ರಾಜ್ಯಗಳೂ ವ್ಯಾಟ್‌ ಇಳಿಕೆ ಮಾಡಿ ನಿರಾಳತೆ ನೀಡಲಿ


Team Udayavani, May 23, 2022, 6:15 AM IST

ರಾಜ್ಯಗಳೂ ವ್ಯಾಟ್‌ ಇಳಿಕೆ ಮಾಡಿ ನಿರಾಳತೆ ನೀಡಲಿ

ಏರುತ್ತಿರುವ ಹಣದುಬ್ಬರವನ್ನು ನಿಯಂತ್ರಣ ಮಾಡಿ ಜನಸಾಮಾನ್ಯರಿಗೆ ನಿರಾಳತೆ ನೀಡಬೇಕು ಎಂಬ ಉದ್ದೇಶದಿಂದ ಕೇಂದ್ರ ಸರಕಾರ ಶನಿವಾರ, ಪೆಟ್ರೋಲ್‌ ಮತ್ತು ಡೀಸೆಲ್‌ ಮೇಲಿನ ಅಬಕಾರಿ ಸುಂಕ ಇಳಿಕೆ ಮಾಡಿರುವುದು ಉತ್ತಮ ಬೆಳವಣಿಗೆ. ತೈಲೋತ್ಪನ್ನ ವಸ್ತುಗಳ ಜತೆಗೆ ದೇಶದ ಆರ್ಥಿಕತೆ ಸಮ್ಮಿಳನಗೊಂಡಿರುವುದರಿಂದಲೇ ಈ ವಸ್ತುಗಳ ಬೆಲೆ ಏರಿದ ತತ್‌ಕ್ಷಣ ಜನಸಾಮಾನ್ಯರ ಮೇಲೆ ನಾನಾ ರೀತಿಯಲ್ಲಿ ಅಡ್ಡಪರಿಣಾಮಗಳು ಶುರುವಾಗುತ್ತವೆ. ಅಂದರೆ ಸಾರಿಗೆಯಿಂದ ಹಿಡಿದು, ಮನೆಗೆ ಬರುವ ದಿನಸಿ ವಸ್ತುಗಳ ಬೆಲೆಯೂ ಗಗನಮುಖೀಯಾಗುವ ಆತಂಕ ಈ ತೈಲ ಬೆಲೆ ಹೆಚ್ಚಳದ ಹಿಂದಿದೆ. ಹೀಗಾಗಿಯೇ ಪೆಟ್ರೋಲ್‌ ಮತ್ತು ಡೀಸೆಲ್‌ ಬೆಲೆಏರುಮುಖಿಯಾದೊಡನೆ ಶ್ರೀಸಾಮಾನ್ಯ ಆತಂಕಕ್ಕೆ ಬೀಳುತ್ತಾನೆ. ಆತನ ಕಿಸೆಯಿಂದಲೂ ಹೆಚ್ಚಿನ ಹಣ ವೆಚ್ಚವಾಗುತ್ತದೆ.

ಇದಷ್ಟೇ ಅಲ್ಲ, ಅತ್ತ ರಷ್ಯಾ ಮತ್ತು ಉಕ್ರೇನ್‌ ನಡುವಿನ ಸಮರವೂ ಜಾಗತಿಕ ಅರ್ಥವ್ಯವಸ್ಥೆಯನ್ನು ಹಾಳು ಮಾಡಿದೆ. ವಿಚಿತ್ರವೆಂದರೆ, ಉಭಯ ದೇಶಗಳ ನಡುವಿನ ಸಮರದಿಂದಾಗಿ ಕಪ್ಪು ಸಮುದ್ರದ ಸರಕು ಸಾಗಣೆ ಮಾರ್ಗವೇ ಮುಚ್ಚಿದ್ದು, ಜಾಗತಿಕ ಪೂರೈಕೆ

ಸರಪಳಿಯೂ ಕಡಿತಗೊಂಡಿದೆ. ಹೀಗಾಗಿಯೇ ಅಗತ್ಯ ವಸ್ತುಗಳ ಬೆಲೆಯೂ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಲೇ ಇದೆ.

