India Market: ಚೀನ ಬೆಳ್ಳುಳ್ಳಿ ಮೇಲಿನ ನಿಷೇಧ ಕಟ್ಟುನಿಟ್ಟಾಗಿ ಕಾರ್ಯಗತಗೊಳ್ಳಲಿ


Team Udayavani, Oct 4, 2024, 2:08 PM IST

India Market: ಚೀನ ಬೆಳ್ಳುಳ್ಳಿ ಮೇಲಿನ ನಿಷೇಧ ಕಟ್ಟುನಿಟ್ಟಾಗಿ ಕಾರ್ಯಗತಗೊಳ್ಳಲಿ

ಮಾನವನ ಆರೋಗ್ಯಕ್ಕೆ ತೀರಾ ಹಾನಿಕಾರಕವಾಗಿರುವ ಚೀನ ಬೆಳ್ಳುಳ್ಳಿಯನ್ನು ಕೇಂದ್ರ ಸರಕಾರ ಜನರ ಆರೋಗ್ಯ ಸುರಕ್ಷೆಯ ದೃಷ್ಟಿಯಿಂದ ನಿಷೇಧಿಸಿದ್ದರೂ ದೇಶದ ವಿವಿಧ ಮಾರುಕಟ್ಟೆಗಳಲ್ಲಿ ಚೀನ ಬೆಳ್ಳುಳ್ಳಿಯ ಮಾರಾಟ ಎಗ್ಗಿಲ್ಲದೆ ಸಾಗಿದೆ. ರಾಜ್ಯದಲ್ಲೂ ಇಂತಹ ಕೆಲವು ಪ್ರಕರಣಗಳನ್ನು ಪತ್ತೆ ಹಚ್ಚಿರುವ ಆಹಾರ ಸುರಕ್ಷೆ ಅಧಿಕಾರಿಗಳು ಮತ್ತು ಸ್ಥಳೀಯಾಡಳಿತ ಸಂಸ್ಥೆಗಳು ಭಾರೀ ಪ್ರಮಾಣದಲ್ಲಿ ನಿಷೇಧಿತ ಚೀನ ಬೆಳ್ಳುಳ್ಳಿಯನ್ನು ವಶಪಡಿಸಿಕೊಂಡಿವೆ. ಈ ಬೆಳವಣಿಗೆ ರಾಜ್ಯದ ಜನತೆಯಲ್ಲಿ ಒಂದಿಷ್ಟು ಗೊಂದಲಕ್ಕೆ ಕಾರಣವಾಗಿದ್ದು ಸ್ವದೇಶಿ ಮತ್ತು ಚೀನ ಬೆಳ್ಳುಳ್ಳಿಯ ನಡುವಣ ವ್ಯತ್ಯಾಸವನ್ನು ಗುರುತಿಸಲು ಗ್ರಾಹಕರಿಗೆ ಕಷ್ಟಸಾಧ್ಯವಾಗಿ ಪರಿಣಮಿಸಿದೆ.

ಚೀನ ಬೆಳ್ಳುಳ್ಳಿ ಗಾತ್ರದಲ್ಲಿ ದೊಡ್ಡದಾಗಿದ್ದು ಭಾರೀ ಪ್ರಮಾಣದಲ್ಲಿ ರಾಸಾಯನಿಕವನ್ನು ಇದಕ್ಕೆ ಸಿಂಪಡಿಸಲಾಗಿರುವುದರಿಂದ ಬೇಗನೇ ಹಾಳಾಗುವುದಿಲ್ಲ. ಅಷ್ಟು ಮಾತ್ರವಲ್ಲದೆ ದೇಸೀ ಬೆಳ್ಳುಳ್ಳಿಗಿಂತ ಅತೀ ಅಗ್ಗದಲ್ಲಿ ಈ ಬೆಳ್ಳುಳ್ಳಿ ಲಭಿಸುವುದರಿಂದ ಚಿಲ್ಲರೆ ಮಾರಾಟಗಾರರು ಮತ್ತು ಗ್ರಾಹಕರು ಈ ಬೆಳ್ಳುಳ್ಳಿಯ ಖರೀದಿಗೆ ಮುಂದಾಗುತ್ತಿದ್ದಾರೆ. ಸಾಮಾನ್ಯವಾಗಿ ಬೆಳ್ಳುಳ್ಳಿ ಸಮಯ ಕಳೆದಂತೆ ತನ್ನ ಭಾರವನ್ನು ಕಳೆದುಕೊಂಡರೆ ಚೀನ ಬೆಳ್ಳುಳ್ಳಿ ದೀರ್ಘ‌ ಕಾಲ ಅದೇ ತೂಕವನ್ನು ಹೊಂದಿರುತ್ತದೆ. ದೊಡ್ಡ ಗಾತ್ರದ್ದಾಗಿರುವುದರಿಂದ ಇದರ ಸಿಪ್ಪೆಯನ್ನು ಬಿಡಿಸುವುದು ಕೂಡ ಸುಲಭವಾಗಿರುವುದರಿಂದ ಗ್ರಾಹಕರು ಈ ಬೆಳ್ಳುಳ್ಳಿಯ ಖರೀದಿಗೆ ಹೆಚ್ಚಿನ ಒಲವು ತೋರುತ್ತಾರೆ.

