Wayanad Landslide ದುರಂತದ ಸ್ಥಳದಲ್ಲೂ ಕಳ್ಳತನ ಮಾನವೀಯತೆಗೆ ಕಳಂಕ


Team Udayavani, Aug 5, 2024, 6:00 AM IST

Wayanad Landslide ದುರಂತದ ಸ್ಥಳದಲ್ಲೂ ಕಳ್ಳತನ ಮಾನವೀಯತೆಗೆ ಕಳಂಕ

ಕೇರಳದ ವಯನಾಡ್‌ನ‌ಲ್ಲಿ ಸಂಭವಿಸಿದ ಭೀಕರ ಭೂಕುಸಿತದಲ್ಲಿ ಅಸು ನೀಗಿದವರ ಸಂಖ್ಯೆ ದಿನೇದಿನೆ ಹೆಚ್ಚುತ್ತಲೇ ಸಾಗಿದ್ದು, ಇಲ್ಲಿನ ನದಿಗಳಲ್ಲಿ ಹೆಣಗಳು ಒಂದೊಂದಾಗಿ ತೇಲಿ ಬರುತ್ತಿದ್ದರೆ, ಮಣ್ಣಿನಡಿಯಲ್ಲಿ ಸಿಲುಕಿರುವ ಮೃತದೇಹಗಳನ್ನು ಹೊರ ತೆಗೆಯುವ ಕಾರ್ಯಾಚರಣೆ ಮುಂದುವರಿದಿದೆ. ಊರಿಗೆ ಊರೇ ಸರ್ವನಾಶವಾಗಿ, ವಾರದ ಹಿಂದೆ ಅದೊಂದು ಜನವಸತಿ ಪ್ರದೇಶವಾಗಿತ್ತು ಎಂಬುದನ್ನು ಊಹಿಸಲೂ ಸಾಧ್ಯವಿಲ್ಲದ ಪರಿಸ್ಥಿತಿ ಇದೆ.

ಮತ್ತೊಂದೆಡೆ ಈ ಘನಘೋರ ದುರಂತಕ್ಕೆ ಸಾಕ್ಷಿಯಾಗಿ ಅಲ್ಲೊಂದು ಇಲ್ಲೊಂದು ಕಟ್ಟಡಗಳು ಅನಾಥವಾಗಿ ಅಳಿದುಳಿದಿವೆ. ಇಂತಹ ಯಾತನಾ ಮಯ ಪರಿಸ್ಥಿತಿಯಲ್ಲಿ ವಿವಿಧ ತಂಡಗಳು ದುರಂತ ಸಂಭವಿಸಿದ ಸ್ಥಳದಲ್ಲಿ ರಕ್ಷಣ ಮತ್ತು ಪರಿಹಾರ ಕಾರ್ಯಾಚರಣೆಯಲ್ಲಿ ತೊಡಗಿಕೊಂಡು, ಅವಿರತವಾಗಿ ಶ್ರಮಿಸುತ್ತಿವೆ. ಒಂದೆಡೆಯಿಂದ ಎಲ್ಲ ಭೇದಭಾವಗಳನ್ನು ಮರೆತು ಸಂತ್ರಸ್ತರನ್ನು ರಕ್ಷಿಸುವ, ಅವರಿಗೆ ನೆರವಿನ ಹಸ್ತ ಚಾಚುವ ಕಾರ್ಯಗಳು ನಡೆಯುತ್ತಿದ್ದರೆ ಮತ್ತೊಂದೆಡೆ ಇಡೀ ಮಾನವ ಕುಲವೇ ತಲೆತಗ್ಗಿಸುವಂತಹ ಘಟನಾವಳಿಗಳು ಈ ಪ್ರದೇಶದಲ್ಲಿ ನಡೆಯುತ್ತಿರುವುದು ಇಡೀ ಸಮಾಜವನ್ನು ತಲೆತಗ್ಗಿಸುವಂತೆ ಮಾಡಿದೆ.

