ಇಸ್ರೇಲ್‌-ಭಾರತ ಸಹಭಾಗಿತ್ವ ಪ್ರಯತ್ನ ಫ‌ಲಿಸಲಿ


Team Udayavani, May 27, 2020, 9:03 AM IST

ಇಸ್ರೇಲ್‌-ಭಾರತ ಸಹಭಾಗಿತ್ವ ಪ್ರಯತ್ನ ಫ‌ಲಿಸಲಿ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಜಗತ್ತಿನಾದ್ಯಂತ ಕೋವಿಡ್‌-19 ಹಾವಳಿ ಹೆಚ್ಚುತ್ತಲೇ ಇರುವ ವೇಳೆಯಲ್ಲೇ ಈ ವೈರಸ್‌ ವಿರುದ್ಧ ಲಸಿಕೆ ಕಂಡುಹಿಡಿಯಲು, ತ್ವರಿತ ಸೋಂಕು ಪತ್ತೆ ಪರೀಕ್ಷಣಾ ಕಿಟ್‌ಗಳನ್ನು ತಯಾರಿಸಲು ಅನೇಕ ರಾಷ್ಟ್ರಗಳು ವ್ಯಸ್ತವಾಗಿವೆ. ಈ ಸಾಲಿನಲ್ಲಿ ಭಾರತವೂ ಗಮನಾರ್ಹ ಪ್ರಯತ್ನ ನಡೆಸಿದೆ.

ಈಗ ಭಾರತ ಮತ್ತು ಇಸ್ರೇಲ್‌ನ ಆರೋಗ್ಯ ಪರಿಣತರು ಜಂಟಿಯಾಗಿ ರ್ಯಾಪಿಡ್‌ ಟೆಸ್ಟಿಂಗ್‌ ವ್ಯವಸ್ಥೆಯ ಅಭಿವೃದ್ಧಿಯಲ್ಲಿ ತೊಡಗಲಿದ್ದು, ಅತ್ಯಂತ ತ್ವರಿತಗತಿಯಲ್ಲಿ ಕೋವಿಡ್‌-19 ಟೆಸ್ಟ್‌ ನಡೆಸುವ ಸಾಧನಗಳನ್ನು ಅನ್ವೇಷಿಸುವ ಉದ್ದೇಶ ಇದರ ಹಿಂದಿದೆ.

ಎಲ್ಲಕ್ಕಿಂತ ಹೆಚ್ಚಾಗಿ, ಇಸ್ರೇಲ್‌ ಮತ್ತು ಭಾರತದ ನಡುವಿನ ಅತಿಮುಖ್ಯ ಸಂಶೋಧನೆ ಮತ್ತು ಅಭಿವೃದ್ಧಿ ಸಹಭಾಗಿತ್ವವೂ ಇದಾಗಿದೆ ಎನ್ನುವುದು ವಿಶೇಷ. ಈ ಕಾರ್ಯಕ್ರಮದಲ್ಲಿ ಡಿಆರ್‌ಡಿಒ ಮತ್ತು ಕೌನ್ಸಿಲ್‌ ಫಾರ್‌ ಸೈಂಟಿಫಿಕ್‌ ಆ್ಯಂಡ್‌ ಇಂಡಸ್ಟ್ರಿಯಲ್‌ ರಿಸರ್ಚ್‌ (ಸಿಎಸ್‌ಐಆರ್‌)ನಂಥ ದೇಶದ ಪ್ರತಿಷ್ಠಿತ ಸಂಸ್ಥೆಗಳು ಭಾಗಿಯಾಗಲಿರುವುದು ವಿಶೇಷ. 2018ರಲ್ಲಿ ಭಾರತ ಮತ್ತು ಇಸ್ರೇಲ್‌ನ ನಡುವೆ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿನ ಸಹಭಾಗಿತ್ವದ ಬಗ್ಗೆ ಮಹತ್ವದ ಒಪ್ಪಂದಗಳಾಗಿದ್ದವು ಎನ್ನುವುದನ್ನು ಇಲ್ಲಿ ನೆನಪಿಸಿಕೊಳ್ಳಬೇಕು.

