ರಾಜಕೀಯ ಆರೋಪಗಳು ಎಲ್ಲೆ ಮೀರದಿರಲಿ


Team Udayavani, Sep 22, 2022, 6:00 AM IST

ರಾಜಕೀಯ ಆರೋಪಗಳು ಎಲ್ಲೆ ಮೀರದಿರಲಿ

ರಾಜ್ಯ ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿ ಇರುವಾಗಲೇ ರಾಜಕೀಯ ಪಕ್ಷಗಳ ನಡುವಿನ ವಾಕ್ಸಮರ ತಾರಕಕ್ಕೆ ಏರುತ್ತಿದೆ. ಪ್ರಜಾಪ್ರಭುತ್ವದಲ್ಲಿ ಇದು ಸಹಜ ಕೂಡ. ಆದರೆ ಬುಧವಾರ ನಡೆದಿರುವ ಪೋಸ್ಟರ್‌ ರಾಜಕೀಯ ಮಾತ್ರ ಯಾವುದೇ ಪ್ರಜಾಪ್ರಭುತ್ವವಾದಿಗಳು ಒಪ್ಪುವಂಥದ್ದಲ್ಲ. ರಾಜಕೀಯ ಹೋರಾಟ ಏನೇ ಇರಲಿ ವೈಯಕ್ತಿಕ ಮಟ್ಟಕ್ಕೆ ಇಳಿದು ಪೋಸ್ಟರ್‌ ಅಂಟಿಸುವ ಮಟ್ಟಕ್ಕೆ ಇಳಿಯುವುದು ಉತ್ತಮ ಬೆಳವಣಿಗೆಯಲ್ಲ. ಅದು ಆಡಳಿತ ಪಕ್ಷವಾಗಲಿ ಅಥವಾ ವಿಪಕ್ಷವಾಗಲಿ. ಯಾರಿಗೂ ಶೋಭೆ ತರದು.

ಸರಕಾರದ ವೈಫ‌ಲ್ಯ ಅಥವಾ ಆಕ್ರಮ ಆರೋಪ, ಹಗರಣಗಳ ಬಗ್ಗೆ ಚರ್ಚಿಸಲು ಹಾಗೂ ಆರೋಪ ಮಾಡಲು ವೇದಿಕೆ ಇದ್ದೇ ಇದೆ. ವಿಧಾನಮಂಡಲ ಅಧಿವೇಶನದಲ್ಲಿ ಪ್ರಸ್ತಾವಿಸುವ ಅವಕಾಶವೂ ಇದೆ. ಅದು ಆಗುತ್ತಿದೆ ಸಹ. ಇಷ್ಟಾದರೂ ಮುಖ್ಯಮಂತ್ರಿ ಫೋಟೋ ಹಾಕಿ ಪೇ ಸಿಎಂ ಎಂದು ಪೋಸ್ಟರ್‌ ಅಂಟಿಸುವುದು. ಇದಕ್ಕೆ ಪ್ರತಿಯಾಗಿ ತಿರುಗೇಟು ಎಂಬಂತೆ ಬಿಜೆಪಿ ರಿಡೂ ಸಿದ್ದರಾಮಯ್ಯ, ಇಡಿ ಡಿಕೆಶಿ, ಬರ್ನಲ್‌ ಬ್ರದರ್ಸ್‌ ಎಂಬ ಶೀರ್ಷಿಕೆಯಡಿ ಪೋಸ್ಟರ್‌ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟಿರು ವುದು ಯಾವುದೂ ಸಮರ್ಥನೀಯ ಅಲ್ಲವೇ ಅಲ್ಲ.
ರಾಷ್ಟ್ರ ಮಟ್ಟದಲ್ಲಿ ಕರ್ನಾಟಕದ ರಾಜಕಾರಣಕ್ಕೆ ಒಂದು ಘನತೆ ಇದೆ. ಅದಕ್ಕೆ ಕುತ್ತು ತರುವ ಯಾವುದೇ ಕ್ರಮ, ಪ್ರಯತ್ನ, ಪ್ರಚೋದನ ಕಾರ್ಯಗಳು ಸರಿಯಲ್ಲ. ಆಯಾ ಪಕ್ಷದ ನಾಯಕರು ಈ ಬಗ್ಗೆ ಗಂಭೀರವಾಗಿ ಪರಿಗಣಿಸಬೇಕು. ಇವೆಲ್ಲವೂ ಒಂದು ಅರ್ಥದಲ್ಲಿ ನಮ್ಮ ರಾಜ್ಯದ ಮಾನ ಮರ್ಯಾದೆ ಹರಾಜು ಹಾಕುವಂಥದ್ದು. ಇತ್ತೀಚೆಗೆ ನಮ್ಮ ಮುಖ್ಯಮಂತ್ರಿಗಳು ತೆಲಂಗಾಣಕ್ಕೆ ಹೋಗಿದ್ದಾಗ ಅಲ್ಲಿ 40 ಪರ್ಸೆಂಟ್‌ ಸಿಎಂಗೆ ಸ್ವಾಗತ ಎಂದು ಪೋಸ್ಟರ್‌ ಅಂಟಿಸಿದ್ದು ಖಂಡನೀಯ. ಇಂತಹ ಕೃತ್ಯ ಅಥವಾ ಪ್ರಯತ್ನಗಳಿಗೆ ಯಾರೂ ಬೆಂಬಲ ನೀಡಬಾರದು.