ಚೀನ ಬೆಳ್ಳುಳ್ಳಿಯನ್ನು ಸೇವಿಸುವವರ ಕಿಡ್ನಿ, ಲಿವರ್‌ಗೆ ಹಾನಿಯಾಗುವ ಸಾಧ್ಯತೆ ಅಧಿಕವಾಗಿದೆ ಎಂದು ಈಗಾಗಲೇ ವೈದ್ಯರು ದೃಢ ಪಡಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಚೀನ ಬೆಳ್ಳುಳ್ಳಿಯ ಆಮದು ಮತ್ತು ಮಾರಾಟಕ್ಕೆ ನಿಷೇಧ ಹೇರಿದೆ. ಇದರ ಹೊರತಾಗಿಯೂ ರಾಜ್ಯದ ವಿವಿಧೆಡೆಗಳ ಮಾರುಕಟ್ಟೆಗಳಿಗೆ ಚೀನ ಬೆಳ್ಳುಳ್ಳಿ ಭಾರೀ ಪ್ರಮಾಣದಲ್ಲಿ ಪೂರೈಕೆಯಾಗುತ್ತಿದೆಯಲ್ಲದೆ ದಿನಸಿ ಮಳಿಗೆಗಳಲ್ಲೂ ಗ್ರಾಹಕರಿಗೆ ಲಭ್ಯವಾಗುತ್ತಿದೆ. ಕೆಲವು ವ್ಯಾಪಾರಸ್ಥರು ಅಧಿಕ ಲಾಭದಾಸೆಯಿಂದ ದೇಸೀ ಬೆಳ್ಳುಳ್ಳಿ ಯೊಂದಿಗೆ ನಿಷೇಧಿತ ಚೀನ ಬೆಳ್ಳುಳ್ಳಿಯನ್ನು ಸೇರಿಸಿ ಮಾರಾಟ ಮಾಡುತ್ತಿದ್ದಾರೆ.

ಚೀನ ಬೆಳ್ಳುಳ್ಳಿಯ ಆಮದು ಮತ್ತು ಮಾರಾಟಕ್ಕೆ ನಿಷೇಧ ಹೇರಿದ್ದರೂ ಇದು ಭಾರೀ ಪ್ರಮಾಣದಲ್ಲಿ ದೇಶದೆಲ್ಲೆಡೆ ಮಾರುಕಟ್ಟೆಯಲ್ಲಿ ಇನ್ನೂ ಲಭ್ಯವಿರುವುದು ಗ್ರಾಹಕರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ನಿಷೇಧ ಕೇವಲ ಕಡತಕ್ಕೆ ಸೀಮಿತವಾ ಗಿದೆಯೇ ಅಥವಾ ಇನ್ನೂ ಕಳ್ಳಮಾರ್ಗದಲ್ಲಿ ಚೀನದಿಂದ ಬೆಳ್ಳುಳ್ಳಿಯನ್ನು ಆಮದು ಮಾಡಿಕೊಳ್ಳುವ ದಂಧೆಯಲ್ಲಿ ವ್ಯಾಪಾರಸ್ಥರು ತೊಡಗಿಕೊಂಡಿದ್ದಾರೆಯೇ ಎಂಬ ಸಂಶಯ ಜನರನ್ನು ಕಾಡತೊಡಗಿದೆ. ಇನ್ನೂ ಮಾರುಕಟ್ಟೆಗೆ ಚೀನ ಬೆಳ್ಳುಳ್ಳಿ ಪೂರೈಕೆ ಯಾಗುತ್ತಿರುವುದನ್ನು ಕಂಡಾಗ ನಿಷೇಧಕ್ಕೂ ಮುನ್ನ ಆಮದು ಮಾಡಿಕೊಳ್ಳಲಾದ ಚೀನ ಬೆಳ್ಳುಳ್ಳಿಯ ದಾಸ್ತಾನನ್ನು ಸಂಬಂಧಿತ ಇಲಾಖೆ ಸಂಪೂರ್ಣವಾಗಿ ಮುಟ್ಟು ಗೋಲು ಹಾಕಿಕೊಂಡಿಲ್ಲವೇ ಅಥವಾ ಇದನ್ನೇ ದಂಧೆಯಾಗಿಸಿಕೊಂಡಿರುವ ವ್ಯಾಪಾರಸ್ಥರು ಅಕ್ರಮವಾಗಿ ಚೀನ ಬೆಳ್ಳುಳ್ಳಿಯನ್ನು ದಾಸ್ತಾನು ಇರಿಸಿಕೊಂಡಿ ದ್ದಾರೆಯೇ ಎಂಬ ಸಂಶಯ ಸಹಜವಾಗಿಯೇ ಮೂಡು ತ್ತದೆ. ಇವೆಲ್ಲದರತ್ತ ಸಂಬಂಧಿತ ಇಲಾಖೆ, ಆಹಾರ ಸುರಕ್ಷೆ ಅಧಿಕಾರಿಗಳು ತುರ್ತಾಗಿ ಗಮನಹರಿಸಬೇಕು.

