Editorial: ಶಿಕ್ಷಣದಲ್ಲಿ ಡಿಜಿಟಲ್‌ ಕ್ರಾಂತಿ: ಆರೋಗ್ಯ ವಿ.ವಿ. ನಡೆ ಸ್ತುತ್ಯರ್ಹ


Team Udayavani, Feb 28, 2024, 9:49 AM IST

3-editorial

ಕೊರೊನಾನಂತರ ಶಿಕ್ಷಣ ಕ್ಷೇತ್ರದಲ್ಲಿ ತಂತ್ರಜ್ಞಾನದ ಬಳಕೆ ಹೆಚ್ಚಾಗಿದ್ದು, ಆವಿಷ್ಕಾರಗಳು ನಡೆಯುತ್ತಲೇ ಬಂದಿವೆ. ತಂತ್ರಜ್ಞಾನದ ನೈಜ ಫ‌ಲಾನುಭವಿಯಾಗಬೇಕಿರುವ ಶಿಕ್ಷಣ ರಂಗ ಇತ್ತ ಇನ್ನಷ್ಟು ಹೆಚ್ಚಿನ ಗಮನ ಹರಿಸುವ ಅನಿವಾರ್ಯತೆ ಇದೆ.

ಈ ನಿಟ್ಟಿನಲ್ಲಿ ದೇಶದ ಹಲವು ವಿಶ್ವ ವಿದ್ಯಾನಿಲಯಗಳು, ಶಿಕ್ಷಣ ಸಂಸ್ಥೆಗಳು ಪ್ರಯೋಗ ನಿರತವಾಗಿವೆ. ಈ ದಿಸೆಯಲ್ಲಿ ಕರ್ನಾಟಕದ ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯವೂ ಕಾರ್ಯೋನ್ಮುಖವಾಗಿದ್ದು, ಈಗಾಗಲೇ ಕೆಲವೊಂದು ಉಪಕ್ರಮವನ್ನು ಯಶಸ್ವಿಯಾಗಿ ಅನುಷ್ಠಾನಕ್ಕೆ ತಂದಿದೆ.

ಈಗ ಆರೋಗ್ಯ ವಿ.ವಿ ಡಿಜಿಟಲ್‌ ಕ್ರಾಂತಿಯಲ್ಲಿ ಇನ್ನೊಂದು ಹೆಜ್ಜೆ ಇರಿಸಿದ್ದು ಕಾಗದರಹಿತ ಪರೀಕ್ಷೆಯನ್ನು ನಡೆಸಲು ಸಜ್ಜಾಗಿದೆ. ಕಾಗದ ರಹಿತ ಪರೀಕ್ಷೆಯ ಚಿಂತನೆ ಹೊಸದೇನಲ್ಲ. ಬೆರಳೆಣಿಕೆಯ ಸಂಸ್ಥೆಗಳಲ್ಲಿ ಈ ಮಾದರಿಯ ಪರೀಕ್ಷೆ ನಡೆಯುತ್ತಿದೆಯಾದರೂ ಅದಿನ್ನೂ ಪೂರ್ಣಪ್ರಮಾಣದಲ್ಲಿ ಅನುಷ್ಠಾನಗೊಂಡಿಲ್ಲ.

ಮಾರ್ಚ್‌ನಲ್ಲಿ ನಡೆಯಲಿರುವ ಫೆಲೋಶಿಪ್‌ ಮತ್ತು ಫಿಸಿಯೋಥೆರಪಿ ವಿಭಾಗದ ಪರೀಕ್ಷೆಗಳನ್ನು ಪ್ರಾಯೋಗಿಕ ನೆಲೆಯಲ್ಲಿ ಕಾಗದ ರಹಿತವಾಗಿ ನಡೆಸಲು ಆರೋಗ್ಯ ವಿವಿ ಸನ್ನದ್ಧವಾಗಿದೆ. ಈಗಾಗಲೇ “ಡಿಜಿಟಲ್‌ ಮೌಲ್ಯಮಾಪನ’ ವ್ಯವಸ್ಥೆಯನ್ನು ಪರಿಚಯಿಸಿ, ಯಶಸ್ವಿಯಾಗಿರುವ ಆರೋಗ್ಯ ವಿವಿಗೆ ದೇಶಾದ್ಯಂತ ಸಾರ್ವತ್ರಿಕ ಮೆಚ್ಚುಗೆ ವ್ಯಕ್ತವಾಗಿದೆ.

