ಬದುಕಿಗೆ ಬಾಧಕವಾಗದೆ ನಿರ್ಬಂಧ ಜಾರಿಗೆ ಬರಲಿ


Team Udayavani, Dec 4, 2021, 5:50 AM IST

ಬದುಕಿಗೆ ಬಾಧಕವಾಗದೆ ನಿರ್ಬಂಧ ಜಾರಿಗೆ ಬರಲಿ

ಕೊರೊನಾ ರೂಪಾಂತರ ಒಮಿಕ್ರಾನ್‌ ಪ್ರಕರಣಗಳು ದೇಶದಲ್ಲಿ ಮೊದಲ ಬಾರಿಗೆ ಕರ್ನಾಟಕದಲ್ಲಿ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ತುರ್ತು ಸಭೆ ನಡೆಸಿ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿರುವುದು ಮಾರ್ಗ ಸೂಚಿ ಹೊರ ಡಿ ಸಿರುವುದು ಸ್ವಾಗತಾರ್ಹ. ಒಮಿಕ್ರಾನ್‌ ಜೀವಹಾನಿ ಮಾಡು ವಂತಹ ರೂಪಾಂತರಿ ಅಲ್ಲ ಎಂದು ತಜ್ಞರು ಹೇಳಿರುವುದು ಸಮಾಧಾನಕರ ಸಂಗತಿ. ಸಾರ್ವಜನಿಕರಲ್ಲಿ ಜಾಗೃತಿ ಹಾಗೂ ಮುನ್ನೆಚ್ಚರಿಕೆ ಕ್ರಮಗಳ ಮೂಲಕ ಸರಕಾರವು ಪರಿಸ್ಥಿತಿ ನಿಭಾಯಿಸಬಹುದಾಗಿದೆ.

ಪ್ರಮುಖವಾಗಿ ಒಮಿಕ್ರಾನ್‌ ರಾಜ್ಯದ ಆರ್ಥಿಕತೆಯ ಮೇಲೆ ಪರಿಣಾಮ ಬೀರದಂತೆ ನೋಡಿಕೊಳ್ಳುವ ಹೊಣೆಗಾರಿಕೆ ಸರಕಾರದ ಮೇಲಿದೆ. ಕೊರೊನಾ ಒಂದು ಹಾಗೂ ಎರಡನೇ ಅಲೆಯಿಂದ ಉದ್ಯಮ, ವ್ಯಾಪಾರ ಸೇರಿದಂತೆ ಎಲ್ಲ ವಲಯವೂ ಸಾಕಷ್ಟು ಸಂಕಷ್ಟ ಅನುಭವಿಸಿದೆ. ಈ ಹಂತದಲ್ಲಿ ಮತ್ತೆ ಒಮಿಕ್ರಾನ್‌ನಿಂದಾಗಿ ಸಂಕಷ್ಟ ಎದುರಾದರೆ ಭವಿಷ್ಯದ ಚಿತ್ರಣ ಊಹಿಸಲು ಅಸಾಧ್ಯವಾಗಲಿದೆ.

ರಾಜ್ಯ ಸರಕಾರವು ಕಟ್ಟುನಿಟ್ಟಿನ ಮುಂಜಾಗ್ರತ ಕ್ರಮಗಳನ್ನು ಕೈಗೊಳ್ಳುವುದರಲ್ಲಿ ಯಾವುದೇ ರಾಜಿ ಮಾಡಿಕೊಳ್ಳುವ ಅಗತ್ಯವಿಲ್ಲ. ಅದು ಶಾಲೆ- ಕಾಲೇಜು, ಚಿತ್ರಮಂದಿರ, ಮಾಲ್‌, ಕಲ್ಯಾಣ ಮಂಟಪ, ಸಾರ್ವಜನಿಕ ಸ್ಥಳ, ಬಸ್‌, ರೈಲ್ವೇ, ವಿಮಾನ ನಿಲ್ದಾಣ ಎಲ್ಲೇ ಆಗಿರಲಿ. ಮಾರ್ಗಸೂಚಿ ಪಾಲಿಸದವರ ವಿರುದ್ಧ ಕಠಿನ ಕ್ರಮ ಕೈಗೊಳ್ಳಬೇಕು.

ಇದರ ಜತೆಯಲ್ಲೇ ಆರ್ಥಿಕ ಚಟುವಟಿಕೆಗಳ ಮೇಲೆ ಯಾವುದೇ ಪರಿಣಾಮ ಬೀರದಂತೆಯೂ ಎಚ್ಚರಿಕೆ ವಹಿಸಬೇಕು. ದೈನಂದಿನ ವ್ಯವ ಹಾರ ವಹಿವಾಟು, ಕೈಗಾರಿಕೆ, ಪ್ರವಾಸೋದ್ಯಮ ವಲಯಗಳು ಎಂದಿನಂತೆ ಕಾರ್ಯನಿರ್ವಹಿಸಲು ಅನುವು ಮಾಡಿಕೊಡುವ ಬಗ್ಗೆಯೂ ಹೆಚ್ಚು ಒತ್ತು ಕೊಡಬೇಕು. ಇದರಿಂದ ಆರ್ಥಿಕ ವಲಯಕ್ಕೆ ನಷ್ಟವಾಗುವುದು ತಪ್ಪುತ್ತದೆ.

