ಹಬ್ಬಗಳ ಸಂಭ್ರಮದಲ್ಲಿ ಕೋವಿಡ್ ನಿಯಮ ಪಾಲನೆಯಾಗಲಿ


Team Udayavani, Aug 13, 2022, 6:00 AM IST

ಹಬ್ಬಗಳ ಸಂಭ್ರಮದಲ್ಲಿ ಕೋವಿಡ್ ನಿಯಮ ಪಾಲನೆಯಾಗಲಿ

ಸ್ವಾತಂತ್ರ್ಯೋತ್ಸವದಿಂದ ಹಿಡಿದು, ಆಗಸ್ಟ್‌ ತಿಂಗಳಿನಾದ್ಯಂತ ಸರಣಿ ಹಬ್ಬಗಳು ಬರುತ್ತಿವೆ. ಆ. 13ರಿಂದಲೇ ಮೂರು ದಿನಗಳ ಕಾಲ ಎಲ್ಲೆಡೆ ಸ್ವಾತಂತ್ರ್ಯೋತ್ಸವ ಸಮಾರಂಭ ನಡೆಯಲಿದೆ. ಈ ಸಂಭ್ರಮದ ನಡುವೆಯೇ ದೇಶಾದ್ಯಂತ ಕೊರೊನಾ ಸೋಂಕುಗಳು ಹೆಚ್ಚಳವಾಗು ತ್ತಿರುವುದು ಮಾತ್ರ ಆತಂಕಕ್ಕೆ ಕಾರಣವಾಗಿದೆ.

ಇತ್ತೀಚಿನ ದಿನಗಳಲ್ಲಿ ಕರ್ನಾಟಕದಲ್ಲಿ ಪ್ರತಿದಿನವೂ ಒಂದು ಸಾವಿರದಿಂದ ಎರಡು ಸಾವಿರದ ಆಸುಪಾಸಿಗೆ ಸೋಂಕುಗಳು ಕಂಡುಬರುತ್ತಿವೆ. ಅಂದರೆ ಪಾಸಿಟಿವಿಟಿ ದರ ಶೇ.7ರ ಸುಮಾರಿನಲ್ಲಿದೆ. ಶುಕ್ರವಾರವೇ ಶೇ.6.63ರಷ್ಟು ಪಾಸಿಟಿವಿಟಿ ದರ ಕಂಡು ಬಂದಿದೆ. ಜತೆಗೆ, 2,032 ಮಂದಿಗೆ ಸೋಂಕು ತಗಲಿದ್ದು, ಬೆಂಗಳೂರಿನಲ್ಲೇ 1,202 ಮಂದಿಗೆ ಸೋಂಕು ದೃಢಪಟ್ಟಿದೆ. 5 ಮಂದಿ ಸಾವನ್ನಪ್ಪಿದ್ದಾರೆ ಕೂಡ. ಹೀಗಾಗಿ ಎಚ್ಚರಿಕೆಯಿಂದ ಇರಬೇಕಾದದ್ದು ಅನಿವಾರ್ಯವಾಗಿದೆ.

ಇದು ಕೇವಲ ರಾಜ್ಯದ ಕಥೆಯಲ್ಲ. ದೇಶದಲ್ಲಿಯೂ ಪ್ರತಿದಿನ 20 ಸಾವಿರದ ಆಸುಪಾಸಿನಲ್ಲಿ ಕೊರೊನಾ ಪ್ರಕರಣಗಳು ಪತ್ತೆಯಾಗುತ್ತಿವೆ. ಶುಕ್ರವಾರ 16,561 ಪ್ರಕರಣ ಪತ್ತೆಯಾಗಿವೆ. 49 ಮಂದಿ ಸಾವನ್ನಪ್ಪಿದ್ದಾರೆ. ಆದರೆ ಕಳೆದ ವರ್ಷದ ಇದೇ ಸುಮಾರಿಗೆ ನೋಡುವುದಾದರೆ ಸಾವಿನ ಸಂಖ್ಯೆ ತೀರಾ ಕಡಿಮೆ ಇದೆ ಎಂದೇ ಹೇಳಬಹುದು.
ಕೊರೊನಾ ಎರಡನೇ ಅಲೆಗೆ ಹೋಲಿಕೆ ಮಾಡಿದರೆ ಈ ಪ್ರಕರಣಗಳು ತೀರಾ ಕಡಿಮೆ ಎಂದೇ ಹೇಳಬಹುದು. ಆದರೆ ಎಚ್ಚರ ತಪ್ಪಿದರೆ ಮಾತ್ರ ಕೇಸು ಹೆಚ್ಚಳವಾಗುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದೇ ತಜ್ಞರು ಹೇಳುತ್ತಾರೆ.

ಈಗಾಗಲೇ ಜನ ಕೊರೊನಾ ದೂರ ವಾಗಿದೆ ಎಂಬ ಲೆಕ್ಕಾಚಾರಕ್ಕೆ ಬಂದಾಗಿದೆ. ಹೀಗಾಗಿ ಸಾಮಾಜಿಕ ಅಂತರ, ಮಾಸ್ಕ್ ಧಾರಣೆ, ಶುಚಿತ್ವ ಕಾಪಾಡಿಕೊಳ್ಳುವುದು ಜನರಿಂದ ಮರೆಯಾಗಿದೆ. ಇದರ ನಡುವೆಯೇ, ಇತ್ತೀಚಿನ ದಿನಗಳಲ್ಲಿ ಒಂದಷ್ಟು ವಾತಾವರಣಕ್ಕೆ ಹೊಂದಿಕೊಂಡಂಥ ರೋಗಗಳಾದ ಜ್ವರ, ತಲೆನೋವು, ಶೀತ, ಕೆಮ್ಮು ಕೂಡ ಕಾಣಿಸಿಕೊಳ್ಳುತ್ತಿದೆ. ಈ ಲಕ್ಷಣಗಳು ಕೊರೊನಾವೇ ಅಥವಾ ಬೇರಾವ ಜ್ವರವೇ ಎಂಬ ದ್ವಂದ್ವದಲ್ಲಿಯೂ ಆಸ್ಪತ್ರೆಗಳು ಮತ್ತು ಜನರಿದ್ದಾರೆ.

