Covid:ಆತಂಕ ಬೇಡ ಆದರೆ ಎಚ್ಚರಿಕೆ ಇರಲಿ


Team Udayavani, Dec 26, 2023, 5:08 AM IST

Covid test

ರಾಜ್ಯದಲ್ಲಿ ಕೋವಿಡ್‌ ಮತ್ತೆ ತನ್ನ ಕಬಂಧ ಬಾಹುಗಳನ್ನು ಚಾಚುತ್ತಿದೆ. ಸೋಂಕು ಪ್ರಕರಣಗಳ ಸಂಖ್ಯೆ ಮೂರಂಕಿ ತಲುಪಿದೆ. ಈ ಮಧ್ಯೆ ರೂಪಾಂತರಿ ತಳಿ ಜೆಎನ್‌1 ಸೋಂಕು ಇರುವುದು ಕೂಡ ದೃಢಪಟ್ಟಿದೆ. ಇದೇ ವೇಳೆ ಹೊಸ ವರ್ಷಾಚರಣೆ ಸಂಭ್ರಮಕ್ಕೆ ಬೆಂಗಳೂರು ಸೇರಿದಂತೆ ಮಹಾನಗರಗಳು ಮತ್ತು ನಗರಗಳು ಸಜ್ಜಾಗುತ್ತಿವೆ. ಇಂತಹ ಸಂದರ್ಭದಲ್ಲಿ ಆತಂಕಕ್ಕೊಳಗಾಗುವುದಕ್ಕಿಂತ ಜಾಗರೂಕತೆ ಆವಶ್ಯಕತೆ ಹೆಚ್ಚಿದೆ.

ಕೋವಿಡ್‌ ನಮಗೆ ಹೊಸದಲ್ಲ; ಅದರ ತೀವ್ರತೆ ಮತ್ತು ಪರಿಣಾಮಗಳನ್ನು ಎದುರಿಸಿದ ಅನುಭವ ಇದೆ. ಕೊರೊನಾ ವೈರಸ್‌ ಬಂದುಹೋದ ಮೇಲೆ ಒಮಿಕ್ರಾನ್‌ ಸೇರಿದಂತೆ ಹಲವು ರೂಪಾಂತರಿ ತಳಿಗಳೂ ನಮಗೇ ಅರಿವಿಲ್ಲದಂತೆ ಬಂದುಹೋಗಿವೆ. ಈಗ ಅದರ ಮುಂದುವರಿದ ಭಾಗವಾಗಿ ಜೆಎನ್‌1 ತಳಿ ಪತ್ತೆಯಾಗಿದೆ. ಆದಾಗ್ಯೂ ಅನುಭವದಿಂದ ಪಾಠ ಕಲಿತಂತಿಲ್ಲ. ಉದಾಸೀನ ಈಗಲೂ ಮುಂದುವರಿದಿದೆ. ಸಭೆ-ಸಮಾರಂಭಗಳು ಸೇರಿದಂತೆ ಹೆಚ್ಚು ಜನದಟ್ಟಣೆ ಇರುವ ಕಡೆಗಳಲ್ಲಿ 60 ವರ್ಷ ಮೇಲ್ಪಟ್ಟವರು ಮಾಸ್ಕ್ ಧರಿಸುವುದು ಸೂಕ್ತ ಎಂದು ಸರಕಾರ ಹೇಳಿದೆ. ಆದರೆ ಅದನ್ನು ಅನುಸರಿಸುತ್ತಿರುವವರ ಸಂಖ್ಯೆ ಈಗಲೂ ತುಂಬಾ ವಿರಳ.
ವಾರದ ಹಿಂದಷ್ಟೇ ನೆರೆಯ ಕೇರಳಲ್ಲಿ ಕಾಣಿಸಿಕೊಂಡಿದ್ದ ಈ ತಳಿಯ ಸೋಂಕು ಪ್ರಕರಣಗಳು ಆಗಲೇ ರಾಜ್ಯಕ್ಕೆ ಕಾಲಿಟ್ಟಿವೆ. ತಜ್ಞರ ಪ್ರಕಾರ ಇದು ಅಪಾಯಕಾರಿ ಆಗಿಲ್ಲದಿರಬಹುದು. ಆದರೆ ಸೋಂಕಿನ ವೇಗ ತೀವ್ರ ಗತಿಯಲ್ಲಿದೆ ಎನ್ನಲಾಗುತ್ತಿದೆ. ಈ ನಡುವೆ ಕೋವಿಡ್‌ನಿಂದ ಬಳಲುತ್ತಿದ್ದ ಇಬ್ಬರು ಈಚೆಗೆ ಸಾವನ್ನಪ್ಪಿದ್ದಾರೆ. ಇದರ ಬೆನ್ನಲ್ಲೇ ಎಚ್ಚೆತ್ತ ಸರಕಾರ ಸೋಂಕು ಪರೀಕ್ಷೆಗಳನ್ನು ಹೆಚ್ಚಿಸಿದೆ. ಹೊರರಾಜ್ಯಗಳಿಂದ ಬರುವ ಅದರಲ್ಲೂ ವಿಶೇಷವಾಗಿ ತಮಿಳುನಾಡು, ಕೇರಳದಿಂದ ಬರುವವರ ಮೇಲೆ ವಿಶೇಷ ನಿಗಾ ಇಟ್ಟಿದ್ದು, ಸ್ಕ್ರೀನಿಂಗ್‌ಗೆ ಒಳಪಡಿಸುತ್ತಿದೆ. ಸೋಂಕಿನ ಲಕ್ಷಣಗಳು ಕಂಡುಬಂದರೆ, ಪರೀಕ್ಷೆಗೆ ಸೂಚಿಸಲಾಗುತ್ತಿದೆ. ರಾಜ್ಯದಲ್ಲಿ ಒಟ್ಟಾರೆ 344 ಸಕ್ರಿಯ ಪ್ರಕರಣಗಳಿವೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ಕೇಂದ್ರಗಳಲ್ಲಿ ಆಕ್ಸಿಜನ್‌ ಒಳಗೊಂಡಂತೆ ಪೂರ್ವಸಿದ್ಧತೆಗಳನ್ನೂ ಮಾಡಿಕೊಳ್ಳಲಾಗುತ್ತಿದೆ.