ಇದೇನೇ ಇದ್ದರೂ ಕೋವಿಡ್ ಜಗತ್ತನ್ನು ಬಹುವಾಗಿ ಕಾಡುತ್ತಿರುವ ನಡುವೆಯೇ, ಜಗದಗಲ ಅಭೂತಪೂರ್ವ ಪ್ರಮಾಣದಲ್ಲಿ ಸಂಶೋಧನೆಗಳೂ ನಡೆದಿವೆ. ಭಾರತದ ವಿಷಯಕ್ಕೇ ಬಂದರೆ, ರ್ಯಾಪಿಡ್‌ ಟೆಸ್ಟಿಂಗ್‌ ಕಿಟ್‌ಗಳ ಅಭಿವೃದ್ಧಿ ಪ್ರಯತ್ನಗಳಷ್ಟೇ ಅಲ್ಲದೇ, ಕೋವಿಡ್ ವಿರುದ್ಧ ಲಸಿಕೆ ಕಂಡುಹಿಡಿಯುವ ವಿಚಾರದಲ್ಲೂ, ದೇಶದ ಸಂಸ್ಥೆಗಳು ಶ್ರಮಿಸುತ್ತಿವೆ.

ಸೀರಂ ಇನ್ಸ್‌ಟಿಟ್ಯೂಟ್‌, ಬಯೋಕಾನ್‌ ಸೇರಿದಂತೆ ಹಲವಾರು ಕಂಪೆನಿಗಳು ಲಸಿಕೆ ಸಂಶೋಧನೆಯಲ್ಲಿ ವ್ಯಸ್ತವಾಗಿವೆ. ಯಶಸ್ವಿಯಾಗಿ ಯಾವ ದೇಶ ಲಸಿಕೆ ಕಂಡುಹಿಡಿಯುತ್ತದೋ ತಿಳಿಯದು. ಆದರೆ ಯಶಸ್ವಿಯಾದರೆ, ಭಾರೀ ಪ್ರಮಾಣದಲ್ಲಿ ಲಸಿಕೆಗಳ ಡೋಸ್‌ಗಳನ್ನು ಉತ್ಪಾದಿಸುವ ವಿಚಾರದಲ್ಲೂ ಭಾರತದ ಕೊಡುಗೆ ಇದ್ದೇ ಇರಲಿದೆ.

ಏಕೆಂದರೆ, ಇಂದು ಭಾರತ ಜಗತ್ತಿನ ಅತಿದೊಡ್ಡ ಲಸಿಕೆ ಉತ್ಪಾದನಾ ಕೇಂದ್ರವಾಗಿದ್ದು, ಜಗತ್ತಿನಾದ್ಯಂತ ಈಗಾಗಲೇ ಬಳಕೆಯಾಗುತ್ತಿರುವ ಲಸಿಕೆಗಳಲ್ಲಿ 70 ಪ್ರತಿಶತ ಲಸಿಕೆಗಳು ಭಾರತದಲ್ಲೇ ತಯಾರಾಗುತ್ತವೆ. ಇಂಟರ್‌ನ್ಯಾಶನಲ್‌ ವ್ಯಾಕ್ಸಿನ್‌ ಇನ್ಸ್‌ಟಿಟ್ಯೂಟ್‌ನ ನಿರ್ದೇಶಕ, ಪ್ರಖ್ಯಾತ ಸಂಶೋಧಕ ಡಾ| ಜಿರೋಮ್‌ ಕಿಮ್‌ ಕೂಡ, ಮುಂದಿನ ದಿನಗಳಲ್ಲಿ ಭಾರತದ ಲಸಿಕೆ ಉತ್ಪಾದನಾ ಉದ್ಯಮ ಮಹತ್ತರ ಪಾತ್ರ ನಿರ್ವಹಿಸಲಿದೆ ಎನ್ನುತ್ತಿದ್ದಾರೆ.

ಆದರೂ ಎಚ್‌ಐವಿಯಂತೆಯೇ ಕೋವಿಡ್ಗೂ ಲಸಿಕೆ ಸಿಗದೇ ಹೋಗಬಹುದು ಎನ್ನುವ ಎಚ್ಚರಿಕೆಯ ಧ್ವನಿಯೂ ವಿಶ್ವ ಆರೋಗ್ಯ ಸಂಸ್ಥೆಯಿಂದ ಬರುತ್ತಿದೆ. ಇದೇನೇ ಇದ್ದರೂ ಪರೀಕ್ಷೆಗಳ ಪ್ರಮಾಣವಂತೂ ಅಧಿಕವಿದ್ದರೆ, ರೋಗ ಹರಡುವಿಕೆಯನ್ನು ತಡೆಯಲು ಸಹಾಯವಾಗುತ್ತದೆ.