ಮುಖ್ಯಮಂತ್ರಿ ಎಂದರೆ ಪಕ್ಷಾತೀತವಾಗಿ ಅವರು ರಾಜ್ಯಕ್ಕೆ ಮುಖ್ಯಮಂತ್ರಿ. ಆ ಸ್ಥಾನದ ಘನತೆ ಹಾಗೂ ಗೌರವ ಕಾಪಾಡುವುದು ರಾಜ್ಯದ ಪ್ರತಿಯೊಬ್ಬರ ಕರ್ತವ್ಯ. ಅದಕ್ಕೆ ಚ್ಯುತಿ ತರುವ ಪ್ರಯತ್ನಗಳು ನಡೆದಾಗ ಕಡಿವಾಣ ಹಾಕಬೇಕು. ನಿಯಂತ್ರಣ ಮಾಡಬೇಕು. ಅದು ಬಿಟ್ಟು ಹಾಗೆಯೇ ಬಿಟ್ಟರೆ ನಾಳೆ ಮತ್ತೊಂದು ರೀತಿಯ ಅಭಿಯಾನ ಆರಂಭವಾಗುತ್ತದೆ. ಏಟಿಗೆ ಎದಿರೇಟು, ಕ್ರಮಕ್ಕೆ ಪ್ರತಿ ಕ್ರಮ, ಸೇಡಿಗೆ ಪ್ರತಿ ಸೇಡು ಎಂದು ಮುಂದುವರಿದರೆ ಅದಕ್ಕೆ ಅಂತ್ಯವೇ ಇರುವುದಿಲ್ಲ. ಯಾವುದೇ ಒಂದು ಕ್ರಮವೂ ಎಲ್ಲೆ ಮೀರಬಾರದು.

ಇಡೀ ದೇಶದಲ್ಲಿ ಕರ್ನಾಟಕದ ರಾಜಕಾರಣ ಹಾಗೂ ಇಲ್ಲಿನ ನಾಯಕರ ಬಗ್ಗೆ ಅತ್ಯಂತ ದೊಡ್ಡ ಮಟ್ಟದ ಗೌರವ ಇದೆ. ನಮ್ಮ ರಾಜ್ಯದ ರಾಜಕಾರಣಿಗಳು ಇತರರಿಗೆ ಮಾದರಿಯಾಗಿದ್ದಾರೆ. ಹೀಗಿರುವಾಗ ಪೋಸ್ಟರ್‌ ಅಂಟಿಸುವ ಕೀಳು ಅಭಿರುಚಿಯ ಅಭಿಯಾನ ನಡೆಸುವುದು ಸಾಧುವಲ್ಲ. ರಾಜ್ಯದ ಎಲ್ಲ ಪಕ್ಷಗಳ ನಾಯಕರು ಈ ಬಗ್ಗೆ ಯೋಚಿಸಬೇಕು. ಇಂತಹ ಕೃತ್ಯಗಳಿಗೆ ಬೆಂಬಲ ಕೊಡುವ ಹಾಗೂ ಪ್ರಚೋದನಾತ್ಮಕವಾಗಿ, ವೈಯಕ್ತಿಕವಾಗಿ ಟೀಕೆ ಮಾಡುವ ಮಟ್ಟಕ್ಕೆ ಇಳಿಯಬಾರದು.

ರಾಜಕೀಯ ಹೋರಾಟ, ರಾಜಕೀಯ ಆರೋಪಗಳು ಒಂದು ಚೌಕಟ್ಟಿನಲ್ಲಿಯೇ ಇರಬೇಕು. ಇಲ್ಲವಾದರೆ ಮುಂದಿನ ಪೀಳಿಗೆಗೆ ನಾವು ಬಿಟ್ಟುಹೋಗುವ ಆದರ್ಶವಾದರೂ ಎಂತಹುದು. ಇದು ಎಲ್ಲ ರಾಜಕೀಯ ನಾಯಕರು ಆತ್ಮಾವಲೋಕನ ಮಾಡಿಕೊಳ್ಳಬೇಕಾದ ಸಮಯ.

