ದಟ್ಟಣೆ ತಡೆಗಾಗಿ ಸಮೂಹ ಸಾರಿಗೆಗೆ ಸಿಗಲಿ ಹೆಚ್ಚಿನ ಒತ್ತು


Team Udayavani, Jun 2, 2023, 6:00 AM IST

ದಟ್ಟಣೆ ತಡೆಗಾಗಿ ಸಮೂಹ ಸಾರಿಗೆಗೆ ಸಿಗಲಿ ಹೆಚ್ಚಿನ ಒತ್ತು

ರಾಜ್ಯದಲ್ಲಿ ವಾಹನಗಳ ಸಂಖ್ಯೆ ಮೂರು ಕೋಟಿ ಗಡಿ ದಾಟಿದೆ. ಈ ಮೂಲಕ ಕಳೆದೊಂದು ದಶಕದಲ್ಲಿ ರಸ್ತೆಗಿಳಿದ ವಾಹನಗಳು ದುಪ್ಪಟ್ಟಾಗಿವೆ. ಇದರಲ್ಲಿ ರಾಜಧಾನಿ ಬೆಂಗಳೂರಿನಲ್ಲೇ 1.09 ಕೋಟಿ ಇವೆ. ಮತ್ತೊಂದೆಡೆ ಇದೇ ಅವಧಿಯಲ್ಲಿ ಬಿಎಂಟಿಸಿ, ಕೆಎಸ್‌ಆರ್‌ಟಿಸಿ ಯಂತಹ ಸಮೂಹ ಸಾರಿಗೆ ವ್ಯವಸ್ಥೆಯಲ್ಲಿ ಸೇರ್ಪಡೆಗೊಂಡ ಬಸ್‌ಗಳ ಸಂಖ್ಯೆ ನಗಣ್ಯವಾಗಿದೆ.

ಕೋವಿಡ್‌ ಸೇರಿದಂತೆ ಇದರ ಹಿಂದಿನ ಕಾರಣಗಳು ಏನೇ ಇದ್ದರೂ ಸರಕಾರದ ಆದ್ಯತೆಗಳು ಮತ್ತು ಅವುಗಳ ಅನುಷ್ಠಾನದಲ್ಲಿರುವ ಆಸಕ್ತಿಗೆ ಇದು ಕನ್ನಡಿ ಹಿಡಿಯುತ್ತದೆ.

ವಾಹನ ದಟ್ಟಣೆಯು ರಸ್ತೆಗಳ ಮೇಲೆ ಹೊರೆ ಮಾತ್ರವಲ್ಲ; ಸಂಚಾರದಟ್ಟಣೆ, ವಾಯುಮಾಲಿನ್ಯ ಸಹಿತ ಹಲವು ರೀತಿಯ ಸಮಸ್ಯೆಗಳಿಗೆ ಎಡೆಮಾಡಿಕೊಡಲಿದೆ. ವಿಶ್ವದ ಅತೀ ಹೆಚ್ಚು ಟ್ರಾಫಿಕ್‌ವುಳ್ಳ ಎರಡನೇ ನಗರ ಎಂಬ ಅಪಖ್ಯಾತಿ ಬೆಂಗಳೂರಿಗಿದೆ. ಇದೇ ದಟ್ಟಣೆಯಲ್ಲಿ ಹೆಚ್ಚು ಹೊತ್ತು ಕಳೆಯುವ ವಾಹನ ಚಾಲಕರಲ್ಲಿ ಹೃದಯ ಸಂಬಂಧಿ ಕಾಯಿಲೆಗಳು ಹೆಚ್ಚುತ್ತಿವೆ ಎಂದೂ ಮತ್ತೊಂದು ಅಧ್ಯಯನ ಹೇಳುತ್ತದೆ. ಇದೇ ಗತಿಯಲ್ಲಿ ವಾಹನಗಳ ಸಂಖ್ಯೆ ಏರಿಕೆಯಾದರೆ ಸ್ಥಿತಿ ಮತ್ತಷ್ಟು ಚಿಂತಾಜನಕ ಆಗಲಿದೆ ಎಂಬುದರಲ್ಲಿ ಎರಡುಮಾತಿಲ್ಲ.

