ಶಾಸಕರ ಅಸಮಾಧಾನ ಸಮನ್ವಯ ಮುಖ್ಯ


Team Udayavani, Jan 6, 2021, 5:58 AM IST

ಶಾಸಕರ ಅಸಮಾಧಾನ ಸಮನ್ವಯ ಮುಖ್ಯ

ರಾಜ್ಯವು ಇನ್ನೂ ಕೋವಿಡ್‌ ಮಹಾಮಾರಿಯಿಂದ ಮುಕ್ತವಾಗಿಲ್ಲ, ಸಾಂಕ್ರಾಮಿಕದ ಪರಿಣಾಮವಾಗಿ ಅರ್ಥವ್ಯವಸ್ಥೆಯು ಚೇತರಿಕೆಯ ಆರಂಭಿಕ ಹಂತದಲ್ಲೇ ಇದೆ. ಈ ಕಾರಣಕ್ಕಾಗಿಯೇ ಮುಂದಿನ ರಾಜ್ಯ ಬಜೆಟ್‌ ಹಲವು ರೀತಿಯಲ್ಲಿ ಮಹತ್ವ ಪಡೆದಿದೆ. ಆದರೆ ಬಜೆಟ್‌ ಮಂಡನೆಗೂ ಮುನ್ನ ಶಾಸಕರ ಕ್ಷೇತ್ರಗಳಲ್ಲಿನ ಅಭಿವೃದ್ಧಿ ಕಾರ್ಯಗಳ ವಿಚಾರದಲ್ಲಿ ಮುಖ್ಯಮಂತ್ರಿಯವರು ನಡೆಸಿದ ಶಾಸಕರ ಸಭೆಯಲ್ಲಿ ಎದುರಾಗಿರುವ ಆಕ್ರೋಶ ನಿಜಕ್ಕೂ ಬೇಸರದ ಸಂಗತಿ. ಇದರ ನಡುವೆಯೂ ಮುಖ್ಯಮಂತ್ರಿಗಳು ಅಭಿವೃದ್ಧಿಗೆ ವೇಗ ನೀಡುವ ಭರವಸೆ ನೀಡಿರುವದರೂ, ಶಾಸಕ ವರ್ಗದಲ್ಲಿನ ಅಸಮಾಧಾನದ ಧ್ವನಿಗಳು, ಸರಕಾರದಲ್ಲಿ ಸಮನ್ವಯದ ಕೊರತೆ ಇದೆಯೇ ಎನ್ನುವ ಪ್ರಶ್ನೆಯನ್ನು ಹುಟ್ಟುಹಾಕುತ್ತಿದೆ.

ಕರಾವಳಿ ಕರ್ನಾಟಕ, ಮಧ್ಯ ಕರ್ನಾಟಕ, ಕಲ್ಯಾಣ ಕರ್ನಾಟಕದ ಶಾಸಕರು ಮುಖ್ಯಮಂತ್ರಿಗಳು ತಮ್ಮೆಡೆಗೆ ನಿರ್ಲಕ್ಷ್ಯ ಧೋರಣೆ ತೋರುತ್ತಿರುವುದನ್ನು, ಪಕ್ಷದಲ್ಲಿ ಕೆಲವರ ಹಸ್ತಕ್ಷೇಪ ಹೆಚ್ಚಾಗುತ್ತಿರುವುದನ್ನು ಪ್ರಶ್ನಿಸಿದ್ದಾರೆ. ರಾಜ್ಯವು ಅಭಿವೃದ್ಧಿಯೆಡೆಗೆ ತ್ವರಿತವಾಗಿ ಹೆಜ್ಜೆಹಾಕಲೇಬೇಕಿರುವ ಇಂಥ ತುರ್ತು ಸಮಯದಲ್ಲಿ ಆಡಳಿತ ಪಕ್ಷದಲ್ಲಿನ ಈ ಬೆಳವಣಿಗೆ ಒಳ್ಳೆಯದಲ್ಲ. ಹಾಗೆಂದು, ಇಲ್ಲಿ ಶಾಸಕರನ್ನೇ ಕಟಕಟೆಯಲ್ಲಿ ನಿಲ್ಲಿಸುವುದಕ್ಕೆ ಸಾಧ್ಯವಾಗುವುದಿಲ್ಲ. ಅವರುಗಳು ಎತ್ತಿರುವ ಕೆಲವು ಪ್ರಶ್ನೆಗಳಿಗೆ ಪರಿಹಾರ ಕಂಡುಕೊಳ್ಳಲೇಬೇಕಿದೆ. ಖುದ್ದು ಮುಖ್ಯಮಂತ್ರಿಗಳೇ ಅನುದಾನ ಬಿಡುಗಡೆಗೆ ಆದೇಶಿಸಿದರೂ, ಅಭಿವೃದ್ಧಿ ಯೋಜನೆಗಳಿಗೆ ಅನುದಾನ ಪಡೆಯಲು ಪದೇ ಪದೆ ಅಲೆದಾಡುವಂಥ ಪರಿಸ್ಥಿತಿ ನಿರ್ಮಾಣ ವಾಗಿದೆ ಎನ್ನುವ ಶಾಸಕರೊಬ್ಬರ ಬೇಸರ ನಿಜಕ್ಕೂ ಚಿಂತೆ ಹುಟ್ಟಿಸುವಂಥದ್ದು.