ಟಾಪ್ ನ್ಯೂಸ್

Beluru

Sagara: ಶರಾವತಿ ಮುಳುಗಡೆ ಸಂತ್ರಸ್ತರಿಗೆ ಸರ್ಕಾರದಿಂದ ಶೀಘ್ರವೇ ಪರಿಹಾರ: ಶಾಸಕ ಬೇಳೂರು

4

Panambur: ಮಾದಕ ವಸ್ತು ಸಾಗಾಟ-ಮಾರಾಟ ಪ್ರಕರಣ; ವಿದೇಶಿ ಪ್ರಜೆ ಸೇರಿ 6 ಆರೋಪಿಗಳ ಸೆರೆ

ISREL

Israel ದಾಳಿ ಇನ್ನಷ್ಟು ತೀವ್ರ; 43 ಸಾವಿರಕ್ಕೂ ಹೆಚ್ಚು ಬ*ಲಿ: ವಿಶ್ವಸಂಸ್ಥೆ ತೀವ್ರ ಕಳವಳ

1-a-ranji

Malayalam; ಪುರುಷನ ಮೇಲೆ ಲೈಂಗಿ*ಕ ದೌರ್ಜನ್ಯ!: ನಿರ್ದೇಶಕ ರಂಜಿತ್ ಮೇಲೆ ಪ್ರಕರಣ ದಾಖಲು

HK-Patil

Waqf Property: ವಿಜಯಪುರದ ರೈತರಿಗೆ ಕೊಟ್ಟಿರುವ ನೋಟಿಸ್‌ ವಾಪಸ್‌ಗೆ ಕ್ರಮ: ಸಚಿವ ಪಾಟೀಲ್

army

Jammu & Kashmir: ಸೇನಾ ವಾಹನದ ಮೇಲೆ ದಾಳಿ ನಡೆಸಿದ ಮೂವರು ಉಗ್ರರ ಹ*ತ್ಯೆ

Ajekar Case: ಆರೋಪಿ ದಿಲೀಪ್‌ ಹೆಗ್ಡೆಗೆ ನ್ಯಾಯಾಂಗ ಬಂಧನ ವಿಧಿಸಿದ ಕೋರ್ಟ್

Ajekar Case: ಆರೋಪಿ ದಿಲೀಪ್‌ ಹೆಗ್ಡೆಗೆ ನ್ಯಾಯಾಂಗ ಬಂಧನ ವಿಧಿಸಿದ ಕೋರ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹುಸಿ ಬೆದರಿಕೆ ಸಂದೇಶ ನಿರ್ದಾಕ್ಷಿಣ್ಯ ಕ್ರಮ ಅಗತ್ಯ

ಹುಸಿ ಬೆದರಿಕೆ ಸಂದೇಶ ನಿರ್ದಾಕ್ಷಿಣ್ಯ ಕ್ರಮ ಅಗತ್ಯ

ರಾಜ್ಯಗಳ ನಡುವಿನ ಸಂಬಂಧದ ಸೂಕ್ಷ್ಮತೆ ಮರೆಯಬಾರದು

ರಾಜ್ಯಗಳ ನಡುವಿನ ಸಂಬಂಧದ ಸೂಕ್ಷ್ಮತೆ ಮರೆಯಬಾರದು

ಗ್ರಾಮೀಣರ ಆರೋಗ್ಯ ಸುರಕ್ಷೆ ಮಹತ್ವಾಕಾಂಕ್ಷೆ ಈಡೇರಲಿ

State Govt: ಗ್ರಾಮೀಣರ ಆರೋಗ್ಯ ಸುರಕ್ಷೆ ಮಹತ್ವಾಕಾಂಕ್ಷೆ ಈಡೇರಲಿ

ವಾಯುಮಾಲಿನ್ಯ ನಿಯಂತ್ರಣ ಕಠಿನ ನಿಲುವು ಅನಿವಾರ್ಯ

India: ವಾಯುಮಾಲಿನ್ಯ ನಿಯಂತ್ರಣ ಕಠಿನ ನಿಲುವು ಅನಿವಾರ್ಯ

Flight: ಹುಸಿ ಬಾಂಬ್‌ ಬೆದರಿಕೆ: ಕಠಿನ ಶಿಕ್ಷೆ ಅಗತ್ಯ

Flight: ಹುಸಿ ಬಾಂಬ್‌ ಬೆದರಿಕೆ: ಕಠಿನ ಶಿಕ್ಷೆ ಅಗತ್ಯ

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

4

Kasaragod: ಎಂಡೋಸಲ್ಫಾನ್‌ ಸಂತ್ರಸ್ತೆ ನೇಣು ಬಿಗಿದು ಆತ್ಮಹತ್ಯೆ

Beluru

Sagara: ಶರಾವತಿ ಮುಳುಗಡೆ ಸಂತ್ರಸ್ತರಿಗೆ ಸರ್ಕಾರದಿಂದ ಶೀಘ್ರವೇ ಪರಿಹಾರ: ಶಾಸಕ ಬೇಳೂರು

4

Panambur: ಮಾದಕ ವಸ್ತು ಸಾಗಾಟ-ಮಾರಾಟ ಪ್ರಕರಣ; ವಿದೇಶಿ ಪ್ರಜೆ ಸೇರಿ 6 ಆರೋಪಿಗಳ ಸೆರೆ

ISREL

Israel ದಾಳಿ ಇನ್ನಷ್ಟು ತೀವ್ರ; 43 ಸಾವಿರಕ್ಕೂ ಹೆಚ್ಚು ಬ*ಲಿ: ವಿಶ್ವಸಂಸ್ಥೆ ತೀವ್ರ ಕಳವಳ

dw

Kundapura: ಕುಸಿದು ಬಿದ್ದು ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.