ಅಧಿವೇಶನದಲ್ಲಿ ಅಭಿವೃದ್ಧಿ, ಜನಹಿತದ ವಿಷಯಗಳೇ ಆದ್ಯತೆಯಾಗಲಿ


Team Udayavani, Sep 12, 2022, 6:00 AM IST

ಅಧಿವೇಶನದಲ್ಲಿ ಅಭಿವೃದ್ಧಿ, ಜನಹಿತದ ವಿಷಯಗಳೇ ಆದ್ಯತೆಯಾಗಲಿ

ರಾಜ್ಯ ವಿಧಾನಮಂಡಲದ ಉಭಯ ಸದನಗಳ ಮಳೆಗಾಲದ ಅಧಿವೇಶನ ಸೋಮವಾರ ಆರಂಭಗೊಳ್ಳಲಿದೆ. ಬಜೆಟ್‌ ಅಧಿವೇಶನದ ನಡೆದು ಸುದೀರ್ಘ‌ ವಿರಾಮದ ಬಳಿಕ ವಿಧಾನಮಂಡಲದ ಅಧಿವೇಶನ ನಡೆಯು­ತ್ತಿದ್ದು ಸಹಜವಾಗಿಯೇ ಈ ಅಧಿವೇಶನದ ಬಗೆಗೆ ರಾಜ್ಯದ ಜನರಲ್ಲಿ ಭಾರೀ ಕುತೂಹಲವಿದೆ. ರಾಜ್ಯ ಸರಕಾರದ ವಿವಿಧ ಇಲಾಖೆಗಳಲ್ಲಿ ಅಧಿಕಾರಿಗಳು ಮತ್ತು ನೌಕರರ ನೇಮಕಾತಿಗಾಗಿನ ಪರೀಕ್ಷೆಗಳಲ್ಲಿ ಭಾರೀ ಅಕ್ರಮಗಳು ನಡೆದು ಅನರ್ಹರು ಮತ್ತು ಪ್ರಭಾವಿಗಳು ಸರಕಾರಿ ಹುದ್ದೆಗೆ ನೇಮಕಗೊಂಡಿರುವ ಸರಣಿ ಪ್ರಕರಣಗಳು ಬಯಲಾಗಿವೆ. ಇದರ ನಡುವೆ ರಾಜಧಾನಿ ಬೆಂಗಳೂರು ಸಹಿತ ರಾಜ್ಯಾದ್ಯಂತ ವ್ಯಾಪಕ ಮಳೆಯಾಗಿ ಪ್ರವಾಹ ಪರಿಸ್ಥಿತಿ ತಲೆದೋರಿ ಜನರು ಸಂಕಷ್ಟ ಅನುಭವಿಸುವಂತಾಗಿದೆ.

ರಾಜ್ಯದಲ್ಲಿನ ಕಾನೂನು ಸುವ್ಯವಸ್ಥೆಗೆ ಭಂಗ, ಬೆಂಗಳೂರು-ಮೈಸೂರು ಹೆದ್ದಾರಿ, ಮಂಗಳೂ­ರಿನಲ್ಲಿ ಕೈಗೆತ್ತಿಕೊಳ್ಳಲಾಗಿರುವ ಸ್ಮಾರ್ಟ್‌ಸಿಟಿ ಯೋಜನೆ ಸೃಷ್ಟಿಸಿರುವ ಅವಾಂತರಗಳು, ವಿವಿಧ ಜಿಲ್ಲೆಗಳಲ್ಲಿ ಪ್ರಗತಿಯಲ್ಲಿರುವ ಹೆದ್ದಾರಿ ಕಾಮಗಾರಿ­ಗಳ ಅವ್ಯವಸ್ಥೆ, ಪ್ರತೀ ಮಳೆಗಾಲದಲ್ಲಿಯೂ ನಗರಗಳಲ್ಲಿ ಕೃತಕ ಪ್ರವಾಹ ಸೃಷ್ಟಿಯಾಗುತ್ತಿರುವುದು ಸಹಿತ ಹತ್ತು ಹಲವು ಸಮಸ್ಯೆಗಳ ಬಗೆಗೆ ವಿಪಕ್ಷಗಳು ಸರಕಾರದ ಗಮನ ಸೆಳೆಯಲು ಸಜ್ಜಾಗಿವೆ. ರಾಜ್ಯ ಸರಕಾರದ ವಿರುದ್ಧ ಈ ಹಿಂದೆ ಕೇಳಿ ಬಂದಿದ್ದ 40 ಪರ್ಸೆಂಟ್‌ ಕಮಿಷನ್‌ ಆರೋಪ ಪದೇ ಪದೆ ಪ್ರತಿಧ್ವನಿ­ಸುತ್ತಿದ್ದು ಈ ಬಗ್ಗೆಯೂ ಸದನಗಳಲ್ಲಿ ವಾಕ್ಸಮರ ನಡೆಯುವ ಎಲ್ಲ ಸಾಧ್ಯತೆ ಇದೆ.

