ಸಂಪಾದಕೀಯ :ಮಾದಕ ಪದಾರ್ಥ ದಂಧೆಯ ಮೂಲೋತ್ಪಾಟನೆ ಅನಿವಾರ್ಯ


Team Udayavani, Mar 20, 2021, 6:10 AM IST

Editorial

ರಾಜ್ಯದಲ್ಲಿ ಮಾದಕ ವಸ್ತುಗಳು ಮತ್ತು ಅಮಲು ಪದಾರ್ಥಗಳ ಸೇವ ನೆಯ ಪ್ರಕರಣಗಳು ಹೆಚ್ಚುತ್ತಿರುವುದು ತೀರಾ ಕಳವಳಕಾರಿ ವಿಷಯ. ಕೆಲವೊಂದು ದಶಕಗಳ ಹಿಂದೆ ನಗರಗಳಿಗೆ ಸೀಮಿತವಾಗಿದ್ದ ಈ ದಂಧೆ ಈಗ ಗ್ರಾಮೀಣ ಪ್ರದೇಶಗಳಿಗೂ ವಿಸ್ತರಿಸಲ್ಪಟ್ಟಿದೆ. ಮಾದಕ ವಸ್ತು ಅಥವಾ ಅಮಲು ಪದಾರ್ಥಗಳಿಗೆ ಯುವಪೀಳಿಗೆ ಅದರಲ್ಲೂ ವಿದ್ಯಾರ್ಥಿ ಸಮು ದಾಯ ದಾಸರಾಗುತ್ತಿರುವುದು ತೀರಾ ಆತಂಕಕಾರಿ. ಮಾದಕ ಪದಾರ್ಥ ಗಳ ಸೇವನೆಯ ಚಟಕ್ಕೆ ಬಲಿಯಾದ ಯುವ ಜನಾಂಗ ಮತ್ತು ಸಂತ್ರಸ್ತ ಕುಟುಂಬಗಳ ಯಾತನೆ ಹೇಳತೀರದು.

ಮಾದಕ ಪದಾರ್ಥಗಳ ಸೇವನೆ, ಮಾರಾಟ ಪ್ರಕರಣಗಳು ಬಯಲಾ ದಾಗಲೆಲ್ಲ ಈ ದಂಧೆಯ ಕರಾಳತೆಯ ನೈಜ ಮುಖ ಅನಾವರಣ ಗೊಳ್ಳುತ್ತಲೇ ಬರುತ್ತಿದೆ. ಈ ಸಂದರ್ಭದಲ್ಲಿ ಪೊಲೀಸ್‌, ಆರೋಗ್ಯ, ಶಿಕ್ಷಣ ಇಲಾಖೆಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಡ್ರಗ್ಸ್‌ ಪೆಡ್ಲರ್‌ಗಳ ಬೆನ್ನು ಹತ್ತುವುದು ಸಾಮಾನ್ಯ. ಈ ವೇಳೆ ಮಾದಕ ವಸ್ತುಗಳ ದಂಧೆಯ ಕಬಂಧ ಬಾಹುಗಳು ವ್ಯಾಪಕವಾಗಿ ಹರಡಿರುವುದು ಬೆಳಕಿಗೆ ಬರುತ್ತಲೇ ಇವೆ. ಅದರಲ್ಲೂ ಪ್ರಮುಖವಾಗಿ ಶಿಕ್ಷಣ ಸಂಸ್ಥೆಗಳ ಪರಿಸರದಲ್ಲಿಯೇ ಈ ದಂಧೆ ಸಕ್ರಿಯವಾಗಿರುವುದು ಒಂದಿಷ್ಟು ಚಿಂತೆಯ ವಿಷಯ.

ಸರಕಾರ ವಿಧಾನಪರಿಷತ್‌ನಲ್ಲಿ ನೀಡಿದ ಅಂಕಿಅಂಶಗಳ ಪ್ರಕಾರ ರಾಜ್ಯದಲ್ಲಿ ಕಳೆದ ಮೂರು ವರ್ಷಗಳ ಅವಧಿಯಲ್ಲಿ 7,943 ಮಾದಕ ವಸ್ತುಗಳ ಪ್ರಕರಣಗಳು ದಾಖಲಾಗಿದ್ದರೆ ಈ ಸಂಬಂಧ 10,566 ಆರೋಪಿಗಳನ್ನು ಬಂಧಿಸಲಾಗಿದೆ. ಇವು ಪೊಲೀಸರಿಂದ ಪತ್ತೆಹಚ್ಚಲ್ಪಟ್ಟ ಪ್ರಕರಣಗಳಾಗಿದ್ದರೆ ಇನ್ನು ಇಡೀ ರಾಜ್ಯದಲ್ಲಿ ಪತ್ತೆಯಾಗದ ಪ್ರಕರಣಗಳು, ಈ ದಂಧೆಯಲ್ಲಿ ತೊಡಗಿರುವವರ ಸಂಖ್ಯೆಯನ್ನು ಊಹಿಸುವುದು ಸ್ವಲ್ಪ ಕಷ್ಟವೇ.
ಸದ್ಯ ಮಾದಕ ವಸ್ತುಗಳ ಸಾಗಾಟ, ಪೂರೈಕೆ, ಮಾರಾಟ, ಸೇವನೆ ಯಂಥ ಪ್ರಕರಣಗಳನ್ನು ಕೇಂದ್ರ ಸರಕಾರದ ಎನ್‌ಡಿಪಿಎಸ್‌ ಕಾಯ್ದೆಯಡಿ ತನಿಖೆ ನಡೆಸಿ ಕ್ರಮ ಕೈಗೊಳ್ಳಲಾಗುತ್ತಿದೆ. ರಾಜ್ಯದಲ್ಲಿ ಮಾದಕ ವಸ್ತುಗಳ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ಕಾಯ್ದೆಯ ಕೆಲವೊಂದು ನಿಯಮಾವಳಿಗಳಲ್ಲಿ ಬದಲಾವಣೆ ತರಲು ರಾಜ್ಯ ಸರಕಾರ ಉದ್ದೇಶಿಸಿದೆ.

