Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ


Team Udayavani, Apr 24, 2024, 6:00 AM IST

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

ಭಾರತೀಯ ವಿಮಾ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ (ಐಆರ್‌ಡಿಎಐ)ವು ಹೊಸದಾಗಿ ಆರೋಗ್ಯ ವಿಮಾ ಪಾಲಿಸಿಗಳನ್ನು ಹೊಂದ ಬಯಸುವ ಹಿರಿಯ ನಾಗರಿಕರಿಗೆ ಸಿಹಿ ಸುದ್ದಿಯೊಂದನ್ನು ನೀಡಿದೆ. ಆರೋಗ್ಯ ವಿಮೆ ಮಾಡಿಸಿಕೊಳ್ಳಲು ಇದ್ದ 65 ವರ್ಷದ ಗರಿಷ್ಠ ವಯೋಮಿತಿಯನ್ನು ರದ್ದುಗೊಳಿಸಿರುವ ಪ್ರಾಧಿಕಾರ ಎಲ್ಲ ವಯೋಮಿತಿಯವರೂ ಆರೋಗ್ಯ ವಿಮೆಯನ್ನು ಮಾಡಿಸಿಕೊಳ್ಳಬಹುದು ಎಂದು ಘೋಷಿಸಿದೆ. ಐಆರ್‌ಡಿಎಐಯ ಈ ನಿರ್ಧಾರದಿಂದ ದೇಶದ ಲಕ್ಷಾಂತರ ಹಿರಿಯ ನಾಗರಿಕರ ಬಹುದಿನಗಳ ಬೇಡಿಕೆಗೆ ಸ್ಪಂದನೆ ಲಭಿಸಿದಂತಾಗಿದೆ.

ವಿಮಾ ಪ್ರಾಧಿಕಾರದ ಈ ತೀರ್ಮಾನದಿಂದ ನಾನಾ ಕಾರಣಗಳಿಂದಾಗಿ ಈವರೆಗೆ ಆರೋಗ್ಯ ವಿಮೆ ಪಾಲಿಸಿಯನ್ನು ಮಾಡಿಸಲು ಸಾಧ್ಯವಾಗದ 65 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಹೊಸದಾಗಿ ಆರೋಗ್ಯ ವಿಮೆಯನ್ನು ಮಾಡಿಸಲು ಅವಕಾಶ ಲಭಿಸಿದೆ. ಎಪ್ರಿಲ್‌ 1ರಿಂದಲೇ ಅನ್ವಯವಾಗುವಂತೆ ಐಆರ್‌ಡಿಎಐ ಹೊಸ ನಿಯಮವನ್ನು ಜಾರಿಗೆ ತಂದಿದೆ. ಇದರಿಂದಾಗಿ ಅನಿರೀಕ್ಷಿತ ವೈದ್ಯಕೀಯ ವೆಚ್ಚವನ್ನು ನಿಭಾಯಿಸಲು ಅನುಕೂಲವಾಗುವ ಉದ್ದೇಶದಿಂದ ಜಾರಿಗೆ ತರಲಾಗಿರುವ ಆರೋಗ್ಯ ವಿಮಾ ಸೇವೆಯ ವ್ಯಾಪ್ತಿಯನ್ನು ಮತ್ತಷ್ಟು ವಿಸ್ತರಿಸಿದಂತಾಗಿದೆಯಲ್ಲದೆ ಎಲ್ಲರನ್ನೂ ಆರೋಗ್ಯ ವಿಮಾ ಕಕ್ಷೆಯೊಳಗೆ ಸೇರ್ಪಡೆಗೊಳಿಸಲು ಉತ್ತೇಜನ ನೀಡಿದಂತಾಗಿದೆ.

ಈವರೆಗೆ ಜಾರಿಯಲ್ಲಿದ್ದ ವಯೋಮಿತಿ ನಿರ್ಬಂಧದಿಂದಾಗಿ ಯಾರಿಗೆ ಆರೋಗ್ಯ ವಿಮಾ ಸೌಲಭ್ಯದ ಅಗತ್ಯವಿದೆಯೋ ಅವರು ಅದರಿಂದ ವಂಚಿತ ರಾಗುವಂತಾಗಿತ್ತಲ್ಲದೆ ಈ ಸೌಲಭ್ಯ ಸೀಮಿತ ಜನರಿಗಷ್ಟೇ ಲಭ್ಯವಾಗುತ್ತಿತ್ತು. ಇದರಿಂದಾಗಿ ಆರೋಗ್ಯ ವಿಮೆಯ ನೈಜ ಉದ್ದೇಶ ಈಡೇರದೆ ಕೇವಲ ವಾಣಿಜ್ಯಿಕ ಉದ್ದೇಶಕ್ಕೇ ಆದ್ಯತೆ ನೀಡಿದಂತಾಗಿತ್ತು. ಆರೋಗ್ಯ ವಿಮಾ ಸೇವೆಗಳನ್ನು ಒದಗಿಸುವ ಕಂಪೆನಿಗಳು ಕೂಡ ಜನರಿಗೆ ವಿವಿಧ ಷರತ್ತುಗಳನ್ನು ಹಾಕಿ ಪಾಲಿಸಿ ಮಾಡಿಸಲು ನಿರಾಕರಿಸುತ್ತಿದ್ದವು. ಈ ಹಿನ್ನೆಲೆಯಲ್ಲಿ ಕಳೆದ ಹಲವಾರು ವರ್ಷಗಳಿಂದ ಆರೋಗ್ಯ ವಿಮೆ ಮಾಡಲು ಇರುವ ಗರಿಷ್ಠ ವಯೋಮಿತಿಯನ್ನು ರದ್ದುಗೊಳಿಸಬೇಕು ಎಂಬ ಬೇಡಿಕೆಯನ್ನು ಹಿರಿಯ ನಾಗರಿಕರು ವಿಮಾ ಪ್ರಾಧಿಕಾರದ ಮುಂದಿಡುತ್ತಲೇ ಬಂದಿದ್ದರು.

