Editorial; ರೈತರಿಗೆ ಸಕಾಲದಲ್ಲಿ ಹೊಸ ಸಾಲ ಸರಕಾರ ತುರ್ತಾಗಿ ಸ್ಪಂದಿಸಲಿ


Team Udayavani, May 17, 2024, 11:31 AM IST

Editorial; ರೈತರಿಗೆ ಸಕಾಲದಲ್ಲಿ ಹೊಸ ಸಾಲ ಸರಕಾರ ತುರ್ತಾಗಿ ಸ್ಪಂದಿಸಲಿ

ಕಳೆದ ವರ್ಷದ ಮಳೆಗಾಲ ಋತುವಿನಲ್ಲಿ ವರುಣ ಕೈಕೊಟ್ಟಿದ್ದರಿಂದಾಗಿ ರಾಜ್ಯದಲ್ಲಿ ಬರಗಾಲ ಆವರಿಸಿ, ಬೆಳೆ ಹಾನಿಗೊಳಗಾಗಿ ರೈತರು ತೀವ್ರ ಸಂಕಷ್ಟಕ್ಕೀಡಾಗಿದ್ದಾರೆ. ಇದೇ ವೇಳೆ ಹವಾಮಾನ ವೈಪರೀತ್ಯದಿಂದಾಗಿ ಈ ವರ್ಷದ ಬೇಸಗೆಯಲ್ಲಿ ರಾಜ್ಯದ ಬಹುತೇಕ ಎಲ್ಲೆಡೆ ತಾಪಮಾನ ಅಧಿಕವಾಗಿ ಪರಿಸ್ಥಿತಿಯನ್ನು ಮತ್ತಷ್ಟು ಹದಗೆಡುವಂತೆ ಮಾಡಿತ್ತು. ಇನ್ನು ಬರ ಪರಿಹಾರ ವಿಚಾರವಾಗಿ ಕೇಂದ್ರ ಮತ್ತು ರಾಜ್ಯ ಸರಕಾರಗಳ ನಡುವೆ ಹಗ್ಗ ಜಗ್ಗಾಟ ನಡೆದು ಕೊನೆಗೂ ಕೇಂದ್ರ ಸರಕಾರ ಅನುದಾನ ಬಿಡುಗಡೆ ಮಾಡಿದ್ದು ಈಗ ರಾಜ್ಯ ಸರಕಾರ ರೈತರ ಖಾತೆಗಳಿಗೆ ಬರ ಪರಿಹಾರ ಮೊತ್ತವನ್ನು ಜಮೆ ಮಾಡತೊಡಗಿದೆ.

ಆದರೆ ಪರಿಹಾರ ಮೊತ್ತವನ್ನು ರೈತರ ಖಾತೆಗಳಿಗೆ ಜಮೆ ಮಾಡುವ ವೇಳೆ ಈ ಹಿಂದೆ ರಾಜ್ಯ ಸರಕಾರ ನೀಡಿದ್ದ 2,000 ರೂ. ಗಳನ್ನು ಕಡಿತ ಮಾಡಿ ಅಥವಾ ಈ ಮೊತ್ತವನ್ನು ರೈತರ ಸಾಲಗಳಿಗೆ ಹೊಂದಾಣಿಕೆ ಮಾಡಿ ಹಾಲಿ ಪರಿಹಾರ ಮೊತ್ತವನ್ನು ಜಮೆ ಮಾಡುತ್ತಿರುವುದು ರೈತರ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಬರದಿಂದ ಬೆಳೆ ಹಾನಿಗೊಳಗಾಗಿ ತೀವ್ರ ಸಂಕಷ್ಟದಲ್ಲಿ ಸಿಲುಕಿರುವ ರೈತರಿಗೆ ಪರಿಹಾರ ವಿತರಿಸುವ ಸಂದರ್ಭದಲ್ಲಿಯೂ ರಾಜ್ಯ ಸರಕಾರ ಈ ತೆರನಾದ ಜಿಪುಣತನ ಪ್ರದರ್ಶಿಸುತ್ತಿರುವುದು ಸರಿಯಲ್ಲ.

ಕಳೆದೆರಡು ವಾರಗಳಿಂದೀಚೆಗೆ ರಾಜ್ಯದ ಬಹುತೇಕ ಎಲ್ಲೆಡೆ ಬೇಸಗೆ ಮಳೆ ಸುರಿಯಲಾರಂಭಿಸಿದ್ದು, ರೈತರು ಮಾತ್ರವಲ್ಲದೆ ಇಡೀ ರಾಜ್ಯದ ಜನತೆ ನಿಟ್ಟುಸಿರು ಬಿಡುವಂತೆ ಮಾಡಿದೆ. ರೈತರು ಈಗಾಗಲೇ ಮುಂದಿನ ಮುಂಗಾರು ಋತುವಿನ ಬೇಸಾಯ ಚಟುವಟಿಕೆಗಳಿಗೆ ಸಿದ್ಧತ ಕಾರ್ಯದಲ್ಲಿ ನಿರತರಾಗಿದ್ದಾರೆ.

