ಚೀನ, ತೀವ್ರಗಾಮಿಗಳಿಗೆ ಎಚ್ಚರಿಕೆ ಸಂದೇಶ ರವಾನಿಸಿದ ಭಾರತ


Team Udayavani, Nov 22, 2021, 6:40 AM IST

ಚೀನ, ತೀವ್ರಗಾಮಿಗಳಿಗೆ ಎಚ್ಚರಿಕೆ ಸಂದೇಶ ರವಾನಿಸಿದ ಭಾರತ

ದೇಶದ ಮೊದಲ ವೈರಿ ರಾಷ್ಟ್ರ ಎಂದೇ ಗುರುತಿಸಲ್ಪಟ್ಟಿರುವ ಚೀನದ ಎಲ್ಲ ಷಡ್ಯಂತ್ರಗಳಿಗೆ ತಕ್ಕ ಪ್ರತ್ಯುತ್ತರ ನೀಡಲು ಭಾರತ ಸರ್ವಸನ್ನದ್ಧ ವಾಗಿದೆ. ಎಲ್‌ಎಸಿಯುದ್ದಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಸಶಸ್ತ್ರ ಪಡೆಗಳನ್ನು ಮತ್ತು ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ನಿಯೋಜಿಸಲು ನಿರ್ಧರಿಸಿದೆ.

ಗಡಿ ಭಾಗದಲ್ಲಿ ಚೀನ ಸೇನೆ ಸಮರಾಭ್ಯಾಸ, ಗಸ್ತು ಕಾರ್ಯ ಮತ್ತಿತರ ಚಟುವಟಿಕೆಗಳನ್ನು ಹೆಚ್ಚಿಸುವ ಮೂಲಕ ಭಾರತದ ವಿರುದ್ಧ ಸಂಚು ರೂಪಿಸುತ್ತಲೇ ಬಂದಿದೆ. ಇದೀಗ ಚೀನ ಮತ್ತೆ ಅರುಣಾಚಲ ಪ್ರದೇಶದ ಗಡಿ ಭಾಗದಲ್ಲಿ ಸೇನಾ ಗ್ರಾಮಗಳನ್ನು ನಿರ್ಮಿಸಿರುವ ಬಗೆಗೆ ವರದಿಯಾಗಿದೆ. ಅಷ್ಟು ಮಾತ್ರವಲ್ಲದೆ ಹೆಚ್ಚಿನ ಸಂಖ್ಯೆಯಲ್ಲಿ ಸೇನಾ ಪಡೆಗಳನ್ನು ಮತ್ತು ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ಎಲ್‌ಎಸಿಯಲ್ಲಿ ನಿಯೋಜಿಸುವ ಮೂಲಕ ಭಾರತದ ವಿರುದ್ಧ ಪರೋಕ್ಷ ದಾಳಿಗೆ ಸಜ್ಜಾಗುತ್ತಿರುವುದು ಬೆಳಕಿಗೆ ಬಂದಿದೆ.

ಈ ಹಿನ್ನೆಲೆಯಲ್ಲಿ ಭಾರತ ಕೂಡ ಚೀನಕ್ಕೆ ಸಡ್ಡು ಹೊಡೆಯುವ ನಿಟ್ಟಿನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ತನ್ನ ಸೇನಾ ಪಡೆಗಳನ್ನು ನಿಯೋಜಿಸಿರುವುದೇ ಅಲ್ಲದೆ ಗಡಿಯುದ್ದಕ್ಕೂ ತೀವ್ರ ಕಟ್ಟೆಚ್ಚರ ವಹಿಸಿದೆ. ಇದರ ಜತೆಯಲ್ಲಿ ಸದ್ಯದಲ್ಲಿಯೇ ಅಂದರೆ ಮುಂದಿನ ವರ್ಷದ ಆರಂಭದಲ್ಲಿ ಎಲ್‌ಎಸಿಯಲ್ಲಿ ಲಡಾಖ್‌ ಮತ್ತು ಅರುಣಾಚಲ ಪ್ರದೇಶದಲ್ಲಿ ರಷ್ಯಾ ನಿರ್ಮಿತ ಅತ್ಯಾಧುನಿಕ ಎರಡು ಎಸ್‌-400 ಕ್ಷಿಪಣಿ ನಿರೋಧಕ ವ್ಯವಸ್ಥೆಯನ್ನು ನಿಯೋಜಿಸುವ ನಿರ್ಧಾರ ಕೈಗೊಂಡಿದೆ.

