OTT; ಅಸಭ್ಯ ಒಟಿಟಿ ನಿಯಂತ್ರಣ: ಶಾಶ್ವತ ಕಡಿವಾಣ ಅಗತ್ಯ


Team Udayavani, Mar 16, 2024, 6:38 AM IST

mob

ಅಶ್ಲೀಲ, ಅಸಭ್ಯ, ಅನುಚಿತ ಮತ್ತು ಆಕ್ಷೇಪಾರ್ಹ ವಿಷಯಗಳನ್ನು ಪ್ರದರ್ಶಿಸುತ್ತಿದ್ದ 18 ಒಟಿಟಿ ಪ್ಲಾಟ್‌ಫಾರಂಗಳನ್ನು ಕೇಂದ್ರ ಸರಕಾರ ನಿಷೇಧಿಸಿ ಆದೇಶ ಹೊರಡಿಸಿದೆ. ಇದರ ಜತೆಯಲ್ಲಿ ಈ ನಿಷೇಧಿತ ಒಟಿಟಿ ಪ್ಲಾಟ್‌ಫಾರಂ ಗಳಿಗೆ ಸಂಬಂಧಿಸಿದಂತೆ 10 ಪ್ಲಿಕೇಶನ್‌ಗಳು, 19 ವೆಬ್‌ಸೈಟ್‌ಗಳು ಹಾಗೂ 57 ಸಾಮಾಜಿಕ ಜಾಲ ತಾಣ ಖಾತೆಗಳಿಗೂ ನಿರ್ಬಂಧ ವಿಧಿಸಲಾಗಿದೆ. ಈ ಮೂಲಕ ಕೇಂದ್ರ ಸರಕಾರ ದೇಶದ ಕಾನೂನು ನಿಯಮಾವಳಿಗಳೆಲ್ಲವನ್ನೂ ಗಾಳಿಗೆ ತೂರಿ ದೇಶದಲ್ಲಿ ಕಾರ್ಯ ನಿರ್ವಹಿಸಲು ಮುಂದಾಗುವ ಸಾಮಾಜಿಕ ಮಾಧ್ಯಮಗಳಿಗೆ ದೇಶದಲ್ಲಿ ಅವಕಾಶ ನೀಡಲಾಗದು ಎಂಬ ಸ್ಪಷ್ಟ ಸಂದೇಶವನ್ನು ರವಾನಿಸಿದೆ.

ಸದ್ಯ ಸರಕಾರದಿಂದ ನಿಷೇಧಿತವಾಗಿರುವ ಈ ಎಲ್ಲ ಒಟಿಟಿ ಪ್ಲಾಟ್‌ಫಾರಂಗಳು ಮತ್ತು ಇವುಗಳೊಂದಿಗೆ ನಂಟು ಹೊಂದಿರುವ ಸಾಮಾಜಿಕ ಮಾಧ್ಯಮಗಳು ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಸೃಜನಶೀಲತೆಯ ಹೆಸರಿನಲ್ಲಿ ಅಸಭ್ಯ ಮತ್ತು ಅಶ್ಲೀಲ ವಿಷಯಗಳನ್ನು ಪ್ರದರ್ಶಿಸುತ್ತಲೇ ಬಂದಿದ್ದವು. ಈ ಬಗ್ಗೆ ಕೇಂದ್ರದ ವಾರ್ತಾ ಮತ್ತು ಪ್ರಸಾರ ಸಚಿವಾಲಯ ತತ್‌ಕ್ಷಣವೇ ಇಂತಹ ಅಕ್ರಮ ಚಟುವಟಿಕೆಗಳನ್ನು ಸ್ಥಗಿತಗೊಳಿಸುವಂತೆ ಸಂಬಂಧಿತ ಕಂಪೆನಿಗಳಿಗೆ ಸೂಚನೆ ನೀಡಿತ್ತು. ಇದರ ಹೊರತಾಗಿಯೂ ಈ ಒಟಿಟಿ ಪ್ಲಾಟ್‌ಫಾರಂಗಳು ಮತ್ತು ವೆಬ್‌ಸೈಟ್‌ಗಳು ಅಶ್ಲೀಲ ಮತ್ತು ಆಕ್ಷೇಪಾರ್ಹ ವಿಷಯಗಳನ್ನು ತೆಗೆಯದೆ ತಮ್ಮ ಚಾಳಿಯನ್ನು ಮುಂದುವರಿಸಿದ್ದವು. ಇದನ್ನು ಗಂಭೀರವಾಗಿ ಪರಿಗಣಿಸಿದ ಸಚಿವಾಲಯ, ಮಹಿಳಾ ಮತ್ತು ಮಕ್ಕಳ ಹಕ್ಕುಗಳು, ಸಾಮಾಜಿಕ ಮಾಧ್ಯಮಗಳು ಮತ್ತು ಮನೋರಂಜನ ಕ್ಷೇತ್ರದ ತಜ್ಞರು ಹಾಗೂ ಕೇಂದ್ರದ ಸರಕಾರದ ಇನ್ನಿತರ ಸಂಬಂಧಿತ ಸಚಿವಾಲಯಗಳೊಂದಿಗೆ ಸಮಾಲೋಚನೆ ನಡೆಸಿ, ಈ ಎಲ್ಲ ಒಟಿಟಿ ಪ್ಲಾಟ್‌ಫಾರಂಗಳು ಮತ್ತು ಸಾಮಾಜಿಕ ಮಾಧ್ಯಮಗಳನ್ನು ಮಾಹಿತಿ ತಂತ್ರಜ್ಞಾನ ಕಾಯಿದೆ, 2000ದ ನಿಯಮಾವಳಿಗಳಡಿಯಲ್ಲಿ ನಿಷೇಧಿಸಿ ಆದೇಶ ಹೊರಡಿಸಿದೆ.

