ಕೆ-ಸೆಟ್‌ ಅಕ್ರಮ ಸಂಬಂಧ ಪಾರದರ್ಶಕವಾಗಿ ತನಿಖೆಯಾಗಲಿ


Team Udayavani, Dec 27, 2022, 6:00 AM IST

ಕೆ-ಸೆಟ್‌ ಅಕ್ರಮ ಸಂಬಂಧ ಪಾರದರ್ಶಕವಾಗಿ ತನಿಖೆಯಾಗಲಿ

ಇತ್ತೀಚಿನ ದಿನಗಳಲ್ಲಿ ಕರ್ನಾಟಕವು ಪರೀಕ್ಷಾ ಅಕ್ರಮಗಳಿಂದಲೇ ಹೆಚ್ಚು ಕುಖ್ಯಾತಿಗೆ ಒಳಗಾಗುತ್ತಿದೆ. ಪೊಲೀಸ್‌ ನೇಮಕಾತಿ, ಪ್ರಾಧ್ಯಾಪಕರ ನೇಮಕಾತಿ ಸಹಿತ ಹಲವಾರು ಪರೀಕ್ಷಾ ಅಕ್ರಮಗಳು ನಡೆದಿದ್ದು, ದೇಶದ ಮಟ್ಟದಲ್ಲಿ ತಲೆ ತಗ್ಗಿಸುವಂತಾಗಿದೆ. ಈಗ ಈ ಸಾಲಿಗೆ ಉಪನ್ಯಾಸಕರ ಅರ್ಹತೆಗಾಗಿ ಇಲ್ಲೇ ನಡೆಸುವ ಕೆ-ಸೆಟ್‌ ಪರೀಕ್ಷೆಯಲ್ಲಿಯೂ ಅಕ್ರಮ ನಡೆದಿರುವ ವಾಸನೆ ವ್ಯಕ್ತವಾಗಿದ್ದು, ಈ ಸಂಬಂಧ ತನಿಖೆಗಾಗಿ ರಾಜ್ಯ ಸರಕಾರ ಸಮಿತಿಯೊಂದನ್ನೂ ನೇಮಕ ಮಾಡಿದೆ.

ಮೇಲಿನ ಎಲ್ಲ ವಿಚಾರಗಳನ್ನು ಗಮನಿಸಿದರೆ, ಒಂದು ನೇಮಕಾತಿಯ ವೇಳೆಯ ಬೆಳವಣಿಗೆಗಳು ಮತ್ತು ಅರ್ಹತಾ ಪರೀಕ್ಷೆ ವೇಳೆಯ ಪ್ರಕ್ರಿಯೆಗಳು ಹಣ ಮಾಡಿಕೊಳ್ಳಲು ಅತ್ಯುತ್ತಮ ವೇದಿಕೆಯಂತೆ ಕಂಡು ಬಂದಿವೆ. ಅದರಲ್ಲೂ ಪೊಲೀಸ್‌ ಮತ್ತು ಪ್ರಾಧ್ಯಾಪಕರ ನೇಮಕಾತಿ ವೇಳೆಯಲ್ಲಿ ಲಕ್ಷ ಲಕ್ಷ ಹಣ ಹರಿದಾಡಿರುವುದೂ ಎಲ್ಲರ ಗಮನಕ್ಕೆ ಬಂದಿದೆ. ಇದು ಒಂದು ರೀತಿಯಲ್ಲಿ ಶ್ರಮದಿಂದ ಓದಿ ನೇಮಕವಾಗಬೇಕು ಎಂದುಕೊಂಡವರಿಗೆ ಮೋಸ ಮಾಡಿದಂತಾಗಿದೆ.