ಅಧಿವೇಶನ ಎಂದ ಬಳಿಕ ಆಡಳಿತ ಮತ್ತು ವಿಪಕ್ಷ ಸದಸ್ಯರ ನಡುವೆ ಮಾತಿನ ಚಕಮಕಿ, ಚುಚ್ಚುಮಾತು, ಸಭಾತ್ಯಾಗ, ಧರಣಿ ಇವೆಲ್ಲವೂ ಸಾಮಾನ್ಯ. ಆದರೆ ವರ್ಷಗಳುರುಳಿದಂತೆಯೇ ಇವೆಲ್ಲವೂ ಎಲ್ಲೆ ಮೀರುತ್ತಿದ್ದು ಆಡಳಿತ ಮತ್ತು ವಿಪಕ್ಷಗಳ ನಾಯಕರು ಈ ಬಗ್ಗೆ ತಲೆಕೆಡಿಸಿಕೊಳ್ಳುತ್ತಿಲ್ಲ. ಸದನದ ನಿರ್ದಿಷ್ಟ ಕಾರ್ಯಕಲಾಪಗಳು ನಡೆಯುವುದರ ಜತೆಯಲ್ಲಿ ಜನರ ಸಮಸ್ಯೆ, ಬೇಡಿಕೆಗಳ ಕುರಿತಂತೆ ಶಾಸಕರು ಸದನದಲ್ಲಿ ಪ್ರಸ್ತಾವಿಸಿ ಅವುಗಳಿಗೆ ಸರಕಾರದಿಂದ ಸ್ಪಷ್ಟ ಉತ್ತರ ಬಯಸುವುದು ಸಹಜ. ಆದರೆ ಇದ್ಯಾವುದಕ್ಕೂ ಅವಕಾಶ ನೀಡದೆ ಯಾವುದಾದರೊಂದು ವಿಷಯವನ್ನು ಮುಂದಿಟ್ಟು ಅದನ್ನು ಸುದೀರ್ಘ‌ ಕಾಲ ಎಳೆದು ಸದನದ ಕಾರ್ಯಕಲಾಪವನ್ನು ಹಾಳುಗೆಡಹುವ ಸಂಪ್ರದಾಯ ಇದೀಗ ಮಾಮೂಲು ಎಂಬಂತಾಗಿದೆ.

ಅಧಿವೇಶನದ ಸಂದರ್ಭದಲ್ಲಿ ತಮಗೆ ಲಭಿಸುವ ವಿವಿಧ ಭತ್ತೆಗಳನ್ನು ಪಡೆದುಕೊಂಡು ಸದನದ ಕಲಾಪದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳದೆ ಕೇವಲ ಹರಟೆ, ಗಲಾಟೆ, ಗದ್ದಲ ನಡೆಸುವುದಷ್ಟೇ ನಮ್ಮ ಕರ್ತವ್ಯ ಎಂದು ಶಾಸಕರಾ­ದವರು ಭಾವಿಸುವುದು ಸರಿಯಲ್ಲ. ಒಂದೇ ಮಾತಿನಲ್ಲಿ ಹೇಳುವುದಿದ್ದಲ್ಲಿ ಇದು ತಮ್ಮನ್ನು ಚುನಾಯಿಸಿದ ಜನತೆಗೆ ದ್ರೋಹ ಬಗೆದಂತೆಯೇ.

