ಪರೀಕ್ಷಾ ಅಕ್ರಮಗಳ ಬಗ್ಗೆ ಸರಕಾರ ಗಂಭೀರವಾಗಲಿ


Team Udayavani, Aug 24, 2022, 6:00 AM IST

ಪರೀಕ್ಷಾ ಅಕ್ರಮಗಳ ಬಗ್ಗೆ ಸರಕಾರ ಗಂಭೀರವಾಗಲಿ

ಪರೀಕ್ಷಾ ಅಕ್ರಮಗಳ ಬಗ್ಗೆ ಸರಕಾರ ಗಂಭೀರವಾಗಲಿರಾಜ್ಯದಲ್ಲಿ ಸರಕಾರಿ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ-ಅವ್ಯವ­ಹಾರ ಆರೋಪ ನಿರಂತರವಾಗಿ ಕೇಳಿಬರುತ್ತಿರುವುದು ಒಂದು ರೀತಿಯಲ್ಲಿ ಪರೀಕ್ಷಾ ವ್ಯವಸ್ಥೆಯ ಮೇಲಿನ ವಿಶ್ವಾಸಾರ್ಹತೆ ಪ್ರಶ್ನೆ ಮಾಡುವಂತಾಗಿದೆ.

ಪಿಎಸ್‌ಐ, ಸಹಾಯಕ ಪ್ರಾಧ್ಯಾಪಕರ, ಕೆಪಿಟಿಸಿಎಲ್‌ ಕಿರಿಯ ಸಹಾಯಕರ, ಶಿಕ್ಷಕರ ನೇಮಕಾತಿ ಪರೀಕ್ಷೆಗಳಲ್ಲಿ ಒಂದಲ್ಲ ಒಂದು ರೀತಿಯ ಅಕ್ರಮ, ಅವ್ಯವಹಾರ, ಲೋಪ ಆಗಿರುವುದು ಹೊರಬರುತ್ತಲೇ ಇದೆ.

ರಾಜ್ಯ ಸರಕಾರ ಇದನ್ನು ಗಂಭೀರವಾಗಿ ಪರಿಗಣಿಸಿ ಲೋಪ ಸರಿಪಡಿ­ಸುವ ಕಾರ್ಯಕ್ಕೆ ಮುಂದಾಗಲೇಬೇಕಾಗಿದೆ. ಇಲ್ಲದಿದ್ದರೆ ನೇಮಕಾತಿ ಎಂದರೆ ಅಕ್ರಮ ಎಂಬ ಹಣೆಪಟ್ಟಿ ಕಟ್ಟಿಕೊಳ್ಳುವಂತಾಗುತ್ತದೆ.

ಕರ್ನಾಟಕವಷ್ಟೇ ಅಲ್ಲದೆ ದೇಶದ ಹಲವೆಡೆಯೂ ಇದೇ ರೀತಿಯ ಅಕ್ರಮಗಳು ಆಗಿವೆ. ಆದರೂ ಕರ್ನಾಟಕದ ಮಟ್ಟಿಗೆ ಇತ್ತೀಚಿನ ನೇಮಕಾತಿ ಅಕ್ರಮದ ವಿದ್ಯಮಾನಗಳು ಪ್ರಾಮಾಣಿಕವಾಗಿ ಪರೀಕ್ಷೆ ಬರೆದು ಉದ್ಯೋಗದ ನಿರೀಕ್ಷೆಯಲ್ಲಿರುವ ಲಕ್ಷಾಂತರ ಅಭ್ಯರ್ಥಿಗಳ ಕನಸು, ಭವಿಷ್ಯಕ್ಕೆ ಮಾರಕ. ರಾಜ್ಯ ಸರಕಾರ ಪರೀಕ್ಷಾ ಅಕ್ರಮ ತಡೆಗಟ್ಟುವ ಬಗ್ಗೆ ಪ್ರತೀ ಸಂದರ್ಭದಲ್ಲೂ ಹೇಳುತ್ತಲೇ ಬಂದಿದೆ. ಆದರೆ ಸೂಕ್ತ ಹಾಗೂ ಕಠಿನ ಕ್ರಮಗಳ ಬಗ್ಗೆ ಹೆಚ್ಚು ಗಮನಹರಿಸಿಲ್ಲ ಎಂಬುದು ಮೇಲ್ನೋಟಕ್ಕೆ ಕಂಡುಬರುತ್ತಿದೆ.

