ಜಿಎಸ್‌ಟಿ ದಾಖಲೆ ಸಂಗ್ರಹ: ಆರ್ಥಿಕತೆ ಹಳಿಗೆ ಬಂದ ಮುನ್ಸೂಚನೆ


Team Udayavani, Nov 3, 2022, 6:00 AM IST

ಜಿಎಸ್‌ಟಿ ದಾಖಲೆ ಸಂಗ್ರಹ: ಆರ್ಥಿಕತೆ ಹಳಿಗೆ ಬಂದ ಮುನ್ಸೂಚನೆ

ಕೊರೊನೋತ್ತರದಲ್ಲಿ ಭಾರತದ ಆರ್ಥಿಕತೆ ಚೇತರಿಕೆ ಹಾದಿಯಲ್ಲಿದ್ದು, ಇದಕ್ಕೆ ಉದಾಹರಣೆ ಎಂಬಂತೆ ದೇಶದಲ್ಲಿ ಸರಕು ಮತ್ತು ಸಾಗಣೆ ತೆರಿಗೆ ತಿಂಗಳಿಂದ ತಿಂಗಳಿಗೆ ಹೆಚ್ಚಾಗುತ್ತಲೇ ಹೋಗುತ್ತಿದೆ. ಅದರಲ್ಲೂ 2020ರ ಎಪ್ರಿಲ್‌ನಿಂದ ಜಿಎಸ್‌ಟಿ ಸಂಗ್ರಹ ಪ್ರಮಾಣ ತೀರಾ ಕಡಿಮೆ ಎಂದು ಹೇಳುವಷ್ಟರ ಮಟ್ಟಿಗೆ ಕುಸಿತ ಕಂಡಿತ್ತು. ಅಷ್ಟೇ ಅಲ್ಲ ಈ ಪ್ರಮಾಣ ಮುಂದಿನ ಆರೇಳು ತಿಂಗಳುಗಳ ಕಾಲ ಹೀಗೆಯೇ ಮುಂದುವರಿದಿತ್ತು. ಮತ್ತೆ 2021ರ ಮಧ್ಯಭಾಗದಲ್ಲಿ ಚೇತರಿಕೆ ಶುರುವಾಗಿ ಅನಂತರದಲ್ಲಿ ಹೆಚ್ಚಾಗುತ್ತಲೇ ಇದೆ.

ಅದರಲ್ಲೂ ಅಕ್ಟೋಬರ್‌ ತಿಂಗಳಲ್ಲಿ ದಾಖಲೆಯ ಪ್ರಮಾಣದಲ್ಲಿ ಜಿಎಸ್‌ಟಿ ಸಂಗ್ರಹವಾಗಿದೆ.ಅಂದರೆ ಜಿಎಸ್‌ಟಿ ಜಮಾನ ಆರಂಭವಾದಾಗಿನಿಂದ ಇದೇ ಎರಡನೇ ಬಾರಿಗೆ 1.51 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹವಾಗಿದೆ. ಇದೇ ವರ್ಷದ 2022ರ ಎಪ್ರಿಲ್‌ನಲ್ಲಿ 1.67 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹವಾಗಿತ್ತು. ಇದೇ ಇದುವರೆಗಿನ ದಾಖಲೆಯಾಗಿದೆ. ಅಲ್ಲದೆ, ಇದೇ ಮಾದರಿಯಲ್ಲಿ ಜಿಎಸ್‌ಟಿ ಸಂಗ್ರಹ ಏರುತ್ತಾ ಹೋದರೆ ಮುಂದಿನ ದಿನಗಳಲ್ಲಿ ಈ ದಾಖಲೆಯನ್ನು ಮುರಿಯುವ ಸಾಧ್ಯತೆಗಳೂ ಇವೆ.