ಕಾನೂನು ತಜ್ಞರು ಮತ್ತು ಹಿರಿಯ ಪೊಲೀಸ್‌ ಅಧಿಕಾರಿಗಳ ಪ್ರಕಾರ ಕೇಂದ್ರದ ಎನ್‌ಡಿಪಿಎಸ್‌ ಕಾಯ್ದೆಯೇ ಬಲಿಷ್ಠವಾಗಿದೆ. ಕಾಯ್ದೆಯ ನಿಯ ಮಾವಳಿಗಳಡಿಯಲ್ಲಿ ಸರಕಾರಿ ಇಲಾಖೆಗಳು ಕಾರ್ಯ ನಿರ್ವಹಿಸಿದ್ದೇ ಆದಲ್ಲಿ ಮಾದಕ ವಸ್ತು ದಂಧೆಗೆ ಕಡಿವಾಣ ಹಾಕಲು ಸಾಧ್ಯ ಎಂಬುದು ಇವರ ವಾದ. ಹಾಗೊಂದು ವೇಳೆ ಸರಕಾರ ಕಾಯ್ದೆಯನ್ನು ಇನ್ನಷ್ಟು ಬಲಪಡಿಸುವ ಉದ್ದೇಶದಿಂದ ನಿಯಮಾವಳಿಗಳಲ್ಲಿ ಕೆಲವೊಂದು ಬದಲಾವಣೆ ತರಲು ಮುಂದಾ ಗಿದ್ದಲ್ಲಿ ಅದು ಸ್ವಾಗತಾರ್ಹವೇ. ಆದರೆ ಜಾರಿಯಲ್ಲಿರುವ ಕಾಯ್ದೆಯ ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಸಂಬಂಧ ಪಟ್ಟ ಇಲಾಖೆಗಳು ಹೆಣಗಾಡುತ್ತಿರುವಾಗ ಹೊಸ ನೀತಿಯ ಅಗತ್ಯ ವಾದರೂ ಏನು? ಎಂಬ ಪ್ರಶ್ನೆ ಮೂಡುವುದು ಸಹಜ.

ಈ ಗೊಂದಲ, ವೈರುಧ್ಯಗಳೇನೇ ಇರಲಿ, ಸರಕಾರ ಜಾರಿಗೆ ತರಲು ದ್ದೇಶಿಸಿರುವ ಸಮಗ್ರ ಡ್ರಗ್ಸ್‌ ವಿರೋಧಿ ನೀತಿ ಕೂಡ ಹತ್ತರಲ್ಲಿ ಹನ್ನೊಂದು ಎಂಬಂತಾಗದಿರಲಿ. ಮಾದಕ ವಸ್ತು ಮತ್ತು ಅಮಲು ಪದಾರ್ಥಗಳ ದಂಧೆಯ ಮೂಲೋತ್ಪಾಟನೆಯನ್ನೇ ಗುರಿಯಾಗಿಸಿಕೊಂಡು ಹೊಸ ನೀತಿಯನ್ನು ರೂಪಿಸುವುದರ ಜತೆಯಲ್ಲಿ ಅದನ್ನು ಅಕ್ಷರಶಃ ಜಾರಿಗೆ ತರುವುದು ಇಂದಿನ ತುರ್ತು ಅನಿವಾರ್ಯ ಕೂಡ.

ಟಾಪ್ ನ್ಯೂಸ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-editorial

Editorial: ವಿದ್ಯಾರ್ಹತೆಗೆ ದೇಶವ್ಯಾಪಿ ಮಾನ್ಯತೆ, ಹೈಕೋರ್ಟ್‌ ತೀರ್ಪು ನ್ಯಾಯೋಚಿತ

13-editorial

Temperature: ಸಂಪಾದಕೀಯ-ತಾಪಮಾನ ಹೆಚ್ಚಳದ ಆತಂಕ: ಮುಂಜಾಗ್ರತೆಯೇ ಮದ್ದು

ಉಚಿತಗಳ ಆಮಿಷಗಳಿಗೆ ಕಡಿವಾಣ: ಚು.ಆಯೋಗ ಬದ್ಧತೆ ತೋರಲಿ

ಉಚಿತಗಳ ಆಮಿಷಗಳಿಗೆ ಕಡಿವಾಣ: ಚು.ಆಯೋಗ ಬದ್ಧತೆ ತೋರಲಿ

vidhana-Soudha

Editorial: ಪ್ರಾಥಮಿಕ ಶಾಲಾ ಶಿಕ್ಷಕರ ಪಠ್ಯೇತರ ಹೊರೆ ಇಳಿಸಿ

ಮಹಿಳಾ ಆರೋಪಿಗಳ ಬಂಧನ ವೇಳೆ ವಿವೇಚನೆ ಅತ್ಯವಶ್ಯ

ಮಹಿಳಾ ಆರೋಪಿಗಳ ಬಂಧನ ವೇಳೆ ವಿವೇಚನೆ ಅತ್ಯವಶ್ಯ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.