ಬೇರೆ ಬೇರೆ ರಾಜ್ಯಗಳಲ್ಲಿ ಪರೀಕ್ಷಾ ಕೇಂದ್ರಗಳಲ್ಲಿ ಬಿಗಿ ವ್ಯವಸ್ಥೆ, ಜಾಮರ್‌ ಅಳವಡಿಕೆ, ತಪಾಸಣೆ, ನಿಗಾ ಸೇರಿದಂತೆ ಹಲವು ಕ್ರಮ ಕೈಗೊಳ್ಳಲಾಗುತ್ತಿದೆ. ಏನೇ ಕ್ರಮ ಕೈಗೊಂಡರೂ ಅಕ್ರಮ ಎಸಗುವವರು ರಂಗೋಲಿ ಕೆಳಗೆ ನುಗ್ಗುವ ಪ್ರಯತ್ನ ಹಾಗೂ ಹಾದಿ ಕಂಡುಕೊಳ್ಳುತ್ತಿ­ದ್ದಾರೆ. ಮೊದಲು ನೇರ ಸಂದರ್ಶನ-ನೇಮಕಾತಿ ವ್ಯವಸ್ಥೆ ಭ್ರಷ್ಟಾಚಾರಕ್ಕೆ ಅವಕಾಶ ಮಾಡಿಕೊಡುತ್ತದೆ ಎಂಬ ಕಾರಣಕ್ಕೆ ಪರೀಕ್ಷಾ ವ್ಯವಸ್ಥೆ ಜಾರಿಗೊಳಿಸಲಾಯಿತು. ಆದರೆ ಇದೂ ಸಹ ಅದೇ ಹಾದಿ ಹಿಡಿದಿರುವುದು ದುರಂತ.

ಪರೀಕ್ಷಾ ಅಕ್ರಮಗಳ ಅನುಭವದ ಆಧಾರದ ಮೇಲೆ ಅಕ್ರಮ ಎಸಗುವವರ ನಿಯಂತ್ರಣಕ್ಕೆ ರಾಜ್ಯ ಸರಕಾರ ಬದ್ಧತೆ ಪ್ರದರ್ಶನ ಮಾಡಬೇಕಾಗಿದೆ. ಇಚ್ಛಾಶಕ್ತಿ ತೋರಬೇಕಾಗಿದೆ. ಇಲ್ಲದಿದ್ದರೆ ರಾಜ್ಯದಲ್ಲಿ ಯಾವುದೇ ಪರೀಕ್ಷೆ ನಡೆದರೂ ಅಕ್ರಮ, ಅವ್ಯವಹಾರ ಆರೋಪ­ಗಳಿಂದಾಗಿ ಇಡೀ ವ್ಯವಸ್ಥೆಯ ಬಗ್ಗೆ ಅಪನಂಬಿಕೆ ಹುಟ್ಟಲು ಪ್ರಾರಂಭವಾಗುತ್ತದೆ.

ರಾಜ್ಯದಲ್ಲಿನ ಪರೀಕ್ಷಾ ಅಕ್ರಮಗಳ ಬಗ್ಗೆ ಕೇವಲ ಆರೋಪವಷ್ಟೇ ಅಲ್ಲ. ಅಕ್ರಮ ನಡೆದಿರುವುದು ಸಾಬೀತು ಆಗಿದೆ. ಅದಕ್ಕೆ ಪಿಎಸ್‌ಐ ಹಗರಣ ಸಾಕ್ಷಿ. ಶಿಕ್ಷಕರ ನೇಮಕಾತಿ ಪರೀಕ್ಷೆಯಲ್ಲಿ ಉತ್ತರ ಪತ್ರಿಕೆಗಳಲ್ಲಿ ಉತ್ತರಗಳನ್ನು ರಬ್‌ ಮಾಡುವುದಕ್ಕಾಗಿ ವೈಟ್‌ನರ್‌ ಬಳಸಿದ್ದಾರೆ ಎಂಬುದು ಪತ್ತೆಯಾಗಿದೆ.