ವಿಪಕ್ಷ ಶಾಸಕರು ಜನರ ಸಮಸ್ಯೆ, ಬೇಡಿಕೆಗಳನ್ನು ಪ್ರಸ್ತಾವಿಸಿದಾಗ ಮತ್ತು ಸರಕಾರದ ವೈಫ‌ಲ್ಯಗಳ ಬಗೆಗೆ ಬೆಟ್ಟು ಮಾಡಿದಾಗ ಸಮರ್ಪಕ ಉತ್ತರ ಮತ್ತು ಸ್ಪಷ್ಟನೆ ನೀಡುವುದು ಸರಕಾರದ ಕರ್ತವ್ಯ. ಇದನ್ನು ಬಿಟ್ಟು ಕಾಲೆಳೆಯಲೆಂದೇ ಸರಕಾರವನ್ನು ತರಾಟೆಗೆ ತೆಗೆದುಕೊಳ್ಳುವುದು, ಸಚಿವರು ನೀಡುವ ಉತ್ತರ­ ಆಲಿಸುವ ಕನಿಷ್ಠ ಸೌಜನ್ಯ ತೋರದಿರು­ವಂತಹ ವಿಪಕ್ಷ ಶಾಸಕರ ಧೋರಣೆ­ಯಾಗಲಿ, ವಿಪಕ್ಷಗಳ ಮೇಲೆ ಮುಗಿಬೀಳು­ವಂತೆ ಆಡಳಿತಾ­ರೂಢ ಪಕ್ಷದ ಶಾಸಕರು ವರ್ತಿಸುವುದಾಗಲಿ ಸದನಗಳ ಘನತೆ, ಗೌರವಗಳಿಗೆ ತಕ್ಕುದಲ್ಲ.

ಈ ಬಾರಿಯ ಅಧಿವೇಶನ 10 ದಿನಗಳಷ್ಟೇ ನಡೆಯಲಿದ್ದು ಈ ಅಲ್ಪ ಅವಧಿ­­ಯಲ್ಲಿ ಉಭಯ ಸದನಗಳಲ್ಲಿ ಮಹತ್ವದ ವಿಷಯಗಳ ಬಗೆಗೆ ಚರ್ಚೆಗಳು ನಡೆಯಬೇಕಿದೆ. ರಾಜ್ಯದ ಅಭಿವೃದ್ಧಿ, ಜನರ ಹಿತದೃಷ್ಟಿಯನ್ನು ಗಮನದಲ್ಲಿರಿಸಿ­ಕೊಂಡು ಈ ಬಾರಿಯಾದರೂ ಅಧಿವೇಶನ ಸುಸೂತ್ರವಾಗಿ ನಡೆಯಲಿ.

ಟಾಪ್ ನ್ಯೂಸ್

By Poll:ಅಯೋಧ್ಯೆ ಸೋಲಿಗೆ ಸೇಡು ತೀರಿಸಿಕೊಂಡ ಯೋಗಿ- ಮಿಲ್ಕಿಪುರ್‌ ಬಿಜೆಪಿ ತೆಕ್ಕೆಗೆ

By Poll: ಅಯೋಧ್ಯೆ ಸೋಲಿಗೆ ಸೇಡು ತೀರಿಸಿಕೊಂಡ ಯೋಗಿ- ಮಿಲ್ಕಿಪುರ್‌ ಬಿಜೆಪಿ ತೆಕ್ಕೆಗೆ

modi (4)