ಕೆ-ಸೆಟ್‌ ವಿಚಾರಕ್ಕೆ ಬರುವುದಾದರೆ ಇದೊಂದು ಉಪನ್ಯಾಸಕರಾಗಲು ರಾಜ್ಯಮಟ್ಟದಲ್ಲಿ ನಡೆಯುವ ಅರ್ಹತಾ ಪರೀಕ್ಷೆ. ಅದಷ್ಟೋ ವಿದ್ಯಾರ್ಥಿಗಳು ಕ್ಲಿಷ್ಟವಾದ ನೆಟ್‌ ಪರೀಕ್ಷೆ ಪಾಸು ಮಾಡಲಾಗದೇ ಕೆ-ಸೆಟ್‌ ಪಾಸು ಮಾಡಿಕೊಂಡು ಉಪನ್ಯಾಸಕರಾಗಲು ಅರ್ಹತೆ ಗಳಿಸಿಕೊಳ್ಳುತ್ತಾರೆ. ಆದರೆ 2021ರ ಸಾಲಿನಲ್ಲಿ ಪರೀಕ್ಷಾ ಅಕ್ರಮ ನಡೆದಿರುವ ಬಗ್ಗೆ ಮೈಸೂರು ಸಂಸದ ಪ್ರತಾಪ್‌ ಸಿಂಹ ಅವರೇ ಆರೋಪ ಮಾಡಿದ್ದು, ಈ ಸಂಬಂಧ ಯುಜಿಸಿ ಚೇರ್‌ಮನ್‌ ಜಗದೀಶ್‌ ಕುಮಾರ್‌ ಅವರಿಗೇ ದೂರು ನೀಡಿದ್ದಾರೆ. ಅಲ್ಲದೆ ಇವರ ಮನವಿ ಮೇರೆಗೆ ಇತ್ತೀಚೆಗಷ್ಟೇ ರಾಜ್ಯ ಸರಕಾರ ಕೆ-ಸೆಟ್‌ ನಡೆಸುವ ಹೊಣೆಯನ್ನು ಮೈಸೂರು ವಿಶ್ವವಿದ್ಯಾನಿಲಯದಿಂದ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ವಹಿಸಿದೆ.

ಈ ಬೆಳವಣಿಗೆ ಒಂದು ರೀತಿಯಲ್ಲಿ ಗತಕಾಲದ ಇತಿಹಾಸ ಹೊಂದಿರುವ ಮೈಸೂರು ವಿಶ್ವವಿದ್ಯಾನಿಲಯಕ್ಕೆ ಇಟ್ಟ ಕಪ್ಪು ಚುಕ್ಕೆಯಂತಾಗಿದೆ. ಖಂಡಿತವಾಗಿಯೂ ಹೇಳುವುದಾದರೆ ರಾಜ್ಯ ಸರಕಾರ ಪಾರದರ್ಶಕವಾಗಿ ತನಿಖೆ ನಡೆಸಿ, ಆರೋಪಿಗಳು ಅದೆಷ್ಟೇ ದೊಡ್ಡವರಾಗಿದ್ದರೂ ಸರಿ ಅವರಿಗೆ ಶಿಕ್ಷೆ ಕೊಡಿಸಲೇಬೇಕಾಗಿದೆ. ಇಲ್ಲದಿದ್ದರೆ ವಿದ್ಯಾರ್ಥಿ ಸಮೂಹ ಇಂಥ ಆಯ್ಕೆ ಅಥವಾ ಅರ್ಹತಾ ಪರೀಕ್ಷೆಗಳ ವಿಚಾರದಲ್ಲಿ ನಂಬಿಕೆಯನ್ನೇ ಕಳೆದುಕೊಳ್ಳುತ್ತಾರೆ ಎಂಬುದರಲ್ಲಿ ಯಾವುದೇ ಸಂದೇಹವಿಲ್ಲ.