ಸೋಂಕು ಪ್ರಕರಣಗಳ ಹಿನ್ನೋಟ ನೋಡಿದರೆ, ಸಾಮಾನ್ಯವಾಗಿ ವರ್ಷಾಂತ್ಯಕ್ಕೆ ಕೋವಿಡ್‌ ವ್ಯಾಪಕವಾಗಿ ಹರಡುವುದನ್ನು ಕಾಣಬಹುದು. ಈಗ ಮತ್ತೂಂದು ವರ್ಷಾಂತ್ಯಕ್ಕೆ ದಿನಗಣನೆ ಶುರುವಾಗಿದ್ದು, ಹೊಸ ವರ್ಷ ಬರಮಾಡಿಕೊಳ್ಳಲು ಜನ ತುದಿಗಾಲಲ್ಲಿ ನಿಂತಿದ್ದಾರೆ. ಯಾವುದೇ ಸಂಭ್ರಮಾಚರಣೆಗೆ ಸರಕಾರವೂ ನಿರ್ಬಂಧ ವಿಧಿಸಿಲ್ಲ. ಆದರೆ ಮುನ್ನೆಚ್ಚರಿಕೆ ಇರಲಿ ಎಂದು ಸೂಚ್ಯವಾಗಿ ಹೇಳಿದೆ. ಆ ಎಚ್ಚರಿಕೆ ಯಾವಾಗಲೂ ಜಾಗೃತವಾಗಿರಬೇಕು. ಕೋವಿಡ್‌ ನಿಯಂತ್ರಣಕ್ಕೆ ಪರಿಣಾಮಕಾರಿ ಅಸ್ತ್ರವೆಂದರೆ ಅದು- ಮಾಸ್ಕ್. ಇದನ್ನು ಮನಗಾಣುವುದರ ಜತೆಗೆ ಅನುಸರಿಸಬೇಕು. ಧಾರ್ಮಿಕ ಕ್ಷೇತ್ರಗಳು, ಸಭೆ-ಸಮಾರಂಭಗಳಲ್ಲಿ ಪಾಲ್ಗೊಳ್ಳುವವರು ಮಾಸ್ಕ್ ಧರಿಸಬೇಕು. ಲಕ್ಷಣಗಳು ಕಂಡುಬಂದರೆ, ತತ್‌ಕ್ಷಣ ಸ್ವಯಂ ಐಸೋಲೇಟ್‌ ಆಗಿ ಸೋಂಕಿಗೆ ಅವಕಾಶ ನೀಡಬಾರದು.

