Editorial: ಮಣಿಪುರ- ಒಡೆದ ಮನಸು‌ ಬೆಸೆಯುವ ಕಾರ್ಯವಾಗಲಿ

ಉಗ್ರ ಸಂಘಟನೆಗಳು ಹೊತ್ತಿ ಉರಿಯುತ್ತಿರುವ ಬೆಂಕಿಗೆ ತುಪ್ಪ ಸುರಿಯುತ್ತಲೇ ಬಂದವು.

Team Udayavani, May 4, 2024, 10:10 AM IST

Editorial:ಮಣಿಪುರ- ಒಡೆದ ಮನಸು‌ ಬೆಸೆಯುವ ಕಾರ್ಯವಾಗಲಿ

ದೇಶದ ಈಶಾನ್ಯ ರಾಜ್ಯಗಳಲ್ಲಿ ಒಂದಾಗಿರುವ ಮಣಿಪುರದಲ್ಲಿ ಮೀಸಲಾತಿ ವಿಷಯವಾಗಿ ಎರಡು ಸಮುದಾಯಗಳ ನಡುವೆ ಭುಗಿಲೆದ್ದ ವಿವಾದ ವ್ಯಾಪಕ ಹಿಂಸಾಚಾರಕ್ಕೆ ಕಾರಣವಾಗಿ ರಾಜ್ಯ ಮತ್ತು ಕೇಂದ್ರ ಸರಕಾರಗಳ ಪಾಲಿಗೆ ಬಲುದೊಡ್ಡ ತಲೆನೋವಾಗಿ ಪರಿಣಮಿಸಿದುದು ಈಗ ಹಳೆಯ ಸಂಗತಿ. ಸಂಘರ್ಷ ಆರಂಭವಾಗಿ ಶುಕ್ರವಾರಕ್ಕೆ ಒಂದು ವರ್ಷ ಸಂದಿದೆ. ಇಂದಿಗೂ ಮಣಿಪುರದಲ್ಲಿ ಸಂಪೂರ್ಣವಾಗಿ ಶಾಂತಿ ಮರುಕಳಿಸಿಲ್ಲ. ಆರಂಭದ ತಿಂಗಳುಗಳಿಗೆ ಹೋಲಿಸಿದಲ್ಲಿ ಹಿಂಸಾಚಾರ, ಘರ್ಷಣೆ ಬಹುತೇಕ ಕಡಿಮೆಯಾಗಿದೆ ಯಾದರೂ ರಾಜ್ಯದ ಒಂದಲ್ಲ ಒಂದು ಭಾಗದಲ್ಲಿ ಆಗೊಮ್ಮೆ ಈಗೊಮ್ಮೆ ಎಂಬಂತೆ ಹಿಂಸೆ
ಭುಗಿಲೇಳುತ್ತಿರುವುದರಿಂದಾಗಿ ಜನರು ಭಯದಿಂದಲೇ ದಿನದೂಡು ತ್ತಿದ್ದಾರೆ.

ಮಣಿಪುರದಲ್ಲಿ ಶೇ. 54ರಷ್ಟಿರುವ ಮೈತೇಯಿ ಜನಾಂಗದವರು ಜನವಸತಿ ಪ್ರದೇಶ ವಾದ ಇಂಫಾಲ ಕಣಿವೆಯಲ್ಲಿ ವಾಸವಾಗಿದ್ದಾರೆ. ಇನ್ನು ಬುಡಕಟ್ಟು ಸಮು ದಾಯಗಳಾದ ನಾಗಾ ಮತ್ತು ಕುಕಿ ಸಮುದಾಯದವರು ಇಂದಿಗೂ ಪರ್ವತ ಪ್ರದೇಶದಲ್ಲಿ ವಾಸವಾಗಿದ್ದಾರೆ. ಆದರೆ ಮಣಿಪುರದಲ್ಲಿ ವಲಸಿಗರ ಸಂಖ್ಯೆ ಹೆಚ್ಚು ತ್ತಲೇ ಇದ್ದು ಇವರೆಲ್ಲ ಪರ್ವತ ಪ್ರದೇಶದಲ್ಲಿ ಠಿಕಾಣಿ ಹೂಡಿ ಮೀಸಲಾತಿ ಸೌಲಭ್ಯ ವನ್ನು ಪಡೆಯುತ್ತಿರುವುದರಿಂದ ನಮಗೆ ಅನ್ಯಾಯವಾಗುತ್ತಿದೆ ಎಂಬುದು ಮೈತೇಯಿ ಸಮುದಾಯದವರ ಅಳಲು.