Delhi Result ; ಜನ ಶಕ್ತಿಯೇ ಸರ್ವಶ್ರೇಷ್ಠ! : ಪ್ರಧಾನಿ ಮೋದಿ ಪ್ರತಿಕ್ರಿಯೆ

Belagavi: ಪೊಲೀಸ್ ಠಾಣೆ ಮುಂದೆ‌ ತಂದೆ ಶವವಿಟ್ಟು ಪೊಲೀಸ್ ಇನ್ಸ್‌ಪೆಕ್ಟರ್ ಪ್ರತಿಭಟನೆ

Belagavi: ಪೊಲೀಸ್ ಠಾಣೆ ಮುಂದೆ‌ ತಂದೆ ಶವವಿಟ್ಟು ಪೊಲೀಸ್ ಇನ್ಸ್‌ಪೆಕ್ಟರ್ ಪ್ರತಿಭಟನೆ

1-anna

Delhi Results; ಅಣ್ಣಾ ಹಜಾರೆ ಪ್ರತಿಕ್ರಿಯೆ: ಕೇಜ್ರಿವಾಲ್ ವಿರುದ್ಧ ಕಿಡಿ

14-cyber-fruad

Cyber ​​Fraud: ಸೈಬರ್‌ ವಂಚನೆ: ಒಂದೇ ವರ್ಷ ₹3000 ಕೋಟಿ ಧೋಖಾ

 Delhi Results:27 ವರ್ಷದ ಬಳಿಕ ಬಿಜೆಪಿಗೆ ದೆಹಲಿ ಗದ್ದುಗೆ-ಐವರು CM ಹುದ್ದೆ ರೇಸ್‌ ನಲ್ಲಿ…

Delhi Results:27 ವರ್ಷದ ಬಳಿಕ ದೆಹಲಿಯಲ್ಲಿ ಅರಳಿದ ಕಮಲ-ಐವರು CM ಹುದ್ದೆ ರೇಸ್‌ ನಲ್ಲಿ…

13-propose-day

Propose Day : ಸತ್ತಿರುವವನಿಗೆ ಹೀಗೊಂದು ಪ್ರೊಪೋಸಲ್ ……


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೈಕ್ರೋ ಫೈನಾನ್ಸ್‌ ಕಿರುಕುಳ ತಡೆ ಕಾಯ್ದೆ ಜಾರಿಯಾಗಲಿ

