ಹಸಿವಿನ ಸೂಚ್ಯಂಕ: ಭಾರತಕ್ಕೆ ಕಳಂಕ ತರುವ ಷಡ್ಯಂತ್ರ


Team Udayavani, Oct 17, 2022, 6:00 AM IST

ಹಸಿವಿನ ಸೂಚ್ಯಂಕ: ಭಾರತಕ್ಕೆ ಕಳಂಕ ತರುವ ಷಡ್ಯಂತ್ರ

ಐರ್ಲೆಂಡ್‌ ಮತ್ತು ಜರ್ಮನಿಯ ಸರಕಾರೇತರ ಸಂಸ್ಥೆಗಳು ಜಂಟಿಯಾಗಿ ಶನಿವಾರದಂದು ಬಿಡುಗಡೆ ಮಾಡಿರುವ ಜಾಗತಿಕ ಹಸಿವಿನ ಸೂಚ್ಯಂಕ-2022ರ ಯಾದಿಯಲ್ಲಿ ಭಾರತದ ರ್‍ಯಾಂಕಿಂಗ್‌ 107ಕ್ಕೆ ಕುಸಿದಿದೆ. ವಿದೇಶಿ ಎನ್‌ಜಿಒಗಳು ಬಿಡುಗಡೆ ಮಾಡಿರುವ ಈ ಸೂಚ್ಯಂಕ ಇದೀಗ ದೇಶಾದ್ಯಂತ ಚರ್ಚೆಗೆ ಗ್ರಾಸವಾಗಿದೆ. ಇದನ್ನು ಸಿದ್ಧಪಡಿಸಿ, ಬಿಡುಗಡೆ ಮಾಡಿದ ಸಂಸ್ಥೆಗಳ ಅಧಿಕೃತ ಮಾನ್ಯತೆ ಮತ್ತು ವಿಶ್ವಾಸಾರ್ಹತೆಯ ಬಗೆಗೆ ಭಾರೀ ಅನುಮಾನಗಳನ್ನು ಮೂಡಿಸಿದೆ. ಭಾರತದ ವರ್ಚಸ್ಸಿಗೆ ಕಳಂಕ ತರುವ ಉದ್ದೇಶದಿಂದಲೇ ಇಂತಹ ಕಾರ್ಯದಲ್ಲಿ ಈ ಸಂಸ್ಥೆಗಳು ನಿರತವಾಗಿವೆ ಎಂದು ಕೇಂದ್ರ ಸರಕಾರ, ದೇಶದಲ್ಲಿನ ಹಲವಾರು ಸರಕಾರೇತರ ಸಂಸ್ಥೆಗಳು ಮತ್ತು ಸಂಘಟನೆಗಳು ಕಿಡಿ ಕಾರಿವೆ.

ಈ ಎನ್‌ಜಿಒಗಳು ವಿಶ್ವದ ಒಟ್ಟಾರೆ 121 ರಾಷ್ಟ್ರಗಳನ್ನು ಪರಿಗಣಿಸಿ ಜಾಗತಿಕ ಹಸಿವಿನ ಸೂಚ್ಯಂಕ ಯಾದಿಯನ್ನು ಬಿಡುಗಡೆ ಮಾಡಿದ್ದು, ಈ ಪೈಕಿ ಭಾರತಕ್ಕೆ 107ನೇ ಸ್ಥಾನ ಲಭಿಸಿರುವುದು ಕೇವಲ ಭಾರತ ಮಾತ್ರವಲ್ಲದೆ ಇಡೀ ಜಾಗತಿಕ ಸಮುದಾಯದ ಅಚ್ಚರಿಗೆ ಕಾರಣವಾಗಿದೆ. ಈ ಸಂಸ್ಥೆಗಳು ಯಾವ ಮಾನದಂಡದಲ್ಲಿ ಈ ಸೂಚ್ಯಂಕವನ್ನು ಸಿದ್ಧಪಡಿಸಿವೆ ಎಂಬ ಬಗೆಗೆ ಸ್ಪಷ್ಟ ಹೇಳಿಕೆ ನೀಡಿಲ್ಲವಾಗಿದ್ದು, ಸಹಜವಾಗಿಯೇ ಈ ಸಂಸ್ಥೆಗಳ ಉದ್ದೇಶ ಮತ್ತು ಇದರ ಹಿಂದೆ ಷಡ್ಯಂತ್ರವಿರುವುದು ಮೇಲ್ನೋಟಕ್ಕೆ ಕಂಡುಬರುತ್ತಿದೆ. ಇದರ ಹಿಂದೆ ಕುತಂತ್ರ ಅಡಗಿದೆಯೇ ಎಂಬ ಬಗೆಗೆ ಸಂಶಯಗಳು ಕೇವಲ ಸರಕಾರ ಮಾತ್ರವಲ್ಲದೆ ದೇಶದ ಜನತೆಯನ್ನೂ ಕಾಡತೊಡಗಿದೆ.