ತಮ್ಮ ಸಮುದಾಯಕ್ಕೆ ಎಸ್‌ಟಿ ಮೀಸ ಲಾತಿ ನೀಡಬೇಕು ಎಂಬ ಬೇಡಿಕೆಯನ್ನು ಅವರು ಮುಂದಿಟ್ಟಿದ್ದರು. ಇದರಿಂದ ಆಕ್ರೋಶಗೊಂಡ ನಾಗಾ ಮತ್ತು ಕುಕಿ ಸಮುದಾಯದವರು ಕಳೆದ ವರ್ಷದ ಮೇ ಆರಂಭದಲ್ಲಿ ಪ್ರತಿಭಟನೆ ಆರಂಭಿಸಿ ವ್ಯಾಪಕ ಹಿಂಸಾಚಾರದಲ್ಲಿ ತೊಡಗಿಕೊಂಡರು. ಎರಡು ಸಮುದಾಯಗಳ ನಡುವಣ ಸಂಘರ್ಷದ ಲಾಭ ಪಡೆಯಲು ಮುಂದಾದ ನಿಷೇಧಿತ ಬುಡಕಟ್ಟು ಉಗ್ರ ಸಂಘಟನೆಗಳು ಹೊತ್ತಿ ಉರಿಯುತ್ತಿರುವ ಬೆಂಕಿಗೆ ತುಪ್ಪ ಸುರಿಯುತ್ತಲೇ ಬಂದವು.

ಹಿಂಸಾಚಾರವನ್ನು ನಿಯಂತ್ರಿಸಲು ಕೇಂದ್ರ, ರಾಜ್ಯ ಸರಕಾರ ಭಾರೀ ಸಂಖ್ಯೆಯಲ್ಲಿ ಭದ್ರತಾ ಪಡೆಗಳನ್ನು ಹಿಂಸಾ ಗ್ರಸ್ತ ಪ್ರದೇಶಗಳಲ್ಲಿ ನಿಯೋಜಿಸಿ, ಹಿಂಸೆಕೋರರನ್ನು ಸದೆಬಡಿಯುತ್ತಲೇ ಬಂದಿವೆ. ಕಳೆದೊಂದು ವರ್ಷದ ಅವಧಿಯಲ್ಲಿ ಈ ಜನಾಂಗೀಯ ಸಂಘರ್ಷದಲ್ಲಿ 200 ಕ್ಕೂ ಅಧಿಕ ಮಂದಿ ಸಾವನ್ನಪ್ಪಿದರೆ, ಸಹಸ್ರಾರು ಮಂದಿ ನಿರ್ವಸಿತರಾಗಿ ಪರಿಹಾರ ಕೇಂದ್ರಗಳಲ್ಲಿ ದಿನದೂಡುವಂತಾಗಿದೆ.

ಕೋಟ್ಯಂತರ ರೂ. ಮೌಲ್ಯದ ಆಸ್ತಿ ನಷ್ಟವಾಗಿದೆ. ಇನ್ನು ಇಲ್ಲಿನ ಜನರ ಗೋಳಂತೂ ಹೇಳತೀರದು. ಎರಡು ಸಮುದಾಯಗಳ ನಡುವೆ ಪರಸ್ಪರ ವಿಶ್ವಾಸ ಇನ್ನೂ ಮೂಡದಿರುವ ಹಿನ್ನೆಲೆಯಲ್ಲಿ ಅಂತರ್‌ ಜಾತಿ ವಿವಾಹವಾದ ದಂಪತಿಗಳು ಪತಿ-ಪತ್ನಿಯರ ಮುಖ ನೋಡಲು ಹೆದರುತ್ತಿದ್ದಾರೆ. ವರ್ಷದ ಹಿಂದೆ ಅನ್ಯೋನ್ಯವಾಗಿ ಬಾಳುತ್ತಿದ್ದ ಕುಕಿ ಮತ್ತು ಮೈತೇಯಿ ಸಮುದಾಯಗಳ ಜನರು ಈಗ ಪರಸ್ಪರ ದ್ವೇಷದ ಕಿಡಿ ಕಾರುತ್ತಿದ್ದಾರೆ. ಈ ಎರಡೂ ಸಮುದಾಯಗಳಲ್ಲಿ ಶಾಂತಿಪ್ರಿಯ ಜನರು ಸಹಸ್ರಾರು ಸಂಖ್ಯೆಯಲ್ಲಿದ್ದಾರೆ. ಆದರೆ ರಾಜ್ಯದಲ್ಲಿನ ಪ್ರಕ್ಷುಬ್ಧ ಪರಿಸ್ಥಿತಿಯಿಂದಾಗಿ ಅವರೆಲ್ಲರೂ ತಮ್ಮ ಕಣ್ಣ ಮುಂದೆ ನಡೆಯುತ್ತಿರುವ ಹಿಂಸಾಚಾರಗಳಿಗೆ ಮೂಕಪ್ರೇಕ್ಷಕರಾಗಿದ್ದಾರೆ.

