ಗುಪ್ತಚರ ದಳದ ಮುನ್ನೆಚ್ಚರಿಕೆಯ ನಿರ್ಲಕ್ಷ್ಯ  ಬೇಡ


Team Udayavani, Jan 20, 2022, 6:00 AM IST

ಗುಪ್ತಚರ ದಳದ ಮುನ್ನೆಚ್ಚರಿಕೆಯ ನಿರ್ಲಕ್ಷ್ಯ  ಬೇಡ

ದೇಶದ ಗಣರಾಜ್ಯೋತ್ಸವ ದಿನದಂದು ಪ್ರಧಾನಿ ನರೇಂದ್ರ ಮೋದಿ ಮತ್ತು ಹಲವು ನಾಯಕರಿಗೆ ಉಗ್ರರಿಂದ ಜೀವ ಬೆದರಿಕೆ ಇದೆ ಎಂದು ಕೇಂದ್ರ ಗುಪ್ತಚರ ಇಲಾಖೆ ಗೃಹ ಇಲಾಖೆಗೆ ಪತ್ರ ಬರೆದಿದೆ. ಪ್ರತೀ ವರ್ಷ ರಾಷ್ಟ್ರೀಯ ಹಬ್ಬಗಳ ಸಂದರ್ಭದಲ್ಲಿ ಉಗ್ರ ಸಂಘಟನೆಗಳು ಬೆದರಿಕೆ ಒಡ್ಡುವುದು ಸಾಮಾನ್ಯವಾದರೂ ಈ ಬಾರಿ ಗುಪ್ತಚರ ಇಲಾಖೆ ನೀಡಿ ರುವ ಮುನ್ನೆಚ್ಚರಿಕೆಯನ್ನು ಸರಕಾರ ಗಂಭೀರವಾಗಿಯೇ ಪರಿಗಣಿಸಬೇಕಿದೆ.

ವಾರದ ಹಿಂದೆಯಷ್ಟೇ ಘಾಜಿಪುರದ ಹೂವಿನ ಮಾರುಕಟ್ಟೆಯಲ್ಲಿ ಅನಾಥ ಬ್ಯಾಗ್‌ ಒಂದರ ಕಬ್ಬಿಣದ ಪೆಟ್ಟಿಗೆಯಲ್ಲಿ 3 ಕೆ.ಜಿ. ತೂಕದ ಸುಧಾರಿತ ಸ್ಫೋಟಕ ಸಾಧನ ಪತ್ತೆಯಾಗಿತ್ತು. ಈ ಸ್ಫೋಟಕದಲ್ಲಿ ಆರ್‌ಡಿಎಕ್ಸ್‌ ಮತ್ತು ಅಮೋನಿಯಂ ನೈಟ್ರೇಟ್‌ ಬಳಸಲಾಗಿತ್ತು. ಗುಪ್ತಚರ ಇಲಾಖೆ ಮಾಹಿತಿ ಹಿನ್ನೆಲೆಯಲ್ಲಿ ಸ್ಫೋಟಕ ನಿಷ್ಕ್ರಿಯ ದಳ ಸ್ಥಳಕ್ಕೆ ದೌಡಾಯಿಸಿ ಸ್ಫೋಟಕವನ್ನು ನಿಷ್ಕ್ರಿಯಗೊಳಿಸಿತ್ತು. ಪಂಜಾಬ್‌ನಲ್ಲೂ ಇಂತಹುದೇ ಸ್ಫೋಟಕ ಪತ್ತೆಯಾಗಿತ್ತು. ಇದರ ಬೆನ್ನಲ್ಲೇ ಸೋಮವಾರ ಅಫ್ಘಾನಿಸ್ಥಾನದಲ್ಲಿ ವಾಯುದಾಳಿಯಲ್ಲಿ ಇಬ್ಬರು ಭಾರತೀಯರನ್ನು ಹತ್ಯೆಗೈಯಲಾಗಿತ್ತು.