ಈ ನಿಟ್ಟಿನಲ್ಲಿ ಶೀಘ್ರವೇ ಸಮಸ್ಯೆಯನ್ನು ಬಗೆಹರಿಸುವ ಭರವಸೆಯನ್ನು ಮುಖ್ಯಮಂತ್ರಿಗಳು ನೀಡಿರುವರಾದರೂ ಪಕ್ಷದೊಳಗೆ ಈ ರೀತಿಯ ಅಸ
ಮಾಧಾನ, ಸಮನ್ವಯದ ಕೊರತೆಯಿರುವುದು, ಹೊರಗಿನವರು, ಒಳಗಿನವರು ಎಂಬ ಆಂತರಿಕ ಕಲಹ ಉಂಟಾಗಿರುವುದು ಖಂಡಿತ ರಾಜ್ಯದ ಹಿತದೃಷ್ಟಿಯಿಂದ ಒಳ್ಳೆಯ ಬೆಳವಣಿಗೆಯಲ್ಲ. ಕುಡಿಯುವ ನೀರು ಪೂರೈಕೆ, ರಸ್ತೆಗಳ ನಿರ್ಮಾಣ ಸೇರಿದಂತೆ ಅನೇಕ ಯೋಜನೆಗಳು ಕೋವಿಡ್‌ ಕಾರಣದಿಂದಾಗಿ ನನೆಗುದಿಗೆ ಬಿದ್ದಿವೆ. ಆ ಯೋಜನೆಗಳಿಗೆ ಮರುವೇಗ ಕೊಡುವ ಸಮಯವಿದು. ಪರಿಸ್ಥಿತಿ ಹೀಗಿರುವಾಗ ಶಾಸಕರು, ಮುಖ್ಯ ನಾಯಕತ್ವದ ನಡುವೆ ತಾಳ ಮೇಳ ಇಲ್ಲ ಎಂದಾದರೆ ಅಭಿವೃದ್ಧಿಯತ್ತ ಗಮನ ಕೊಡುವವರು ಯಾರು?

