ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ


Team Udayavani, Sep 20, 2024, 6:00 AM IST

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಬಾಹ್ಯಾಕಾಶ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ದೇಶ ಪಾರಮ್ಯ ಸಾಧಿಸುವ ನಿಟ್ಟಿನಲ್ಲಿ ಕೇಂದ್ರ ಸಚಿವ ಸಂಪುಟ ಹಲವಾರು ಕ್ರಾಂತಿಕಾರಿ ಯೋಜನೆಗಳಿಗೆ ಒಪ್ಪಿಗೆ ನೀಡಿದೆ. ಈ ಮೂಲಕ ಬಾಹ್ಯಾಕಾಶ ರಂಗದಲ್ಲಿನ ಸಂಶೋಧನೆ ಮತ್ತು ತಮ್ಮ ವಿಕ್ರಮವನ್ನು ಮುಂದುವರಿಸಲು ಪಣತೊಟ್ಟಿರುವ ದೇಶದ ಬಾಹ್ಯಾಕಾಶ ವಿಜ್ಞಾನಿಗಳ ದೂರದೃಷ್ಟಿಯಿಂದ ಕೂಡಿದ ಹಲವಾರು ಯೋಜನೆಗಳಿಗೆ ಕೇಂದ್ರ ಸರಕಾರ ಹಸುರು ನಿಶಾನೆ ತೋರಿದಂತಾಗಿದೆ.

ವರ್ಷದ ಹಿಂದೆಯಷ್ಟೇ ಚಂದ್ರನ ಮೇಲೆ ಲ್ಯಾಂಡರ್‌ ಇಳಿಸುವ ಮೂಲಕ ಬಾಹ್ಯಾಕಾಶ ರಂಗದಲ್ಲಿನ ತನ್ನ ಸಾಮರ್ಥ್ಯವನ್ನು ಇಡೀ ವಿಶ್ವಕ್ಕೆ ತೋರಿಸಿಕೊಟ್ಟಿದ್ದ ಇಸ್ರೋ ವಿಜ್ಞಾನಿಗಳು ಮುಂದಿನ ವರ್ಷಗಳಲ್ಲಿ ಕೈಗೆತ್ತಿಕೊಳ್ಳಲುದ್ದೇಶಿಸಿರುವ ಅತ್ಯಂತ ಮಹತ್ವದ ಚಂದ್ರಯಾನ-4, ಶುಕ್ರಯಾನ, ಮಾನವ ಸಹಿತ ಚಂದ್ರಯಾನ, ಗಗನಯಾನಕ್ಕಾಗಿ ಭಾಗಶಃ ಮರುಬಳಕೆ ರಾಕೆಟ್‌ ಉತ್ಪಾದನೆ ಸಹಿತ ಒಟ್ಟು 31,773 ಕೋ ರೂ.ಗಳ ವಿವಿಧ ಬಾಹ್ಯಾಕಾಶ ಸಂಬಂಧಿ ಯೋಜನೆಗಳಿಗೆ ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ.

ಇಸ್ರೋ ಮುಂದಿರುವ ಈ ಎಲ್ಲ ಯೋಜನೆಗಳಿಗೆ ಬೆನ್ನೆಲುಬಾಗಿ ನಿಂತಿರುವ ಕೇಂದ್ರ ಸರಕಾರ, ದೇಶದ ಬಾಹ್ಯಾಕಾಶ ವಿಜ್ಞಾನಿಗಳ ಸಂಶೋಧನ ಯೋಜನೆ, ಚಿಂತನೆಗಳನ್ನು ಕಾರ್ಯರೂಪಕ್ಕೆ ತರುವ ನಿಟ್ಟಿನಲ್ಲಿ ನಿರಂತರವಾಗಿ ನೆರವು ಮತ್ತು ಪ್ರೋತ್ಸಾಹ ನೀಡುತ್ತಲೇ ಬಂದಿದೆ. ಕಳೆದ ಕೆಲವು ವರ್ಷಗಳಿಂದೀಚೆಗೆ ಬಾಹ್ಯಾಕಾಶ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಅಪ್ರತಿಮ ಸಾಧನೆ ತೋರುವ ಮೂಲಕ ವಿಶ್ವದಲ್ಲಿ ಮುಂಚೂಣಿಯಲ್ಲಿದೆ. ಮಂಗಳಯಾನ ಮತ್ತು ಚಂದ್ರಯಾನ ಯಶಸ್ಸಿನ ಬಳಿಕ ಬಲು ನಿರೀಕ್ಷಿತ ಮಾನವ ಸಹಿತ ಗಗನಯಾನ ಮತ್ತು ಶುಕ್ರಯಾನಕ್ಕೆ ಇಸ್ರೋ ಸಜ್ಜಾಗುತ್ತಿದೆ.