ಕಳೆದ ಬಾರಿ ಅಂದರೆ 2021ರ ಅಕ್ಟೋಬರ್‌ನಲ್ಲಿ ಬಿಡುಗಡೆ ಮಾಡಲಾದ ಜಾಗತಿಕ ಹಸಿವಿನ ಸೂಚ್ಯಂಕದಲ್ಲೂ ಭಾರತ 101ನೇ ಸ್ಥಾನದಲ್ಲಿತ್ತು. ಆಗಲೇ ಈ ಸೂಚ್ಯಂಕದ ಬಗೆಗೆ ಕೇಂದ್ರ ಸರಕಾರ ಆಕ್ಷೇಪ ವ್ಯಕ್ತಪಡಿಸಿತ್ತು. ಆ ಬಳಿಕ ವಿಶ್ವ ಆಹಾರ ಸಂಸ್ಥೆ ತಪ್ಪುಗಳನ್ನು ಸರಿಪಡಿಸುವ ಭರವಸೆ ನೀಡಿ ವಿವಾದವನ್ನು ತಣ್ಣಗಾಗಿಸಿತ್ತು. ಈ ಸಂಬಂಧ ದೇಶದಲ್ಲಿ ಒಂದಿಷ್ಟು ರಾಜಕೀಯ ಚರ್ಚೆ, ಆರೋಪ-ಪ್ರತ್ಯಾರೋಪಗಳ ವಿನಿಮಯಕ್ಕೆ ಕಾರಣವಾಯಿತೇ ವಿನಾ ಈ ಸೂಚ್ಯಂಕದ ನೈಜತೆ ಅಥವಾ ಇದರ ಹಿಂದಿರುವ ಶಕ್ತಿಗಳನ್ನು ಭೇದಿಸುವ ಪ್ರಯತ್ನ ಸರಕಾರದಿಂದ ನಡೆಯಲಿಲ್ಲ. ಈಗ ಮತ್ತೆ ಇದೇ ಸಂಸ್ಥೆಗಳು ಸೂಚ್ಯಂಕವನ್ನು ಬಿಡುಗಡೆ ಮಾಡಿ ಭಾರತದ ಹೆಸರಿಗೆ ಮಸಿ ಬಳಿಯುವ ಪ್ರಯತ್ನ ನಡೆಸಿರುವಂತೆ ಕಂಡುಬರುತ್ತಿದೆ.

