ಸರಕಾರಿ ಶಾಲಾ ಮಕ್ಕಳ ಬಗೆಗೆ ಯಾಕಿಷ್ಟು ನಿರ್ಲಕ್ಷ್ಯ?


Team Udayavani, Feb 3, 2023, 6:00 AM IST

ಸರಕಾರಿ ಶಾಲಾ ಮಕ್ಕಳ ಬಗೆಗೆ ಯಾಕಿಷ್ಟು ನಿರ್ಲಕ್ಷ್ಯ?

ಬದಲಾಗುತ್ತಿರುವ ಕಾಲಘಟ್ಟಕ್ಕೆ ತಕ್ಕಂತೆ ಸರಕಾರಿ ಶಾಲೆಗಳೂ ಮಾರ್ಪಾಡು ಹೊಂದಿ ಹತ್ತು ಹಲವು ಕೊರತೆಗಳ ಹೊರತಾಗಿಯೂ ಮಕ್ಕಳಿಗೆ ಉತ್ತಮ ಗುಣ ಮಟ್ಟದ ಶಿಕ್ಷಣ ಒದ ಗಿಸುತ್ತಿವೆ. ಸರಕಾರ ಕೂಡ ಈ ಶಾಲೆಗಳನ್ನು ನಮ್ಮ ಶಿಕ್ಷಣ ವ್ಯವಸ್ಥೆಯ ಆಧಾರಸ್ತಂಭಗಳು ಎಂಬುದನ್ನು ಮನಗಂಡು ಹಲವಾರು ವಿನೂತನ ಉಪಕ್ರಮ, ಯೋಜ ನೆಗಳ ಮೂಲಕ ಈ ಶಾಲೆಗಳ ಉನ್ನತೀಕರಣಕ್ಕೆ ನಿರಂತರವಾಗಿ ಪ್ರಯತ್ನಿಸು ತ್ತಲೇ ಬಂದಿದೆ. ಆದ ರೂ ರಾಜ್ಯದಲ್ಲಿರುವ ಸರಕಾರಿ ಶಾಲೆಗಳ ಒಟ್ಟಾರೆ ಪರಿಸ್ಥಿತಿಯನ್ನು ಅವಲೋಕಿಸಿದಾಗ ಕೊರತೆಗಳ ಪಟ್ಟಿ ದೊಡ್ಡದಾಗಿ ಕಾಣುತ್ತದೆ. ಇದಕ್ಕೆ ಬಲುಮುಖ್ಯ ಕಾರಣವೆಂದರೆ ಸರಕಾರಿ ಶಾಲೆಗಳ ಬಗೆಗಿನ ಸರಕಾರ, ಅಧಿಕಾರಿ ವರ್ಗದ ಅಸಡ್ಡೆ ಮತ್ತು ನಿರ್ಲ ಕ್ಷ್ಯದ ಧೋರಣೆ.