ಈ ಬಾರಿ ನಿಗದಿತ ಸಮಯದಲ್ಲಿಯೇ ನೈಋತ್ಯ ಮಾರುತಗಳು ರಾಜ್ಯವನ್ನು ಪ್ರವೇಶಿಸಲಿದ್ದು, ಪ್ರಸಕ್ತ ಮುಂಗಾರು ಋತುವಿನಲ್ಲಿ ಉತ್ತಮ ಮಳೆಯಾಗಲಿದೆ ಎಂದು ಐಎಂಡಿ ತನ್ನ ಮುನ್ಸೂಚನೆಯಲ್ಲಿ ತಿಳಿಸಿದೆ. ಇದು ರೈತರಲ್ಲಿ ಆಶಾವಾದವನ್ನು ಮೂಡಿಸಿದ್ದು, ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಉತ್ತಮ ಫ‌ಸಲಿನ ನಿರೀಕ್ಷೆಯಲ್ಲಿದ್ದಾರೆ.

ಕಳೆದ ಬಾರಿ ಬೆಳೆ ಹಾನಿಗೀಡಾಗಿ ಆರ್ಥಿಕ ಮುಗ್ಗಟ್ಟಿನಲ್ಲಿ ಸಿಲುಕಿದ ಪರಿಣಾಮ ರೈತರಿಗೆ ಸಕಾಲದಲ್ಲಿ ಬೆಳೆ ಸಾಲವನ್ನು ಮರುಪಾವತಿಸಲು ಸಾಧ್ಯವಾಗಿರಲಿಲ್ಲ. ಪ್ರಸಕ್ತ ವರ್ಷ ಮುಂಗಾರು ಹಂಗಾಮಿನ ಬೇಸಾಯ ನಡೆಸಲು ರೈತರಿಗೆ ಹಣಕಾಸು ನೆರವಿನ ತುರ್ತು ಆವಶ್ಯಕತೆ ಇದೆ. ಆದರೆ ಕಳೆದ ವರ್ಷದ ಸಾಲವನ್ನು ಮರುಪಾವತಿಸದೆ ಈ ಬಾರಿ ಮತ್ತೆ ಹೊಸದಾಗಿ ಸಾಲ ನೀಡಲು ಸಾಧ್ಯವಿಲ್ಲ ಎಂದು ಬ್ಯಾಂಕ್‌ಗಳು ಮೊಂಡುತನ ಪ್ರದರ್ಶಿಸಲಾರಂಭಿಸಿವೆ. ಇದರಿಂದಾಗಿ ರೈತರಿಗೆ ಬಿತ್ತನೆ ಬೀಜ, ರಸಗೊಬ್ಬರ, ಕೃಷಿ ಸಾಧನ, ಸಲಕರಣೆಗಳ ಖರೀದಿ ಕಷ್ಟಸಾಧ್ಯವಾಗಿ ಪರಿಣಮಿಸಿದ್ದು, ಕೃಷಿ ಚಟುವಟಿಕೆಗಳು ಹಿನ್ನಡೆ ಕಾಣುವಂತಾಗಿದೆ.

ಈ ಹಿನ್ನೆಲೆಯಲ್ಲಿ ಸರಕಾರ ತುರ್ತು ಮಧ್ಯಪ್ರವೇಶಿಸಿ ರೈತರು ಬಾಕಿ ಉಳಿಸಿಕೊಂಡಿರುವ ಸಾಲ ಮರುಪಾವತಿಗೆ ಮತ್ತಷ್ಟು ಕಾಲಾವಕಾಶ ನೀಡುವಂತೆ ಮತ್ತು ಪ್ರಸಕ್ತ ಸಾಲಿನ ಕೃಷಿ ಕಾರ್ಯದಲ್ಲಿ ತೊಡಗಿಸಿಕೊಳ್ಳಲು ಅನುಕೂಲವಾಗುವಂತೆ ರೈತರಿಗೆ ಹೊಸ ಸಾಲ ನೀಡಲು ಬ್ಯಾಂಕ್‌ಗಳಿಗೆ ನಿರ್ದೇಶನ ನೀಡಬೇಕು. ಒಂದು ವೇಳೆ ವಾಣಿಜ್ಯ ಬ್ಯಾಂಕ್‌ಗಳು ತಮ್ಮ ಪಟ್ಟನ್ನು ಸಡಿಲಿಸದೇ ಇದ್ದಲ್ಲಿ ಸಹಕಾರ ಬ್ಯಾಂಕ್‌ಗಳಿಗೆ ವಿಶೇಷ ಅನುದಾನವನ್ನು ಬಿಡುಗಡೆ ಮಾಡಿ, ಅವುಗಳ ಮೂಲಕ ರೈತರಿಗೆ ಹೊಸ ಸಾಲ ನೀಡಲು ಅಗತ್ಯ ಕ್ರಮ ಕೈಗೊಳ್ಳಬೇಕು. ಇದರ ಜತೆಯಲ್ಲಿ ರೈತರ ಬೇಡಿಕೆ ಪೂರೈಸುವಷ್ಟು ಪ್ರಮಾಣದಲ್ಲಿ ಬಿತ್ತನೆ ಬೀಜ ಮತ್ತು ರಸಗೊಬ್ಬರ ಲಭ್ಯತೆಯನ್ನು ಖಾತರಿಪಡಿಸಬೇಕು. ಚುನಾವಣ ನೀತಿ ಸಂಹಿತೆಯ ನೆಪವೊಡ್ಡದೆ ರೈತರ ಸಂಕಷ್ಟಕ್ಕೆ ಸರಕಾರ ತುರ್ತಾಗಿ ಸ್ಪಂದಿಸಬೇಕು