ತನ್ನ ಆಪ್ತ ರಾಷ್ಟ್ರಗಳಲ್ಲೊಂದಾಗಿರುವ ರಷ್ಯಾದಿಂದ ಭಾರತ ಎಸ್‌-400 ಕ್ಷಿಪಣಿ ನಿರೋಧಕ ವ್ಯವಸ್ಥೆಯನ್ನು ಖರೀದಿಸಲಿದ್ದು ಈಗಾಗಲೇ ಇದರ ಒಂದೊಂದೇ ಉಪಕರಣಗಳು ಭಾರತಕ್ಕೆ ಪೂರೈಕೆಯಾಗ ತೊಡಗಿವೆ. ಸದ್ಯದಲ್ಲಿಯೇ ಅತ್ಯಾಧುನಿಕ ರೆಡಾರ್‌ಗಳು ಭಾರತ ತಲು ಪಲಿವೆ. ಸರಿಸುಮಾರು 400 ಕಿ.ಮೀ. ಪ್ರದೇಶದವರೆಗೂ ವಾಯು ದಾಳಿಯ ಮೇಲೆ ನಿಗಾ ಇರಿಸುವುದರ ಜತೆಯಲ್ಲಿ ಪ್ರತಿದಾಳಿ ನಡೆಸುವ ಸಾಮರ್ಥ್ಯವನ್ನು ಎಸ್‌-400 ಕ್ಷಿಪಣಿ ನಿರೋಧಕ ವ್ಯವಸ್ಥೆ ಹೊಂದಿದೆ.

ಇದನ್ನೂ ಓದಿ:ಪೊಲೀಸರ ಮೇಲೆ ಹಲ್ಲೆಗೆ ಯತ್ನ : ರೌಡಿಶೀಟರ್‌ ಬಂಧನ

ಏತನ್ಮಧ್ಯೆ ಭಾರತದ ಈಶಾನ್ಯ ರಾಜ್ಯಗಳಲ್ಲಿ ಕೆಲವು ತಿಂಗಳುಗಳಿಂದೀಚೆಗೆ ಸ್ಥಳೀಯ ಬಂಡುಕೋರ ಸಂಘಟನೆಗಳು ಮತ್ತೆ ಸಕ್ರಿಯವಾಗಿರುವ ಹಿನ್ನೆಲೆಯಲ್ಲಿ ಸರಕಾರ ಈ ಬೆಳವಣಿಗೆಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಈ ಹಿಂದೆ ಪರಿಸ್ಥಿತಿ ಸಹಜ ಸ್ಥಿತಿಗೆ ಮರಳುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಈ ರಾಜ್ಯಗಳಲ್ಲಿ ನಿಯೋಜಿಸಲಾಗಿದ್ದ ಸೇನಾ ಪಡೆಗಳನ್ನು ಹಂತಹಂತವಾಗಿ ವಾಪಸು ಕರೆಸಿಕೊಳ್ಳಲು ನಿರ್ಧರಿಸಿತ್ತು. ಆದರೆ ವಾರದ ಹಿಂದೆ ಮಣಿಪುರದಲ್ಲಿ ಅಸ್ಸಾಂ ರೈಫ‌ಲ್ಸ್‌ ಯೋಧರ ಮೇಲೆ ಬಂಡುಕೋರ ಸಂಘಟನೆಗಳು ಭೀಕರ ದಾಳಿ ನಡೆಸಿದ್ದರಿಂದ ಮತ್ತೆ ಈ ರಾಜ್ಯಗಳಲ್ಲಿ ಹೆಚ್ಚುವರಿ ಸೇನಾಪಡೆಗಳನ್ನು ನಿಯೋಜಿಸಲು ತೀರ್ಮಾನಿಸಲಾಗಿದೆ.

