿಮೆ ವೇತನ ನೀಡಿದರೆ ಸಾಕು ಎಂಬ ಕಾರಣಗಳಿಂದ ಅಮೆರಿಕ ಈ ಮಹತ್ತರ ನಿರ್ಧಾರ ಕೈಗೊಂಡಿದೆ ಎನ್ನಲಾಗಿದೆ. ಅಷ್ಟು ಮಾತ್ರವಲ್ಲದೆ ಅಮೆರಿಕದ ಆರ್ಥಿಕ ಬೆಳವಣಿಗೆಯಲ್ಲಿ ವಲಸಿಗರ ಪಾತ್ರ ನಿರ್ಣಾಯಕವಾಗಿರುವುದರಿಂದ ಅಮೆರಿಕ ಈ ನಡೆ ಹೆಚ್ಚಿನ ಮಹತ್ವವನ್ನು ಪಡೆದಿದೆ. ಈ ತಿದ್ದುಪಡಿ ಮಸೂದೆಗೆ ಅಮೆರಿಕದ ಅಧ್ಯಕ್ಷೀಯ ಹುದ್ದೆಯ ಆಕಾಂಕ್ಷಿ ಕಮಲಾ ಹ್ಯಾರೀಸ್‌ ಬಹಿರಂಗವಾಗಿಯೇ ತಮ್ಮ ಬೆಂಬಲ ಘೋಷಿಸುವ ಮೂಲಕ ಭಾರತೀಯ ಮೂಲದ ವಲಸಿಗರ ಬೆಂಬಲಕ್ಕೆ ನಿಂತಿದ್ದಾರೆ. ಡೆಮಾಕ್ರಾಟ್‌ ಮತ್ತು ರಿಪಬ್ಲಿಕನ್‌ ಪಕ್ಷಗಳ ಸದಸ್ಯರೂ ತಿದ್ದುಪಡಿ ಮಸೂದೆ ಪರವಾಗಿ ನಿಂತಿರುವುದರಿಂದ ಈ ಮಸೂದೆ ಸಂಸತ್‌ನ ಅಂಗೀಕಾರ ಪಡೆಯುವುದು ನಿಚ್ಚಳವಾಗಿದೆ. ಅಮೆರಿಕದ ಈ ನಡೆ ಭಾರತದ ಅದರಲ್ಲೂ ದೇಶದ ಐಟಿ ರಾಜಧಾನಿ ಎಂಬ ಹೆಗ್ಗಳಿಕೆಯನ್ನು ಪಡೆದಿರುವ ಬೆಂಗಳೂರಿನ ಐಟಿ ವೃತ್ತಿಪರರಿಗೆ ವರದಾನವಾಗಿ ಪರಿಣಮಿಸಲಿದೆ. ಎಚ್‌-1ಬಿ ವೀಸಾ ಪಡೆದು ಅಮೆರಿಕಕ್ಕೆ ತೆರಳಿ ಅಲ್ಲಿ ವೃತ್ತಿನಿರತವಾಗಿರುವ ರಾಜ್ಯದ ತಂತ್ರಜ್ಞರಿಗೆ ಇನ್ನು ಅಮೆರಿಕದ ಖಾಯಂ ಪೌರತ್ವ ಲಭಿಸಲಿದೆ. ಇದರಿಂದ ಪೌರತ್ವದ ಕುರಿತಾಗಿ ಅವರು ಎದುರಿಸುತ್ತಿದ್ದ ಸಂಕಷ್ಟ ನಿವಾರಣೆಯಾಗಲಿದ್ದು ಅಮೆರಿಕದ ಇತರ ಪ್ರಜೆಗಳಂತೆಯೇ ಅಲ್ಲಿನ ಎಲ್ಲ ಸವಲತ್ತುಗಳನ್ನು ಪಡೆದುಕೊಳ್ಳಲಿದ್ದಾರೆ.

ಭಾರತ ಮತ್ತು ಅಮೆರಿಕ ನಡುವೆ ವ್ಯಾಪಾರ-ವಹಿವಾಟಿಗೆ ಸಂಬಂಧಿಸಿದಂತೆ ತಿಕ್ಕಾಟಗಳು ನಡೆಯುತ್ತಿವೆ. ಅಮೆರಿಕದ ಉತ್ಪನ್ನಗಳಿಗೆ ಭಾರತ ಸರಕಾರ ಹೆಚ್ಚಿನ ಪ್ರಮಾಣದಲ್ಲಿ ತೆರಿಗೆ ವಿಧಿಸಿರುವುದು ಉಭಯ ದೇಶಗಳ ನಡುವಣ ಸಂಬಂಧದಲ್ಲಿ ಒಂದಿಷ್ಟು ಬಿರುಕು ಮೂಡಿಸಿರುವ ಸಂದರ್ಭದಲ್ಲಿಯೇ ಅಮೆರಿಕ ತನ್ನ ಪೌರತ್ವ ನೀತಿಗೆ ತಿದ್ದುಪಡಿ ತರಲು ಮುಂದಾಗಿರುವುದು ದ್ವಿಪಕ್ಷೀಯ ಸಂಬಂಧದ ಬಲವರ್ಧನೆಗೆ ಸಹಕಾರಿಯಾಗಲಿದೆ. ಐಟಿ ದಿಗ್ಗಜ ರಾಷ್ಟ್ರಗಳ ಸಾಲಿನಲ್ಲಿ ಗುರುತಿಸಿಕೊಂಡಿರುವ ಭಾರತದ ಪಾಲಿಗೆ ಅಮೆರಿಕದ ಈ ನಿರ್ಧಾರ ಒಂದು ಸಕಾರಾತ್ಮಕ ಬೆಳವಣಿಗೆ ಎಂದೇ ಪರಿಗಣಿಸಲಾಗಿದೆ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-editorial

Editorial: ವಿದ್ಯಾರ್ಹತೆಗೆ ದೇಶವ್ಯಾಪಿ ಮಾನ್ಯತೆ, ಹೈಕೋರ್ಟ್‌ ತೀರ್ಪು ನ್ಯಾಯೋಚಿತ

13-editorial

Temperature: ಸಂಪಾದಕೀಯ-ತಾಪಮಾನ ಹೆಚ್ಚಳದ ಆತಂಕ: ಮುಂಜಾಗ್ರತೆಯೇ ಮದ್ದು

ಉಚಿತಗಳ ಆಮಿಷಗಳಿಗೆ ಕಡಿವಾಣ: ಚು.ಆಯೋಗ ಬದ್ಧತೆ ತೋರಲಿ

ಉಚಿತಗಳ ಆಮಿಷಗಳಿಗೆ ಕಡಿವಾಣ: ಚು.ಆಯೋಗ ಬದ್ಧತೆ ತೋರಲಿ

vidhana-Soudha

Editorial: ಪ್ರಾಥಮಿಕ ಶಾಲಾ ಶಿಕ್ಷಕರ ಪಠ್ಯೇತರ ಹೊರೆ ಇಳಿಸಿ

ಮಹಿಳಾ ಆರೋಪಿಗಳ ಬಂಧನ ವೇಳೆ ವಿವೇಚನೆ ಅತ್ಯವಶ್ಯ

ಮಹಿಳಾ ಆರೋಪಿಗಳ ಬಂಧನ ವೇಳೆ ವಿವೇಚನೆ ಅತ್ಯವಶ್ಯ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.