ಸೃಜನಶೀಲತೆಯನ್ನು ಮುಂದಿಟ್ಟು ಕೌಟುಂಬಿಕ ಸಂಬಂಧ, ಗುರು-ಶಿಷ್ಯ ಬಾಂಧವ್ಯವನ್ನೂ ಅತ್ಯಂತ ಕೀಳಾಗಿ ಬಿಂಬಿಸುವ ಅಶ್ಲೀಲ ಮತ್ತು ಅನುಚಿತ ವಿಷಯಗಳನ್ನು ಈ ಒಟಿಟಿಗಳಲ್ಲಿ ಪ್ರದರ್ಶಿಸಲಾಗುತ್ತಿತ್ತು. ಅಷ್ಟು ಮಾತ್ರವಲ್ಲದೆ ಕೆಲವೊಂದು ದ್ವೇಷಮಯ ಮತ್ತು ಆಕ್ಷೇಪಾರ್ಹ ವಿಷಯಗಳನ್ನೂ ಈ ಸಾಮಾಜಿಕ ಜಾಲ ತಾಣ ಖಾತೆಗಳ ಮೂಲಕ ಹರಡಲಾಗುತ್ತಿತ್ತು. ಮಹಿಳೆಯರ ಘನತೆ, ಗೌರವಕ್ಕೆ ಕುಂದುಂಟು ಮಾಡುವ ಮತ್ತು ಮಕ್ಕಳ ಮೇಲೆ ದೌರ್ಜನ್ಯ, ಶೋಷಣೆಯಂತಹ ಸಂಗತಿಗಳೂ ಇದರಲ್ಲಿ ಸೇರಿದ್ದವು. ಇವೆಲ್ಲವನ್ನು ಗಂಭೀರವಾಗಿ ಪರಿಗಣಿಸಿ ಸರಕಾರ ಈ ನಿರ್ಧಾರ ಕೈಗೊಂಡಿದೆ.