ಪಕ್ಷದೊಳಗಿನ ಈ ಒಡಕುಗಳನ್ನೆಲ್ಲ ಸರಿಪಡಿಸಿಕೊಂಡು ಬಜೆಟ್‌ ಮಂಡನೆ ವೇಳೆಗೆ ಸರಕಾರ ಆರ್ಥಿಕತೆಯನ್ನು ಸರಿದಾರಿಗೆ ತರಬೇಕು. ಅಭಿವೃದ್ಧಿಯತ್ತ ಮುನ್ನಡೆಯಬೇಕು. ಏಕೆಂದರೆ ಜನರು ಎಲ್ಲವನ್ನೂ ಗಮನಿಸುತ್ತಿರುತ್ತಾರೆ ಎಂಬುದು ಮರೆಯಬಾರದು. ಎಲ್ಲದಕ್ಕೂ ಕೊರೊನಾ ಕಾರಣ ಎಂದು ನೆಪ ಹೇಳುವುದಕ್ಕೂ ಆಗುವುದಿಲ್ಲ. ಅಂತಿಮವಾಗಿ ಸಂಕಷ್ಟದಲ್ಲೂ ಸಾಧನೆಯೇ ಮುಖ್ಯವಾಗುತ್ತದೆ. ರಾಜ್ಯದಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದು ಒಂದೂವರೆ ವರ್ಷ ಕಳೆದ ಹೊತ್ತಲ್ಲೇ ಶಾಸಕರು ಕ್ಷೇತ್ರದ ಅಭಿವೃದ್ಧಿಯಾಗುತ್ತಿಲ್ಲ. ಅನುದಾನ ಸಿಗುತ್ತಿಲ್ಲ, ಸಚಿವರು ಕೈಗೆ ಸಿಗುವುದಿಲ್ಲ ಎಂದು ಅಸಮಾಧಾನ ಹೊರಹಾಕಿರುವುದು ಸಾಮಾನ್ಯ ವಿಷಯವಲ್ಲ. ಏಕೆಂದರೆ ಮುಂದಿನ ಎರಡು ವರ್ಷಗಳಲ್ಲಿ ಮತ್ತೆ ವಿಧಾನಸಭೆ ಚುನಾವಣೆ ಎದುರಾಗಲಿದೆ. ಮುಂದಿನ ಚುನಾವಣೆಯಲ್ಲಿ 140 ರಿಂದ 150 ಸ್ಥಾನ ಗೆಲ್ಲುವ ಗುರಿಯೊಂದಿಗೆ ಮುನ್ನಡೆಯಬೇಕು
ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರೇ ಹೇಳಿದ್ದಾರೆ. ಇಂತಹ ಸಂದರ್ಭದಲ್ಲಿ ಶಾಸಕರ ಅಸಮಾಧಾನ ಪಕ್ಷ ಮತ್ತು ಸರಕಾರಕ್ಕೆ ಮುಜುಗರ ತಂದಿರುವುದಂತೂ ಹೌದು.

ರಾಜ್ಯವು ಇನ್ನೂ ಕೋವಿಡ್‌ ಮಹಾಮಾರಿಯಿಂದ ಮುಕ್ತವಾಗಿಲ್ಲ, ಸಾಂಕ್ರಾಮಿಕದ ಪರಿಣಾಮವಾಗಿ ಅರ್ಥವ್ಯವಸ್ಥೆಯು ಚೇತರಿಕೆಯ ಆರಂಭಿಕ ಹಂತದಲ್ಲೇ ಇದೆ. ಈ ಕಾರಣಕ್ಕಾಗಿಯೇ ಮುಂದಿನ ರಾಜ್ಯ ಬಜೆಟ್‌ ಹಲವು ರೀತಿಯಲ್ಲಿ ಮಹತ್ವ ಪಡೆದಿದೆ. ಆದರೆ ಬಜೆಟ್‌ ಮಂಡನೆಗೂ ಮುನ್ನ ಶಾಸಕರ ಕ್ಷೇತ್ರಗಳಲ್ಲಿನ ಅಭಿವೃದ್ಧಿ ಕಾರ್ಯಗಳ ವಿಚಾರದಲ್ಲಿ ಮುಖ್ಯಮಂತ್ರಿಯವರು ನಡೆಸಿದ ಶಾಸಕರ ಸಭೆಯಲ್ಲಿ ಎದುರಾಗಿರುವ ಆಕ್ರೋಶ ನಿಜಕ್ಕೂ ಬೇಸರದ ಸಂಗತಿ. ಇದರ ನಡುವೆಯೂ ಮುಖ್ಯಮಂತ್ರಿಗಳು ಅಭಿವೃದ್ಧಿಗೆ ವೇಗ ನೀಡುವ ಭರವಸೆ ನೀಡಿರುವದರೂ, ಶಾಸಕ ವರ್ಗದಲ್ಲಿನ ಅಸಮಾಧಾನದ ಧ್ವನಿಗಳು, ಸರಕಾರದಲ್ಲಿ ಸಮನ್ವಯದ ಕೊರತೆ ಇದೆಯೇ ಎನ್ನುವ ಪ್ರಶ್ನೆಯನ್ನು ಹುಟ್ಟುಹಾಕುತ್ತಿದೆ.

