ಉಪಮುಖ್ಯಮಂತ್ರಿ ಹುದ್ದೆ ವಿವಾದ ಜನರ ದೃಷ್ಟಿಯಲ್ಲಿ ಲಘುವಾಗದಿರಿ


Team Udayavani, Dec 17, 2019, 5:45 AM IST

vs

ಜಾತಿಗೊಂದು, ಸಮುದಾಯಕ್ಕೊಂದು, ಊರಿಗೊಂದು ಎಂಬಂತೆ ಉಪ ಮುಖ್ಯಮಂತ್ರಿ ಹುದ್ದೆ ಹಂಚುವುದರಿಂದ ಆ ಹುದ್ದೆಗಿರುವ “ಕಲ್ಪಿತ ಮಹತ್ವ’ವೂ ಕಡಿಮೆಯಾಗುತ್ತದೆ. ಜನರ ದೃಷ್ಟಿಯಲ್ಲಿ ಈ ಹುದ್ದೆ ಲಘುವಾಗುವ ಮೊದಲು ನಾಯಕರು ಎಚ್ಚೆತ್ತುಕೊಳ್ಳುವುದು ಅಗತ್ಯ.

ಕರ್ನಾದಕದಲ್ಲೀಗ ಉಪ ಮುಖ್ಯಮಂತ್ರಿ ಹುದ್ದೆಯ ಕುರಿತಾದ ವಿವಾದ ಜೋರಾಗಿದೆ. ಅನರ್ಹಗೊಂಡಿದ್ದ ಶಾಸಕರ ಪೈಕಿ 12 ಮಂದಿ ಬಿಜೆಪಿ ಟಿಕೇಟಿನಲ್ಲಿ ಗೆದ್ದು ಬಂದ ಬಳಿಕ ಸರಕಾರ ಸರಳ ಬಹುಮತ ಗಳಿಸಿ ಅಧಿಕಾರದಲ್ಲಿ ಸ್ಥಿರವಾಯಿತೇನೋ ನಿಜ. ಆದರೆ ಹುದ್ದೆ ಆಕಾಂಕ್ಷಿಗಳ ಬೇಡಿಕೆಗಳು ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಮಾತ್ರವಲ್ಲದೆ ಬಿಜೆಪಿ ಹೈಕಮಾಂಡ್‌ಗೂ ತಲೆನೋವಾಗಿ ಪರಿಣಮಿಸಿದೆ. ಅದರಲ್ಲೂ ಉಪ ಮುಖ್ಯಮಂತ್ರಿ ಆಗಲು ತಯಾರಾಗಿ ನಿಂತಿರುವವರ ಯಾದಿ ಬಹಳ ದೊಡ್ಡದಿದ್ದು, ಒಬ್ಬರಿಗೆ ಕೊಟ್ಟರೆ ಇನ್ನೊಬ್ಬರಿಗೆ ಅಸಮಾಧಾನವಾಗುತ್ತದೆ. ಈ ಹಿನ್ನೆಲೆಯಲ್ಲಿ ಉಪ ಮುಖ್ಯಮಂತ್ರಿ ಹುದ್ದೆಯೇ ಬೇಡ ಎಂಬ ಮಾತುಗಳು ಕೇಳಿ ಬರುತ್ತಿವೆ.

ಅನರ್ಹರ ಪೈಕಿ ರಮೇಶ್‌ ಜಾರಕಿಹೊಳಿ ಈ ಹುದ್ದೆಯ ಮೇಲೆ ಕಣ್ಣಿಟ್ಟಿದ್ದರೆ, ಇನ್ನೊಂದೆಡೆ ಪ್ರಭಾವಿ ನಾಯಕ ಶ್ರೀರಾಮುಲು ಉಪ ಮುಖ್ಯಮಂತ್ರಿ ಪಟ್ಟ ದಕ್ಕದ ಹಿನ್ನೆಲೆಯಲ್ಲಿ ಮುನಿಸಿಕೊಂಡಿದ್ದಾರೆ. ಈಗಾಗಲೇ ರಾಜ್ಯದಲ್ಲಿ ಮೂವರು ಉಪಮುಖ್ಯಮಂತ್ರಿಗಳಿದ್ದಾರೆ. ಹೀಗಿರುವಾಗ ಇನ್ನೆಷ್ಟು ಉಪಮುಖ್ಯಮಂತ್ರಿಗಳನ್ನು ನೇಮಿಸಿಕೊಳ್ಳಬಹುದು ಎಂಬ ಜಿಜ್ಞಾಸೆಯೂ ನಡೆಯುತ್ತಿದೆ.