ದೇಶದ ವಿವಿಧ ರಾಜ್ಯಗಳು ವಿವಿಗಳು ಮತ್ತು ಶಿಕ್ಷಣ ಸಂಸ್ಥೆಗಳು ಈ ಬಗ್ಗೆ ಮಾಹಿತಿಯನ್ನು ಪಡೆದುಕೊಂಡು ತಮ್ಮ ವ್ಯಾಪ್ತಿಯಲ್ಲಿ ಡಿಜಿಟಲ್‌ ಮೌಲ್ಯಮಾಪನವನ್ನು ಅನುಷ್ಠಾನಗೊಳಿಸಲು ಆಸಕ್ತಿ ತೋರಿವೆ.

ಇದರಿಂದ ಆರೋಗ್ಯ ವಿ.ವಿ. ಯ ಡಿಜಿಟಲ್‌ ಕ್ರಾಂತಿಗೆ ಹೆಚ್ಚಿನ ಬಲ ಲಭಿಸಿದೆ. ನಿಮ್ಹಾನ್ಸ್‌ನಲ್ಲಿ ಈಗಾಗಲೇ ನಿರ್ದಿಷ್ಟ ಕೋರ್ಸ್‌ಗಳಿಗೆ ಸಂಬಂಧಿಸಿದಂತೆ ಕಾಗದ ರಹಿತ ಪರೀಕ್ಷೆಯನ್ನು ನಡೆಸಲಾಗುತ್ತಿದ್ದು ಇದೇ ಮಾದರಿಯಲ್ಲಿ ಆರೋಗ್ಯ ವಿವಿ ಕೂಡ ಪ್ರಾಯೋಗಿಕ ನೆಲೆಯಲ್ಲಿ ಡಿಜಿಟಲ್‌ ಪರೀಕ್ಷೆ ನಡೆಸಲು ಸಿದ್ಧತೆ ಮಾಡಿ ಕೊಂಡಿದೆ.

ಇದರಿಂದ ಶಿಕ್ಷಣ ಕ್ಷೇತ್ರದಲ್ಲಿ ತಂತ್ರಜ್ಞಾನದ ಬಳಕೆಯ ವ್ಯಾಪ್ತಿ ಮತ್ತಷ್ಟು ವಿಸ್ತಾರಗೊಂಡಂತಾಗುವುದರ ಜತೆಯಲ್ಲಿ ಪರೀಕ್ಷಾ ವ್ಯವಸ್ಥೆಯಲ್ಲಿ ಹೆಚ್ಚಿನ ಪಾರದರ್ಶಕತೆ ಕಾಯ್ದುಕೊಳ್ಳಲು ಸಾಧ್ಯವಾಗಲಿದೆ. ಇವೆಲ್ಲದಕ್ಕಿಂತ ಮುಖ್ಯವಾಗಿ ಪ್ರತೀ ವರ್ಷ ಉತ್ತರಪತ್ರಿಕೆಗಳಿಗಾಗಿ ವಿವಿ ಕೋಟ್ಯಂತರ ರೂ.ಗಳನ್ನು ವ್ಯಯಿಸುತ್ತಿದ್ದು, ಕಾಗದ ರಹಿತ ಪರೀಕ್ಷಾ ವ್ಯವಸ್ಥೆ ಜಾರಿಯಾದಲ್ಲಿ ಭಾರೀ ಪ್ರಮಾಣದಲ್ಲಿ ಹಣ ಉಳಿತಾಯವಾಗಲಿದೆ.

ಡಿಜಿಟಲ್‌ ಪರೀಕ್ಷೆಗಾಗಿ ಟ್ಯಾಬ್‌ಗಳನ್ನು ಖರೀದಿಸಿ, ಇದನ್ನು ಸಮರ್ಪಕವಾಗಿ ನಿರ್ವಹಣೆ ಮಾಡಿದಲ್ಲಿ ಹಲವಾರು ವರ್ಷಗಳ ವರೆಗೆ ಬಳಸಬಹುದಾಗಿದೆ. ಇದರಿಂದ ಉತ್ತರಪತ್ರಿಕೆಗಾಗಿ ಪ್ರತೀವರ್ಷ ವ್ಯಯಿಸುವ ಕೋಟ್ಯಂತರ ರೂ. ಉಳಿತಾಯವಾಗಲಿದೆ. ಆ ಮೂಲಕ ಮರಗಳನ್ನು ಸಂರಕ್ಷಣೆ ಮಾಡಿದಂತಾಗುತ್ತದೆ.