ಭೂಕುಸಿತ ಪೀಡಿತ ಪ್ರದೇಶಗಳಾದ ವಯನಾಡ್‌ ಜಿಲ್ಲೆಯ ಮುಂಡಕೈ ಮತ್ತು ಚೂರಲ್‌ವುಲದಲ್ಲಿ ಕಳೆದೆರಡು ದಿನಗಳಿಂದ ಅಲ್ಲಲ್ಲಿ ಮನೆ ಕಳ್ಳತನ ನಡೆದಿರುವ ಘಟನೆಗಳು ನಡೆದಿರುವ ಬಗೆಗೆ ವರದಿಯಾಗಿವೆ. ಭೂಕುಸಿತದ ಬಳಿಕ ಇಲ್ಲಿನ ಮತ್ತು ಸುತ್ತಮುತ್ತಲಿನ ಊರುಗಳ ಜನರನ್ನು ನಿರಾಶ್ರಿತ ಶಿಬಿರಗಳಿಗೆ ಸ್ಥಳಾಂತರಿಸಲಾಗಿದ್ದರೆ, ಇನ್ನು ಕೆಲವರು ಮುಂಜಾಗ್ರತ ಕ್ರಮವಾಗಿ ತಮ್ಮ ಮನೆಗಳನ್ನು ತೊರೆದು ಸಮೀಪದ ಪಟ್ಟಣಗಳಲ್ಲಿನ ರೆಸಾರ್ಟ್‌ಗಳ ಕೊಠಡಿಯಲ್ಲಿ ನೆಲೆಯಾಗಿದ್ದಾರೆ. ಭೂಕುಸಿತ ಸಂಭವಿಸಿದ ಪ್ರದೇಶಗಳಲ್ಲಿ ನಿರಂತರ ಮಳೆಯಾಗುತ್ತಿರುವುದರಿಂದ ಹಾಗೂ ಪರಿಹಾರ ಮತ್ತು ರಕ್ಷಣ ಕಾರ್ಯಾಚರಣೆಗೆ ತೊಡಕಾಗಬಾರದೆಂಬ ಉದ್ದೇಶದಿಂದ ಇನ್ನು ಕೆಲವರು ತಾತ್ಕಾಲಿಕವಾಗಿ ತಮ್ಮ ಮನೆಗಳಿಗೆ ಬೀಗ ಹಾಕಿ ಸುರಕ್ಷಿತ ಪ್ರದೇಶಗಳಲ್ಲಿ ವಾಸ್ತವ್ಯ ಹೂಡಿದ್ದಾರೆ. ಪರಿಹಾರ ಮತ್ತು ರಕ್ಷಣೆ ಕಾರ್ಯಾಚರಣೆ ಇನ್ನೂ ಮುಂದುವರಿದಿರುವಂತೆಯೇ ಕೆಲವು ಕಿಡಿಗೇಡಿ ಗುಂಪುಗಳು ತಮ್ಮ ದಂಧೆಗೆ ಶುರುವಿಟ್ಟುಕೊಂಡಿವೆ.