ಒಟ್ಟಾರೆಯಾಗಿ ಉಪಮುಖ್ಯಮಂತ್ರಿಗಳಾಗಲು ಹಾತೊರೆಯುತ್ತಿರುವವರ ಸಂಖ್ಯೆಯನ್ನು ನೋಡುವಾಗ ಪ್ರಚಲಿತ ರಾಜಕೀಯದಲ್ಲಿ ಈ ಹುದ್ದೆಗೆ ಇರುವ ಬೇಡಿಕೆ ಆಶ್ಚರ್ಯ ಹುಟ್ಟಿಸುತ್ತದೆ.

ಸಂವಿಧಾನದಲ್ಲಿ ಉಪ ಮುಖ್ಯಮಂತ್ರಿ ಎಂಬ ಹುದ್ದೆಯೇ ಇಲ್ಲ. ಉಪ ಮುಖ್ಯಮಂತ್ರಿ ಬಿಡಿ ಉಪ ಪ್ರಧಾನಿ ಹುದ್ದೆಯೂ ಇಲ್ಲ. ಆದರೆ ಸ್ವತಂತ್ರ ಭಾರತದ ಮೊದಲ ಸರಕಾರದಲ್ಲೇ ಉಪ ಪ್ರಧಾನಿಯನ್ನು ನೇಮಿಸಲಾಗಿತ್ತು. ಆಗ ಉಪ ಪ್ರಧಾನಿಯಾದವರು ಸರ್ದಾರ್‌ ವಲ್ಲಭಭಾಯಿ ಪಟೇಲ್‌. ಪ್ರಧಾನಿ ಪದವಿ “ವಂಚಿತ’ರಾಗಿದ್ದ ಪಟೇಲರನ್ನು ಸಮಾಧಾನಿಸುವ ಸಲುವಾಗಿ ಈ ಹುದ್ದೆಯನ್ನು ಅವರಿಗೆ ನೀಡಲಾಗಿತ್ತು. ಅನಂತರ ದೇವಿಲಾಲ್‌, ಎಲ್‌. ಕೆ. ಆಡ್ವಾಣಿ ಅವರಂಥವರು ಉಪ ಪ್ರಧಾನಿಯಾಗಿದ್ದಾರೆ.

ರಾಜ್ಯಗಳ ವಿಷಯಗಳಿಗೆ ಬಂದರೆ ಉಪ ಮುಖ್ಯಮಂತ್ರಿಗಳನ್ನು ನೇಮಿಸುವುದು ಈಗ ಮಾಮೂಲು ಎಂಬಂತಾಗಿದೆ. ಅದರಲ್ಲೂ ಸಮ್ಮಿಶ್ರ ಸರಕಾರ ಇದ್ದರೆ ಉಪಮುಖ್ಯಮಂತ್ರಿ ಹುದ್ದೆ ನೀಡಲೇಬೇಕಾಗುತ್ತದೆ ಎಂಬ ಪರಿಸ್ಥಿತಿಯಿದೆ.

ಆಂಧ್ರ ಪ್ರದೇಶದಲ್ಲಿ ಜಗನ್‌ಮೋಹನ್‌ ರೆಡ್ಡಿ ಪ್ರಮುಖ ಐದು ಸಮುದಾಯಗಳಿಂದ ಒಬ್ಬೊಬ್ಬರನ್ನು ಉಪಮುಖ್ಯಮಂತ್ರಿ ಮಾಡಿ ದಾಖಲೆ ಸ್ಥಾಪಿಸಿದ್ದಾರೆ. ಮಿತ್ರ ಪಕ್ಷಗಳ ಪ್ರಮುಖ ನಾಯಕರನ್ನು ಇನ್ನೂ ಸ್ಪಷ್ಟವಾಗಿ ಹೇಳಬೇಕಾದರೆ ಮುಖ್ಯಮಂತ್ರಿಯಾಗಲು ಯೋಗ್ಯತೆ ಇರುವವವರು, ಆದರೆ ಅನಿವಾರ್ಯ ಪರಿಸ್ಥಿತಿಯಲ್ಲಿ ಆ ಹುದ್ದೆಗೇರಲು ಅಸಾಧ್ಯವಾಗಿರುವವರನ್ನು ಸಮಾಧಾನಿಸುವ ಸಲುವಾಗಿ ಉಪ ಮುಖ್ಯಮಂತ್ರಿ ಮಾಡಲಾಗುತ್ತದೆ.