ಕಾಗದ ರಹಿತ ಪರೀಕ್ಷ ವ್ಯವಸ್ಥೆ ಜಾರಿ ಅಷ್ಟೊಂದು ಸುಲಭದ ಮಾತೇನಲ್ಲ. ತಂತ್ರಜ್ಞಾನದ ಬಳಕೆಯ ಸಂದರ್ಭದಲ್ಲಿ ಹಲವಾರು ತಾಂತ್ರಿಕ ಅಡಚಣೆಗಳು ಎದುರಾಗುವುದು ಸಹಜ. ಇನ್ನು ಆವಿಷ್ಕಾರಗಳು ಮುಂದುವರಿದಂತೆ ಅವುಗಳ ದುರುಪಯೋಗ, ಅಕ್ರಮಗಳು ಕೂಡ ಅಷ್ಟೇ ಕ್ಷಿಪ್ರಗತಿಯಲ್ಲಿ ಹೆಚ್ಚುತ್ತಿವೆ.

ಈಗಿನ ಕೃತಕ ಬುದ್ಧಿಮತ್ತೆಯ ಕಾಲದಲ್ಲಿ ಇದು ಅಕ್ಷರಶಃ ಬಲುದೊಡ್ಡ ಸವಾಲಾಗಿದ್ದು, ಇವೆಲ್ಲ ದರ ಸಂಪೂರ್ಣ ಅರಿವಿದ್ದುಕೊಂಡೇ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ಈ ಹೊಸ ವ್ಯವಸ್ಥೆಯನ್ನು ಪರಿಚಯಿಸುವ ಸಾಹಸಕ್ಕೆ ಆರೋಗ್ಯ ವಿವಿ ಮುಂದಾಗಿರುವುದು ಸ್ತುತ್ಯಾರ್ಹ.

ಪ್ರಾಯೋಗಿಕ ನೆಲೆಯಲ್ಲಿ ಈಗ ಕಾಗದ ರಹಿತ ಪರೀಕ್ಷೆಯನ್ನು ನಡೆಸಿ, ಅದರ ಫ‌ಲಶ್ರುತಿಯನ್ನು ಆಧರಿಸಿ ಮುಂದಿನ ಹಂತದಲ್ಲಿ ಇನ್ನಷ್ಟು ಸುಧಾರಣೆಗಳೊಂದಿಗೆ ಅದನ್ನು ಅತ್ಯಂತ ವ್ಯವಸ್ಥಿತವಾಗಿ ಮತ್ತು ಪೂರ್ಣರೂಪದಲ್ಲಿ ಅನುಷ್ಠಾನಗೊಳಿಸುವ ಚಿಂತನೆ ವಿವಿಯದ್ದಾಗಿದೆ. ಆರೋಗ್ಯ ವಿವಿಯ ಈ ಸಾಹಸ, ಸೃಜನಶೀಲ ಮತ್ತು ಆವಿಷ್ಕಾರ ಮನೋಭಾವಕ್ಕೆ ಶಹಭಾಸ್‌ ಸಲ್ಲಲೇಬೇಕು. ಇದು ರಾಜ್ಯ ಮತ್ತು ದೇಶದ ಇತರ ಶಿಕ್ಷಣ ಸಂಸ್ಥೆಗಳು, ವಿವಿಗಳಿಗೆ ಮಾದರಿಯಾಗಬೇಕು.

ಟಾಪ್ ನ್ಯೂಸ್

Thug Life: ದುಬಾರಿ ಬೆಲೆಗೆ ಕಮಲ್‌ ಹಾಸನ್ ʼಥಗ್‌ ಲೈಫ್‌ʼ ಓಟಿಟಿ ರೈಟ್ಸ್ ಸೇಲ್

Thug Life: ದುಬಾರಿ ಬೆಲೆಗೆ ಕಮಲ್‌ ಹಾಸನ್ ʼಥಗ್‌ ಲೈಫ್‌ʼ ಓಟಿಟಿ ರೈಟ್ಸ್ ಸೇಲ್

Padmaavat To Billu.. ಟೈಟಲ್‌ನಿಂದಲೇ ವಿವಾದಕ್ಕೆ ಗುರಿಯಾದ ಬಾಲಿವುಡ್‌ ಸಿನಿಮಾಗಳಿವು

Padmaavat To Billu.. ಟೈಟಲ್‌ನಿಂದಲೇ ವಿವಾದಕ್ಕೆ ಗುರಿಯಾದ ಬಾಲಿವುಡ್‌ ಸಿನಿಮಾಗಳಿವು

1-darshan

Darshan ಜಾಮೀನು ಅರ್ಜಿ ಕೊನೆಗೂ ಸಲ್ಲಿಕೆ:ವಿಚಾರಣೆ ಮುಂದೂಡಿದ ಕೋರ್ಟ್

Air Force Chief: ವಾಯುಪಡೆ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ನೇಮಕ

