Kannada; ಕನ್ನಡಿಗರ ಸಹನೆ ಪರೀಕ್ಷಿಸುವ ದುಸ್ಸಾಹಸಕ್ಕೆ ಅವಕಾಶ ನೀಡದಿರಿ


Team Udayavani, Dec 28, 2023, 5:30 AM IST

1-vsddfsf

ರಾಜ್ಯದಲ್ಲಿ ಮತ್ತೆ ಕನ್ನಡ ಉಳಿಸಿ ಅಭಿಯಾನ ಆರಂಭಗೊಂಡಿದೆ. ಬುಧವಾರ ರಾಜ್ಯ ರಾಜಧಾನಿಯಲ್ಲಿ ಕನ್ನಡ ರಕ್ಷಣ ವೇದಿಕೆಯ ಹೋರಾಟಗಾರರು ಬೀದಿಗಿಳಿದು ವಿವಿಧ ಮಳಿಗೆ, ಅಂಗಡಿಗಳಲ್ಲಿನ ಕನ್ನಡೇತರ ಭಾಷೆಯ ನಾಮ ಫ‌ಲಕ­ಗಳನ್ನು ತೆರವುಗೊಳಿಸುವ ಅಭಿಯಾನ­ವನ್ನು ಹಮ್ಮಿಕೊಳ್ಳುವ ಮೂಲಕ ಮತ್ತೆ ಕನ್ನಡದ ಪರ ಹೋರಾಟದ ಕಹಳೆ ಊದಿದ್ದಾರೆ. ಬೆಳಗಾವಿ, ದಾವಣ­ಗೆರೆ, ಚಿತ್ರದುರ್ಗ, ಹುಬ್ಬಳ್ಳಿ ಸಹಿತ ರಾಜ್ಯದ ಹಲವೆಡೆಯೂ ರಕ್ಷಣ ವೇದಿಕೆ ಕಾರ್ಯ ಕರ್ತರು ಇದೇ ತೆರನಾದ ಪ್ರತಿಭಟನೆ ನಡೆಸಿ, ಕನ್ನಡೇತರ ಭಾಷೆಗಳಲ್ಲಿ ನಾಮಫ‌ಲಕಗಳನ್ನು ಅಳವಡಿಸಿರುವ ವಾಣಿಜ್ಯ ಮಳಿಗೆಗಳು ಮತ್ತು ಅಂಗಡಿಗಳ ಮಾಲಕರಿಗೆ ಎಚ್ಚರಿಕೆ ನೀಡಿದ್ದಾರೆ.

ರಾಜ್ಯದಲ್ಲಿ ನಾಡಭಾಷೆಯಾದ ಕನ್ನಡವನ್ನು ಆಡಳಿತದಲ್ಲಿ ಕಡ್ಡಾಯಗೊಳಿಸಿ ಸರಕಾರ ಆದೇಶ ಹೊರಡಿಸಿ ದಶಕಗಳೇ ಕಳೆದಿವೆ. ಅಷ್ಟು ಮಾತ್ರವಲ್ಲದೆ ರಾಜ್ಯದ ಎಲ್ಲ ಸರಕಾರಿ ಕಚೇರಿಗಳು, ಸಂಘ, ಸಂಸ್ಥೆಗಳು, ಉದ್ಯಮಗಳು, ವಾಣಿಜ್ಯ ಮಳಿಗೆಗಳ ನಾಮಫ‌ಲಕಗಳು ಕನ್ನಡದಲ್ಲಿಯೇ ಇರಬೇಕು ಎಂಬ ಆದೇಶವೂ ಜಾರಿಯಲ್ಲಿದೆ. ಈ ಬಗ್ಗೆ ಸಂಬಂಧಪಟ್ಟ ಇಲಾಖೆ, ನಗರಾಡಳಿತ ಮತ್ತು ಸ್ಥಳೀಯಾಡಳಿತ ಸಂಸ್ಥೆಗಳು ಕಾಲಕಾಲಕ್ಕೆ ಸೂಚನೆಗಳನ್ನು ನೀಡುತ್ತಲೇ ಬರುತ್ತಿವೆ. ಇಷ್ಟಾದರೂ ರಾಜ್ಯದೆಲ್ಲೆಡೆ ನಾಮಫ‌ಲಕಗಳು, ಜಾಹೀರಾತು ಫ‌ಲಕಗಳಲ್ಲಿ ಇಂಗ್ಲಿಷ್‌, ಹಿಂದಿ ಸಹಿತ ವಿವಿಧ ಪರಭಾಷೆಗಳನ್ನು ಬಳಸಲಾಗುತ್ತಿದೆ. ಅದರಲ್ಲೂ ಮುಖ್ಯವಾಗಿ ಉತ್ತರ ಭಾರತದವರ ಮಾಲಕತ್ವದ ಮಳಿಗೆಗಳ ನಾಮಫ‌ಲಕಗಳಲ್ಲಿ ಹೆಚ್ಚಾಗಿ ಇಂಗ್ಲಿಷ್‌, ಹಿಂದಿ ಭಾಷೆಗಳನ್ನೇ ಬಳಸುತ್ತಿರುವುದು ಕನ್ನಡಿಗರ ಆಕ್ರೋಶಕ್ಕೆ ಗುರಿಯಾಗಿದೆ.