ಹಣಕಾಸು ಇಲಾಖೆಯ ಪ್ರಕಾರ, ಆಂತರಿಕ ವಹಿವಾಟು, ರಫ್ತಿನಿಂದ ಬಂದ ಆದಾಯವೇ ಅಕ್ಟೋಬರ್‌ನಲ್ಲಿ ಶೇ.18ರಷ್ಟು ಹೆಚ್ಚಳವಾಗಿದೆ. ಅಲ್ಲದೆ, ತೆರಿಗೆ ಸಂಗ್ರಹದಲ್ಲಿ ದೊಡ್ಡ ರಾಜ್ಯಗಳೇ ಉತ್ತಮ ಸಾಧನೆ ಮಾಡಿವೆ. ಮಹಾರಾಷ್ಟ್ರದಲ್ಲಿ ಅತ್ಯಂತ ಹೆಚ್ಚು ಜಿಎಸ್‌ಟಿ ಸಂಗ್ರಹವಾಗಿದ್ದರೆ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಇಲ್ಲಿ ಸುಮಾರು 11 ಸಾವಿರ ಕೋಟಿ ರೂ.ನಷ್ಟು ತೆರಿಗೆ ಸಂಗ್ರಹವಾಗಿದೆ.

ಅಲ್ಲದೆ ಏರಿಕೆ ಪ್ರಮಾಣವನ್ನು ಲೆಕ್ಕಕ್ಕೆ ತೆಗೆದುಕೊಂಡರೆ ಹರಿಯಾಣದಲ್ಲಿ ಶೇ.37ರಷ್ಟು ಏರಿಕೆ ಕಂಡು ಬಂದಿದ್ದರೆ ಕರ್ನಾಟಕದಲ್ಲಿ ಶೇ.33, ಕೇರಳದಲ್ಲಿ ಶೇ.29, ಪಶ್ಚಿಮ ಬಂಗಾಲದಲ್ಲಿ ಶೇ.26, ತಮಿಳುನಾಡಿನಲ್ಲಿ ಶೇ.25ರಷ್ಟು ಆದಾಯ ಏರಿಕೆಯಾಗಿದೆ. ಆದರೆ ಗುಜರಾತ್‌, ತೆಲಂಗಾಣ, ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ತೆರಿಗೆ ಪ್ರಮಾಣದಲ್ಲಿ ಇಳಿಕೆಯಾಗಿದೆ. ಇನ್ನು ಆರ್ಥಿಕ ವಿಶ್ಲೇಷಕರು ಈ ಬಗ್ಗೆ ಬೇರೆಯದೇ ರೀತಿಯಲ್ಲಿ ವಿಶ್ಲೇಷಿ ಸುತ್ತಾರೆ. ಹಣದುಬ್ಬರದಿಂದಾಗಿ ವಸ್ತುಗಳ ಬೆಲೆ ಏರಿಕೆಯಾಗಿರುವುದು, ಹಬ್ಬಗಳ ಹಿನ್ನೆಲೆಯಲ್ಲಿ ಖರೀದಿ ಹೆಚ್ಚಳವಾದ ಕಾರಣದಿಂದಾಗಿ ಜಿಎಸ್‌ಟಿಯಲ್ಲಿ ಹೆಚ್ಚು ಸಂಗ್ರಹವಾಗಿದೆ ಎಂದು ಹೇಳುತ್ತಾರೆ.

ಆದರೂ ಏನೇ ಆಗಲಿ, ದೇಶವೊಂದರಲ್ಲಿ ತೆರಿಗೆ ಸಂಗ್ರಹ ದಾಖಲೆ ಮಟ್ಟದಲ್ಲಿ ಆಗುತ್ತಿದೆ ಎಂದರೆ ಅಲ್ಲಿನ ಆರ್ಥಿಕತೆ ಗಟ್ಟಿಯಾಗಿದೆ ಎಂದೇ ಅರ್ಥ. ಈಗಾಗಲೇ ಅಂತಾರಾಷ್ಟ್ರೀಯ ಮಟ್ಟದಲ್ಲಿ ಆರ್ಥಿಕ ಮಹಾ ಕುಸಿತದಂಥ ಹೆದರಿಕೆ ಎದುರಾಗಿರುವಾಗಲೇ ಹೆಚ್ಚೆಚ್ಚು ತೆರಿಗೆ ಸಂಗ್ರಹವಾಗುತ್ತಿರುವುದು ಆಶಾದಾಯಕ ಬೆಳವಣಿಗೆಯಾಗಿದೆ.