ಅದೇ ರೀತಿ ಸರಕಾರ ಕೂಡ ಯುದ್ಧದ ಸಂದರ್ಭದಲ್ಲಿ ಶಸ್ತ್ರಾಭ್ಯಾಸಕ್ಕೆ ಮುಂದಾಗದೆ, ಸಚಿವ ಸಂಪುಟದ ಉಪಸಮಿತಿಯು ನಿರಂತರವಾಗಿ ಸೋಂಕಿನ ಮೇಲೆ ನಿಗಾ ಇಟ್ಟು, ಕಾಲಕಾಲಕ್ಕೆ ಮಾರ್ಗಸೂಚಿಗಳನ್ನು ಹೊರಡಿಸಬೇಕು. ಅದರ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಬೇಕು. ಈಗಾಗಲೇ ಕೋವಿಡ್‌ 1 ಮತ್ತು 2ನೇ ಅಲೆಗಳು ಆರ್ಥಿಕತೆ ಮೇಲೆ ಸಾಕಷ್ಟು ಪರಿಣಾಮ ಬೀರಿದ್ದು, ಅದರಿಂದ ಈಗಷ್ಟೇ ಎಚ್ಚೆತ್ತುಕೊಳ್ಳಲಾಗುತ್ತಿದೆ. ಅದು ಪುನರಾವರ್ತನೆಯಾಗದಂತೆ ಸೂಕ್ತ ಕ್ರಮಕ್ಕೆ ಮುಂದಾಗಬೇಕು.

ಟಾಪ್ ನ್ಯೂಸ್

4-bng-crime

Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಿಐಪಿ ಭದ್ರತೆಯಿಂದ ಎನ್‌ಎಸ್‌ಜಿಗೆ ಮುಕ್ತಿ: ಸಮುಚಿತ ನಿರ್ಧಾರ

National Security Guard: ವಿಐಪಿ ಭದ್ರತೆಯಿಂದ ಎನ್‌ಎಸ್‌ಜಿಗೆ ಮುಕ್ತಿ: ಸಮುಚಿತ ನಿರ್ಧಾರ

Islamabad: ಪಾಕ್‌ನ ಇಬ್ಬಂದಿತನಕ್ಕೆ ಕಿಡಿ: ಜೈಶಂಕರ್‌ ನಡೆ ಶ್ಲಾಘನೀಯ

ಕ್ಯಾನ್ಸರ್‌ ಕಾಯಿಲೆ: ನಿರಂತರ ಜಾಗೃತಿ ಅಗತ್ಯಕ್ಯಾನ್ಸರ್‌ ಕಾಯಿಲೆ: ನಿರಂತರ ಜಾಗೃತಿ ಅಗತ್ಯ

India: ಕ್ಯಾನ್ಸರ್‌ ಕಾಯಿಲೆ; ನಿರಂತರ ಜಾಗೃತಿ ಅಗತ್ಯ

Canada: ಜಸ್ಟಿನ್‌ ಟ್ರಾಡೊ ಉದ್ಧಟತನಕ್ಕೆ ತಕ್ಕ ಪ್ರತಿಕ್ರಿಯೆ

Canada: ಜಸ್ಟಿನ್‌ ಟ್ರಾಡೊ ಉದ್ಧಟತನಕ್ಕೆ ತಕ್ಕ ಪ್ರತಿಕ್ರಿಯೆ

BAnga

Bangladesh Unrest: ಹಿಂದೂ ಸಮುದಾಯದ ರಕ್ಷಣೆ: ಬಾಂಗ್ಲಾ ಸರಕಾರ ಬದ್ಧತೆ ತೋರಲಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

5-ptr

Puttur: ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಅಪಘಾತದಲ್ಲಿ ಮೃತ್ಯು

simha roopini kannada movie

Simha Roopini: ಭಕ್ತಿ ಭಾವದ ʼಸಿಂಹ ರೂಪಿಣಿʼ: ಕಿನ್ನಾಳ್‌ ರಾಜ್‌ ನಿರ್ದೇಶನ

4-bng-crime

Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.