Health; ರೋಗಮುಕ್ತ ಸಮಾಜಕ್ಕಾಗಿ ಆರೋಗ್ಯಯುತ ಆಹಾರ ಕ್ರಮ


Team Udayavani, May 11, 2024, 6:30 AM IST

1—–ewqeq

ದೇಶದ ನಾಗರಿಕರು ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಪೂರಕವಾದ ಹಲವು ಮಹತ್ವದ ಸಲಹೆಗಳನ್ನು ಒಳಗೊಂಡ ಆಹಾರ ಪದ್ಧತಿಯ ಕುರಿತಾಗಿನ ಮಾರ್ಗಸೂಚಿಯೊಂದನ್ನು ಭಾರತೀಯ ವೈದ್ಯಕೀಯ ಸಂಶೋಧನ ಸಂಸ್ಥೆ (ಐಸಿಎಂಆರ್‌) ಬಿಡುಗಡೆ ಮಾಡಿದೆ. ಈ ಆಹಾರ ಮಾರ್ಗಸೂಚಿಯನ್ನು ಪಾಲಿಸಿದ್ದೇ ಆದಲ್ಲಿ ಸದ್ಯ ದೇಶದ ಜನರು ಎದುರಿಸುತ್ತಿರುವ ಗಂಭೀರ ಕಾಯಿಲೆಗಳ ಸಹಿತ ಹಲವಾರು ಆರೋಗ್ಯ ಸಂಬಂಧಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಾಧ್ಯ.

ದೇಶದ ಜನರ ಆರೋಗ್ಯ ರಕ್ಷಣೆ, ಬದಲಾದ ಜೀವನಶೈಲಿ, ಹವಾಮಾನ ಬದಲಾವಣೆಯಿಂದಾಗಿ ಜನರ ಆರೋಗ್ಯದ ಮೇಲೆ ಬೀರುತ್ತಿರುವ ಪರಿಣಾಮ, ಯುವಜನತೆಯಲ್ಲಿ ದೇಹದಾರ್ಡ್ಯದ ಬಗೆಗೆ ಹೆಚ್ಚುತ್ತಿರುವ ಕಾಳಜಿ, ಜಂಕ್‌ ಫ‌ುಡ್‌ ಮೇಲಣ ಅತಿಯಾದ ವ್ಯಾಮೋಹ ಮತ್ತಿತರ ಎಲ್ಲ ವಿಷಯಗಳನ್ನು ಗಮನದಲ್ಲಿರಿಸಿ ಐಸಿಎಂಆರ್‌ ಈ ಆಹಾರ ಕ್ರಮದ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಇದೇ ವೇಳೆ ಕಳೆದೊಂದು ದಶಕದಿಂದ ದೇಶದಲ್ಲಿ ಹಲವಾರು ಹಳೆಯ ಕಾಯಿಲೆಗಳು ಮರುಕಳಿಸಿರುವುದು, ಹೊಸ ಸಾಂಕ್ರಾಮಿಕ ಕಾಯಿಲೆಗಳು ಜನರನ್ನು ಬಾಧಿಸತೊಡಗಿರುವುದು ಮತ್ತು ಹದಿಹರೆಯದಲ್ಲೇ ಮಧುಮೇಹ, ಹೃದಯ ಮತ್ತು ಶ್ವಾಸಕೋಶ ಸಂಬಂಧಿ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಈ ಆಹಾರ ಮಾರ್ಗಸೂಚಿ ಹೆಚ್ಚಿನ ಪ್ರಾಮುಖ್ಯವನ್ನು ಪಡೆದುಕೊಂಡಿದೆ. ಆಹಾರ ಕ್ರಮದ ಮಾರ್ಗಸೂಚಿಯಲ್ಲಿ ಆರೋಗ್ಯಕ್ಕೆ ಹಾನಿ ಉಂಟುಮಾಡುವ ಆಹಾರಗಳು ಮತ್ತು ಅವುಗಳ ಸೇವನೆಯಿಂದ ಮಾನವ ದೇಹದ ಅಂಗಾಂಗಗಳಿಗೆ ಎದುರಾಗಬಹುದಾದ ಅಪಾಯಗಳ ಬಗೆಗೂ ಜನರಿಗೆ ತಿಳಿವಳಿಕೆ ಮೂಡಿಸುವ ಪ್ರಯತ್ನ ಮಾಡಲಾಗಿದೆ. ಆಹಾರ ಸೇವನೆಯ ಪ್ರಮಾಣ, ಯಾವೆಲ್ಲ ಆಹಾರಗಳನ್ನು ವರ್ಜಿಸಬೇಕು ಎಂಬ ಪಟ್ಟಿಯನ್ನೂ ಈ ಮಾರ್ಗಸೂಚಿ ಒಳಗೊಂಡಿದೆ. ಉಪ್ಪು ಮತ್ತು ಸಕ್ಕರೆಯನ್ನು ಅತ್ಯಂತ ಕಡಿಮೆ ಪ್ರಮಾಣದಲ್ಲಿ ಸೇವನೆ, ಸಂಸ್ಕರಿತ ಆಹಾರ ಸೇವನೆಗೆ ಕಡಿವಾಣ, ಹೆಚ್ಚಿನ ಪ್ರಮಾಣದಲ್ಲಿ ಪ್ರೊಟೀನ್‌ ಇರುವ ಆಹಾರ ವಸ್ತುಗಳ ಸೇವನೆಯಿಂದ ದೂರವುಳಿಯಬೇಕು, ಸಮತೋಲಿತ ಆಹಾರ ಸೇವನೆ ಆರೋಗ್ಯದ ದೃಷ್ಟಿಯಿಂದ ಹೆಚ್ಚು ಸೂಕ್ತ ಎಂದು ಮಾರ್ಗಸೂಚಿಯಲ್ಲಿ ಜನರಿಗೆ ಕಿವಿಮಾತು ಹೇಳಲಾಗಿದೆ.