ಕರಾವಳಿ ಕರ್ನಾಟಕ, ಮಧ್ಯ ಕರ್ನಾಟಕ, ಕಲ್ಯಾಣ ಕರ್ನಾಟಕದ ಶಾಸಕರು ಮುಖ್ಯಮಂತ್ರಿಗಳು ತಮ್ಮೆಡೆಗೆ ನಿರ್ಲಕ್ಷ್ಯ ಧೋರಣೆ ತೋರುತ್ತಿರುವುದನ್ನು, ಪಕ್ಷದಲ್ಲಿ ಕೆಲವರ ಹಸ್ತಕ್ಷೇಪ ಹೆಚ್ಚಾಗುತ್ತಿರುವುದನ್ನು ಪ್ರಶ್ನಿಸಿದ್ದಾರೆ. ರಾಜ್ಯವು ಅಭಿವೃದ್ಧಿಯೆಡೆಗೆ ತ್ವರಿತವಾಗಿ ಹೆಜ್ಜೆಹಾಕಲೇಬೇಕಿರುವ ಇಂಥ ತುರ್ತು ಸಮಯದಲ್ಲಿ ಆಡಳಿತ ಪಕ್ಷದಲ್ಲಿನ ಈ ಬೆಳವಣಿಗೆ ಒಳ್ಳೆಯದಲ್ಲ. ಹಾಗೆಂದು, ಇಲ್ಲಿ ಶಾಸಕರನ್ನೇ ಕಟಕಟೆಯಲ್ಲಿ ನಿಲ್ಲಿಸುವುದಕ್ಕೆ ಸಾಧ್ಯವಾಗುವುದಿಲ್ಲ. ಅವರುಗಳು ಎತ್ತಿರುವ ಕೆಲವು ಪ್ರಶ್ನೆಗಳಿಗೆ ಪರಿಹಾರ ಕಂಡುಕೊಳ್ಳಲೇಬೇಕಿದೆ. ಖುದ್ದು ಮುಖ್ಯಮಂತ್ರಿಗಳೇ ಅನುದಾನ ಬಿಡುಗಡೆಗೆ ಆದೇಶಿಸಿದರೂ, ಅಭಿವೃದ್ಧಿ ಯೋಜನೆಗಳಿಗೆ ಅನುದಾನ ಪಡೆಯಲು ಪದೇ ಪದೆ ಅಲೆದಾಡುವಂಥ ಪರಿಸ್ಥಿತಿ ನಿರ್ಮಾಣ ವಾಗಿದೆ ಎನ್ನುವ ಶಾಸಕರೊಬ್ಬರ ಬೇಸರ ನಿಜಕ್ಕೂ ಚಿಂತೆ ಹುಟ್ಟಿಸುವಂಥದ್ದು.

ಈ ನಿಟ್ಟಿನಲ್ಲಿ ಶೀಘ್ರವೇ ಸಮಸ್ಯೆಯನ್ನು ಬಗೆಹರಿಸುವ ಭರವಸೆಯನ್ನು ಮುಖ್ಯಮಂತ್ರಿಗಳು ನೀಡಿರುವರಾದರೂ ಪಕ್ಷದೊಳಗೆ ಈ ರೀತಿಯ ಅಸ
ಮಾಧಾನ, ಸಮನ್ವಯದ ಕೊರತೆಯಿರುವುದು, ಹೊರಗಿನವರು, ಒಳಗಿನವರು ಎಂಬ ಆಂತರಿಕ ಕಲಹ ಉಂಟಾಗಿರುವುದು ಖಂಡಿತ ರಾಜ್ಯದ ಹಿತದೃಷ್ಟಿಯಿಂದ ಒಳ್ಳೆಯ ಬೆಳವಣಿಗೆಯಲ್ಲ. ಕುಡಿಯುವ ನೀರು ಪೂರೈಕೆ, ರಸ್ತೆಗಳ ನಿರ್ಮಾಣ ಸೇರಿದಂತೆ ಅನೇಕ ಯೋಜನೆಗಳು ಕೋವಿಡ್‌ ಕಾರಣದಿಂದಾಗಿ ನನೆಗುದಿಗೆ ಬಿದ್ದಿವೆ. ಆ ಯೋಜನೆಗಳಿಗೆ ಮರುವೇಗ ಕೊಡುವ ಸಮಯವಿದು. ಪರಿಸ್ಥಿತಿ ಹೀಗಿರುವಾಗ ಶಾಸಕರು, ಮುಖ್ಯ ನಾಯಕತ್ವದ ನಡುವೆ ತಾಳ ಮೇಳ ಇಲ್ಲ ಎಂದಾದರೆ ಅಭಿವೃದ್ಧಿಯತ್ತ ಗಮನ ಕೊಡುವವರು ಯಾರು?