ಇದೇ ವೇಳೆ ದೇಶದ ಹಲವೆಡೆ ನಕ್ಸಲ್‌ ಚಟುವಟಿಕೆಗಳು ಕೂಡ ಹೆಚ್ಚಳವಾಗಿದೆ. ಸರಕಾರದ ಬಿಗು ನಿಲುವಿನಿಂದಾಗಿ ಕಳೆದ ಕೆಲವು ವರ್ಷಗಳಿಂದ ದೇಶದಲ್ಲಿ ನಕ್ಸಲ್‌ ಮತ್ತು ಇತರ ಬಂಡುಕೋರ ಸಂಘಟನೆಗಳ ಚಟುವಟಿಕೆಗಳು ಕ್ಷೀಣಿಸಿದ್ದವು. ಆದರೆ ಇದೀಗ ಈ ಸಂಘಟನೆಗಳು ಮತ್ತೆ ಬಾಲ ಬಿಚ್ಚಲಾರಂಭಿಸಿದ್ದು ಭದ್ರತಾ ಪಡೆಗಳು, ಆಡಳಿತ ವ್ಯವಸ್ಥೆ ಮತ್ತು ಸ್ಥಳೀಯ ನಾಗರಿಕರ ಸುರಕ್ಷೆಗೆ ಅಪಾಯಕಾರಿಯಾಗಿ ಪರಿಣಮಿಸಿವೆ. ಈ ಸಂಘಟನೆಗಳಿಗೆ ಪರೋಕ್ಷವಾಗಿ ಚೀನ ಮತ್ತು ಪಾಕಿಸ್ಥಾನ ಬೆಂಬಲ ನೀಡುತ್ತಿರುವುದು ಸರಕಾರದ ಗಮನಕ್ಕೂ ಬಂದಿದೆ.

ಈ ಎಲ್ಲ ರಾಷ್ಟ್ರ ವಿರೋಧಿ ಚಟುವಟಿಕೆಗಳನ್ನು ಮೊಳಕೆಯಲ್ಲಿಯೇ ಹೊಸಕಿ ಹಾಕಲು ಕೇಂದ್ರ ಸರಕಾರ ತೀರ್ಮಾನಿಸಿದೆ. ದೇಶದ ಸಮಗ್ರತೆ, ಸಾರ್ವಭೌಮತೆ ಮತ್ತು ಶಾಂತಿಗೆ ಧಕ್ಕೆ ತರುವಂತಹ ಕೃತ್ಯಗಳನ್ನು ಸಹಿಸುವ ಪ್ರಶ್ನೆಯೇ ಇಲ್ಲ ಎಂದು ಕೇಂದ್ರ ಸರಕಾರ ಘೋಷಿಸುವ ಮೂಲಕ ಎಲ್ಲ ತೀವ್ರಗಾಮಿ ಸಂಘಟನೆಗಳಿಗೆ ಎಚ್ಚರಿಕೆಯ ಸಂದೇಶ ರವಾನಿಸಿದೆ.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-editorial

Editorial: ವಿದ್ಯಾರ್ಹತೆಗೆ ದೇಶವ್ಯಾಪಿ ಮಾನ್ಯತೆ, ಹೈಕೋರ್ಟ್‌ ತೀರ್ಪು ನ್ಯಾಯೋಚಿತ

13-editorial

Temperature: ಸಂಪಾದಕೀಯ-ತಾಪಮಾನ ಹೆಚ್ಚಳದ ಆತಂಕ: ಮುಂಜಾಗ್ರತೆಯೇ ಮದ್ದು

ಉಚಿತಗಳ ಆಮಿಷಗಳಿಗೆ ಕಡಿವಾಣ: ಚು.ಆಯೋಗ ಬದ್ಧತೆ ತೋರಲಿ

ಉಚಿತಗಳ ಆಮಿಷಗಳಿಗೆ ಕಡಿವಾಣ: ಚು.ಆಯೋಗ ಬದ್ಧತೆ ತೋರಲಿ

vidhana-Soudha

Editorial: ಪ್ರಾಥಮಿಕ ಶಾಲಾ ಶಿಕ್ಷಕರ ಪಠ್ಯೇತರ ಹೊರೆ ಇಳಿಸಿ

ಮಹಿಳಾ ಆರೋಪಿಗಳ ಬಂಧನ ವೇಳೆ ವಿವೇಚನೆ ಅತ್ಯವಶ್ಯ

ಮಹಿಳಾ ಆರೋಪಿಗಳ ಬಂಧನ ವೇಳೆ ವಿವೇಚನೆ ಅತ್ಯವಶ್ಯ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.