ಇದರ ಜತೆಗೆ ವಾಹನೋದ್ಯಮವೂ ಅಕ್ಟೋಬರ್‌ನಲ್ಲಿ ಚೇತರಿಸಿಕೊಂಡಿದ್ದು, ಪ್ರಮುಖ ಕಂಪೆನಿಗಳ ವಾಹನಗಳ ಮಾರಾಟದಲ್ಲೂ ದಾಖಲೆ ಪ್ರಮಾಣದಲ್ಲಿ ಏರಿಕೆಯಾಗಿದೆ. ಸದ್ಯಕ್ಕೆ ಹಬ್ಬಗಳ ಸಾಲು ಮುಗಿದಿದ್ದು, ಇನ್ನೇನಿದ್ದರೂ ವರ್ಷಾಂತ್ಯಕ್ಕೆ ಬರುವ ಕ್ರಿಸ್‌ಮಸ್‌ ಮತ್ತು ಹೊಸವರ್ಷವನ್ನೇ ಕಾಯಬೇಕು. ಈ ಸಂದರ್ಭದಲ್ಲಿ ಮತ್ತೆ ವಾಹನೋದ್ಯಮ ಮತ್ತು ಗ್ರಾಹಕೋಪಯೋಗಿ ವಸ್ತುಗಳ ಮಾರಾಟದಲ್ಲೂ ಏರಿಕೆಯಾಗಬಹುದು. ಇದಕ್ಕೆ ಪೂರಕವಾಗಿ ಸರಕಾರಗಳೂ ಕೆಲವೊಂದು ಪ್ರೋತ್ಸಾಹಕ ಕ್ರಮಗಳನ್ನು ತೆಗೆದುಕೊಳ್ಳಬೇಕು. ಹಣದುಬ್ಬರವನ್ನು ಕಡಿಮೆಗೊಳಿಸಿದರೆ ಜನರಲ್ಲಿನ ಖರೀದಿ ಸಾಮರ್ಥ್ಯವೂ ಹೆಚ್ಚಳವಾಗಿ ತೆರಿಗೆ ಸಂಗ್ರಹವೂ ಇನ್ನಷ್ಟು ಹೆಚ್ಚಳವಾಗಬಹುದು.

ಟಾಪ್ ನ್ಯೂಸ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-editorial

Editorial: ವಿದ್ಯಾರ್ಹತೆಗೆ ದೇಶವ್ಯಾಪಿ ಮಾನ್ಯತೆ, ಹೈಕೋರ್ಟ್‌ ತೀರ್ಪು ನ್ಯಾಯೋಚಿತ

13-editorial

Temperature: ಸಂಪಾದಕೀಯ-ತಾಪಮಾನ ಹೆಚ್ಚಳದ ಆತಂಕ: ಮುಂಜಾಗ್ರತೆಯೇ ಮದ್ದು

ಉಚಿತಗಳ ಆಮಿಷಗಳಿಗೆ ಕಡಿವಾಣ: ಚು.ಆಯೋಗ ಬದ್ಧತೆ ತೋರಲಿ

ಉಚಿತಗಳ ಆಮಿಷಗಳಿಗೆ ಕಡಿವಾಣ: ಚು.ಆಯೋಗ ಬದ್ಧತೆ ತೋರಲಿ

vidhana-Soudha

Editorial: ಪ್ರಾಥಮಿಕ ಶಾಲಾ ಶಿಕ್ಷಕರ ಪಠ್ಯೇತರ ಹೊರೆ ಇಳಿಸಿ

ಮಹಿಳಾ ಆರೋಪಿಗಳ ಬಂಧನ ವೇಳೆ ವಿವೇಚನೆ ಅತ್ಯವಶ್ಯ

ಮಹಿಳಾ ಆರೋಪಿಗಳ ಬಂಧನ ವೇಳೆ ವಿವೇಚನೆ ಅತ್ಯವಶ್ಯ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

15

Uv Fusion: ಹೇಮಂತ ಋತುವಿನಲ್ಲಿ ನೇತ್ರಾವತಿ ಶಿಖರದ ಚಾರಣ

14

Uv Fusion: ಸ್ನೇಹವೆಂಬ ತಂಗಾಳಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.