ಮೈಕ್ರೋ ಫೈನಾನ್ಸ್‌ ಕಿರುಕುಳ ತಡೆ ಕಾಯ್ದೆ ಜಾರಿಯಾಗಲಿ

Plastic-2

Editorial: ಪ್ಲಾಸ್ಟಿಕ್‌ ಉತ್ಪನ್ನಗಳಿಗೆ ನಿರ್ಬಂಧ ಕಟ್ಟುನಿಟ್ಟಾಗಿ ಜಾರಿಗೆ ಬರಲಿ

money-Currency

Editorial: ಮೈಕ್ರೋ ಫೈನಾನ್ಸ್‌ಗೆ ಮೂಗುದಾರ ಅಧ್ಯಾದೇಶ ಕಟ್ಟುನಿಟ್ಟಾಗಿ ಜಾರಿ ಆಗಲಿ

ಸರಕಾರಿ ಶಿಕ್ಷಣ ಸಂಸ್ಥೆಗಳ ಬಗೆಗಿನ ಸಮಾಜದ ದೃಷ್ಟಿಕೋನ ಬದಲಾಗಲಿ

ಸರಕಾರಿ ಶಿಕ್ಷಣ ಸಂಸ್ಥೆಗಳ ಬಗೆಗಿನ ಸಮಾಜದ ದೃಷ್ಟಿಕೋನ ಬದಲಾಗಲಿ

1

Editorial: ಬೇಸಗೆಯಲ್ಲಿ ಹೆಚ್ಚುತ್ತಿರುವ ಬೆಂಕಿ ಆಕಸ್ಮಿಕ; ಈಗಿನಿಂದಲೇ ಮುನ್ನೆಚ್ಚರಿಕೆ ಇರಲಿ

MUST WATCH

udayavani youtube

ಪ್ರಥಮ ಶಿವಮೊಗ್ಗ ಕಂಬಳಕ್ಕೆ ಸರ್ವ ಸಿದ್ದತೆ: ಮಾಹಿತಿ ನೀಡಿದ ಈಶ್ವರಪ್ಪ

udayavani youtube

ಮಹಿಳೆಯರ ಸಣ್ಣ ಉದ್ದಿಮೆಗಳ ಬೆಂಬಲಕ್ಕೆ ‘ ಪವರ್ ಪರ್ಬ’

udayavani youtube

ಶ್ರೀ ಕೃಷ್ಣ ಮುಖ್ಯ ಪ್ರಾಣ ದೇವರ ದರ್ಶನ ಪಡೆದ e ಹಾಗೂ ಡಾ| ವೀರೇಂದ್ರ ಹೆಗ್ಗಡೆ

udayavani youtube

ಧರ್ಮಸ್ಥಳ ಕ್ಷೇತ್ರದಂತೆ ಎಸ್.ಡಿ.ಎಂ ಉಜಿರೆ ವೈದ್ಯಕೀಯ ತಂಡದಿಂದ ನಡೆಯಿತೇ ಪವಾಡ

udayavani youtube

ಬದನೆ ಕೃಷಿ ಮಾಡುವ ಸುಲಭ ವಿಧಾನ ಇಲ್ಲಿದೆ ನೋಡಿ

ಹೊಸ ಸೇರ್ಪಡೆ

15-selfie-paradox

Selfie: ಸೆಲ್ಫಿ ಪ್ಯಾರಡಾಕ್ಸ್‌ – ಒಂದು ಸರಳ ಫೋಟೋ ನಮ್ಮ ಜೀವನವನ್ನು ಹೇಗೆ ಪ್ರಭಾವಿಸುತ್ತದೆ?

By Poll:ಅಯೋಧ್ಯೆ ಸೋಲಿಗೆ ಸೇಡು ತೀರಿಸಿಕೊಂಡ ಯೋಗಿ- ಮಿಲ್ಕಿಪುರ್‌ ಬಿಜೆಪಿ ತೆಕ್ಕೆಗೆ

By Poll: ಅಯೋಧ್ಯೆ ಸೋಲಿಗೆ ಸೇಡು ತೀರಿಸಿಕೊಂಡ ಯೋಗಿ- ಮಿಲ್ಕಿಪುರ್‌ ಬಿಜೆಪಿ ತೆಕ್ಕೆಗೆ

modi (4)

Delhi Result ; ಜನ ಶಕ್ತಿಯೇ ಸರ್ವಶ್ರೇಷ್ಠ! : ಪ್ರಧಾನಿ ಮೋದಿ ಪ್ರತಿಕ್ರಿಯೆ

Belagavi: ಪೊಲೀಸ್ ಠಾಣೆ ಮುಂದೆ‌ ತಂದೆ ಶವವಿಟ್ಟು ಪೊಲೀಸ್ ಇನ್ಸ್‌ಪೆಕ್ಟರ್ ಪ್ರತಿಭಟನೆ

Belagavi: ಪೊಲೀಸ್ ಠಾಣೆ ಮುಂದೆ‌ ತಂದೆ ಶವವಿಟ್ಟು ಪೊಲೀಸ್ ಇನ್ಸ್‌ಪೆಕ್ಟರ್ ಪ್ರತಿಭಟನೆ

1-anna

Delhi Results; ಅಣ್ಣಾ ಹಜಾರೆ ಪ್ರತಿಕ್ರಿಯೆ: ಕೇಜ್ರಿವಾಲ್ ವಿರುದ್ಧ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.