ಹಣದುಬ್ಬರ ನಿಯಂತ್ರಣದ ಕಾರಣದಿಂದಾಗಿ ಈ ಮಾಸಾಂತ್ಯದ ಆರಂಭದಲ್ಲಿ ಆರ್‌ಬಿಐ ರೆಪೋ ಬೆಲೆ ಏರಿಕೆ ಮಾಡಿತ್ತು. ಈ ಮೂಲಕ ಜನರ ಖರೀದಿ ಸಾಮರ್ಥ್ಯವನ್ನು ಕೊಂಚ ಇಳಿಸುವ ಪ್ರಯತ್ನ ಮಾಡಿತ್ತು. ಅಂದರೆ ರೆಪೋ ಬೆಲೆ ಏರಿದ ಕೂಡಲೇ ಬ್ಯಾಂಕ್‌ಗಳು ಸಾಲದ ಮೇಲಿನ ಬಡ್ಡಿ ಏರಿಸುತ್ತವೆ. ಹಾಗೆಯೇ ಠೇವಣಿ ಬಡ್ಡಿ ಬೆಲೆವೂ ಹೆಚ್ಚುವುದರಿಂದ ಜನ ಉಳಿತಾಯದತ್ತ ಹೆಚ್ಚು ಗಮನಕೊಡುತ್ತಾರೆ ಎಂಬ ಆಶಯ ಇಲ್ಲಿದೆ. ಇನ್ನು ಹಣದುಬ್ಬರವನ್ನು ಮತ್ತಷ್ಟು ಇಳಿಕೆ ಮಾಡುವ ಸಂಬಂಧ ಕೇಂದ್ರ ಸರಕಾರ, 2ನೇ ಶಮನಕಾರಿ ಮಾರ್ಗವನ್ನು ಹಿಡಿದಿದೆ. ಅದೆಂದರೆ ತೈಲೋತ್ಪನ್ನಗಳ ಬೆಲೆ ಇಳಿಕೆ ಮಾಡುವುದು. ಶನಿವಾರ ಸಂಜೆ ಪ್ರತೀ ಲೀ. ಪೆಟ್ರೋಲ್‌ ಮೇಲೆ 9.50 ರೂ. ಮತ್ತು ಡೀಸೆಲ್‌ ಮೇಲೆ 7 ರೂ. ಇಳಿಕೆ ಮಾಡಲಾಗಿದೆ. ಜತೆಗೆ ರೈತರಿಗೆ ನೀಡಲಾಗುವ ರಸಗೊಬ್ಬರದ ಮೇಲಿನ ಸಬ್ಸಿಡಿ ಅನುದಾನ ದುಪ್ಪಟ್ಟು ಏರಿಕೆ, ಕಬ್ಬಿಣ, ಉಕ್ಕು, ಪ್ಲಾಸ್ಟಿಕ್‌ ಮೇಲಿನ ಕಸ್ಟಮ್‌ ಸುಂಕವನ್ನು ಇಳಿಸಿದೆ. ಇವೆಲ್ಲವೂ ಒಂದಕ್ಕೊಂದು ಸಂಬಂಧ ಹೊಂದಿರುವುದರಿಂದ ಹಣದುಬ್ಬರ ಪ್ರಮಾಣ ಇಳಿಕೆಯಾಗಬಹುದು ಎಂದೇ ನಿರೀಕ್ಷಿಸಲಾಗಿದೆ.