ಸರಕಾರಿ ಶಾಲಾ ಮಕ್ಕಳಿಗೆ 2 ಜತೆ ಸಮವಸ್ತ್ರ, ಒಂದು ಜತೆ ಶೂ ಮತ್ತು 2 ಜತೆ ಸಾಕ್ಸ್‌ ವಿತರಣೆಗೆ ಸಂಬಂಧಿಸಿದಂತೆ ಹೈಕೋರ್ಟ್‌ ರಾಜ್ಯ ಸರಕಾರವನ್ನು ತರಾಟೆಗೆ ತೆಗೆದುಕೊಂಡ ಪರಿಯನ್ನು ನೋಡಿದಾಗ ಕೇವಲ ಸರಕಾರ ಮಾತ್ರವಲ್ಲ ಸಂಬಂಧ ಪಟ್ಟ ಅಧಿಕಾರಿಗಳು ತಮ್ಮ ಮುಖಕ್ಕೆ ತಾವೇ ಹೊಡೆದುಕೊಂಡಂತಾಗಿದೆ. 2019ರಲ್ಲಿ ಹೈಕೋರ್ಟ್‌ ಈ ವಿಚಾರವಾಗಿ ನೀಡಿದ ಆದೇಶವನ್ನು ಸಮರ್ಪಕವಾಗಿ ಪಾಲನೆ ಮಾಡದಿರುವ ಹಿನ್ನೆಲೆಯಲ್ಲಿ ಸಲ್ಲಿಸಲಾಗಿರುವ ಅರ್ಜಿಯ ವಿಚಾರಣೆ ಸಂದರ್ಭ ದಲ್ಲಿ ವಿಭಾಗೀಯ ನ್ಯಾಯಪೀಠ ಸರಕಾರದ ಒಟ್ಟಾರೆ ಧೋರಣೆ, ಮನಃಸ್ಥಿತಿ ಯನ್ನು ಕಟು ಮಾತುಗಳಲ್ಲಿ ಟೀಕಿಸಿತು. ಈ ವಾಗ್ಧಾಳಿ ಒಟ್ಟಾರೆಯಾಗಿ ಇಡೀ ಆಡಳಿತ ವ್ಯವಸ್ಥೆಯ ಜಿಡ್ಡುಗಟ್ಟಿದ  ಕಾರ್ಯ ವೈಖರಿಗೆ ಹಿಡಿದ ಕೈಗನ್ನಡಿ ಯುವಂತಿತ್ತು. ಶಿಕ್ಷಣ, ಸರಕಾರಿ ಶಾಲೆಗಳು ಎಂದಾಕ್ಷಣ ಉದ್ಧಾರ, ಆಮೂಲಾಗ್ರ ಬದಲಾವಣೆ, ಖಾಸಗಿ ಶಾಲೆಗಳ ಮಾದರಿಯಲ್ಲಿ ಅಭಿವೃದ್ಧಿ, ಸರಕಾರಿ ಶಾಲೆಗಳ ಮಕ್ಕಳಿಗಾಗಿ ಹತ್ತು ಹಲವು ಸೌಲಭ್ಯಗಳು, ಶಿಕ್ಷಕರ ಸಹಿತ ಅಗತ್ಯ ಸಿಬಂದಿಯ ನೇಮಕ… ಹೀಗೆ ಪುಂಖಾನುಪುಂಖವಾಗಿ ಮಾತನಾಡುವವರು ಹೈಕೋರ್ಟ್‌ ನೀಡಿದ ಎಚ್ಚರಿಕೆಯ ಮತ್ತು ಅತ್ಯಂತ ತೀಕ್ಷ್ಣ ಮಾತುಗಳಿಗೆ ಈಗ ಕಿವಿಗೊಡಲೇ ಬೇಕಿದೆ.

