ಹೊಸ ಶಿಕ್ಷಣ ನೀತಿ ಜಾರಿಗೆ ಮುನ್ನ ಗೊಂದಲಗಳು ಬಗೆಹರಿಯಲಿ


Team Udayavani, Aug 23, 2021, 6:00 AM IST

ಹೊಸ ಶಿಕ್ಷಣ ನೀತಿ ಜಾರಿಗೆ ಮುನ್ನ ಗೊಂದಲಗಳು ಬಗೆಹರಿಯಲಿ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಕ್ರಾಂತಿಕಾರಿ ಬದಲಾವಣೆ ತರುವ ಉದ್ದೇಶ ದೊಂದಿಗೆ ರೂಪಿತವಾಗಿರುವ ದೇಶೀಯತೆಯ ಸೊಗಡಿನಲ್ಲಿ ಕೌಶಲಭರಿತ ವಿದ್ಯಾ ವಂತರನ್ನು ಸೃಷ್ಟಿಸುವ ಮಹತ್ತರ ಗುರಿಯನ್ನು ಹೊಂದಿರುವ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಪ್ರಸಕ್ತ ಸಾಲಿನಿಂದಲೇ ರಾಜ್ಯದಲ್ಲಿ ಜಾರಿಗೆ ತರಲು ಸರಕಾರ ಮುಂದಾಗಿದೆ. ತಿಂಗಳುಗಳ ಹಿಂದೆಯೇ ಈ ಬಗ್ಗೆ ಅಧಿಕೃತವಾಗಿ ರಾಜ್ಯದ ಉನ್ನತ ಶಿಕ್ಷಣ ಸಚಿವ ಡಾ| ಸಿ.ಎನ್‌.ಅಶ್ವತ್ಥನಾರಾಯಣ ಘೋಷಿ ಸಿ ದ್ದರಾದರೂ ಈ ಬಗೆಗಿನ ಗೊಂದಲಗಳು ಇನ್ನೂ ಮುಂದು ವರಿದಿದ್ದು ಸರಕಾರದ ಈ ಆತುರದ ನಿರ್ಧಾರಕ್ಕೆ ಶಿಕ್ಷಣ ತಜ್ಞರಿಂದ ಅಪಸ್ವರಗಳು ಕೇಳಿಬಂದಿವೆ.

ರಾಜ್ಯ ಸರಕಾರದ ನಿರ್ಧಾರದಂತೆ ಸೋಮವಾರದಂದು ನೂತನ ರಾಷ್ಟ್ರೀಯ ಶಿಕ್ಷಣ ನೀತಿಯಡಿ ಕಲಿಕೆಗೆ ವಿದ್ಯಾರ್ಥಿಗಳ ದಾಖಲಾತಿ ಪ್ರಕ್ರಿಯೆ ಆರಂಭಗೊಳ್ಳಲಿದ್ದು, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ಅವರು ಆನ್‌ಲೈನ್‌ ಮೂಲಕ ಚಾಲನೆ ನೀಡಲಿದ್ದಾರೆ. ರಾಜ್ಯದ ವಿವಿಗಳಲ್ಲಿ ಧಾರವಾಡದ ಕರ್ನಾಟಕ ವಿವಿ ಹಾಗೂ ಮೈಸೂರು ವಿವಿಯು ಹೊಸ ನೀತಿಯನ್ನು ಅನುಷ್ಠಾನಗೊಳಿಸುತ್ತಿರುವ ಮೊದಲ ವಿವಿಗಳು. ಸದ್ಯ ಹೊಸ ಶಿಕ್ಷಣ ನೀತಿಯಡಿ ವಿದ್ಯಾರ್ಥಿಗಳ ದಾಖಲಾತಿ ನಡೆಯಲಿದ್ದು ತರಗತಿಗಳು ಅಕ್ಟೋಬರ್‌ನಿಂದ ನಡೆಯಲಿವೆ. ಸೆಪ್ಟಂಬರ್‌ ಅಂತ್ಯದೊಳಗೆ ಹೊಸ ಪಠ್ಯಕ್ರಮಗಳು ಅಂತಿಮಗೊಳ್ಳಲಿವೆ.