ಇದನ್ನು ಸಮ್ಮಿಶ್ರ ಸರಕಾರದ ಅನಿವಾರ್ಯತೆ ಎಂದು ಹೇಳಿ ಸಮರ್ಥಿಸಿಕೊಳ್ಳುಬಹುದೇನೋ? ಆದರೆ ಏಕ ಪಕ್ಷ ಸರಕಾರದಲ್ಲೂ ಜಾತಿಗೊಂದು, ಸಮುದಾಯಕ್ಕೊಂದು ಉಪ ಮುಖ್ಯಮಂತ್ರಿ ಹುದ್ದೆ ದಯಪಾಲಿಸುವುದನ್ನು ಯಾವ ರೀತಿಯಲ್ಲೂ ಒಪ್ಪಿಕೊಳ್ಳಲು ಸಾಧ್ಯವಿಲ್ಲ.

ಇದು ವೋಟ್‌ಬ್ಯಾಂಕ್‌ ರಾಜಕೀಯವಲ್ಲದೆ ಬೇರೇನೂ ಅಲ್ಲ. ಎಲ್ಲ ಸಮುದಾಯಗಳಿಗೆ ಮುಖ್ಯಮಂತ್ರಿ ನಂತರದ ಸ್ಥಾನವನ್ನು ಕಲ್ಪಿಸಿ ಆ ಮೂಲಕ ಆಯಾ ಜಾತಿಯ, ಸಮುದಾಯದ/ ಪ್ರದೇಶದ ಮತಗಳನ್ನು ಖಾತರಿಪಡಿಸಿಕೊಳ್ಳುವದಷ್ಟೇ ಇದರ ಹಿಂದಿರುವ ಉದ್ದೇಶ.

ಇಷ್ಟೆಲ್ಲ ಲಾಬಿ, ಹೋರಾಟ ಮಾಡಿ ಗಳಿಸುವ ಉಪ ಮುಖ್ಯಮಂತ್ರಿ ಹುದ್ದೆಗೆ ವಿಶೇಷ ಅಧಿಕಾರವಾಗಲಿ ಸಂವಿಧಾನಾತ್ಮಕ ಮಾನ್ಯತೆಯಾಗಲಿ ಇದೆಯಾ ಅಂದರೆ ಅದೂ ಇಲ್ಲ. ಇದು ಒಂದು ರೀತಿಯಲ್ಲಿ ನಾಯಕರ “ಇಗೊ’ ತೃಪ್ತಿಪಡಿಸುವ ಹುದ್ದೆಯಷ್ಟೆ. ಒಂದನೇ ದರ್ಜೆ ನೌಕರರನ್ನು ವರ್ಗಾಯಿಸುವ ಪರಮಾಧಿಕಾರ ಇರುವುದು ಮುಖ್ಯಮಂತ್ರಿ ಕೈಯಲ್ಲಿ. ಉಪ ಮುಖ್ಯಮಂತ್ರಿಗಳಿಗೆ ಈ ವಿಚಾರದಲ್ಲಿ ಕೈಯಾಡಿಸುವ ಯಾವ ಅಧಿಕಾರವೂ ಇಲ್ಲ.

ಆಡಳಿತದಲ್ಲಿ ಯಾವ ರೀತಿಯಲ್ಲೂ ಉಳಿದ ಕ್ಯಾಬಿನೆಟ್‌ ದರ್ಜೆಯ ಸಚಿವರಿಗಿಂತ ಹೆಚ್ಚಿನ ಅಧಿಕಾರ ಉಪ ಮುಖ್ಯಮಂತ್ರಿಗಳಿಗಿಲ್ಲ. ಸಂಬಳ ಹಾಗೂ ಇತರ ಭತ್ಯೆಗಳು ಕೂಡ ಅವರಿಗೆ ಕ್ಯಾಬಿನೆಟ್‌ ಸಚಿವರಷ್ಟೇ ಸಿಗುತ್ತದೆ. ಉಪ ಮುಖ್ಯಮಂತ್ರಿಯಾದವ ತಾನು ಹೊಂದಿದ ಖಾತೆಗೆ ಸಂಬಂಧಪಟ್ಟ ಕಡತಗಳನ್ನೂ ಮಂಜೂರಾತಿಗಾಗಿ ಮುಖ್ಯಮಂತ್ರಿಗೇ ಕಳುಹಿಸಬೇಕು. ಕ್ಯಾಬಿನೆಟ್‌ ಸಭೆಯ ಅಧ್ಯಕ್ಷತೆ ವಹಿಸುವ ಅಧಿಕಾರವೂ ಉಪಮುಖ್ಯಮಂತ್ರಿಗಿಲ್ಲ.