ಟಾಪ್ ನ್ಯೂಸ್

MOdi (3)

Jammu and Kashmir ಜನತೆ ಭ್ರಷ್ಟ ಮುಕ್ತ ಸರಕಾರ ಬಯಸಿದ್ದಾರೆ: ಮೋದಿ

UNITED NATIONS

UN ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸ್ಥಾನ: ಪೋರ್ಚುಗಲ್‌ ಬೆಂಬಲ

1-wewewq

PM ರೇಸ್‌ನಲ್ಲಿ ನಾನು ಇಲ್ಲ; ಬೇಕಿದ್ದರೇ ಮೋದಿ ಕೇಳಿ: ಗಡ್ಕರಿ

Manglrui

Mangaluru: ಸಂಸ್ಥೆಯ ಬೆಳವಣಿಗೆಯಲ್ಲಿ ಮಾನವ ಸಂಪನ್ಮೂಲ ಪಾತ್ರ ಪ್ರಮುಖ: ಮಂಜುನಾಥ ಭಂಡಾರಿ

1-asasa

Test; ನ್ಯೂಜಿಲ್ಯಾಂಡ್‌ ಆಲೌಟ್‌ 88 : ಲಂಕೆಗೆ 514 ರನ್‌ ದಾಖಲೆ ಮುನ್ನಡೆ

dinesh-gu

Dinesh Gundurao; ತಿಂಗಳೊಳಗೆ ಗೃಹ ಆರೋಗ್ಯ ಯೋಜನೆ ಜಾರಿ

leopard

leopard: ಮೂಲ್ಕಿ ಕೊಯ್ಯಾರಿನಲ್ಲಿ ಸಣ್ಣ ಮರಿಯೊಂದಿಗೆ ಚಿರತೆ ಪ್ರತ್ಯಕ್ಷ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WHO

Permanent Member: ಭದ್ರತಾ ಮಂಡಳಿ ಖಾಯಂ ಸದಸ್ಯತ್ವ: ಭಾರತಕ್ಕೆ ಆನೆಬಲ

Fake-Medicine

Quality Poor Medicine: ಮಾರುಕಟ್ಟೆಗೆ ನಕಲಿ ಔಷಧ ಪ್ರವೇಶ ತಪ್ಪಿಸಿ

railaw

Indian Railway: ರೈಲು ಹಳಿ ತಪ್ಪಿಸುವ ಯತ್ನ ಆಮೂಲಾಗ್ರ ತನಿಖೆ ಅಗತ್ಯ

traffic

Traffic Rules: ಸಂಚಾರ ನಿಯಮಾವಳಿಗಳು ಕಟ್ಟುನಿಟ್ಟಾಗಿ ಅನುಷ್ಠಾನಗೊಳ್ಳಲಿ

supreme-Court

Supreme Court: ಪೋಕ್ಸೋ ವ್ಯಾಪ್ತಿ ವಿಸ್ತರಣೆ: ಸುಪ್ರೀಂ ತೀರ್ಪು ಐತಿಹಾಸಿಕ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

congress

Haryana ಅನ್ನದಾತರ ಕಲ್ಯಾಣಕ್ಕೆ ಆಯೋಗ ರಚನೆ: ಕಾಂಗ್ರೆಸ್‌ ವಾಗ್ಧಾನ

MOdi (3)

Jammu and Kashmir ಜನತೆ ಭ್ರಷ್ಟ ಮುಕ್ತ ಸರಕಾರ ಬಯಸಿದ್ದಾರೆ: ಮೋದಿ

court

Jama Masjid:ಮಾಜಿ ಪಿಎಂ ಸಹಿ ಕಡತ ಸಲ್ಲಿಸದ್ದಕ್ಕೆ ಕೋರ್ಟ್‌ ಟೀಕೆ

UNITED NATIONS

UN ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸ್ಥಾನ: ಪೋರ್ಚುಗಲ್‌ ಬೆಂಬಲ

1-wewewq

PM ರೇಸ್‌ನಲ್ಲಿ ನಾನು ಇಲ್ಲ; ಬೇಕಿದ್ದರೇ ಮೋದಿ ಕೇಳಿ: ಗಡ್ಕರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.