ಪಕ್ಷದೊಳಗಿನ ಈ ಒಡಕುಗಳನ್ನೆಲ್ಲ ಸರಿಪಡಿಸಿಕೊಂಡು ಬಜೆಟ್‌ ಮಂಡನೆ ವೇಳೆಗೆ ಸರಕಾರ ಆರ್ಥಿಕತೆಯನ್ನು ಸರಿದಾರಿಗೆ ತರಬೇಕು. ಅಭಿವೃದ್ಧಿಯತ್ತ ಮುನ್ನಡೆಯಬೇಕು. ಏಕೆಂದರೆ ಜನರು ಎಲ್ಲವನ್ನೂ ಗಮನಿಸುತ್ತಿರುತ್ತಾರೆ ಎಂಬುದು ಮರೆಯಬಾರದು. ಎಲ್ಲದಕ್ಕೂ ಕೊರೊನಾ ಕಾರಣ ಎಂದು ನೆಪ ಹೇಳುವುದಕ್ಕೂ ಆಗುವುದಿಲ್ಲ. ಅಂತಿಮವಾಗಿ ಸಂಕಷ್ಟದಲ್ಲೂ ಸಾಧನೆಯೇ ಮುಖ್ಯವಾಗುತ್ತದೆ. ರಾಜ್ಯದಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದು ಒಂದೂವರೆ ವರ್ಷ ಕಳೆದ ಹೊತ್ತಲ್ಲೇ ಶಾಸಕರು ಕ್ಷೇತ್ರದ ಅಭಿವೃದ್ಧಿಯಾಗುತ್ತಿಲ್ಲ. ಅನುದಾನ ಸಿಗುತ್ತಿಲ್ಲ, ಸಚಿವರು ಕೈಗೆ ಸಿಗುವುದಿಲ್ಲ ಎಂದು ಅಸಮಾಧಾನ ಹೊರಹಾಕಿರುವುದು ಸಾಮಾನ್ಯ ವಿಷಯವಲ್ಲ. ಏಕೆಂದರೆ ಮುಂದಿನ ಎರಡು ವರ್ಷಗಳಲ್ಲಿ ಮತ್ತೆ ವಿಧಾನಸಭೆ ಚುನಾವಣೆ ಎದುರಾಗಲಿದೆ. ಮುಂದಿನ ಚುನಾವಣೆಯಲ್ಲಿ

140 ರಿಂದ 150 ಸ್ಥಾನ ಗೆಲ್ಲುವ ಗುರಿಯೊಂದಿಗೆ ಮುನ್ನಡೆಯಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರೇ ಹೇಳಿದ್ದಾರೆ. ಇಂತಹ ಸಂದರ್ಭದಲ್ಲಿ ಶಾಸಕರ ಅಸಮಾಧಾನ ಪಕ್ಷ ಮತ್ತು ಸರಕಾರಕ್ಕೆ ಮುಜುಗರ ತಂದಿರುವುದಂತೂ ಹೌದು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-editorial

Editorial: ವಿದ್ಯಾರ್ಹತೆಗೆ ದೇಶವ್ಯಾಪಿ ಮಾನ್ಯತೆ, ಹೈಕೋರ್ಟ್‌ ತೀರ್ಪು ನ್ಯಾಯೋಚಿತ

13-editorial

Temperature: ಸಂಪಾದಕೀಯ-ತಾಪಮಾನ ಹೆಚ್ಚಳದ ಆತಂಕ: ಮುಂಜಾಗ್ರತೆಯೇ ಮದ್ದು

ಉಚಿತಗಳ ಆಮಿಷಗಳಿಗೆ ಕಡಿವಾಣ: ಚು.ಆಯೋಗ ಬದ್ಧತೆ ತೋರಲಿ

ಉಚಿತಗಳ ಆಮಿಷಗಳಿಗೆ ಕಡಿವಾಣ: ಚು.ಆಯೋಗ ಬದ್ಧತೆ ತೋರಲಿ

vidhana-Soudha

Editorial: ಪ್ರಾಥಮಿಕ ಶಾಲಾ ಶಿಕ್ಷಕರ ಪಠ್ಯೇತರ ಹೊರೆ ಇಳಿಸಿ

ಮಹಿಳಾ ಆರೋಪಿಗಳ ಬಂಧನ ವೇಳೆ ವಿವೇಚನೆ ಅತ್ಯವಶ್ಯ

ಮಹಿಳಾ ಆರೋಪಿಗಳ ಬಂಧನ ವೇಳೆ ವಿವೇಚನೆ ಅತ್ಯವಶ್ಯ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.