ಸದ್ಯ ದುರಂತ ಸಂಭವಿಸಿದ ಸ್ಥಳದಲ್ಲಿ ವಿವಿಧ ಸ್ವಯಂಸೇವಾ ತಂಡಗಳು ಪರಿಹಾರ ಮತ್ತು ರಕ್ಷಣೆ ಕಾರ್ಯದಲ್ಲಿ ಕೈಜೋಡಿಸಿವೆ. ವಿವಿಧ ರಾಜ್ಯಗಳಿಂದ ಇಂತಹ ತಂಡಗಳು ಆಗಮಿಸಿ ತಮ್ಮ ಕೈಲಾದ ಸೇವೆಯನ್ನು ಸಲ್ಲಿಸುತ್ತಿವೆ. ಇದನ್ನೇ ತಮ್ಮ ದಾಳವನ್ನಾಗಿಸಿಕೊಂಡಿರುವ ಕಿಡಿಗೇಡಿಗಳು ತಾವೂ ಸ್ವಯಂಸೇವಕರೆಂದು ಹೇಳಿಕೊಂಡು ದುರಂತಪೀಡಿತ ಪ್ರದೇಶಗಳಲ್ಲಿ ಕಳ್ಳತನದ ಕೃತ್ಯಕ್ಕಿಳಿದಿರುವುದು ತೀರಾ ಅಮಾನವೀಯ ಮಾತ್ರವಲ್ಲದೆ ಘೋರ ಅಕ್ಷಮ್ಯ.ಈ ಕುಕೃತ್ಯಗಳ ಸಂಬಂಧ ಸ್ಥಳೀಯ ಸಂತ್ರಸ್ತರಿಂದ ದೂರುಗಳು ಕೇಳಿಬರುತ್ತಿದ್ದಂತೆಯೇ ಸ್ಥಳೀಯಾಡಳಿತ ಮತ್ತು ಪೊಲೀಸ್‌ ಇಲಾಖೆ ದುರಂತ ಪೀಡಿತ ಪ್ರದೇಶಗಳಲ್ಲಿ ಸ್ವಯಂಸೇವಕ ತಂಡಗಳ ನೋಂದಣಿ ಮತ್ತು ಪಾಸ್‌ ನೀಡಿಕೆ ಪ್ರಕ್ರಿಯೆಯನ್ನು ಆರಂಭಿಸಿವೆ. ಅಲ್ಲದೆ ಪೊಲೀಸರು ರಾತ್ರಿ ವೇಳೆ ಗಸ್ತು ಕಾರ್ಯ ನಡೆಸುತ್ತಿದ್ದಾರೆ.

ಆದರೆ ಕಿಡಿಗೇಡಿಗಳ ಈ ಕೃತ್ಯದಿಂದಾಗಿ ಈಗ ಸ್ಥಳೀಯರು ಹೊರ ಜಿಲ್ಲೆಗಳಿಂದ ಸಂತ್ರಸ್ತರ ನೆರವಿಗಾಗಿ ಆಗಮಿಸಿರುವ ಸ್ವಯಂಸೇವಾ ತಂಡಗಳ ಬಗೆಗೆ ಅನುಮಾನ ಪಡುವಂತಾಗಿದೆ. ಕಳ್ಳಕಾಕರ ಈ ಹುಂಬತನ ಇಡೀ ನಾಗರಿಕ ಸಮಾಜವನ್ನು ತಲೆತಗ್ಗಿಸುವಂತೆ ಮಾಡಿದೆ. ಮಾನವೀಯತೆ, ಸೇವೆ ಈ ಎಲ್ಲ ಶಬ್ದಗಳಿಗೇ ಕಳಂಕ ಬರುವಂತೆ ಮಾಡಿರುವ ಈ ಸಮಾಜದ್ರೋಹಿ ಶಕ್ತಿಗಳನ್ನು ನಿರ್ದಾಕ್ಷಿಣ್ಯವಾಗಿ ಸದೆಬಡಿಯಬೇಕು. ಇಂಥ ಸಮಯಸಾಧಕರು ಇಡೀ ಮನುಕುಲಕ್ಕೆ ಶಾಪವಾಗಿದ್ದು, ಸೂಕ್ತ ಪಾಠ ಕಲಿಸದೇ ಹೋದಲ್ಲಿ ಭವಿಷ್ಯದಲ್ಲಿ ಇಂತಹ ದುರಂತಗಳು ಸಂಭವಿಸಿದ ಸಂದರ್ಭದಲ್ಲಿ ಸಂತ್ರಸ್ತರ ನೆರವಿಗೆ ಧಾವಿಸುವಂತಹ ಧೈರ್ಯ ತೋರುವ ಸಾಹಸ, ಸವಾಲಿನ ಕಾರ್ಯಕ್ಕೆ ಮುಂದಾಗುವವರ ಸಂಖ್ಯೆ ಇನ್ನಷ್ಟು ವಿರಳವಾದರೆ ಅದರಲ್ಲಿ ಅಚ್ಚರಿಯೇನಿಲ್ಲ.