ಶುಕ್ರ ಗ್ರಹದ ಅಧ್ಯಯನಕ್ಕಾಗಿ ಬಾಹ್ಯಾಕಾಶ ನೌಕೆಯೊಂದನ್ನು ಕಳುಹಿಸಲು ಇಸ್ರೋ ವಿಜ್ಞಾನಿಗಳು ಕಾರ್ಯನಿರತರಾಗಿದ್ದಾರೆ. ಇನ್ನು ಅತ್ಯಂತ ಮಹತ್ವಾಕಾಂಕ್ಷೆಯ ಮತ್ತು ದೂರದೃಷ್ಟಿಯಿಂದ ಕೂಡಿರುವ ಮರುಬಳಕೆ ರಾಕೆಟ್‌ ಉತ್ಪಾದನೆಗೆ ಕೇಂದ್ರ ಸರಕಾರ ಅನುದಾನ ಘೋಷಿಸಿದೆ. ಇದೇ ವೇಳೆ ಮುಂದಿನ ನಾಲ್ಕು ವರ್ಷಗಳಲ್ಲಿ ಬಾಹ್ಯಾಕಾಶ ಕೇಂದ್ರ ಹೊಂದುವ ಯೋಜನೆಗೂ ಕೇಂದ್ರ ಸಂಪುಟ ಸಮ್ಮತಿಸಿದೆ. ಇವೆಲ್ಲವೂ ಭಾರತದ ಬಲುನಿರೀಕ್ಷಿತ ಗಗನ ಯೋಜನೆಗೆ ಪೂರಕವಾಗಿ ಕೈಗೆತ್ತಿಕೊಳ್ಳಲಾಗುತ್ತಿರುವ ಬಾಹ್ಯಾಕಾಶ ಯೋಜನೆಗಳಾಗಿವೆ.

ತಂತ್ರಜ್ಞಾನ ಕ್ಷೇತ್ರದಲ್ಲೂ ಸಂಶೋಧನೆ ಮತ್ತು ಹೊಸ ಆವಿಷ್ಕಾರಗಳಿಗೆ ಒತ್ತು ನೀಡುತ್ತಲೇ ಬಂದಿರುವ ಕೇಂದ್ರ ಸರಕಾರ ಇದರ ಭಾಗವಾಗಿ ಜೈವಿಕ ತಂತ್ರಜ್ಞಾನ ಕ್ಷೇತ್ರದಲ್ಲಿ ಬಯೋ ರೈಡ್‌ ಯೋಜನೆಗೆ ತನ್ನ ಅನುಮೋದನೆಯನ್ನು ನೀಡಿದೆ. ಈ ಯೋಜನೆ ಸಮರ್ಪಕವಾಗಿ ಕಾರ್ಯಗತವಾದಲ್ಲಿ ಕೈಗಾರಿಕೆ ಮತ್ತು ಶಿಕ್ಷಣ ಸಂಸ್ಥೆಗಳ ನಡುವೆ ಸಹಭಾಗಿತ್ವವನ್ನು ಸುಲಭ ಸಾಧ್ಯವಾಗಿಸಲಿದೆಯಲ್ಲದೆ ಸ್ಟಾರ್ಟ್‌ಅಪ್‌ಗಳ ಬೆಳವಣಿಗೆಗೂ ಪೂರಕವಾಗಲಿದೆ.