ನಿಷೇಧಿತ ಚೀನ ಬೆಳ್ಳುಳ್ಳಿಯನ್ನು ದೇಶದ ಮಾರುಕಟ್ಟೆಯಿಂದ ಸಂಪೂರ್ಣವಾಗಿ ಹಿಂದೆಗೆದುಕೊಳ್ಳಲು ಅಗತ್ಯ ಕ್ರಮಗಳನ್ನು ತತ್‌ಕ್ಷಣ ಕೈಗೊಳ್ಳಬೇಕು. ಜತೆಯಲ್ಲಿ ಇದರ ದಾಸ್ತಾನನ್ನೂ ಸಂಪೂರ್ಣವಾಗಿ ಮುಟ್ಟು ಗೋಲು ಹಾಕಿಕೊಳ್ಳು ವುದರ ಜತೆಯಲ್ಲಿ ಇದು ಅಡ್ಡಹಾದಿಯಲ್ಲಿ ಚೀನದಿಂದ ಆಮದುಗೊಂಡು ಕಾಳಸಂತೆಯ ಮೂಲಕ ಮಾರುಕಟ್ಟೆ ಪ್ರವೇಶಿಸದಂತೆ ಕಟ್ಟೆಚ್ಚರ ವಹಿಸಬೇಕು. ಚಿಲ್ಲರೆ ವ್ಯಾಪಾರಿಗಳು ಕೂಡ ನಿಷೇಧಿತ ಚೀನ ಬೆಳ್ಳುಳ್ಳಿಯನ್ನು ತಿರಸ್ಕರಿಸುವ ಮೂಲಕ ಗ್ರಾಹಕರ ಹಿತರಕ್ಷಿಸಬೇಕು. ಇನ್ನು ಗ್ರಾಹಕರು ಈ ಬಗ್ಗೆ ಒಂದಿಷ್ಟು ಮುಂಜಾಗ್ರತೆ ವಹಿಸಬೇಕಿದ್ದು ಸಾಧ್ಯವಾದಷ್ಟು ಸಣ್ಣಗಾತ್ರದ ದೇಸೀ ಬೆಳ್ಳುಳ್ಳಿಯ ಖರೀದಿಗೆ ಒಲವು ತೋರಬೇಕು.

ಟಾಪ್ ನ್ಯೂಸ್

11-kukke

Navaratri: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಹುಲಿ ವೇಷ ಕುಣಿತ ವೀಕ್ಷಿಸಿದ ನಟಿ ರಕ್ಷಿತಾ ಪ್ರೇಮ್