ಈ ಬಾರಿಯೂ ಕೇಂದ್ರ ಸರಕಾರ ಜಾಗತಿಕ ಹಸಿವಿನ ಸೂಚ್ಯಂಕದ ಬಗೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು ಇದನ್ನು ಅವೈಜ್ಞಾನಿಕವಾಗಿ ಸಿದ್ಧಪಡಿಸಲಾಗಿದ್ದು ಮಾನದಂಡಗಳು ಸರಿಯಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದೆ.
ಇದೇ ವೇಳೆ ವಿಪಕ್ಷಗಳು ಜಾಗತಿಕ ಹಸಿವಿನ ಸೂಚ್ಯಂಕವನ್ನು ಅಸ್ತ್ರವನ್ನಾಗಿಸಿಕೊಂಡು ಕೇಂದ್ರ ಸರಕಾರದ ವಿರುದ್ಧ ಮುಗಿಬೀಳ ಲಾರಂಭಿಸಿವೆ. ಇಂಥ ವಿಚಾರಗಳಲ್ಲಿ ರಾಜಕೀಯ ನಡೆಸದೆ ಎಲ್ಲರೂ ವಿದೇಶಿ ಷಡ್ಯಂತ್ರವನ್ನು ಬಯಲಿಗೆಳೆಯಲು ಸರಕಾರದೊಂದಿಗೆ ಕೈಜೋಡಿಸಬೇಕಿದೆ. ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಮತ್ತು ವಿಶ್ವದಲ್ಲಿಯೇ ಅತ್ಯಂತ ದೊಡ್ಡ ಆಹಾರ ಭದ್ರತಾ ಯೋಜನೆಯನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿರುವ ದೇಶದ ವಿರುದ್ಧ ಇಂಥ ಕಪೋಲಕಲ್ಪಿತ ವರದಿಗಳನ್ನು ಪ್ರಕಟಿಸುವ ಮೂಲಕ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತದ ವರ್ಚಸ್ಸಿಗೆ ಧಕ್ಕೆ ತರುವ ಪ್ರಯತ್ನ ಇದಾಗಿದೆ. ಈ ಹಿನ್ನೆಲೆಯಲ್ಲಿ ಸರಕಾರ ಈ ಬಾರಿ ಈ ಸೂಚ್ಯಂಕವನ್ನು ಸಿದ್ಧಪಡಿಸಿದ ವಿದೇಶಿ ಸಂಸ್ಥೆಗಳ ವಿರುದ್ಧ ಅಂತಾರಾಷ್ಟ್ರೀಯ ಕಾನೂನು ನಿಯಮಾವಳಿಗಳಿಗನುಸಾರವಾಗಿ ಕ್ರಮ ಕೈಗೊಂಡು ದೇಶದ ವರ್ಚಸ್ಸು, ಘನತೆಯನ್ನು ಎತ್ತಿಹಿಡಿಯಬೇಕು.

ಟಾಪ್ ನ್ಯೂಸ್

BBK11: ಈ ವಾರ ಮನೆಯಿಂದ ಯಾರು ಹೋಗಲ್ಲ.. ಕಾರಣವೇನು?

BBK11: ಈ ವಾರ ಮನೆಯಿಂದ ಯಾರು ಹೋಗಲ್ಲ.. ಕಾರಣವೇನು?

5-bommai

ಪೊಲೀಸ್ ಸ್ಟೇಶನ್ ಮೇಲೆ ದಾಳಿ ಮಾಡಿದರೆ ಪೊಲೀಸರು ಏನೂ ಮಾಡುವಂತಿಲ್ಲವೇ ? ಬೊಮ್ಮಾಯಿ‌ ಪ್ರಶ್ನೆ

Arrested: ಈವೆಂಟ್‌ ಮ್ಯಾನೇಜ್‌ಮೆಂಟ್‌ ಹೆಸರಿನಲ್ಲಿ ವೇಶ್ಯಾವಾಟಿಕೆ ದಂಧೆ

Arrested: ಈವೆಂಟ್‌ ಮ್ಯಾನೇಜ್‌ಮೆಂಟ್‌ ಹೆಸರಿನಲ್ಲಿ ವೇಶ್ಯಾವಾಟಿಕೆ ದಂಧೆ

Raichur: ಸ್ಕೂಟಿ – ಕಾರು ಡಿಕ್ಕಿ; ಯುವತಿ ಸ್ಥಳದಲ್ಲೇ ಸಾವು

Raichur: ಸ್ಕೂಟಿ – ಕಾರು ಡಿಕ್ಕಿ; ಯುವತಿ ಸ್ಥಳದಲ್ಲೇ ಸಾವು

15 ಅಡಿ ಆಳದ ಬಾವಿಗೆ ಬಿತ್ತು ನವದಂಪತಿಯ ಕಾರು; ಬದುಕಿ ಬಂದಿದ್ದೇ ಪವಾಡ!