ದೇಶದ ಜನರನ್ನು ಕಾಡುತ್ತಿರುವ ಶೇ. 56.4ರಷ್ಟು ಕಾಯಿಲೆಗಳಿಗೆ ಅನಾರೋಗ್ಯಕರ ಆಹಾರ ಸೇವನೆಯೇ ಕಾರಣ ಎಂದು ಬೆಟ್ಟು ಮಾಡಿರುವ ಐಸಿಎಂಆರ್‌, ಜಂಕ್‌ಫ‌ುಡ್‌, ಸಂಸ್ಕರಿತ ಆಹಾರಗಳು, ಕರಿದ ತಿಂಡಿತಿನಿಸುಗಳು, ಬೇಕರಿ ಉತ್ಪನ್ನಗಳ ಸೇವನೆಗೆ ನಿಯಂತ್ರಣ ಹೇರುವಂತೆ ಸಲಹೆ ನೀಡಿದೆ. ದೇಹದಾರ್ಡ್ಯಕ್ಕಾಗಿ ಹೆಚ್ಚುವರಿ ಪೌಷ್ಟಿಕಾಂಶಗಳನ್ನು ಸ್ವೀಕರಿಸುವುದು ಸರಿಯಲ್ಲ. ಇಂತಹ ಅಧಿಕ ಪ್ರೊಟೀನ್‌ಯುಕ್ತ ಆಹಾರ ಸೇವನೆಯಿಂದ ಕಿಡ್ನಿಗೆ ಹಾನಿ, ಮೂಳೆ ಖನಿಜ ನಷ್ಟ ಸಹಿತ ಹಲವು ಆರೋಗ್ಯ ಸಮಸ್ಯೆಗಳನ್ನು ಎದುರಿಸಬೇಕಾದೀತು ಎಂದು ಎಚ್ಚರಿಕೆ ನೀಡಲಾಗಿದೆ. ದೇಶದಲ್ಲಿ ಕಳೆದ ಕೆಲವು ದಶಕಗಳಿಂದೀಚೆಗೆ ರಕ್ತದೊತ್ತಡ, ಮಧುಮೇಹ ಸಾಮಾನ್ಯವಾಗಿದ್ದು ಎಲ್ಲ ಹರೆಯದವರನ್ನೂ ಬಾಧಿಸುತ್ತಿದೆ. ಈ ಸಮಸ್ಯೆಗೆ ನಮ್ಮ ಆಹಾರಕ್ರಮವೇ ಮೂಲಕಾರಣ ಎಂದು ವೈದ್ಯಕೀಯ ಲೋಕ ಪದೇಪದೆ ಎಚ್ಚರಿಸುತ್ತಲೇ ಬಂದಿದ್ದರೂ ಜನರು ಇತ್ತ ಹೆಚ್ಚಿನ ಗಮನಹರಿಸುತ್ತಿಲ್ಲ. ಇದೇ ವೇಳೆ ಆಹಾರ ಉತ್ಪಾದನೆ, ಸಂಸ್ಕರಣೆಯ ಸಂದರ್ಭದಲ್ಲಿ ವಿಪರೀತ ಪ್ರಮಾಣದಲ್ಲಿ ರಾಸಾಯನಿಕಗಳನ್ನು ಬಳಕೆ ಮಾಡಲಾಗುತ್ತಿದ್ದು ಇವು ಕೂಡ ಮಾನವನ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ಹೀಗಾಗಿ ವರ್ಷಗಳುರುಳಿದಂತೆ ದೇಶದ ಜನರನ್ನು ಹೊಸ ಹೊಸ ಕಾಯಿಲೆಗಳು ಬಾಧಿಸಲಾರಂಭಿಸಿವೆ. ಆರೋಗ್ಯ ಸಮಸ್ಯೆ ಕಾಣಿಸಿಕೊಂಡ ಬಳಿಕ ಎಚ್ಚೆತ್ತುಕೊಳ್ಳುವ ಬದಲಾಗಿ ಪ್ರತಿಯೋರ್ವರು ತಮ್ಮ ದೈನಂದಿನ ಆಹಾರ ಕ್ರಮದಲ್ಲಿ ಬದಲಾವಣೆ ಮಾಡಿಕೊಂಡಲ್ಲಿ ಆರೋಗ್ಯವಂತರಾಗಿ ತಮ್ಮ ಭವಿಷ್ಯದ ಜೀವನವನ್ನು ಸಾಗಿಸಲು ಸಾಧ್ಯ. ಈ ಹಿನ್ನೆಲೆಯಲ್ಲಿ ಐಸಿಎಂಆರ್‌ ಬಿಡುಗಡೆ ಮಾಡಿರುವ ಆಹಾರ ಮಾರ್ಗಸೂಚಿಯನ್ನು ಪಾಲಿಸಿದ್ದೇ ಆದಲ್ಲಿ ರೋಗಮುಕ್ತ ಸಮಾಜದ ಕನಸು ಸಾಕಾರಗೊಳ್ಳಲು ಸಾಧ್ಯ.