ಜೂನ್‌-ಜುಲೈ ತಿಂಗಳ ವೇಳೆಗೆ ದೇಶದಲ್ಲಿ ಕೋವಿಡ್ ಸೋಂಕಿತರ ಪ್ರಮಾಣ ಉತ್ತುಂಗಕ್ಕೇರಲಿದೆ ಎಂದು ವೈಜ್ಞಾನಿಕ ವಲಯ ಎಚ್ಚರಿಸುತ್ತಿದೆ. ಹೀಗಾಗಿ ವ್ಯಾಪಕ ಟೆಸ್ಟಿಂಗ್‌ಗಳನ್ನು ನಡೆಸುವುದು, ಟೆಸ್ಟಿಂಗ್‌ಗೆ ಸರಳ ಮಾರ್ಗಗಳನ್ನು ಅಭಿವೃದ್ಧಿಪಡಿಸುವುದು ಅತ್ಯಗತ್ಯ. ಈ ಹಿನ್ನೆಲೆಯಲ್ಲಿ ಭಾರತವು ನಡೆಸುತ್ತಿರುವ ಪ್ರಯತ್ನ ಯಶಸ್ವಿಯಾಗಲಿ ಎಂದು ಹಾರೈಸೋಣ.

ಟಾಪ್ ನ್ಯೂಸ್

Aryna Sabalenka won US Open 2024

US Open 2024: ಅರಿನಾ ಸಬಲೆಂಕಾಗೆ ಯು.ಎಸ್.ಓಪನ್ ಕಿರೀಟ‌

21

Ganesh Chaturthi: ಸರಳ, ಪರಿಸರ ಸ್ನೇಹಿಯಾಗಿರಲಿ ಗಣೇಶ

Fresh Manipur Violence

Manipur: ಮುಂದುವರಿದ ಹಿಂಸಾಚಾರ; ಗುಂಡಿನ ಕಾಳಗದಲ್ಲಿ ಆರು ಮಂದಿ ಸಾವು

Paris Paralympics: ಮುಂದುವರಿದ ಪದಕ ಬೇಟೆ; ಬಂಗಾರ ಗೆದ್ದ ನವದೀಪ್‌, ಸಿಮ್ರನ್‌ ಗೆ ಕಂಚು

Paris Paralympics: ಮುಂದುವರಿದ ಪದಕ ಬೇಟೆ; ಬಂಗಾರ ಗೆದ್ದ ನವದೀಪ್‌, ಸಿಮ್ರನ್‌ ಗೆ ಕಂಚು

20

UV Fusion: ವಿಘ್ನ ವಿನಾಯಕನಿಗೆ ನಮನ

19

Ganesh Chaturthi: ನೆನಪಿನ ಬುತ್ತಿಯಾದ ಗಣೇಶ ಹಬ್ಬ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Health-insure

GST Revise: ಆರೋಗ್ಯ ವಿಮೆ ಪ್ರಯೋಜನ ಜನಸಾಮಾನ್ಯರಿಗೂ ಕೈಗೆಟುಕಲಿ

Raichuru-Manvi

Raichuru Accident: ಶಾಲಾ ಬಸ್‌: ಬೇಜವಾಬ್ದಾರಿ ಚಾಲನೆಗೆ ಕಠಿನ ಕ್ರಮ ಅಗತ್ಯ

ಬಂಡುಕೋರರೊಂದಿಗೆ ಸಂಧಾನ ಫ‌ಲಿಸಿದ ಕೇಂದ್ರದ ಪ್ರಯತ್ನ

ಬಂಡುಕೋರರೊಂದಿಗೆ ಸಂಧಾನ ಫ‌ಲಿಸಿದ ಕೇಂದ್ರದ ಪ್ರಯತ್ನ

CBi

Investigation Agency: ಸಿಬಿಐ ಪ್ರಕರಣಗಳು ತ್ವರಿತ ವಿಲೇವಾರಿಯಾಗಲಿ

Film

South India Film Industry: ಸಿನೆಮಾ ರಂಗ ಕಳಂಕ ಮುಕ್ತವಾಗಲಿ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Aryna Sabalenka won US Open 2024

US Open 2024: ಅರಿನಾ ಸಬಲೆಂಕಾಗೆ ಯು.ಎಸ್.ಓಪನ್ ಕಿರೀಟ‌

2-desiswara-1

Teacher: ಗುರಿಯೊಂದಿಗೆ ಗುರುಕೃಪೆಯಿದ್ದರೆ ಯಶ

21

Ganesh Chaturthi: ಸರಳ, ಪರಿಸರ ಸ್ನೇಹಿಯಾಗಿರಲಿ ಗಣೇಶ

Fresh Manipur Violence

Manipur: ಮುಂದುವರಿದ ಹಿಂಸಾಚಾರ; ಗುಂಡಿನ ಕಾಳಗದಲ್ಲಿ ಆರು ಮಂದಿ ಸಾವು

1-teachers-day

Teacher’s Day ವಿಶೇಷ: ವಿಚಾರ ವಿನಿಮಯ ಶಿಕ್ಷಣದ ಸುತ್ತ: ಆಲೋಚನೆಯಲ್ಲಿ ವೈವಿಧ್ಯತೆ ಇರಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.