ಟಾಪ್ ನ್ಯೂಸ್

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

ಕಾಳಿಂಗ ನಾವಡ ಪ್ರಶಸ್ತಿಗೆ ಕೋಟ ಶಿವಾನಂದ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರೈತರ ಹಿತರಕ್ಷಣೆ ನೆಪದಲ್ಲಿ ಗ್ರಾಹಕರಿಗೆ ಬರೆ ಸಲ್ಲದು

ರೈತರ ಹಿತರಕ್ಷಣೆ ನೆಪದಲ್ಲಿ ಗ್ರಾಹಕರಿಗೆ ಬರೆ ಸಲ್ಲದು

ಪರೀಕ್ಷಾ ಅಕ್ರಮಗಳ ತಡೆಗೆ ಎಸ್‌ಎಸ್‌ಸಿ ಕಠಿನ ನಿಲುವುಪರೀಕ್ಷಾ ಅಕ್ರಮಗಳ ತಡೆಗೆ ಎಸ್‌ಎಸ್‌ಸಿ ಕಠಿನ ನಿಲುವು

ಪರೀಕ್ಷಾ ಅಕ್ರಮಗಳ ತಡೆಗೆ ಎಸ್‌ಎಸ್‌ಸಿ ಕಠಿನ ನಿಲುವು

ಗ್ರಾಮೀಣ ಬಡಜನರ ಬೇಡಿಕೆಗೆ ಸ್ಪಂದಿಸಿದ ಕೇಂದ್ರ ಸರಕಾರ

ಗ್ರಾಮೀಣ ಬಡಜನರ ಬೇಡಿಕೆಗೆ ಸ್ಪಂದಿಸಿದ ಕೇಂದ್ರ ಸರಕಾರ

Jammu-Kashmir ಗಡಿಯಲ್ಲಿ ಉದ್ಧಟತನ: ಪಾಠ ಕಲಿಯದ ಪಾಕ್‌

Jammu-Kashmir ಗಡಿಯಲ್ಲಿ ಉದ್ಧಟತನ: ಪಾಠ ಕಲಿಯದ ಪಾಕ್‌

Train ಹಳಿ ತಪ್ಪಿಸುವ ಯತ್ನ: ಉಗ್ರರ ಷಡ್ಯಂತ್ರ ಮಟ್ಟ ಹಾಕಿ

Train ಹಳಿ ತಪ್ಪಿಸುವ ಯತ್ನ: ಉಗ್ರರ ಷಡ್ಯಂತ್ರ ಮಟ್ಟ ಹಾಕಿ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

1-32

Cat; ವಿಶ್ವದ ಹಿರಿಯ ಬೆಕ್ಕು, 33 ವರ್ಷದ ರೋಸಿ ಇನ್ನಿಲ್ಲ

yogi-3

Pakistan ಕ್ಯಾನ್ಸರ್‌, ಅದರ ಹುಟ್ಟಿಗೆ ಕಾಂಗ್ರೆಸ್‌ ಕಾರಣ: ಯೋಗಿ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

kangana-2

Emergency; ಭಿಂದ್ರನ್‌ವಾಲೆ ಸಾಧುವಲ್ಲ, ಭಯೋತ್ಪಾದಕ: ಸಂಸದೆ ಕಂಗನಾ

Suside-Boy

Health Problem: ಮಲಗಿದ್ದ ವೇಳೆ ಮೃತಪಟ್ಟ ವ್ಯಕ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.