ಬರುವ ಸರಕಾರಗಳಿಗೆ ಈಗಲೂ ಮೇಲ್ಸೇತುವೆಗಳು, ಕೆಳ ಸೇತುವೆಗಳು, ರಸ್ತೆ ವಿಸ್ತರಣೆಯಂತಹ ಕ್ರಮಗಳು ಅಭಿವೃದ್ಧಿಯ ಕುರು ಹುಗಳಾಗಿವೆ. ಇದೇ ಕಾರಣಕ್ಕೆ ಪ್ರತೀ ವರ್ಷ ಸಾವಿರಾರು ಕೋಟಿ ಹಣ ಈ ರಸ್ತೆಗಳಲ್ಲೇ ಹರಿದುಹೋಗುತ್ತದೆ. ಇದು ಖಾಸಗಿ ವಾಹನಗಳು ರಸ್ತೆ ಗಿಳಿಯಲು ಪ್ರೇರಣೆ ಹೊರತು, ದಟ್ಟಣೆಗೆ ಪರಿಹಾರವಲ್ಲ. ಮತ್ತೂಂದೆಡೆ ಸಮೂಹ ಸಾರಿಗೆ ವ್ಯವಸ್ಥೆಯನ್ನು ಪ್ರೋತ್ಸಾಹಿಸುವ ಬದಲಿಗೆ ಸಾಧ್ಯವಾದಷ್ಟು ಅದನ್ನು ದುರ್ಬಲಗೊಳಿಸುವ ಕಡೆಗೆ ಸರಕಾರ ಹೆಜ್ಜೆ ಇಡುತ್ತಿವೆ ಎಂಬುದು ಅವುಗಳ ಧೋರಣೆಯಿಂದಲೇ ಗೊತ್ತಾಗುತ್ತದೆ. ಇದಕ್ಕೆ ಪೂರಕವಾಗಿ ಹೇಳುವುದಾದರೆ, ವಿದ್ಯಾರ್ಥಿಗಳು ಸೇರಿದಂತೆ ವಿವಿಧ ವರ್ಗಗಳಿಗೆ ನೀಡುವ ರಿಯಾಯಿತಿ ಪಾಸಿನ ಅನುದಾನ ಇನ್ನೂ ಸಾವಿರಾರು ಕೋಟಿ ಬಾಕಿ ಉಳಿಸಿಕೊಳ್ಳಲಾಗಿದೆ. ಕಳೆದೊಂದು ದಶಕದಲ್ಲಿ ರಾಜ್ಯದ ನಾಲ್ಕೂ ಸಾರಿಗೆ ನಿಗಮಗಳ ಬಸ್‌ಗಳ ಸಂಖ್ಯೆ 24 ಸಾವಿರ ಆಸುಪಾಸಿನಲ್ಲೇ ಇದೆ.

ಒಂದು ಕುಟುಂಬಕ್ಕೆ ಒಂದೇ ವಾಹನ ಎಂಬ ನಿರ್ಬಂಧ, ವಾಹನ ನಿಲುಗಡೆಗೆ ಜಾಗ ಲಭ್ಯವಿದ್ದರೆ ಮಾತ್ರ ನೋಂದಣಿಗೆ ಅವಕಾಶ, ವಾಹನ ದಟ್ಟಣೆವುಳ್ಳ ರಸ್ತೆಗಳಲ್ಲಿ ತೆರಿಗೆ ವಿಧಿಸುವುದು, ಕಾರ್‌ ಪೂಲಿಂಗ್‌, ನಿಗಮಗಳಲ್ಲಿ ಬಸ್‌ಗಳ ಸಂಖ್ಯೆ ಜತೆಗೆ ನಿಖರ ಮತ್ತು ಸಮರ್ಪಕ ಸೇವೆಗಳನ್ನು ಕಲ್ಪಿಸುವಂತಹ ಕ್ರಮಗಳು ಹೆಚ್ಚಾಗಬೇಕಿದೆ. ಈಗಲೂ ಸುಮಾರು 2,600 ಹಳ್ಳಿಗಳಲ್ಲಿ ಬಸ್‌ಗಳ ಸಂಪರ್ಕ ಇಲ್ಲ. ಇದ್ದ ಬಸ್‌ಗಳಲ್ಲಿ ಬಹುತೇಕ “ಪೀಕ್‌ ಅವರ್‌’ (ಬೆಳಗ್ಗೆ ಮತ್ತು ಸಂಜೆ)ನಲ್ಲಿ ಗರಿಷ್ಠ ಸಾಮರ್ಥ್ಯಕ್ಕಿಂತ ಹೆಚ್ಚು ದಟ್ಟಣೆ ಇರುತ್ತದೆ. ಈ ಸ್ಥಿತಿಯನ್ನು ಸುಧಾರಿಸುವ ಆವಶ್ಯಕತೆ ಈಗ ತುರ್ತು ಇದೆ.