ಜ.5ರಂದು ಪಂಜಾಬ್‌ನ ಫಿರೋಜ್‌ಪುರದಲ್ಲಿ ಆಯೋಜಿಸಲಾಗಿದ್ದ ಸಮಾವೇಶದಲ್ಲಿ ಪಾಲ್ಗೊಳ್ಳಲು ರಸ್ತೆ ಮಾರ್ಗವಾಗಿ ತೆರಳುತ್ತಿದ್ದ ವೇಳೆ ರೈತರ ಪ್ರತಿಭಟನೆಯ ಕಾರಣದಿಂದಾಗಿ ಪ್ರಧಾನಿ ಮೋದಿ ಅವರು 20 ನಿಮಿಷ ಫ್ಲೈಓವರ್‌ ಮೇಲೆಯೇ ಸಿಲುಕುವಂತಾಗಿತ್ತು. ಇದು ತೀವ್ರ ವಿವಾದಕ್ಕೆ ಕಾರಣವಾಗಿತ್ತಲ್ಲದೆ ಪ್ರಧಾನಿಯವರ ರಕ್ಷಣೆ ವಿಚಾರದಲ್ಲಿ ಪಂಜಾಬ್‌ ಸರಕಾರ ನಿರ್ಲಕ್ಷ್ಯ ತೋರಿದ್ದಕ್ಕೆ ದೇಶಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತ ವಾಗಿತ್ತು. ಪಂಜಾಬ್‌ನ ಗುಪ್ತಚರ ಇಲಾಖೆ ಜ.2ರಂದೇ ಪಂಜಾಬ್‌ ಭೇಟಿ ವೇಳೆ ಪ್ರಧಾನಿ ಅವರಿಗೆ ಉಗ್ರ ಸಂಘಟನೆಗಳಿಂದ ಜೀವ ಬೆದರಿಕೆ ಇರುವು ದಾಗಿ ರಾಜ್ಯದ ಪೊಲೀಸ್‌ ಮಹಾನಿರ್ದೇಶಕರಿಗೆ ವರದಿ ನೀಡಿದ್ದ ವಿಚಾರ ಘಟನೆಯ ಬಳಿಕ ಬೆಳಕಿಗೆ ಬಂದಿತ್ತು. ಈ ಎಲ್ಲ ಬೆಳವಣಿಗೆಗಳ ಹಿನ್ನೆಲೆ ಯಲ್ಲಿ ರಾಜಧಾನಿ ಹೊಸದಿಲ್ಲಿ ಮತ್ತು ಎನ್‌ಸಿಆರ್‌ ವ್ಯಾಪ್ತಿಯಲ್ಲಿ ಭಾರೀ ಕಟ್ಟೆಚ್ಚರ ವಹಿಸಲಾಗಿದೆ. ಅಲ್ಲದೆ ದೇಶದ ಪ್ರಮುಖ ನಗರಗಳಲ್ಲೂ ಕಣ್ಗಾ ವಲು ಇರಿಸಲಾಗಿದೆ. ಇತ್ತೀಚೆಗೆ ಉಗ್ರರು ದಾಳಿಗೆ ಅತ್ಯಾಧುನಿಕ ತಂತ್ರ ಜ್ಞಾನ ಬಳಸಲಾರಂಭಿಸಿರುವುದರಿಂದ ದಿಲ್ಲಿ ಮತ್ತು ಎನ್‌ಸಿಆರ್‌ ಪ್ರದೇಶ ದಲ್ಲಿ ಜ.20ರಿಂದ ಫೆ.15ರ ವರೆಗೆ ಡ್ರೋನ್‌, ಪ್ಯಾರಾಗ್ಲೆ„ಡರ್, ಹಾಟ್‌ ಏರ್‌ ಬಲೂನ್‌ಗಳ ಹಾರಾಟವನ್ನು ನಿಷೇಧಿಸಲಾಗಿದೆ.