ಹಲವು ವರ್ಷಗಳಿಂದ ಸರಕಾರ ಮತ್ತು ಕನ್ನಡ ಪರ ಸಂಘಟನೆಗಳು ಎಚ್ಚರಿಕೆ ನೀಡುತ್ತಲೇ ಬಂದಿದ್ದರೂ ಇದನ್ನು ನಿರ್ಲಕ್ಷಿಸಲಾಗುತ್ತಿದೆ. ರಾಜ್ಯದಲ್ಲಿ ಕಾರ್ಯಾಚರಿಸುತ್ತಿರುವ ಅಥವಾ ವ್ಯಾಪಾರ ನಡೆಸುತ್ತಿರುವ ಹೊರ ರಾಜ್ಯದವರ ಈ ಧೋರಣೆ ನಿಜವಾಗಿಯೂ ಖಂಡನೀಯ. ಹಾಗೆಂದು ನಾಮಫ‌ಲಕದಲ್ಲಿ ಬೇರೆ ಭಾಷೆಗಳನ್ನು ಬಳಸಬೇಡಿ ಎಂದು ಸರಕಾರವಾಗಲೀ, ಕನ್ನಡ ಪರ ಸಂಘಟನೆಗಳಾಗಲೀ ಬಲವಂತ ಮಾಡಿಲ್ಲ. ಆದರೆ ನಾಮಫ‌ಲಕ, ಜಾಹೀರಾತು ಫ‌ಲಕ ಸಹಿತ ವಿವಿಧ ಫ‌ಲಕಗಳಲ್ಲಿ ಶೇ.60ರಷ್ಟು ಭಾಗದಲ್ಲಿ ಕನ್ನಡವನ್ನೇ ಆದ್ಯತೆಯ ಮೇಲೆ ಬಳಸುವಂತೆ ಸೂಚಿಸಲಾಗಿದೆ. ಇಷ್ಟಿದ್ದರೂ ಕೂಡ ಹೊರ ರಾಜ್ಯಗಳ ವ್ಯಾಪಾರಸ್ಥರು ಮತ್ತು ಮಳಿಗೆಗಳ ಮಾಲಕರು ಸರಕಾರದ ಆದೇಶವನ್ನು ಸಂಪೂರ್ಣವಾಗಿ ಅಲಕ್ಷಿಸುತ್ತಲೇ ಬಂದಿರುವುದು ಸಹಜವಾಗಿ ಕನ್ನಡಾಭಿಮಾನಿಗಳನ್ನು ಕೆರಳಿಸಿದೆ.
ನಿರಂತರ ಎಚ್ಚರಿಕೆಯ ಬಳಿಕ ಕನ್ನಡ ಪರ ಹೋರಾಟಗಾರರು ಹೊರ ರಾಜ್ಯದ ವ್ಯಾಪಾರಸ್ಥರು ಮತ್ತು ಮಳಿಗೆಗಳ ಮಾಲಕರಿಗೆ ಒಂದಿಷ್ಟು ಜೋರಾಗಿಯೇ ಬಿಸಿ ಮುಟ್ಟಿಸಿದ್ದಾರೆ. ಕೆಲವೆಡೆ ಕನ್ನಡ ಪರ ಹೋರಾಟಗಾರರ ವರ್ತನೆ ಅತಿರೇಕಕ್ಕೆ ತಲುಪಿದ್ದೂ ಸಹ್ಯವಲ್ಲ. ಕಾನೂನನ್ನು ಕೈಗೆತ್ತಿಕೊಳ್ಳುವುದೂ ಅಕ್ಷಮ್ಯ. ಯಾವುದೇ ಹೋರಾಟದ ಹೆಸರಲ್ಲಿ ಅಮಾಯಕರಿಗೆ ತೊಂದರೆಯಾಗುವುದನ್ನು ಹಾಗೂ ಸಾರ್ವಜನಿಕರ ಆಸ್ತಿಪಾಸ್ತಿಗೆ ಧಕ್ಕೆಯಾಗುವುದನ್ನು ಸಹಿಸಲು ಅಸಾಧ್ಯ. ಸ್ಥಿತಿ ಪ್ರಕೋಪಕ್ಕೆ ಹೋಗದಂತೆ ನೋಡಿಕೊಳ್ಳಬೇಕಿರುವುದು ಸರಕಾರದ ಹೊಣೆ.