ವಿದ್ಯುತ್‌ ಚಾಲಿತ ಬಸ್‌ಗಳು ಇತ್ತೀಚಿನ ವರ್ಷಗಳಲ್ಲಿ ಹೆಚ್ಚಾಗುತ್ತಿರುವುದು ವಾಯುಮಾಲಿನ್ಯ ತಡೆ ದೃಷ್ಟಿಯಿಂದ ಉತ್ತಮ ಬೆಳವಣಿಗೆ ಇರಬಹುದು. ಆದರೆ ಮುಂದಿನ ದಶಕಗಳಲ್ಲಿ ಇವುಗಳು ಕೂಡ ದಟ್ಟಣೆ ಸಮಸ್ಯೆಯಿಂದ ಹೊರತಾಗಿಲ್ಲ. ಜತೆಗೆ ಪೆಟ್ರೋಲ್‌-ಡೀಸೆಲ್‌ ಅವಲಂಬನೆ ಬದಲಿಗೆ ಲೀಥಿಯಂ ಮೇಲಿನ ಅವಲಂಬನೆ ಹೆಚ್ಚುತ್ತದೆ. ಹಾಗಾಗಿ, ಸಾಧ್ಯ ವಾದಷ್ಟು ಖಾಸಗಿ ವಾಹನಗಳು ರಸ್ತೆಗಿಳಿಯದಂತೆ ಹಾಗೂ ಅದಕ್ಕೆ ಪರ್ಯಾ ಯವಾಗಿ ಸಮೂಹ ಸಾರಿಗೆ ವ್ಯವಸ್ಥೆಯನ್ನು ಉತ್ತೇಜಿಸುವ ಕ್ರಮಗಳು ಹೆಚ್ಚಾಗಬೇಕು. ಆ ಮೂಲಕ ವಾಹನಗಳ ಸಂಖ್ಯೆಗೆ ಕಡಿವಾಣ ಹಾಕಬೇಕಿದೆ.

ಟಾಪ್ ನ್ಯೂಸ್

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-editorial

Editorial: ವಿದ್ಯಾರ್ಹತೆಗೆ ದೇಶವ್ಯಾಪಿ ಮಾನ್ಯತೆ, ಹೈಕೋರ್ಟ್‌ ತೀರ್ಪು ನ್ಯಾಯೋಚಿತ

13-editorial

Temperature: ಸಂಪಾದಕೀಯ-ತಾಪಮಾನ ಹೆಚ್ಚಳದ ಆತಂಕ: ಮುಂಜಾಗ್ರತೆಯೇ ಮದ್ದು

ಉಚಿತಗಳ ಆಮಿಷಗಳಿಗೆ ಕಡಿವಾಣ: ಚು.ಆಯೋಗ ಬದ್ಧತೆ ತೋರಲಿ

ಉಚಿತಗಳ ಆಮಿಷಗಳಿಗೆ ಕಡಿವಾಣ: ಚು.ಆಯೋಗ ಬದ್ಧತೆ ತೋರಲಿ

vidhana-Soudha

Editorial: ಪ್ರಾಥಮಿಕ ಶಾಲಾ ಶಿಕ್ಷಕರ ಪಠ್ಯೇತರ ಹೊರೆ ಇಳಿಸಿ

ಮಹಿಳಾ ಆರೋಪಿಗಳ ಬಂಧನ ವೇಳೆ ವಿವೇಚನೆ ಅತ್ಯವಶ್ಯ

ಮಹಿಳಾ ಆರೋಪಿಗಳ ಬಂಧನ ವೇಳೆ ವಿವೇಚನೆ ಅತ್ಯವಶ್ಯ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1sadgu

Pariksha Pe Charcha: ಸಾರ್ಟ್‌ಫೋನ್‌ಗಿಂತಲೂ ನೀವು ಸಾರ್ಟ್‌ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.