ಟಾಪ್ ನ್ಯೂಸ್

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-editorial

Editorial: ವಿದ್ಯಾರ್ಹತೆಗೆ ದೇಶವ್ಯಾಪಿ ಮಾನ್ಯತೆ, ಹೈಕೋರ್ಟ್‌ ತೀರ್ಪು ನ್ಯಾಯೋಚಿತ

13-editorial

Temperature: ಸಂಪಾದಕೀಯ-ತಾಪಮಾನ ಹೆಚ್ಚಳದ ಆತಂಕ: ಮುಂಜಾಗ್ರತೆಯೇ ಮದ್ದು

ಉಚಿತಗಳ ಆಮಿಷಗಳಿಗೆ ಕಡಿವಾಣ: ಚು.ಆಯೋಗ ಬದ್ಧತೆ ತೋರಲಿ

ಉಚಿತಗಳ ಆಮಿಷಗಳಿಗೆ ಕಡಿವಾಣ: ಚು.ಆಯೋಗ ಬದ್ಧತೆ ತೋರಲಿ

vidhana-Soudha

Editorial: ಪ್ರಾಥಮಿಕ ಶಾಲಾ ಶಿಕ್ಷಕರ ಪಠ್ಯೇತರ ಹೊರೆ ಇಳಿಸಿ

ಮಹಿಳಾ ಆರೋಪಿಗಳ ಬಂಧನ ವೇಳೆ ವಿವೇಚನೆ ಅತ್ಯವಶ್ಯ

ಮಹಿಳಾ ಆರೋಪಿಗಳ ಬಂಧನ ವೇಳೆ ವಿವೇಚನೆ ಅತ್ಯವಶ್ಯ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.