ಪ್ರಧಾನಿ ನರೇಂದ್ರ ಮೋದಿ 3.0 ಸರಕಾರ ಶತದಿನಗಳನ್ನು ಪೂರೈಸಿದ ಬೆನ್ನಲ್ಲೇ ಬಾಹ್ಯಾಕಾಶ ಮತ್ತು ತಂತ್ರಜ್ಞಾನ ಕ್ಷೇತ್ರದ ಸಂಶೋಧನೆ ಮತ್ತು ಅಭಿವೃದ್ಧಿ ಯೋಜನೆಗಳಿಗೆ ಭರಪೂರ ಅನುದಾನ ನೀಡಲು ತೀರ್ಮಾನಿಸಿರುವುದು ಹಾಲಿ ಸರಕಾರದ ದೂರದೃಷ್ಟಿಯ ಪ್ರತಿಬಿಂಬ ಎಂದೇ ವಿಶ್ಲೇಷಿಸಬಹುದು. ಭಾರತ ಕೈಗೊಳ್ಳುವ ಪ್ರತಿಯೊಂದೂ ಬಾಹ್ಯಾಕಾಶ ಯೋಜನೆಯ ಬಗೆಗೆ ಇಡೀ ವಿಶ್ವದ ಜನತೆ ಕುತೂಹಲದ ದೃಷ್ಟಿ ಬೀರಿದೆ. ಇದಕ್ಕೆ ಪೂರಕವಾಗಿ ಇಸ್ರೋ ಮತ್ತು ಕೇಂದ್ರ ಸರಕಾರ ಬಾಹ್ಯಾಕಾಶ ಕ್ಷೇತ್ರದಲ್ಲಿ ಸರಣಿ ಯೋಜನೆಗಳನ್ನು ಅನುಷ್ಠಾನಗೊಳಿಸಲು ಸಜ್ಜಾಗಿದ್ದು, ಈ ದಿಸೆಯಲ್ಲಿ ಕಾರ್ಯೋನ್ಮುಖವಾಗಿವೆ. ಭವಿಷ್ಯದಲ್ಲಿ ಬಾಹ್ಯಾಕಾಶ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ವಿಪುಲ ಅವಕಾಶಗಳು ಸೃಷ್ಟಿಯಾಗಲಿರುವುದರಿಂದ ಸರಕಾರ ಈಗ ವ್ಯಯಿಸುತ್ತಿರುವ ಮೊತ್ತ ದೇಶದ ಭವಿಷ್ಯಕ್ಕಾಗಿನ ಹೂಡಿಕೆ ಎನ್ನಲಡ್ಡಿಯಿಲ್ಲ.

ಟಾಪ್ ನ್ಯೂಸ್

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Assembly Election: ಜಮ್ಮು-ಕಾಶ್ಮೀರದಲ್ಲಿ ಪ್ರಜಾಪ್ರಭುತ್ವದ ಹಬ್ಬ

Assembly Election: ಜಮ್ಮು-ಕಾಶ್ಮೀರದಲ್ಲಿ ಪ್ರಜಾಪ್ರಭುತ್ವದ ಹಬ್ಬ

Namma-clinic

Karnataka; ಬಸ್‌ ನಿಲ್ದಾಣಗಳಲ್ಲಿ ನಮ್ಮ ಕ್ಲಿನಿಕ್‌ ಸಮುಚಿತ ನಿರ್ಧಾರ

ರೈತರ ಹಿತರಕ್ಷಣೆ ನೆಪದಲ್ಲಿ ಗ್ರಾಹಕರಿಗೆ ಬರೆ ಸಲ್ಲದು

ರೈತರ ಹಿತರಕ್ಷಣೆ ನೆಪದಲ್ಲಿ ಗ್ರಾಹಕರಿಗೆ ಬರೆ ಸಲ್ಲದು

ಪರೀಕ್ಷಾ ಅಕ್ರಮಗಳ ತಡೆಗೆ ಎಸ್‌ಎಸ್‌ಸಿ ಕಠಿನ ನಿಲುವುಪರೀಕ್ಷಾ ಅಕ್ರಮಗಳ ತಡೆಗೆ ಎಸ್‌ಎಸ್‌ಸಿ ಕಠಿನ ನಿಲುವು

ಪರೀಕ್ಷಾ ಅಕ್ರಮಗಳ ತಡೆಗೆ ಎಸ್‌ಎಸ್‌ಸಿ ಕಠಿನ ನಿಲುವು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

1-japp

Japan ಆ್ಯನಿಮೇಟೆಡ್‌ ರಾಮಾಯಣ ಅ.18ಕ್ಕೆ ಮರು ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.