ಇನ್ನು ಸರಕಾರ ಮತ್ತು ನಗರಾಡಳಿತ ಸಂಸ್ಥೆಗಳು ಕೂಡ ನಾಮಫ‌ಲಕಗಳಲ್ಲಿ ಕನ್ನಡ ಬಳಕೆ ಕಡ್ಡಾಯವನ್ನು ಕೇವಲ ಆದೇಶಕ್ಕಷ್ಟೇ ಸೀಮಿತಗೊಳಿಸದೆ ಅದನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ಮುಂದಾಗಬೇಕು. ಈ ವಿಚಾರದಲ್ಲಿ ಯಾವುದೇ ಮರ್ಜಿಗೆ ಒಳಗಾಗದೆ ಆದೇಶವನ್ನು ಪಾಲಿಸದವರಿಗೆ ಭಾರೀ ಪ್ರಮಾಣದ ದಂಡ ಅಥವಾ ಕ್ರಮಗಳನ್ನು ಕೈಗೊಳ್ಳಬೇಕು. ಕನ್ನಡಾಭಿಮಾನಿಗಳ ತಾಳ್ಮೆಯ ಕಟ್ಟೆ ಒಡೆ ಯುವವರೆಗೆ ಕಾಯದೆ ಸರಕಾರ ಈ ದಿಸೆಯಲ್ಲಿ ತುರ್ತಾಗಿ ಕಾರ್ಯೋ ನ್ಮುಖವಾಗಬೇಕು.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-editorial

Editorial: ವಿದ್ಯಾರ್ಹತೆಗೆ ದೇಶವ್ಯಾಪಿ ಮಾನ್ಯತೆ, ಹೈಕೋರ್ಟ್‌ ತೀರ್ಪು ನ್ಯಾಯೋಚಿತ

13-editorial

Temperature: ಸಂಪಾದಕೀಯ-ತಾಪಮಾನ ಹೆಚ್ಚಳದ ಆತಂಕ: ಮುಂಜಾಗ್ರತೆಯೇ ಮದ್ದು

ಉಚಿತಗಳ ಆಮಿಷಗಳಿಗೆ ಕಡಿವಾಣ: ಚು.ಆಯೋಗ ಬದ್ಧತೆ ತೋರಲಿ

ಉಚಿತಗಳ ಆಮಿಷಗಳಿಗೆ ಕಡಿವಾಣ: ಚು.ಆಯೋಗ ಬದ್ಧತೆ ತೋರಲಿ

vidhana-Soudha

Editorial: ಪ್ರಾಥಮಿಕ ಶಾಲಾ ಶಿಕ್ಷಕರ ಪಠ್ಯೇತರ ಹೊರೆ ಇಳಿಸಿ

ಮಹಿಳಾ ಆರೋಪಿಗಳ ಬಂಧನ ವೇಳೆ ವಿವೇಚನೆ ಅತ್ಯವಶ್ಯ

ಮಹಿಳಾ ಆರೋಪಿಗಳ ಬಂಧನ ವೇಳೆ ವಿವೇಚನೆ ಅತ್ಯವಶ್ಯ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.