60 ವರ್ಷ ಮೇಲ್ಟಟ್ಟ ಬಳಿಕ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುವುದು ಸಾಮಾನ್ಯವಾದ್ದರಿಂದ ವಿಮಾ ಕಂಪೆನಿಗಳು ಹೊಸದಾಗಿ ಆರೋಗ್ಯ ವಿಮೆ ಮಾಡಿಸಲು ಅವಕಾಶ ಕಲ್ಪಿಸಿಕೊಡಲು ಆಸಕ್ತಿ ತೋರಿರಲಿಲ್ಲ. ಒಂದು ವೇಳೆ ವಿಮಾ ಪಾಲಿಸಿ ಮಾಡಿಸಲು ಮುಂದೆ ಬರುವ ಗ್ರಾಹಕರಿಗೆ ವಿವಿಧ ಪೂರ್ವ ಷರತ್ತುಗಳು ಮತ್ತು ಅವರ ಹಾಲಿ ವೈದ್ಯಕೀಯ ಸ್ಥಿತಿಗತಿಯ ಬಗೆಗೆ ಪ್ರಮಾಣಪತ್ರ ಮತ್ತಿತರ ನೆಪಗಳನ್ನು ಮುಂದೊಡ್ಡಿ ಪಾಲಿಸಿ ಮಾಡಿಸಲು ಹಿಂದೇಟು ಹಾಕುತ್ತಿದ್ದವು. ಈಗ ಐಆರ್‌ಡಿಎಐ ಈ ಎಲ್ಲ ಗೊಂದಲಗಳಿಗೆ ತೆರೆ ಎಳೆದಿದ್ದು ಯಾವುದೇ ವಯೋ ನಿರ್ಬಂಧವಿಲ್ಲದೆ ಎಲ್ಲರಿಗೂ ಆರೋಗ್ಯ ವಿಮಾ ಪಾಲಿಸಿಗಳನ್ನು ಮುಕ್ತವಾಗಿ ನೀಡಬೇಕು ಎಂದು ಸ್ಪಷ್ಟವಾಗಿ ವಿಮಾ ಕಂಪೆನಿಗಳಿಗೆ ನಿರ್ದೇಶನ ನೀಡಿದೆ. ಇದೇ ವೇಳೆ ವಿಮಾ ಪಾಲಿಸಿದಾರರ ಪೂರ್ವ ವೈದ್ಯಕೀಯ ಮಾಹಿತಿ ಪಡೆದು, ಆರೋಗ್ಯ ವಿಮಾ ಪಾಲಿಸಿ ನೀಡಲು ನಿರಾಕರಿಸುವ ವಿಮಾ ಕಂಪೆನಿಗಳ ದಾಷ್ಟ್ರ್ಯತನವನ್ನೂ ಗಂಭೀರವಾಗಿ ಪರಿಗಣಿಸಿರುವ ಐಆರ್‌ಡಿಎಐ, ಗಂಭೀರ ವೈದ್ಯಕೀಯ ಸಮಸ್ಯೆಗಳ ಸಹಿತ ಯಾವುದೇ ತೆರನಾದ ಆರೋಗ್ಯ ಸಮಸ್ಯೆಗಳನ್ನು ಹೊಂದಿದ್ದರೂ ಯಾವುದೇ ಷರತ್ತು ವಿಧಿಸದೆ ತಮ್ಮ ತಮ್ಮ ಆರೋಗ್ಯ ವಿಮಾ ಉತ್ಪನ್ನಗಳ ನಿಯಮಾವಳಿಗಳಿಗನುಸಾರವಾಗಿ ಆರೋಗ್ಯ ವಿಮೆ ಪಾಲಿಸಿಯನ್ನು ಮಾಡಿಸಲು ಎಲ್ಲರಿಗೂ ಅವಕಾಶ ಮಾಡಿಕೊಡಬೇಕು ಎಂದು ಕಟ್ಟಪ್ಪಣೆ ಮಾಡಿದೆ. ಈ ಮೂಲಕ ಆಕಸ್ಮಿಕವಾಗಿ ಎದುರಾಗುವ ವೈದ್ಯಕೀಯ ವೆಚ್ಚವನ್ನು ತಾಳಿಕೊಳ್ಳಲು ಹಿರಿಯ ನಾಗರಿಕರು ಮತ್ತವರ ಕುಟುಂಬದವರಿಗೆ ಅನುಕೂಲ ಮಾಡಿಕೊಟ್ಟಂತಾಗಿದೆ. ಐಆರ್‌ಡಿಎಐಯ ಈ ನಿರ್ಧಾರದಿಂದ ದೇಶದಲ್ಲಿ ಆರೋಗ್ಯ ವಿಮಾ ಕ್ಷೇತ್ರದಲ್ಲಿ ಮಹತ್ತರವಾದ ಬದಲಾವಣೆಗೆ ನಾಂದಿ ಹಾಡಿದಂತಾಗಿದೆ.