ಕೊರೊನಾ ಪರಿಸ್ಥಿತಿ ನಿವಾರಣೆಯಿಂದಾಗಿ ಉದ್ಯಮ ವಲಯ ನಿಟ್ಟುಸಿರು ಬಿಟ್ಟು ಸಹಜ ಸ್ಥಿತಿ ನಿರ್ಮಾಣವಾಗುವ ನಿರೀಕ್ಷೆಯಲ್ಲಿದ್ದಾರೆ. ಒಮಿಕ್ರಾನ್‌ನಿಂದಾಗಿ ಆತಂಕ, ಭೀತಿ ಎದುರಾಗದಂತೆ ನೋಡಿ ಕೊಳ್ಳ ಬೇಕಿದೆ. ಆರ್ಥಿಕ ಚೇತರಿಕೆಗೆ ಇದು ಸಹಕಾರಿಯೂ ಸಹ. ವಾಣಿಜ್ಯೋದ್ಯಮ ಸಂಘಟನೆಗಳನ್ನೂ ಈ ನಿಟ್ಟಿನಲ್ಲಿ ವಿಶ್ವಾಸಕ್ಕೆ ತೆಗೆದುಕೊಂಡು ಸರಕಾರ ಮುನ್ನಡೆಯಬೇಕಾಗಿದೆ.

ತತ್‌ಕ್ಷಣಕ್ಕೆ ರಾಜ್ಯ ಸರಕಾರ ಕೈಗೊಂಡಿರುವ ಕ್ರಮಗಳು ಒಳ್ಳೆಯ ಹಾದಿಯಲ್ಲಿವೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹ ಸರ್ವ ರೀತಿಯಲ್ಲಿ ಸಜ್ಜಾಗಿರುವುದು ಉತ್ತಮವಾದ ಬೆಳವಣಿಗೆ. ಇದರಲ್ಲಿ ಸಾರ್ವಜನಿಕರ ಹೊಣೆಗಾರಿಕೆಯೂ ಹೆಚ್ಚಾಗಿದೆ. ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡುವುದು, ಸ್ಯಾನಿಟೈಸರ್‌ ಬಳಕೆ, ಅನಗತ್ಯವಾಗಿ ಗುಂಪು ಸೇರದಿರುವುದು, ಮದುವೆ, ಸಭೆ, ಸಮಾರಂಭಗಳಲ್ಲಿ ಸ್ವಯಂ ಮಿತಿ ಹೇರಿಕೊಂಡು ಕಡಿಮೆ ಜನರನ್ನು ಸೇರುವಂತೆ ನೋಡಿಕೊಳ್ಳಬೇಕಿದೆ.

ಸರಕಾರದ ಮಾರ್ಗಸೂಚಿ ಪಾಲನೆ ಮೂಲಕ ಜವಾಬ್ದಾರಿ ನಿಭಾಯಿ ಸಬೇಕಾಗಿದೆ. ಹಿಂದಿನ ಎರಡು ಅಲೆಗಳ ಸಂದರ್ಭಗಳಲ್ಲಿ ಮಾರ್ಗಸೂಚಿ ಜಾರಿ ಮಾಡಿದ್ದಾಗ ಕೆಲವು ಇಲಾಖೆಗಳ ಅಧಿಕಾರಿಗಳು ಅತ್ಯುತ್ಸಾಹ ತೋರಿಸುವ ನಿಟ್ಟಿನಲ್ಲಿಯೋ, ಕಟ್ಟುನಿಟ್ಟಿನಲ್ಲಿ ನಿಯಮಗಳನ್ನು ಜಾರಿ ಮಾಡಲಾಗುತ್ತಿದೆ ಎನ್ನುವುದನ್ನು ತೋರಿಸಿ ಕೊಳ್ಳುವುದಕ್ಕೆ ಎಂದು ಅತಿರೇಕವಾಗಿ ವರ್ತಿಸಿದ ಉದಾಹರಣೆಗಳು ಇವೆ. ಅಂಥ ಅನಪೇಕ್ಷಿತ ಘಟನೆಗಳು ಪುನರಾವರ್ತನೆಯಾಗದಂತೆ ನೋಡಿಕೊಳ್ಳುವ ಹೊಣೆ ಅಧಿಕಾರಿಗಳಿಗೆ ಮಾತ್ರವಲ್ಲ, ಸಾರ್ವಜನಿಕರಿಗೂ ಇದೆ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-editorial

Editorial: ವಿದ್ಯಾರ್ಹತೆಗೆ ದೇಶವ್ಯಾಪಿ ಮಾನ್ಯತೆ, ಹೈಕೋರ್ಟ್‌ ತೀರ್ಪು ನ್ಯಾಯೋಚಿತ

13-editorial

Temperature: ಸಂಪಾದಕೀಯ-ತಾಪಮಾನ ಹೆಚ್ಚಳದ ಆತಂಕ: ಮುಂಜಾಗ್ರತೆಯೇ ಮದ್ದು

ಉಚಿತಗಳ ಆಮಿಷಗಳಿಗೆ ಕಡಿವಾಣ: ಚು.ಆಯೋಗ ಬದ್ಧತೆ ತೋರಲಿ

ಉಚಿತಗಳ ಆಮಿಷಗಳಿಗೆ ಕಡಿವಾಣ: ಚು.ಆಯೋಗ ಬದ್ಧತೆ ತೋರಲಿ

vidhana-Soudha

Editorial: ಪ್ರಾಥಮಿಕ ಶಾಲಾ ಶಿಕ್ಷಕರ ಪಠ್ಯೇತರ ಹೊರೆ ಇಳಿಸಿ

ಮಹಿಳಾ ಆರೋಪಿಗಳ ಬಂಧನ ವೇಳೆ ವಿವೇಚನೆ ಅತ್ಯವಶ್ಯ

ಮಹಿಳಾ ಆರೋಪಿಗಳ ಬಂಧನ ವೇಳೆ ವಿವೇಚನೆ ಅತ್ಯವಶ್ಯ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.