GST; ಜೀವವಿಮೆ, ಆರೋಗ್ಯ ವಿಮೆಯ ಜಿಎಸ್‌ಟಿ ಭಾರ ಇಳಿಯಲಿ


Team Udayavani, Aug 2, 2024, 1:28 AM IST

GST

ಆರೋಗ್ಯ ಮತ್ತು ಜೀವವಿಮೆಗಳ ಮೇಲೆ ವಿಧಿಸಲಾಗುತ್ತಿರುವ ಶೇ. 18 ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ)ಯನ್ನು ತೆಗೆದುಹಾಕುವಂತೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಅವರು ಮನವಿ ಮಾಡಿ ಕೊಳ್ಳುವ ಮೂಲಕ ಜನಪರ ವಿಷಯವೊಂದನ್ನು ಮುನ್ನೆಲೆಗೆ ತಂದಿದ್ದಾರೆ. ಸಚಿವ ಗಡ್ಕರಿಯವರ ಮನವಿಯು ಆಗ್ರಹವಾಗುವುದಕ್ಕೆ ಯೋಗ್ಯವಾದುದು ಹಾಗೂ ಅದನ್ನು ಮನ್ನಿಸಿ ವಿತ್ತ ಸಚಿವೆ ಮತ್ತು ಸಂಬಂಧಪಟ್ಟವರು ಜೀವವಿಮೆ ಮತ್ತು ಆರೋಗ್ಯ ವಿಮೆ ಮೇಲಿನ ಜಿಎಸ್‌ಟಿಯನ್ನು ರದ್ದು ಪಡಿಸುವುದು ಅಥವಾ ಸಂಪೂರ್ಣ ರದ್ದತಿಗೆ ಮುಂಚಿನ ಕ್ರಮವಾಗಿ ಅವನ್ನು ಕನಿಷ್ಠ ಜಿಎಸ್‌ಟಿ ಸ್ಲಾéಬ್‌ಗ ವರ್ಗಾಯಿಸುವುದು ಅಗತ್ಯ.

ತಮ್ಮ ಸ್ವಕ್ಷೇತ್ರ ನಾಗಪುರದ ಪ್ರಾದೇಶಿಕ ಜೀವವಿಮಾ ನಿಗಮದ ಉದ್ಯೋಗಿಗಳ ಒಕ್ಕೂಟದ ಪರವಾಗಿ ಸಚಿವ ನಿತಿನ್‌ ಗಡ್ಕರಿ ಅವರು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಗೆ ಪತ್ರ ಬರೆದು ಈ ಮನವಿಯನ್ನು ಮಾಡಿಕೊಂಡಿದ್ದಾರೆ. ಅದರಲ್ಲೂ ಜೀವವಿಮೆಯ ಕಂತಿನ ಮೇಲೆ ತೆರಿಗೆ ವಿಧಿಸುವುದು ಎಂದರೆ ಅದು “ಜೀವನದ ಅನಿಶ್ಚಿತತೆಯ ಮೇಲೆ ತೆರಿಗೆ ವಿಧಿಸಿದಂತೆ’ ಎಂದು ಗಮನ ಸೆಳೆದಿದ್ದಾರೆ.

“ಜೀವವಿಮೆ ಮಾಡಿಸಿಕೊಳ್ಳುವ ವ್ಯಕ್ತಿಯು ತನ್ನ ಜೀವನದ ಅನಿಶ್ಚಿತತೆಗಳ ವಿರುದ್ಧ ಕುಟುಂಬಕ್ಕೆ ರಕ್ಷೆಯಾಗಿ ಜೀವವಿಮೆ ಮಾಡಿಸಿಕೊಳ್ಳುತ್ತಾರೆ. ಇದರ ಪ್ರೀಮಿಯಂ ಮೇಲೆ ತೆರಿಗೆ ಹಾಕುವುದು ಸರಿಯಾದ ಕ್ರಮವಲ್ಲ. ಹಾಗೆಯೇ ಆರೋಗ್ಯ ವಿಮೆ ಒಂದು ಸಾಮಾಜಿಕ ಅಗತ್ಯವಾಗಿದ್ದು, ಅದರ ಪ್ರೀಮಿಯಂ ಮೇಲೆ ಶೇ. 18 ಜಿಎಸ್‌ಟಿ ವಿಧಿಸುವುದು ಈ ಸೇವಾ ಉದ್ಯಮದ ಬೆಳವಣಿಗೆಯ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ’ ಎಂದು ನಿತಿನ್‌ ಗಡ್ಕರಿಯವರು ವಿತ್ತ ಸಚಿವೆಯ ಗಮನ ಸೆಳೆದಿದ್ದಾರೆ.