9-uv-fusion

UV Fusion: ಸ್ವಕಲಿಕೆ ಮತ್ತು ಆತ್ಮಸ್ತೈರ್ಯ

Vijayapura: ಬೈಕ್ – ಲಾರಿ ನಡುವೆ ಭೀಕರ ಅಪಘಾತ… ಇಬ್ಬರು ಮೃತ್ಯು; ಸ್ಥಳೀಯರಿಂದ ಪ್ರತಿಭಟನೆ

Vijayapura: ಬೈಕ್ – ಲಾರಿ ನಡುವೆ ಭೀಕರ ಅಪಘಾತ… ಇಬ್ಬರು ಮೃತ್ಯು; ಸ್ಥಳೀಯರಿಂದ ಪ್ರತಿಭಟನೆ

10-sagara

Sagara: ಬಾಣಂತಿಗೆ ಕಪಾಳಮೋಕ್ಷ; ಪ್ರಸೂತಿ ವೈದ್ಯರ ವಿರುದ್ಧ ಪ್ರಕರಣ ದಾಖಲು

Retro style trends in social media

Retro Style; ಸೋಶಿಯಲ್‌ ಮೀಡಿಯಾದಲ್ಲೊಂದು ರೆಟ್ರೋ ಸ್ಟೈಲ್‌

Mangaluru: ತ್ರಿಶಾ ಪದವಿ ಕಾಲೇಜಿನ ನೂತನ ಕಟ್ಟಡ ಉದ್ಘಾಟನೆ

Mangaluru: ತ್ರಿಶಾ ಪದವಿ ಕಾಲೇಜಿನ ನೂತನ ಕಟ್ಟಡ ಉದ್ಘಾಟನೆ

8-uv-fusion-1

UV Fusion: ಭೂತ ಭವಿಷ್ಯ ಬಿಟ್ಟು ಈ ಕ್ಷಣ ಜೀವಿಸಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

supreme-Court

Encroachment: ಅಕ್ರಮ ನಿರ್ಮಾಣಗಳ ತೆರವು: ಸುಪ್ರೀಂಕೋರ್ಟ್‌ ನಿಲುವು ಸ್ವಾಗತಾರ್ಹ

immifra

Illegal immigrants: ಅಕ್ರಮ ವಲಸಿಗರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಅಗತ್ಯ

Fake-Medicine

Medicines: ನಶೆಭರಿತ ಔಷಧಗಳಿಗೆ ಲಗಾಮು ಕಾಳಸಂತೆಯತ್ತಲೂ ಇರಲಿ ನಿಗಾ

UN-Assembly

UN General Assembly: ಕಾಶ್ಮೀರ ವಿಷಯ ಪ್ರಸ್ತಾವಿಸಿದ ಪಾಕಿಸ್ಥಾನಕ್ಕೆ ಭಾರತ ತಪರಾಕಿ

WHO

Permanent Member: ಭದ್ರತಾ ಮಂಡಳಿ ಖಾಯಂ ಸದಸ್ಯತ್ವ: ಭಾರತಕ್ಕೆ ಆನೆಬಲ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

ಹೊಸ ಮಾರುಕಟ್ಟೆಗೆ ಪ್ರವೇಶ: ಕೊಲ್ಹಾಪುರ ಮಾರುಕಟ್ಟೆಗೆ ಕಲಬುರಗಿ ಹಾಲು!

ಹೊಸ ಮಾರುಕಟ್ಟೆಗೆ ಪ್ರವೇಶ: ಕೊಲ್ಹಾಪುರ ಮಾರುಕಟ್ಟೆಗೆ ಕಲಬುರಗಿ ಹಾಲು!

11-kukke

Navaratri: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಹುಲಿ ವೇಷ ಕುಣಿತ ವೀಕ್ಷಿಸಿದ ನಟಿ ರಕ್ಷಿತಾ ಪ್ರೇಮ್

9-uv-fusion

UV Fusion: ಸ್ವಕಲಿಕೆ ಮತ್ತು ಆತ್ಮಸ್ತೈರ್ಯ

Vijayapura: ಬೈಕ್ – ಲಾರಿ ನಡುವೆ ಭೀಕರ ಅಪಘಾತ… ಇಬ್ಬರು ಮೃತ್ಯು; ಸ್ಥಳೀಯರಿಂದ ಪ್ರತಿಭಟನೆ

Vijayapura: ಬೈಕ್ – ಲಾರಿ ನಡುವೆ ಭೀಕರ ಅಪಘಾತ… ಇಬ್ಬರು ಮೃತ್ಯು; ಸ್ಥಳೀಯರಿಂದ ಪ್ರತಿಭಟನೆ

ಒಣ ಕೊಬ್ಬರಿಗೆ ಈಗ ಬಂಗಾರದ ಬೆಲೆ; ಬೆಲೆ ಹೆಚ್ಚಳಕ್ಕೇನು ಕಾರಣ?

ಒಣ ಕೊಬ್ಬರಿಗೆ ಈಗ ಬಂಗಾರದ ಬೆಲೆ; ಬೆಲೆ ಹೆಚ್ಚಳಕ್ಕೇನು ಕಾರಣ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.