ಕೆ-ಸೆಟ್‌ ಅನ್ನೂ ಯುಜಿಸಿಯ ಅಡಿಯಲ್ಲೇ ನಡೆಸಲಾಗುತ್ತಿದ್ದು, 2020ರಿಂದ ವರ್ಷಕ್ಕೆ ಒಮ್ಮೆಯಂತೆ ಮೂರು ಬಾರಿ ಪರೀಕ್ಷೆ ನಡೆಸುವ ಹೊಣೆಯನ್ನು ಮೈಸೂರು ವಿ.ವಿ.ಗೆ ನೀಡಲಾಗಿದೆ. ಒಟ್ಟು 41 ವಿಷಯಗಳಿಗೆ ಪರೀಕ್ಷೆ ನಡೆಸಲಾಗುತ್ತಿದೆ. 2021ರಲ್ಲಿ ನಡೆದ ಪರೀಕ್ಷೆಯಲ್ಲಿ ಅವ್ಯವಹಾರ ನಡೆದಿದ್ದು, ಲಕ್ಷಾಂತರ ವಿದ್ಯಾರ್ಥಿಗಳಿಗೆ ಮೋಸವಾಗಿದೆ ಎಂಬ ಆರೋಪ ಕೇಳಿಬಂದಿದೆ. ಈ ಅವ್ಯವಹಾರಕ್ಕೆ ಸಂಯೋಜಕರು ಮತ್ತು ಇತರ ಸಿಬಂದಿ ಹೊಣೆಗಾರರು ಎಂದೂ ಯುಜಿಸಿಗೆ ದೂರು ಹೋಗಿದೆ.

ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಬೇಕಾದ ಈ  ಸಮೂಹವೇ ಅಕ್ರಮದಲ್ಲಿ ಪಾಲ್ಗೊಂಡು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಮೋಸ ಮಾಡುವುದು ಸರ್ವಥಾ ಒಪ್ಪುವಂಥದ್ದಲ್ಲ. ಈ ಪ್ರಕರಣಗಳನ್ನು ಸರಕಾರ ಘನಘೋರ ಅಪರಾಧವೆಂದೇ ಪರಿಗಣಿಸಬೇಕು. ಅಷ್ಟೇ ಅಲ್ಲದೆ ಸಿಬಂದಿಗೆ ಶಿಕ್ಷೆ ನೀಡುವುದರ ಜತೆಗೆ ಅಡ್ಡದಾರಿಯಲ್ಲಿ ಅರ್ಹತೆ ಗಿಟ್ಟಿಸಿಕೊಳ್ಳುವಂಥ ವಿದ್ಯಾರ್ಥಿಗಳ ಮೇಲೂ ಕಠಿನ ಕ್ರಮ ತೆಗೆದುಕೊಳ್ಳಬೇಕಾದದ್ದು ಅಷ್ಟೇ ಮುಖ್ಯ.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-editorial

Editorial: ವಿದ್ಯಾರ್ಹತೆಗೆ ದೇಶವ್ಯಾಪಿ ಮಾನ್ಯತೆ, ಹೈಕೋರ್ಟ್‌ ತೀರ್ಪು ನ್ಯಾಯೋಚಿತ

13-editorial

Temperature: ಸಂಪಾದಕೀಯ-ತಾಪಮಾನ ಹೆಚ್ಚಳದ ಆತಂಕ: ಮುಂಜಾಗ್ರತೆಯೇ ಮದ್ದು

ಉಚಿತಗಳ ಆಮಿಷಗಳಿಗೆ ಕಡಿವಾಣ: ಚು.ಆಯೋಗ ಬದ್ಧತೆ ತೋರಲಿ

ಉಚಿತಗಳ ಆಮಿಷಗಳಿಗೆ ಕಡಿವಾಣ: ಚು.ಆಯೋಗ ಬದ್ಧತೆ ತೋರಲಿ

vidhana-Soudha

Editorial: ಪ್ರಾಥಮಿಕ ಶಾಲಾ ಶಿಕ್ಷಕರ ಪಠ್ಯೇತರ ಹೊರೆ ಇಳಿಸಿ

ಮಹಿಳಾ ಆರೋಪಿಗಳ ಬಂಧನ ವೇಳೆ ವಿವೇಚನೆ ಅತ್ಯವಶ್ಯ

ಮಹಿಳಾ ಆರೋಪಿಗಳ ಬಂಧನ ವೇಳೆ ವಿವೇಚನೆ ಅತ್ಯವಶ್ಯ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.