Air Force Chief: ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ನೇಮಕ

crime (2)

Bengaluru; ಫ್ರಿಡ್ಜ್ ನಲ್ಲಿ ಮಹಿಳೆಯ ಕೊಳೆತ ಶ*ವ!!; 30 ಕ್ಕೂ ಹೆಚ್ಚು ತುಂಡುಗಳು!!!

1-muni

BJP MLA ಮುನಿರತ್ನಗೆ ಅಕ್ಟೋಬರ್ 5ರವರೆಗೆ ನ್ಯಾಯಾಂಗ ಬಂಧನ

Ayodhya: 8 ಕಾಲುಳ್ಳ ಕರುವಿಗೆ ಜನ್ಮ ನೀಡಿದ ಎಮ್ಮೆ, ಇದೊಂದು ಪವಾಡ- ಸ್ಥಳೀಯರು

Ayodhya: 8 ಕಾಲುಗಳ ಕರುವಿಗೆ ಜನ್ಮ ನೀಡಿದ ಎಮ್ಮೆ, ಇದೊಂದು ಪವಾಡ- ಸ್ಥಳೀಯರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Assembly Election: ಜಮ್ಮು-ಕಾಶ್ಮೀರದಲ್ಲಿ ಪ್ರಜಾಪ್ರಭುತ್ವದ ಹಬ್ಬ

Assembly Election: ಜಮ್ಮು-ಕಾಶ್ಮೀರದಲ್ಲಿ ಪ್ರಜಾಪ್ರಭುತ್ವದ ಹಬ್ಬ

Namma-clinic

Karnataka; ಬಸ್‌ ನಿಲ್ದಾಣಗಳಲ್ಲಿ ನಮ್ಮ ಕ್ಲಿನಿಕ್‌ ಸಮುಚಿತ ನಿರ್ಧಾರ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Thug Life: ದುಬಾರಿ ಬೆಲೆಗೆ ಕಮಲ್‌ ಹಾಸನ್ ʼಥಗ್‌ ಲೈಫ್‌ʼ ಓಟಿಟಿ ರೈಟ್ಸ್ ಸೇಲ್

Thug Life: ದುಬಾರಿ ಬೆಲೆಗೆ ಕಮಲ್‌ ಹಾಸನ್ ʼಥಗ್‌ ಲೈಫ್‌ʼ ಓಟಿಟಿ ರೈಟ್ಸ್ ಸೇಲ್

yatnal

BJP; ರಮೇಶ ಜಾರಕಿಹೊಳಿ ಸಿಟ್ಟು ಕಡಿಮೆಯಾಗಿಲ್ಲ,ಅವರ ನಿರ್ಧಾರಕ್ಕೆ ಬದ್ಧ: ಯತ್ನಾಳ್

Padmaavat To Billu.. ಟೈಟಲ್‌ನಿಂದಲೇ ವಿವಾದಕ್ಕೆ ಗುರಿಯಾದ ಬಾಲಿವುಡ್‌ ಸಿನಿಮಾಗಳಿವು

Padmaavat To Billu.. ಟೈಟಲ್‌ನಿಂದಲೇ ವಿವಾದಕ್ಕೆ ಗುರಿಯಾದ ಬಾಲಿವುಡ್‌ ಸಿನಿಮಾಗಳಿವು

1-darshan

Darshan ಜಾಮೀನು ಅರ್ಜಿ ಕೊನೆಗೂ ಸಲ್ಲಿಕೆ:ವಿಚಾರಣೆ ಮುಂದೂಡಿದ ಕೋರ್ಟ್

ಕಳಸಾ ನಾಲಾದಲ್ಲಿ ರಾಜಕೀಯ ಕೊಳಕು: ಸರ್ವ ಪಕ್ಷ ನಿಯೋಗ ಒಯ್ಯುವ ಚಕಾರವೇ ಇಲ್ಲ!

ಕಳಸಾ ನಾಲಾದಲ್ಲಿ ರಾಜಕೀಯ ಕೊಳಕು: ಸರ್ವ ಪಕ್ಷ ನಿಯೋಗ ಒಯ್ಯುವ ಚಕಾರವೇ ಇಲ್ಲ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.