ಈಗ ಗುಪ್ತಚರ ಇಲಾಖೆ ಕೇಂದ್ರ ಸರಕಾರಕ್ಕೆ ಬರೆದಿರುವ 9 ಪುಟಗಳ ಪತ್ರದಲ್ಲಿ ಉಲ್ಲೇಖೀಸಲಾಗಿರುವ ವಿಚಾರಗಳನ್ನು ಭದ್ರತಾ ಪಡೆಗಳು ಮತ್ತು ಗೃಹ ಇಲಾಖೆ ಗಂಭೀರವಾಗಿ ಪರಿಗಣಿಸಬೇಕಾದ ಅಗತ್ಯವಿದೆ. ಪ್ರಧಾನಿ ಮತ್ತು ಹಲವು ನಾಯಕರಿಗೆ ಜೀವಬೆದರಿಕೆ ಮತ್ತು ಜನನಿಬಿಡ ಸ್ಥಳಗಳಲ್ಲಿ ದಾಳಿ ನಡೆಸುವ ಬೆದರಿಕೆ ಒಡ್ಡಿರುವ ಉಗ್ರ ಸಂಘಟನೆಗಳಲ್ಲಿ ಎಲ್‌ಇಟಿ, ಪಾಕಿಸ್ಥಾನ್‌ ತಾಲಿಬಾನ್‌, ಇಂಡಿಯನ್‌ ಮುಜಾಹಿದೀನ್‌, ಸಿಮಿ, ಹರ್ಕತ್‌ ಉಲ್‌ ಮುಜಾಹಿದೀನ್‌ ಸೇರಿದ್ದು ಈ ಖತರ್‌ನಾಕ್‌ ಉಗ್ರರ ಷಡ್ಯಂತ್ರ ನಿರ್ಲಕ್ಷಿಸಲಾಗದು. ಉಗ್ರರು ಯಾವುದೇ ಸಂಚು ಹೂಡಲು ಅವಕಾಶ ನೀಡದೆ ಗಣರಾಜ್ಯೋತ್ಸವ ದಿನವನ್ನು ಸಡಗರ, ಸಂಭ್ರಮದ ಜತೆಯಲ್ಲಿ ಶಾಂತಿಯುತ ಮತ್ತು ಸುಲಲಿತವಾಗಿ ಆಚರಿಸಲು ಅಗತ್ಯ ಕ್ರಮ ಗಳನ್ನು ಗೃಹ ಇಲಾಖೆ ಕೈಗೊಳ್ಳಬೇಕಿದೆ. ದೇಶದ ಭದ್ರತೆ ವಿಚಾರದಲ್ಲಿ ಯಾವುದೇ ರಾಜಕೀಯಕ್ಕೆ ಆಸ್ಪದ ನೀಡದೆ ದೇಶದ ಏಕತೆಯನ್ನು ಎತ್ತಿ ಹಿಡಿಯುವ ಜತೆಗೆ ಉಗ್ರಗಾಮಿ ಸಂಘಟನೆಗಳು ಮತ್ತು ಉಗ್ರರ ಸಂಚನ್ನು ವಿಫ‌ಲಗೊಳಿಸುವುದೇ ನಮ್ಮೆಲ್ಲರ ಮೊದಲ ಆದ್ಯತೆಯಾಗಬೇಕಿದೆ.

ಟಾಪ್ ನ್ಯೂಸ್

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-editorial

Editorial: ವಿದ್ಯಾರ್ಹತೆಗೆ ದೇಶವ್ಯಾಪಿ ಮಾನ್ಯತೆ, ಹೈಕೋರ್ಟ್‌ ತೀರ್ಪು ನ್ಯಾಯೋಚಿತ

13-editorial

Temperature: ಸಂಪಾದಕೀಯ-ತಾಪಮಾನ ಹೆಚ್ಚಳದ ಆತಂಕ: ಮುಂಜಾಗ್ರತೆಯೇ ಮದ್ದು

ಉಚಿತಗಳ ಆಮಿಷಗಳಿಗೆ ಕಡಿವಾಣ: ಚು.ಆಯೋಗ ಬದ್ಧತೆ ತೋರಲಿ

ಉಚಿತಗಳ ಆಮಿಷಗಳಿಗೆ ಕಡಿವಾಣ: ಚು.ಆಯೋಗ ಬದ್ಧತೆ ತೋರಲಿ

vidhana-Soudha

Editorial: ಪ್ರಾಥಮಿಕ ಶಾಲಾ ಶಿಕ್ಷಕರ ಪಠ್ಯೇತರ ಹೊರೆ ಇಳಿಸಿ

ಮಹಿಳಾ ಆರೋಪಿಗಳ ಬಂಧನ ವೇಳೆ ವಿವೇಚನೆ ಅತ್ಯವಶ್ಯ

ಮಹಿಳಾ ಆರೋಪಿಗಳ ಬಂಧನ ವೇಳೆ ವಿವೇಚನೆ ಅತ್ಯವಶ್ಯ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.