ಏನೇ ಆದರೂ ಈ ರೋಗ ಲಕ್ಷಣಗಳ ಸಂಬಂಧ ಯಾರೂ ನಿರ್ಲಕ್ಷ್ಯ ತೋರಬಾರದು. ಇಂಥ ರೋಗ ಲಕ್ಷಣಗಳು ಕಂಡ ಬಳಿಕ ವೈದ್ಯರ ಸಲಹೆ ಮೇರೆಗೆ ಪರೀಕ್ಷೆ ಮಾಡಿಸಿಕೊಳ್ಳಬೇಕು. ಇನ್ನು ಸ್ವಾತಂತ್ರ್ಯೋತ್ಸವದ ಮುನ್ನೆಚ್ಚರಿಕೆಯಾಗಿ ಕೇಂದ್ರ ಸರಕಾರ ಶುಕ್ರವಾರ ಕೆಲವೊಂದು ಸೂಚನೆಗಳನ್ನೂ ನೀಡಿದೆ.

ಅಂದರೆ, ಕಡ್ಡಾಯ ವಾಗಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು, ಹೆಚ್ಚು ಜನರನ್ನು ಸೇರಿಸದೇ ಸ್ವಾತಂತ್ರ್ಯೋತ್ಸವ ನಡೆಸುವುದು ಇದರಲ್ಲಿ ಸೇರಿದೆ. ಈ ನಿಯಮಗಳನ್ನು ಪಾಲನೆ ಮಾಡಿಕೊಂಡು ಸ್ವಾತಂತ್ರ್ಯೋತ್ಸವ ಆಚರಿಸಿದರೆ, ಕೊರೊನಾವನ್ನು ನಿಯಂತ್ರಿಸಬಹುದು. ಇಲ್ಲದಿದ್ದರೆ ಕಷ್ಟಕರ ಸನ್ನಿವೇಶ ನಿರ್ಮಾಣವಾಗುವುದರಲ್ಲಿ ಸಂಶಯವಿಲ್ಲ.

ಈಗಾಗಲೇ ದಿಲ್ಲಿ ಸರಕಾರ ಮಾಸ್ಕ್ ಧಾರಣೆ ಸಂಬಂಧ ದಂಡ ವಿಧಿಸುವ ಕ್ರಮಕ್ಕೆ ಮುಂದಾಗಿದೆ. ಕರ್ನಾಟಕದಲ್ಲೂ ಮಾರುಕಟ್ಟೆ, ಮಾಲ್‌ಗ‌ಳು ಸೇರಿದಂತೆ ಜನರು ಸೇರುವಂಥ ಪ್ರದೇಶಗಳಲ್ಲಿ ಮಾಸ್ಕ್ ಧರಿಸುವಂತೆ ಸೂಚಿಸಲಾಗಿದೆ.

ಸದ್ಯ ದಂಡವಿಲ್ಲ ಎಂದಾದರೂ, ಇದೇ ಕಾರಣಕ್ಕಾಗಿ ಮಾಸ್ಕ್ ಇಲ್ಲದೇ ಓಡಾಟ ನಡೆಸುವುದು ತರವಲ್ಲ. ಈ ವಿಚಾರವನ್ನು ಮನದಲ್ಲಿ ಇರಿಸಿಕೊಂಡು ಎಲ್ಲರೂ ನಿಯಮ ಪಾಲನೆ ಮಾಡಬೇಕು. ಇದೆಲ್ಲವೂ ಜನರ ಕೈಯಲ್ಲಿಯೇ ಇದೆ ಎಂಬುದನ್ನು ಮರೆಯಬಾರದು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-editorial

Editorial: ವಿದ್ಯಾರ್ಹತೆಗೆ ದೇಶವ್ಯಾಪಿ ಮಾನ್ಯತೆ, ಹೈಕೋರ್ಟ್‌ ತೀರ್ಪು ನ್ಯಾಯೋಚಿತ

13-editorial

Temperature: ಸಂಪಾದಕೀಯ-ತಾಪಮಾನ ಹೆಚ್ಚಳದ ಆತಂಕ: ಮುಂಜಾಗ್ರತೆಯೇ ಮದ್ದು

ಉಚಿತಗಳ ಆಮಿಷಗಳಿಗೆ ಕಡಿವಾಣ: ಚು.ಆಯೋಗ ಬದ್ಧತೆ ತೋರಲಿ

ಉಚಿತಗಳ ಆಮಿಷಗಳಿಗೆ ಕಡಿವಾಣ: ಚು.ಆಯೋಗ ಬದ್ಧತೆ ತೋರಲಿ

vidhana-Soudha

Editorial: ಪ್ರಾಥಮಿಕ ಶಾಲಾ ಶಿಕ್ಷಕರ ಪಠ್ಯೇತರ ಹೊರೆ ಇಳಿಸಿ

ಮಹಿಳಾ ಆರೋಪಿಗಳ ಬಂಧನ ವೇಳೆ ವಿವೇಚನೆ ಅತ್ಯವಶ್ಯ

ಮಹಿಳಾ ಆರೋಪಿಗಳ ಬಂಧನ ವೇಳೆ ವಿವೇಚನೆ ಅತ್ಯವಶ್ಯ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.