Miracle: 15 ಅಡಿ ಆಳದ ಬಾವಿಗೆ ಬಿತ್ತು ನವದಂಪತಿಯ ಕಾರು; ಬದುಕಿ ಬಂದಿದ್ದೇ ಪವಾಡ!

Veera Ratna Foundation: ಯೋಧರ ಕುಟುಂಬಕ್ಕೆ ಹೆಗಲಾಗುವ ವೀರ ರತ್ನ

Veera Ratna Foundation: ಯೋಧರ ಕುಟುಂಬಕ್ಕೆ ಹೆಗಲಾಗುವ ವೀರ ರತ್ನ

1

Ratan Naval Tata: ರತನ್‌ ಟಾಟಾ ಮರೆಯಾದ ಮಾಣಿಕ್ಯ; ಅಳಿದ ಮೇಲೂ ಉಳಿವ ನೆನಪು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Exam 3

PU ಪ್ರಾಯೋಗಿಕ ಪರೀಕ್ಷೆ ದಿನಕ್ಕೊಂದು ಆದೇಶದ ಗೊಂದಲ

EVM

Haryana Election: ಮತ್ತೆ ಇವಿಎಂ ಮೇಲೆ ಅನುಮಾನ ಕಾಂಗ್ರೆಸ್‌ ಸಾಕ್ಷ್ಯಾಧಾರ ಒದಗಿಸಲಿ

vidhana-Soudha

Guidlines: ಗ್ರಾಮಸಭೆಗೆ ಮಾರ್ಗಸೂಚಿ ಉತ್ತರದಾಯಿತ್ವ ಅಗತ್ಯ

Thirupathi-Laddu

Precaution: ದೇವಾಲಯಗಳ ನಿರ್ವಹಣೆ ಏಕರೂಪದ ನೀತಿ ಅನಿವಾರ್ಯ

Trucking: ರಾಜ್ಯದಲ್ಲಿ ಚಾರಣಕ್ಕೆ ಕಡಿವಾಣ ಸ್ತುತ್ಯರ್ಹ

TREKKING: ರಾಜ್ಯದಲ್ಲಿ ಚಾರಣಕ್ಕೆ ಕಡಿವಾಣ ಸ್ತುತ್ಯರ್ಹ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

BBK11: ಈ ವಾರ ಮನೆಯಿಂದ ಯಾರು ಹೋಗಲ್ಲ.. ಕಾರಣವೇನು?

BBK11: ಈ ವಾರ ಮನೆಯಿಂದ ಯಾರು ಹೋಗಲ್ಲ.. ಕಾರಣವೇನು?

5-bommai

ಪೊಲೀಸ್ ಸ್ಟೇಶನ್ ಮೇಲೆ ದಾಳಿ ಮಾಡಿದರೆ ಪೊಲೀಸರು ಏನೂ ಮಾಡುವಂತಿಲ್ಲವೇ ? ಬೊಮ್ಮಾಯಿ‌ ಪ್ರಶ್ನೆ

crime

Bidar:‌ ರಸ್ತೆ ಅಪಘಾತ; ಇಬ್ಬರು ಬಲಿ; ಪ್ರಕರಣ ದಾಖಲು

4-udupi

Malpe: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪಾಪನಾಶಿನಿ ನದಿಯಲ್ಲಿ ಪತ್ತೆ

10

JC Nagar Dussehra: ಜೆ.ಸಿ.ನಗರ ದಸರಾದಲ್ಲಿ ನೂರಾರು ಪಲ್ಲಕ್ಕಿಗಳ ಉತ್ಸವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.