ಇದೇ ಕಾರಣಕ್ಕೆ 61 ಮಂದಿಯ ಫ‌ಲಿತಾಂಶ ತಡೆ ಹಿಡಿಯಲಾಗಿದೆ. ಇದೆಲ್ಲವನ್ನೂ ನೋಡಿದರೆ ಅಕ್ರಮ ನಡೆಯುತ್ತಿರು­ವುದು ನಿಜ. ಪಿಎಸ್‌ಐ, ಸಹಾಯಕ ಪ್ರಾಧ್ಯಾಪಕ, ಕೆಪಿಟಿಸಿಎಲ್‌ ಕಿರಿಯ ಸಹಾಯಕ, ಶಿಕ್ಷಕರ ನೇಮಕಾತಿ, ಅದಕ್ಕೂ ಮುನ್ನ ಲೋಕೋಪಯೋಗಿ ಸೇರಿದಂತೆ ಬೇರೆ ಬೇರೆ ಇಲಾಖೆಗಳ ಹುದ್ದೆಗಳ ನೇಮಕಾತಿ ವಿಚಾರದ­ಲ್ಲಿಯೂ ಇದೇ ರೀತಿ ಅಕ್ರಮದ ಬಗ್ಗೆ ಆರೋಪ ಕೇಳಿಬಂದಿತ್ತು.

ಕರ್ನಾಟಕ ಮೊದಲು ಪಾರದರ್ಶಕ ಪರೀಕ್ಷಾ ವ್ಯವಸ್ಥೆಗೆ ಹೆಸರಾ­ಗಿತ್ತು. ಆದರೆ ಇತ್ತೀಚೆಗಿನ ವಿದ್ಯಮಾನಗಳು ಕಳಂಕ ತರುವಂತಾಗಿದೆ. ಈ ಬಗ್ಗೆ ಸರಕಾರ ಗಂಭೀರವಾಗಿ ಯೋಚಿಸಲೇಬೇಕು. ಸರಕಾರಿ ಹುದ್ದೆಗಳ ನೇಮಕಾತಿ­­ಗಾಗಿ ನಡೆಯುವ ಪರೀಕ್ಷೆಗಳ ವಿಶ್ವಾಸಾರ್ಹತೆ ಹೆಚ್ಚಿಸಲು ಕ್ರಮ ಕೈಗೊಳ್ಳಬೇಕು.

ಟಾಪ್ ನ್ಯೂಸ್

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

CM-Mysore1

MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ

Kota-poojary

Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

1-horoscope

Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ

Text-Bokk

KSOU: ಪರೀಕ್ಷೆ ಸಮೀಪಿಸುತ್ತಿದ್ದರೂ ಮುದ್ರಿತ ಪಠ್ಯ ಸಿಗಲಿಲ್ಲ

1-hejb

Israel ಸರ್ಜಿಕಲ್‌ ಸ್ಟ್ರೈಕ್‌: ಹೆಜ್ಬುಲ್ಲಾ ಮುಖ್ಯಸ್ಥನ ಅಂತ್ಯಕ್ಕೆ 80 ಟನ್‌ ಬಾಂಬ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WHO

Permanent Member: ಭದ್ರತಾ ಮಂಡಳಿ ಖಾಯಂ ಸದಸ್ಯತ್ವ: ಭಾರತಕ್ಕೆ ಆನೆಬಲ

Fake-Medicine

Quality Poor Medicine: ಮಾರುಕಟ್ಟೆಗೆ ನಕಲಿ ಔಷಧ ಪ್ರವೇಶ ತಪ್ಪಿಸಿ

railaw

Indian Railway: ರೈಲು ಹಳಿ ತಪ್ಪಿಸುವ ಯತ್ನ ಆಮೂಲಾಗ್ರ ತನಿಖೆ ಅಗತ್ಯ

traffic

Traffic Rules: ಸಂಚಾರ ನಿಯಮಾವಳಿಗಳು ಕಟ್ಟುನಿಟ್ಟಾಗಿ ಅನುಷ್ಠಾನಗೊಳ್ಳಲಿ

supreme-Court

Supreme Court: ಪೋಕ್ಸೋ ವ್ಯಾಪ್ತಿ ವಿಸ್ತರಣೆ: ಸುಪ್ರೀಂ ತೀರ್ಪು ಐತಿಹಾಸಿಕ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

CM-Mysore1

MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ

Kota-poojary

Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

1-horoscope

Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.