ಆದರೆ ರಾಜ್ಯ ಸರಕಾರದ ಈ ಆತುರದ ನಿರ್ಧಾರದ ಬಗೆಗೆ ಶಿಕ್ಷಣ ತಜ್ಞರು ಮತ್ತು ಶಿಕ್ಷಣ ಸಂಸ್ಥೆಗಳಿಂದಲೇ  ವಿರೋಧ ಕೇಳಿ ಬಂದಿದ್ದು ನೂತನ ಶಿಕ್ಷಣ ನೀತಿಯಲ್ಲಿ ಪ್ರಸ್ತಾವಿಸಲಾಗಿರುವ ಮಹತ್ವದ ವಿಚಾರಗಳೆಲ್ಲವನ್ನೂ ನಿರ್ಲಕ್ಷಿಸಿ ದಿಢೀರನೆ ಹೊಸ ನೀತಿಯನ್ನು ಜಾರಿಗೊಳಿಸುತ್ತಿರುವ ಹಿಂದಿನ ಉದ್ದೇಶವಾದರೂ ಏನು ಎಂಬುದು ಮಾತ್ರ ಯಕ್ಷಪ್ರಶ್ನೆ. ಈ ಮೂಲಕ ರಾಜ್ಯ ಸರಕಾರ ಅತ್ಯುತ್ತಮ ಶಿಕ್ಷಣ ನೀತಿಯನ್ನು ಆರಂಭಿಕ ಹಂತದಲ್ಲಿಯೇ ವಿಫ‌ಲಗೊಳಿಸಲಿದೆಯೇ ಎಂಬ ಆತಂಕವೂ ವ್ಯಕ್ತವಾಗಿದೆ.

ಪದವಿ ತರಗತಿ, ವಿಷಯಗಳ ಆಯ್ಕೆಯ ಗೊಂದಲ, ಭಾಷಾ ವಿಷಯ ಗಳ ಬಗೆಗೆ ನಿರ್ಲಕ್ಷ್ಯ, ಕಾಲೇಜು ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಮೂಲ ಸೌಕ ರ್ಯಗಳ ಕೊರತೆ ಆದಿಯಾಗಿ ಹಲವಾರು ವಿಷಯಗಳ ಬಗೆಗೆ ಗೋಜಲುಗಳು ಇನ್ನೂ ಮುಂದುವರಿದಿರುವಂತೆಯೇ ಸರಕಾರ ಮಾತ್ರ ಹಠಕ್ಕೆ ಬಿದ್ದಂತೆ ನೂತನ ಶಿಕ್ಷಣ ನೀತಿಯನ್ನು ಜಾರಿಗೊಳಿಸ ಹೊರಟಿ ರುವುದು ತೀವ್ರ ಅಚ್ಚರಿಗೆ ಕಾರಣವಾಗಿದೆ. ಆರಂಭದಿಂದಲೂ ವಿವಿಧ ವಿದ್ಯಾರ್ಥಿ ಸಂಘಟನೆಗಳು, ಶಿಕ್ಷಣ ತಜ್ಞರು, ವಿದ್ಯಾರ್ಥಿಗಳ ಹೆತ್ತವರು ಈ ಎಲ್ಲ ಗೊಂದಲಗಳ ಬಗೆಗೆ ಸರಕಾರದ ಮತ್ತು ಸಚಿವರ ಗಮನ ಸೆಳೆದಿದ್ದರು.   ಈ ಗೊಂದಲಗಳ ನಿವಾರಣೆಗೆ ಯಾವುದೇ ಪ್ರಯತ್ನ ನಡೆದಿಲ್ಲ. ಅಷ್ಟು ಮಾತ್ರವಲ್ಲದೆ ಶಿಕ್ಷಣ ನೀತಿಯಲ್ಲಿಯೇ ಹೇಳಲಾಗಿರುವಂತೆ ಹೊಸ ವ್ಯವಸ್ಥೆಯ ಜಾರಿಗೂ ಮುನ್ನ ಶಿಕ್ಷಣ ಸಂಸ್ಥೆಗಳು ಮತ್ತು ವಿವಿ, ಕಾಲೇಜು ಗಳಲ್ಲಿ ಅಗತ್ಯ ಮೂಲಸೌಕರ್ಯ, ಉಪನ್ಯಾಸಕರ ನೇಮಕ ಮತ್ತಿತರ ವಿಚಾರಗಳ ಬಗೆಗೆ ಸರಕಾರ ಚಕಾರವೆತ್ತಿಲ್ಲ.