ಸದ್ಯದ ಮಟ್ಟಿಗೆ ಸಾಮಾಜಿಕ ಭದ್ರತೆ ಮತ್ತು ಸರಕಾರಿ ಆರೋಗ್ಯ ಮೂಲಸೌಕರ್ಯವು ಎಲ್ಲರನ್ನೂ ಒಳಗೊಂಡಿಲ್ಲದ ಭಾರತದಂತಹ ದೇಶದಲ್ಲಿ ಆರೋಗ್ಯ ಮತ್ತು ಜೀವವಿಮೆಗಳ ಮೇಲೆ ಶೇ. 18ರಷ್ಟು ಜಿಎಸ್‌ಟಿ ವಿಧಿಸುವುದು ಈ ಎರಡು ಆವಶ್ಯಕ ವಿಷಯಗಳನ್ನು ಎಲ್ಲರ ಕೈಗೆಟಕುವಂತೆ ಮಾಡುವ ಅಥವಾ ಎಲ್ಲ ನಾಗರಿಕರನ್ನು ಸಾಮಾಜಿಕ ಭದ್ರತೆ ಮತ್ತು ಸರಕಾರಿ ಆರೋಗ್ಯ ಸೇವೆ, ಆರೋಗ್ಯ ವಿಮೆಯಡಿ ತರುವ ಸದುದ್ದೇಶಕ್ಕೆ ಭಂಗ ಉಂಟು ಮಾಡುವಂಥದ್ದಾಗಿದೆ ಎಂದರೆ ತಪ್ಪಲ್ಲ. ಸರಕು ಮತ್ತು ಸೇವಾ ತೆರಿಗೆಯು 2017ರ ಜುಲೈ 1ರಿಂದ ಜಾರಿಗೆ ಬಂದಿದೆ. ಇದಾಗಿ ಹಲವು ವರ್ಷಗಳು ಸಂದಿವೆಯಾದರೂ ಜಿಎಸ್‌ಟಿ ದರಗಳನ್ನು ಪರಿಷ್ಕರಿಸುವ ವಿಷಯದಲ್ಲಿ ದೊಡ್ಡ ಮಟ್ಟಿಗಿನ ಮುನ್ನಡೆ ಆಗಿಲ್ಲ. ಹಾಗೆ ನೋಡಿದರೆ ನಿತಿನ್‌ ಗಡ್ಕರಿಯವರು ಮಾತ್ರವೇ ಅಲ್ಲ; ಜಯಂತ್‌ ಸಿನ್ಹಾ ನೇತೃತ್ವದ ವಿತ್ತೀಯ ಸ್ಥಾಯಿ ಸಮಿತಿಯು ಕೂಡ ಇನ್ಶೂರೆನ್ಸ್‌ ಉತ್ಪನ್ನಗಳು ಅದರಲ್ಲೂ ವಿಶೇಷವಾಗಿ ಅವಧಿ ಮತ್ತು ಆರೋಗ್ಯ ವಿಮಾ ಪ್ರೀಮಿಯಂಗಳ ಮೇಲಿನ ಜಿಎಸ್‌ಟಿಯನ್ನು ಕಡಿಮೆ ಮಾಡಬೇಕು ಎಂಬುದಾಗಿ ಶಿಫಾರಸು ಮಾಡಿದೆ. ಈ ಅಂಶಗಳನ್ನು ಸರಕಾರ ಪರಿಗಣಿಸಬೇಕು.

ಆರೋಗ್ಯ ವಿಮೆ ಮತ್ತು ಜೀವವಿಮೆ ದೇಶದ ನಾಗರಿಕರ ಹಿತರಕ್ಷಣೆಗಾಗಿ ಹೆಚ್ಚು ವ್ಯಾಪಕವಾಗಿ ಬಳಕೆಗೆ ಬರಬೇಕಾದಂಥವು. ಅವುಗಳಿಗೂ ಜಿಎಸ್‌ಟಿ ವಿಧಿಸಿದರೆ ಅದು ಸಹಜವಾಗಿ ಪ್ರೀಮಿಯಂ ಮೊತ್ತವನ್ನು ಹೆಚ್ಚಿಸಿ ಬಳಕೆದಾರನ ಕೈಗೆಟುಕದಂತಾಗುತ್ತವೆ, ವಿಮೆ ಮಾಡಿಸಿಕೊಳ್ಳುವವರು ಹಿಂಜರಿಯುವಂ­ತಾಗುತ್ತದೆ ಎಂಬುದು ನಿತಿನ್‌ ಗಡ್ಕರಿಯವರ ಮನವಿಯ ತಾತ್ಪರ್ಯ.

