Dams ನಿರ್ವಹಣೆ ಸ್ಪಷ್ಟ ಮಾರ್ಗಸೂಚಿ ಅಗತ್ಯ


Team Udayavani, Aug 13, 2024, 6:30 AM IST

krs

ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್‌ಗೇಟ್‌ನ ಚೈನ್‌ ತುಂಡಾಗಿ ಗೇಟ್‌ ಮುರಿದ ಪರಿಣಾಮ ಜಲಾಶಯದಿಂದ ಭಾರೀ ಪ್ರಮಾಣದಲ್ಲಿ ನೀರು ವ್ಯರ್ಥವಾಗಿ ನದಿ ಸೇರುತ್ತಿದೆ. ಹೊಸ ಗೇಟ್‌ ಅಳವಡಿಸಲು ಈಗಾಗಲೇ ಜಲಾಶಯದಲ್ಲಿ ಸಂಗ್ರಹವಿರುವ ನೀರಿನ ಪ್ರಮಾಣವನ್ನು ಕಡಿಮೆ ಮಾಡುವ ಅನಿವಾರ್ಯತೆಗೆ ನೀರಾವರಿ ಇಲಾಖೆ ಸಿಲುಕಿದೆ. ಇದರಿಂದಾಗಿ ಪ್ರಸಕ್ತ ವರ್ಷ ಎರಡು ಬೆಳೆಗಳನ್ನು ಬೆಳೆಯುವ ನದಿ ಪಾತ್ರದ ಲಕ್ಷಾಂತರ ರೈತರ ಕನಸು ನುಚ್ಚುನೂರಾಗಿದೆ. ಇದೇ ವೇಳೆ ಹಾಲಿ ಬೆಳೆಯನ್ನು ರಕ್ಷಿಸಿಕೊಳ್ಳುವ ಅನಿವಾರ್ಯತೆಯಲ್ಲಿ ರೈತರು ಸಿಲುಕಿದ್ದಾರೆ. ಈ ಘಟನೆ ರಾಜ್ಯದಲ್ಲಿನ ಎಲ್ಲ ಜಲಾಶಯಗಳು ಮತ್ತು ಅಣೆಕಟ್ಟುಗಳ ನಿರ್ವಹಣೆ, ಇವುಗಳ ಸದ್ಯದ ಸ್ಥಿತಿಗತಿಯ ಬಗೆಗೆ ರೈತಾಪಿ ವರ್ಗದಲ್ಲಿ ಅನುಮಾನಗಳನ್ನು ಹುಟ್ಟುಹಾಕುವಂತೆ ಮಾಡಿದೆ.

ಪ್ರಸಕ್ತ ಮುಂಗಾರು ಋತುವಿನ ಆರಂಭಿಕ ಎರಡು ತಿಂಗಳುಗಳ ಅವಧಿಯಲ್ಲಿ ಉತ್ತಮ ಮಳೆಯಾದ ಪರಿಣಾಮ ರಾಜ್ಯದ ಬಹುತೇಕ ಜಲಾಶಯಗಳು ಭರ್ತಿಯಾಗಿವೆ. ಇದರಿಂದಾಗಿ ರೈತರು ಮಾತ್ರವಲ್ಲದೆ ಸರಕಾರ ಕೂಡ ನಿಟ್ಟುಸಿರು ಬಿಡುವಂತಾಗಿತ್ತು. ಸ್ವತಃ ಮುಖ್ಯಮಂತ್ರಿಗಳೇ ರಾಜ್ಯದ ವಿವಿಧ ಜಲಾಶಯಗಳಿಗೆ ಭೇಟಿ ನೀಡಿ, ಗಂಗಾಪೂಜೆ, ಬಾಗಿನ ಸಲ್ಲಿಸಿದ್ದರು. ಮುಂದಿನ ಒಂದೆರಡು ದಿನಗಳಲ್ಲಿ ತುಂಗಭದ್ರಾ ಜಲಾಶಯಕ್ಕೂ ತೆರಳಿ, ಬಾಗಿನ ಸಲ್ಲಿಸುವ ಇರಾದೆಯಲ್ಲಿದ್ದರು. ಮುಖ್ಯಮಂತ್ರಿ ಮಂಗಳವಾರ ಜಲಾಶಯದ ಮುರಿದ ಗೇಟ್‌ ಮತ್ತು ಹೊಸ ಗೇಟ್‌ನ ಅಳವಡಿಕೆ ಕುರಿತಂತೆ ತಜ್ಞರ ಜತೆ ಚರ್ಚೆ ನಡೆಸಲು ಜಲಾಶಯಕ್ಕೆ ಭೇಟಿ ನೀಡಿ ಮುಂದಿನ ಕ್ರಮಗಳ ಕುರಿತು ಸಲಹೆ ಸೂಚನೆ ನೀಡಲಿರುವರು.