ಕಾಟಾಚಾರಕ್ಕೆ ಎಂಬಂತೆ ಶಿಕ್ಷಣ ತಜ್ಞರ ಸಭೆ ನಡೆಸಿದ್ದನ್ನು ಬಿಟ್ಟರೆ ಪೂರ್ವತಯಾರಿಯನ್ನು ನಡೆಸದೆ, ವಿದ್ಯಾರ್ಥಿಗಳು, ಹೆತ್ತವರನ್ನು ಕೂಡ ವಿಶ್ವಾಸಕ್ಕೆ ತೆಗೆದುಕೊಳ್ಳದೆ ಏಕಾಏಕಿ ಹೊಸ ಶಿಕ್ಷಣ ನೀತಿಯನ್ನು ಜಾರಿಗೊಳಿಸಲಾಗುತ್ತಿದೆ. ತರಗತಿ ಆರಂಭಗೊಳ್ಳಲು ಇನ್ನೂ ತಿಂಗಳ ಕಾಲಾವಕಾಶ ಇದ್ದು ಈ ಅವಧಿಯಲ್ಲಾದರೂ ಇತ್ತ ಗಮನಹರಿಸಿ ನೂತನ ಶಿಕ್ಷಣ ನೀತಿಯ ಉದ್ದೇಶ ನೈಜವಾಗಿ ಈಡೇರುವಂತಾಗಬೇಕು.

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-editorial

Editorial: ವಿದ್ಯಾರ್ಹತೆಗೆ ದೇಶವ್ಯಾಪಿ ಮಾನ್ಯತೆ, ಹೈಕೋರ್ಟ್‌ ತೀರ್ಪು ನ್ಯಾಯೋಚಿತ

13-editorial

Temperature: ಸಂಪಾದಕೀಯ-ತಾಪಮಾನ ಹೆಚ್ಚಳದ ಆತಂಕ: ಮುಂಜಾಗ್ರತೆಯೇ ಮದ್ದು

ಉಚಿತಗಳ ಆಮಿಷಗಳಿಗೆ ಕಡಿವಾಣ: ಚು.ಆಯೋಗ ಬದ್ಧತೆ ತೋರಲಿ

ಉಚಿತಗಳ ಆಮಿಷಗಳಿಗೆ ಕಡಿವಾಣ: ಚು.ಆಯೋಗ ಬದ್ಧತೆ ತೋರಲಿ

vidhana-Soudha

Editorial: ಪ್ರಾಥಮಿಕ ಶಾಲಾ ಶಿಕ್ಷಕರ ಪಠ್ಯೇತರ ಹೊರೆ ಇಳಿಸಿ

ಮಹಿಳಾ ಆರೋಪಿಗಳ ಬಂಧನ ವೇಳೆ ವಿವೇಚನೆ ಅತ್ಯವಶ್ಯ

ಮಹಿಳಾ ಆರೋಪಿಗಳ ಬಂಧನ ವೇಳೆ ವಿವೇಚನೆ ಅತ್ಯವಶ್ಯ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.