ಸದ್ಯ ರಾಜ್ಯ ದಲ್ಲಿ ಪರಿಸ್ಥಿತಿ ಸಾಕಷ್ಟು ಸುಧಾರಿಸಿದ್ದರೂ ಈ ಎರಡು ಸಮುದಾಯಗಳ ಜನರಲ್ಲಿ ಮನೆಮಾಡಿರುವ ಭೀತಿ ಮಾತ್ರ ಇಂದಿಗೂ ಹಾಗೆಯೇ ಉಳಿದಿದೆ. ಈ ಕಾರಣ ಕ್ಕಾಗಿಯೇ ಶುಕ್ರವಾರದಂದು ರಾಜ್ಯದ ವಿವಿಧೆಡೆ ಕುಕಿ ಮತ್ತು ಮೈತೇಯಿ ಸಮುದಾಯದ ಜನರನ್ನು ಒಂದೆಡೆ ಸೇರಿಸಿ, ಅವರಲ್ಲಿ ಧೈರ್ಯ ತುಂಬುವ ಕಾರ್ಯಕ್ರಮಗಳನ್ನು ನಾಗರಿಕ ಸಂಘಟನೆಗಳು ಆಯೋಜಿಸಿದ್ದವು. ಎರಡು ಸಮುದಾಯಗಳ ನಡುವೆ ಈಗ ನಿರ್ಮಾಣವಾಗಿರುವ ಆಳವಾದ ಕಂದಕವನ್ನು ಮುಚ್ಚಿ, ಒಡೆದ ಮನಸುಗಳನ್ನು ಬೆಸೆಯುವ ಕಾರ್ಯ ತ್ವರಿತಗತಿ ಯಲ್ಲಿ ನಡೆಯಬೇಕಿದೆ. ನಿಷೇಧಿತ ಉಗ್ರ ಸಂಘಟನೆಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರಗಿಸಬೇಕು. ಜನರು ಶಾಂತಿಯುತ ಜೀವನ ನಡೆಸಲು ಪೂರಕವಾದ ಮತ್ತು ಭಯರಹಿತ ವಾತಾವರಣ ನಿರ್ಮಾಣವಾದಲ್ಲಿ ಮಾತ್ರವೇ ರಾಜ್ಯದಲ್ಲಿ ಶಾಶ್ವತವಾಗಿ ಶಾಂತಿ ನೆಲೆಸಲು ಸಾಧ್ಯ.

ಟಾಪ್ ನ್ಯೂಸ್

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-editorial

Editorial: ವಿದ್ಯಾರ್ಹತೆಗೆ ದೇಶವ್ಯಾಪಿ ಮಾನ್ಯತೆ, ಹೈಕೋರ್ಟ್‌ ತೀರ್ಪು ನ್ಯಾಯೋಚಿತ

13-editorial

Temperature: ಸಂಪಾದಕೀಯ-ತಾಪಮಾನ ಹೆಚ್ಚಳದ ಆತಂಕ: ಮುಂಜಾಗ್ರತೆಯೇ ಮದ್ದು

ಉಚಿತಗಳ ಆಮಿಷಗಳಿಗೆ ಕಡಿವಾಣ: ಚು.ಆಯೋಗ ಬದ್ಧತೆ ತೋರಲಿ

ಉಚಿತಗಳ ಆಮಿಷಗಳಿಗೆ ಕಡಿವಾಣ: ಚು.ಆಯೋಗ ಬದ್ಧತೆ ತೋರಲಿ

vidhana-Soudha

Editorial: ಪ್ರಾಥಮಿಕ ಶಾಲಾ ಶಿಕ್ಷಕರ ಪಠ್ಯೇತರ ಹೊರೆ ಇಳಿಸಿ

ಮಹಿಳಾ ಆರೋಪಿಗಳ ಬಂಧನ ವೇಳೆ ವಿವೇಚನೆ ಅತ್ಯವಶ್ಯ

ಮಹಿಳಾ ಆರೋಪಿಗಳ ಬಂಧನ ವೇಳೆ ವಿವೇಚನೆ ಅತ್ಯವಶ್ಯ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.