ಟಾಪ್ ನ್ಯೂಸ್

Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ

Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ

PM: ಕಾಂಗ್ರೆಸ್ ಡ್ರಗ್ಸ್‌ ದಂಧೆ ಹಣ ಚುನಾವಣೆ ಗೆಲ್ಲಲು ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ

PM: ಕಾಂಗ್ರೆಸ್ ಡ್ರಗ್ಸ್‌ ದಂಧೆ ಹಣ ಚುನಾವಣೆ ಗೆಲ್ಲಲು ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ

Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು

Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು

IFFI: ನವೆಂಬರ್ 20 ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ

IFFI: ನವೆಂಬರ್ 20ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ

Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್‌ ಹಾದಿ ಹೀಗಿದೆ

Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್‌ ಹಾದಿ ಹೀಗಿದೆ

sanjay manjrekar

Women’s T20 World Cup: ಮತ್ತೆ ವಿವಾದಕ್ಕೆ ಸಿಲುಕಿದ ಕಾಮೆಂಟೇಟರ್‌ ಸಂಜಯ್‌ ಮಾಂಜ್ರೇಕರ್

West Bengal: ಬಾಲಕಿಯನ್ನು ಅಪಹರಿಸಿ ಕೊ*ಲೆ: ಭುಗಿಲೆದ್ದ ಆಕ್ರೋಶ, ಪ್ರತಿಭಟನೆ

West Bengal: ಬಾಲಕಿಯನ್ನು ಅಪಹರಿಸಿ ಕೊ*ಲೆ: ಭುಗಿಲೆದ್ದ ಆಕ್ರೋಶ, ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Trucking: ರಾಜ್ಯದಲ್ಲಿ ಚಾರಣಕ್ಕೆ ಕಡಿವಾಣ ಸ್ತುತ್ಯರ್ಹ

TREKKING: ರಾಜ್ಯದಲ್ಲಿ ಚಾರಣಕ್ಕೆ ಕಡಿವಾಣ ಸ್ತುತ್ಯರ್ಹ

India Market: ಚೀನ ಬೆಳ್ಳುಳ್ಳಿ ಮೇಲಿನ ನಿಷೇಧ ಕಟ್ಟುನಿಟ್ಟಾಗಿ ಕಾರ್ಯಗತಗೊಳ್ಳಲಿ

India Market: ಚೀನ ಬೆಳ್ಳುಳ್ಳಿ ಮೇಲಿನ ನಿಷೇಧ ಕಟ್ಟುನಿಟ್ಟಾಗಿ ಕಾರ್ಯಗತಗೊಳ್ಳಲಿ

supreme-Court

Encroachment: ಅಕ್ರಮ ನಿರ್ಮಾಣಗಳ ತೆರವು: ಸುಪ್ರೀಂಕೋರ್ಟ್‌ ನಿಲುವು ಸ್ವಾಗತಾರ್ಹ

immifra

Illegal immigrants: ಅಕ್ರಮ ವಲಸಿಗರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಅಗತ್ಯ

Fake-Medicine

Medicines: ನಶೆಭರಿತ ಔಷಧಗಳಿಗೆ ಲಗಾಮು ಕಾಳಸಂತೆಯತ್ತಲೂ ಇರಲಿ ನಿಗಾ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ

Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ

Goa-iffai

IFFI: ಗೋವಾದಲ್ಲಿ 55ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ನ.20ರಿಂದ ಆರಂಭ

PM: ಕಾಂಗ್ರೆಸ್ ಡ್ರಗ್ಸ್‌ ದಂಧೆ ಹಣ ಚುನಾವಣೆ ಗೆಲ್ಲಲು ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ

PM: ಕಾಂಗ್ರೆಸ್ ಡ್ರಗ್ಸ್‌ ದಂಧೆ ಹಣ ಚುನಾವಣೆ ಗೆಲ್ಲಲು ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ

Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು

Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು

IFFI: ನವೆಂಬರ್ 20 ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ

IFFI: ನವೆಂಬರ್ 20ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.