ಉಪಮುಖ್ಯಮಂತ್ರಿಯೂ ತನ್ನ ಇಲಾಖೆಗೆ ಮಂಜೂರಾಗಿರುವ ಮೊತ್ತಕ್ಕಿಂತ ಹೆಚ್ಚಿನ ವಿನಿಯೋಗಗಳಿಗೆ ಮುಖ್ಯಮಂತ್ರಿಯ ಅನುಮತಿ ಪಡೆದಿರಬೇಕು. ಅಲ್ಲದೆ ಆಡಳಿತದಲ್ಲೂ ಉಪಮುಖ್ಯಮಂತ್ರಿಗಳಿಂದ ಸರಕಾರಕ್ಕೆ ಹೆಚ್ಚಿನ ಅನುಕೂಲಗಳು ಅಥವಾ ಲಾಭಗಳಾಗುವುದಿಲ್ಲ. ಹೀಗಿದ್ದರೂ ಎಲ್ಲರಿಗೂ ಉಪ ಮುಖ್ಯಮಂತ್ರಿ ಹುದ್ದೆ ಬೇಕು. ಆದರೆ ಹೀಗೆ ಜಾತಿಗೊಂದು, ಸಮುದಾಯಕ್ಕೊಂದು, ಊರಿಗೊಂದು ಎಂಬಂತೆ ಉಪ ಮುಖ್ಯಮಂತ್ರಿ ಹುದ್ದೆ ಹಂಚುವುದರಿಂದ ಆ ಹುದ್ದೆಗಿರುವ “ಕಲ್ಪಿತ ಮಹತ್ವ’ವೂ ಕಡಿಮೆಯಾಗುತ್ತದೆ. ಜನರ ದೃಷ್ಟಿಯಲ್ಲಿ ಈ ಹುದ್ದೆ ಲಘುವಾಗುವ ಮೊದಲು ನಾಯಕರು ಎಚ್ಚೆತ್ತುಕೊಳ್ಳುವುದು ಅಗತ್ಯ.

ಟಾಪ್ ನ್ಯೂಸ್

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-editorial

Editorial: ವಿದ್ಯಾರ್ಹತೆಗೆ ದೇಶವ್ಯಾಪಿ ಮಾನ್ಯತೆ, ಹೈಕೋರ್ಟ್‌ ತೀರ್ಪು ನ್ಯಾಯೋಚಿತ

13-editorial

Temperature: ಸಂಪಾದಕೀಯ-ತಾಪಮಾನ ಹೆಚ್ಚಳದ ಆತಂಕ: ಮುಂಜಾಗ್ರತೆಯೇ ಮದ್ದು

ಉಚಿತಗಳ ಆಮಿಷಗಳಿಗೆ ಕಡಿವಾಣ: ಚು.ಆಯೋಗ ಬದ್ಧತೆ ತೋರಲಿ

ಉಚಿತಗಳ ಆಮಿಷಗಳಿಗೆ ಕಡಿವಾಣ: ಚು.ಆಯೋಗ ಬದ್ಧತೆ ತೋರಲಿ

vidhana-Soudha

Editorial: ಪ್ರಾಥಮಿಕ ಶಾಲಾ ಶಿಕ್ಷಕರ ಪಠ್ಯೇತರ ಹೊರೆ ಇಳಿಸಿ

ಮಹಿಳಾ ಆರೋಪಿಗಳ ಬಂಧನ ವೇಳೆ ವಿವೇಚನೆ ಅತ್ಯವಶ್ಯ

ಮಹಿಳಾ ಆರೋಪಿಗಳ ಬಂಧನ ವೇಳೆ ವಿವೇಚನೆ ಅತ್ಯವಶ್ಯ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.