ಈಗ ಕೇಂದ್ರ ಸರಕಾರವೇನೋ ತನ್ನ ಕೈಲಾದ ಪ್ರಯತ್ನ ಮಾಡಿದೆ. ಇದರ ಜತೆಗೆ ರಾಜ್ಯಗಳೂ ತಮ್ಮ ಪಾಲಿನ ವ್ಯಾಟ್‌ ಇಳಿಕೆ ಮಾಡುವತ್ತ ಗಮನ ಹರಿಸಬೇಕು. ಈಗಾಗಲೇ ಕೇರಳ, ರಾಜಸ್ಥಾನ, ಒಡಿಶಾ,

ಮಹಾರಾಷ್ಟ್ರ ರಾಜ್ಯಗಳು ಒಂದಷ್ಟು ವ್ಯಾಟ್‌ ಇಳಿಕೆ ಮಾಡಿವೆ. ಇದರಲ್ಲಿ ಕೆಲವು ರಾಜ್ಯಗಳು ನವೆಂಬರ್‌ನಲ್ಲಿ ಅಬಕಾರಿ ಸುಂಕ ಇಳಿಸಿದಾಗ ತೈಲ ಬೆಲೆ ಕಡಿತ ಮಾಡಿರಲಿಲ್ಲ. ಈಗ ಈ ರಾಜ್ಯಗಳೇ ಎಚ್ಚೆತ್ತುಕೊಂಡು

ಮೊದಲಿಗೆ ಕಡಿತ ಮಾಡಿವೆ. ಹಾಗೆಯೇ ಇವೆಲ್ಲವೂ ಬಿಜೆಪಿಯೇತರ ಸರ್ಕಾರವಿರುವ ರಾಜ್ಯಗಳು.

ಹಾಗೆಯೇ, ಕರ್ನಾಟಕವೂ ಸೇರಿದಂತೆ ಬಿಜೆಪಿ ಆಡಳಿತವಿರುವ ರಾಜ್ಯಗಳೂ ಈಗ ವ್ಯಾಟ್‌ ಕಡಿತ ಮಾಡಬೇಕು. ತೈಲ ಬೆಲೆ ಇಳಿಕೆ

ಯಾದರೆ, ಇತರೆ ಅಗತ್ಯ ವಸ್ತುಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯೂ ಹೆಚ್ಚು. ಹೀಗಾಗಿ ಈ ಕಡೆ ರಾಜ್ಯ ಸರಕಾರ ಗಮನ ನೀಡಬೇಕು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-editorial

Editorial: ವಿದ್ಯಾರ್ಹತೆಗೆ ದೇಶವ್ಯಾಪಿ ಮಾನ್ಯತೆ, ಹೈಕೋರ್ಟ್‌ ತೀರ್ಪು ನ್ಯಾಯೋಚಿತ

13-editorial

Temperature: ಸಂಪಾದಕೀಯ-ತಾಪಮಾನ ಹೆಚ್ಚಳದ ಆತಂಕ: ಮುಂಜಾಗ್ರತೆಯೇ ಮದ್ದು

ಉಚಿತಗಳ ಆಮಿಷಗಳಿಗೆ ಕಡಿವಾಣ: ಚು.ಆಯೋಗ ಬದ್ಧತೆ ತೋರಲಿ

ಉಚಿತಗಳ ಆಮಿಷಗಳಿಗೆ ಕಡಿವಾಣ: ಚು.ಆಯೋಗ ಬದ್ಧತೆ ತೋರಲಿ

vidhana-Soudha

Editorial: ಪ್ರಾಥಮಿಕ ಶಾಲಾ ಶಿಕ್ಷಕರ ಪಠ್ಯೇತರ ಹೊರೆ ಇಳಿಸಿ

ಮಹಿಳಾ ಆರೋಪಿಗಳ ಬಂಧನ ವೇಳೆ ವಿವೇಚನೆ ಅತ್ಯವಶ್ಯ

ಮಹಿಳಾ ಆರೋಪಿಗಳ ಬಂಧನ ವೇಳೆ ವಿವೇಚನೆ ಅತ್ಯವಶ್ಯ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.