ವಿತ್ತ ಸಚಿವೆ ಈ ಮನವಿಯನ್ನು ಮನ್ನಿಸಿದರೆ ಎಲ್ಲರೂ ಫ‌ಲಾನುಭವ ಪಡೆಯಬೇಕಾಗಿರುವಂತಹ ಈ ಎರಡು ವಿಮೆಗಳ ಭಾರ ಕೊಂಚ ಕಡಿಮೆ ಯಾಗಬಹುದು. ಹಾಗಾಗಲಿ ಎನ್ನುವುದು ಸದಾಶಯ.

ಟಾಪ್ ನ್ಯೂಸ್

1-asaaasa

Hindutva ಮತ್ತು ಹಿಂದೂಗಳಿಗೆ ಒಳ್ಳೆಯದಾಗಲಿ: ದೇವರ ಹುಂಡಿಗೆ ಪತ್ರ!

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Vinay Kulakarni

BJP ದ್ವೇಷದ ರಾಜಕಾರಣಕ್ಕೆ ನಾನೇ ದೊಡ್ಡ ಸಾಕ್ಷಿ‌: ಶಾಸಕ ವಿನಯ ಕುಲಕರ್ಣಿ ಆಕ್ರೋಶ

Yakshagana: ಶತಾವಧಾನಿ ಗಣೇಶ್ ರಿಗೆ ಉತ್ತರ ಕನ್ನಡ ಜಿಲ್ಲಾ ಯಕ್ಷಶ್ರೀ ಪ್ರಶಸ್ತಿ ಘೋಷಣೆ

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

kejriwal-2

AAP ಬೇಡಿಕೆ: ನಿರ್ಗಮಿತ ಸಿಎಂ ಕೇಜ್ರಿವಾಲ್ ಅವರಿಗೆ ಸರಕಾರಿ ವಸತಿ ಕಲ್ಪಿಸಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Assembly Election: ಜಮ್ಮು-ಕಾಶ್ಮೀರದಲ್ಲಿ ಪ್ರಜಾಪ್ರಭುತ್ವದ ಹಬ್ಬ

Assembly Election: ಜಮ್ಮು-ಕಾಶ್ಮೀರದಲ್ಲಿ ಪ್ರಜಾಪ್ರಭುತ್ವದ ಹಬ್ಬ

Namma-clinic

Karnataka; ಬಸ್‌ ನಿಲ್ದಾಣಗಳಲ್ಲಿ ನಮ್ಮ ಕ್ಲಿನಿಕ್‌ ಸಮುಚಿತ ನಿರ್ಧಾರ

ರೈತರ ಹಿತರಕ್ಷಣೆ ನೆಪದಲ್ಲಿ ಗ್ರಾಹಕರಿಗೆ ಬರೆ ಸಲ್ಲದು

ರೈತರ ಹಿತರಕ್ಷಣೆ ನೆಪದಲ್ಲಿ ಗ್ರಾಹಕರಿಗೆ ಬರೆ ಸಲ್ಲದು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-asaaasa

Hindutva ಮತ್ತು ಹಿಂದೂಗಳಿಗೆ ಒಳ್ಳೆಯದಾಗಲಿ: ದೇವರ ಹುಂಡಿಗೆ ಪತ್ರ!

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Vinay Kulakarni

BJP ದ್ವೇಷದ ರಾಜಕಾರಣಕ್ಕೆ ನಾನೇ ದೊಡ್ಡ ಸಾಕ್ಷಿ‌: ಶಾಸಕ ವಿನಯ ಕುಲಕರ್ಣಿ ಆಕ್ರೋಶ

Yakshagana: ಶತಾವಧಾನಿ ಗಣೇಶ್ ರಿಗೆ ಉತ್ತರ ಕನ್ನಡ ಜಿಲ್ಲಾ ಯಕ್ಷಶ್ರೀ ಪ್ರಶಸ್ತಿ ಘೋಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.