ಸರಕಾರದ ಈ ನಿರ್ಧಾರ ಸ್ವಾಗತಾರ್ಹ ಮತ್ತು ನ್ಯಾಯೋಚಿತ ಕೂಡ. ಆದರೆ ಈಗ ನಿಷೇಧಿಸಲ್ಪಟ್ಟಿರುವ ಈ ಒಟಿಟಿ ಪ್ಲಾಟ್‌ಫಾರಂಗಳು, ವೆಬ್‌ಸೈಟ್‌ಗಳು, ಆ್ಯಪ್‌ಗ್ಳು ಮತ್ತು ಸಾಮಾಜಿಕ ಜಾಲ ತಾಣ ಖಾತೆಗಳು ವಿದೇಶಗಳ ನೆಟ್‌ವರ್ಕ್‌ ಮತ್ತು ಮೂರನೇ ಮಧ್ಯವರ್ತಿ ಕಂಪೆನಿಗಳ ಸಹಿತ ಇತರ ಯಾವುದೇ ಮಾರ್ಗದಲ್ಲಿ ದೇಶದಲ್ಲಿ ಲಭ್ಯವಾಗದಂತೆ ಖಾತರಿಪಡಿಸುವ ಮಹತ್ತರ ಹೊಣೆಗಾರಿಕೆ ಸರಕಾರದ ಮೇಲಿದೆ. ಹಾಗಾದಲ್ಲಿ ಮಾತ್ರವೇ ಇವುಗಳ ನಿಷೇಧ ಸಂಪೂರ್ಣ ಯಶಸ್ವಿಯಾಗಲು ಸಾಧ್ಯ. ಮಾಹಿತಿ ತಂತ್ರಜ್ಞಾನ ಕ್ಷೇತ್ರ ದಿನೇದಿನೆ ಪ್ರಗತಿಪಥದಲ್ಲಿ ದಾಪುಗಾಲಿಡುತ್ತಿರು ವಾಗ ಸರಕಾರ ಇನ್ನೂ ಇಂತಹ ನಿಷೇಧ, ನಿರ್ಬಂಧಗಳಿಗೆ ಸೀಮಿತವಾಗದೆ ತಂತ್ರಜ್ಞಾನ ಮಾರ್ಗದ ಮೂಲಕವೇ ಇವುಗಳಿಗೆ ಶಾಶ್ವತ ಕಡಿವಾಣ ಹಾಕಲು ಸೂಕ್ತ ಕಾರ್ಯತಂತ್ರ ರೂಪಿಸಬೇಕು. ಇಲ್ಲವಾದಲ್ಲಿ ಇಂತಹ ನಿಷೇಧಗಳು “ಹೋದೆಯಾ ಪಿಶಾಚಿ ಎಂದರೆ ಬಂದೆ ಗವಾಕ್ಷೀಲಿ’ ಎಂಬ ಗಾದೆ ಮಾತಿನಂತಾಗುವುದು ನಿಶ್ಚಿತ.

ಟಾಪ್ ನ್ಯೂಸ್

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-editorial

Editorial: ವಿದ್ಯಾರ್ಹತೆಗೆ ದೇಶವ್ಯಾಪಿ ಮಾನ್ಯತೆ, ಹೈಕೋರ್ಟ್‌ ತೀರ್ಪು ನ್ಯಾಯೋಚಿತ

13-editorial

Temperature: ಸಂಪಾದಕೀಯ-ತಾಪಮಾನ ಹೆಚ್ಚಳದ ಆತಂಕ: ಮುಂಜಾಗ್ರತೆಯೇ ಮದ್ದು

ಉಚಿತಗಳ ಆಮಿಷಗಳಿಗೆ ಕಡಿವಾಣ: ಚು.ಆಯೋಗ ಬದ್ಧತೆ ತೋರಲಿ

ಉಚಿತಗಳ ಆಮಿಷಗಳಿಗೆ ಕಡಿವಾಣ: ಚು.ಆಯೋಗ ಬದ್ಧತೆ ತೋರಲಿ

vidhana-Soudha

Editorial: ಪ್ರಾಥಮಿಕ ಶಾಲಾ ಶಿಕ್ಷಕರ ಪಠ್ಯೇತರ ಹೊರೆ ಇಳಿಸಿ

ಮಹಿಳಾ ಆರೋಪಿಗಳ ಬಂಧನ ವೇಳೆ ವಿವೇಚನೆ ಅತ್ಯವಶ್ಯ

ಮಹಿಳಾ ಆರೋಪಿಗಳ ಬಂಧನ ವೇಳೆ ವಿವೇಚನೆ ಅತ್ಯವಶ್ಯ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1sadgu

Pariksha Pe Charcha: ಸಾರ್ಟ್‌ಫೋನ್‌ಗಿಂತಲೂ ನೀವು ಸಾರ್ಟ್‌ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.