ಯಾವೊಂದೂ ಮಗುವೂ ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಉದ್ದೇಶ ದಿಂದ ಸರಕಾರಿ ಶಾಲಾ ಮಕ್ಕಳಿಗೆ ಉಚಿತ ಪಠ್ಯಪುಸ್ತಕ, ಸಮವಸ್ತ್ರ, ಮಧ್ಯಾಹ್ನದ ಬಿಸಿ ಯೂಟ, ಶೂ, ಸಾಕ್ಸ್‌ ವಿತರಣೆಯಂತಹ ಯೋಜನೆಗಳನ್ನು ಸರಕಾರ ಹಂತ ಹಂತಗಳಲ್ಲಿ ಜಾರಿಗೆ ತಂದು ಬಡ ಮಕ್ಕಳನ್ನು ಶಾಲೆಗಳತ್ತ ಆಕರ್ಷಿಸುವಲ್ಲಿ ಮತ್ತು ತನ್ನ ನೈಜ ಉದ್ದೇಶವನ್ನು ಈಡೇರಿಸುವಲ್ಲಿ ಭಾಗಶಃ ಸಫ‌ಲವಾಯಿತು. ಆದರೆ ಸರಕಾರ ಜಾರಿಗೊಳಿಸಿದ ಬಹುತೇಕ ಯೋಜನೆಗಳು ಆರಂಭಶೂರತನಕ್ಕೆ ಸೀಮಿತ ವಾಯಿತೇ ಹೊರತು ಅವುಗಳ ಸಮರ್ಪಕ ಅನುಷ್ಠಾನದಲ್ಲಿ ನಿರಂತರತೆಯನ್ನು ಕಾಯ್ದುಕೊಳ್ಳಲು ಸರಕಾರಕ್ಕೆ ಸಾಧ್ಯವಾಗದೇ ಇರುವುದು ಬಲುದೊಡ್ಡ ದುರಂತ. ಪ್ರತೀ ವರ್ಷವೂ ಇವೆಲ್ಲವೂ ಒಂದಿಷ್ಟು ವಿವಾದಕ್ಕೀಡಾಗುವುದು ಮಾಮೂಲು. ಗ್ರಾಮೀಣ ಪ್ರದೇಶಗಳಲ್ಲಿನ ಸರಕಾರಿ ಶಾಲೆಗಳ ಸ್ಥಿತಿ ಇಂದಿಗೂ ಆಯೋಮಯ ವಾಗಿದೆ. ಪ್ರತೀ ವರ್ಷ ಹೊಸ ಯೋಜನೆಗಳನ್ನು ಘೋಷಿಸುತ್ತ ಬರಲಾಗುತ್ತಿದೆ ಯಾದರೂ ಜಾರಿಯಲ್ಲಿರುವ ಯೋಜನೆಗಳ ಸದ್ಯದ ಸ್ಥಿತಿಗತಿಯೇನು ಎಂಬ ಬಗೆಗೆ ಸರಕಾರವಾಗಲಿ, ಶಿಕ್ಷಣ ಇಲಾಖೆಯಾಗಲಿ ತಲೆಕೆಡಿಸಿಕೊಳ್ಳುತ್ತಿಲ್ಲ. ಈ ಅಸಡ್ಡೆಯ ಧೋರಣೆಯಿಂದಾಗಿ ಮಕ್ಕಳ ಮನಸ್ಸಿನ ಮೇಲೆ ಗಾಢ ಪರಿಣಾಮ ಬೀರಿ ಅವರ ಭವಿಷ್ಯ ಮಂಕಾಗುತ್ತದೆ ಎಂಬ ಕನಿಷ್ಠ ಜ್ಞಾನವೂ ಇಲ್ಲ ಎಂದಾದರೆ ಇಂಥ ಯೋಜನೆಗಳನ್ನು ಘೋಷಿಸುವುದು ಯಾಕೆ ಎಂಬುದೇ ಹೈಕೋರ್ಟ್‌ನ ಪ್ರಶ್ನೆ. ಅಷ್ಟು ಮಾತ್ರವಲ್ಲದೆ ಮಕ್ಕಳ ಹಕ್ಕು ಮತ್ತು ಶಿಕ್ಷಣ ಸರಕಾರದ ಸಾಂವಿಧಾನಿಕ ಹೊಣೆಗಾರಿಕೆಯಾಗಿದ್ದು  ಮಕ್ಕಳ ಕಲಿಕೆಗೆ ಅಗತ್ಯವಾದ, ಪೂರಕವಾಗಿರುವ ಸೌಕರ್ಯ ಮತ್ತು ಸೌಲಭ್ಯಗಳನ್ನು ಒದಗಿಸಿಕೊಡುವುದು ಸರಕಾರದ ಕರ್ತವ್ಯ ಕೂಡ. ಇದನ್ನು ಸರಕಾರ ಮತ್ತು ಅಧಿಕಾರಿಗಳು ಮೊದಲು ಅರ್ಥೈಸಿಕೊಳ್ಳಬೇಕು.

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-editorial

Editorial: ವಿದ್ಯಾರ್ಹತೆಗೆ ದೇಶವ್ಯಾಪಿ ಮಾನ್ಯತೆ, ಹೈಕೋರ್ಟ್‌ ತೀರ್ಪು ನ್ಯಾಯೋಚಿತ

13-editorial

Temperature: ಸಂಪಾದಕೀಯ-ತಾಪಮಾನ ಹೆಚ್ಚಳದ ಆತಂಕ: ಮುಂಜಾಗ್ರತೆಯೇ ಮದ್ದು

ಉಚಿತಗಳ ಆಮಿಷಗಳಿಗೆ ಕಡಿವಾಣ: ಚು.ಆಯೋಗ ಬದ್ಧತೆ ತೋರಲಿ

ಉಚಿತಗಳ ಆಮಿಷಗಳಿಗೆ ಕಡಿವಾಣ: ಚು.ಆಯೋಗ ಬದ್ಧತೆ ತೋರಲಿ

vidhana-Soudha

Editorial: ಪ್ರಾಥಮಿಕ ಶಾಲಾ ಶಿಕ್ಷಕರ ಪಠ್ಯೇತರ ಹೊರೆ ಇಳಿಸಿ

ಮಹಿಳಾ ಆರೋಪಿಗಳ ಬಂಧನ ವೇಳೆ ವಿವೇಚನೆ ಅತ್ಯವಶ್ಯ

ಮಹಿಳಾ ಆರೋಪಿಗಳ ಬಂಧನ ವೇಳೆ ವಿವೇಚನೆ ಅತ್ಯವಶ್ಯ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.