ಸದ್ಯಕ್ಕಂತೂ ಟಿಬಿ ಜಲಾಶಯದ ಮುರಿದಿರುವ ಗೇಟ್‌ಗೆ ಬದಲಾಗಿ ಹೊಸ ಗೇಟ್‌ನ್ನು ಅಳವಡಿಸುವ ಮತ್ತು ಇನ್ನುಳಿದ ಗೇಟ್‌ಗಳ ಸುರಕ್ಷೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕಿರುವುದು ಸರಕಾರದ ಮೊದಲ ಆದ್ಯತೆಯಾಗಬೇಕು. ಏತನ್ಮಧ್ಯೆ ಟಿಬಿ ಜಲಾಶಯದಲ್ಲಿ ಬಿರುಕುಗಳು ಕಾಣಿಸಿಕೊಂಡಿವೆ ಎನ್ನಲಾಗಿದ್ದು ಇತ್ತ ಸರಕಾರ ತುರ್ತು ಗಮನಹರಿಸುವ ಅಗತ್ಯವಿದೆ.

ಟಿಬಿ ಜಲಾಶಯದ ನಿರ್ವಹಣೆಯಲ್ಲಾಗಿರುವ ಲೋಪದೋಷ, ಮಳೆಗಾಲ ಆರಂಭಕ್ಕೂ ಮುನ್ನ ಕೈಗೊಳ್ಳಲಾಗುವ ವಾರ್ಷಿಕ ನಿರ್ವಹಣೆ ಕಾಮಗಾರಿಯನ್ನು ಸಮರ್ಪಕವಾಗಿ ನಡೆಸಲಾಗಿತ್ತೇ ಇಲ್ಲವೇ, ಅಧಿಕಾರಿಗಳು ಮತ್ತು ಎಂಜಿನಿಯರ್‌ಗಳ ನಿರ್ಲಕ್ಷ್ಯದಿಂದ ಈ ಘಟನೆ ಸಂಭವಿಸಿದೆಯೇ ಮತ್ತಿತರ ಅಂಶಗಳ ಬಗೆಗೂ ಸರಕಾರ ಸೂಕ್ತ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು. ರಾಜ್ಯದ ಉಳಿದ ಅಣೆಕಟ್ಟುಗಳ ನಿರ್ವಹಣೆಯಲ್ಲಿ ಇಂತಹ ಯಾವುದಾದರೂ ಲೋಪ ಆಗಿದೆಯೇ ಎಂಬುದರತ್ತಲೂ ಸರಕಾರ ತತ್‌ಕ್ಷಣ ಗಮನಹರಿಸಬೇಕು.

ಈ ಘಟನೆಯ ಬಳಿಕ ಎಚ್ಚೆತ್ತುಕೊಂಡಿರುವ ಸರಕಾರ ರಾಜ್ಯದ ಎಲ್ಲ ಅಣೆಕಟ್ಟುಗಳ ಸ್ಥಿತಿಗತಿ ಪರಿಶೀಲನೆಗಾಗಿ ತಜ್ಞರ ಸಮಿತಿ ರಚಿಸುವುದಾಗಿ ತಿಳಿಸಿದೆ. ಅಣೆಕಟ್ಟುಗಳ ನಿರ್ವಹಣೆಗೆ ಸಂಬಂಧಿಸಿದಂತೆ ಕೇಂದ್ರ ಸರಕಾರ ಈ ಹಿಂದೆ ರಚಿಸಿದ್ದ ಸಮಿತಿಯ ಶಿಫಾರಸುಗಳನ್ನು ಸರಕಾರ ಇನ್ನಾದರೂ ಆದ್ಯತೆಯ ಮೇಲೆ ಅನುಷ್ಠಾನಗೊಳಿಸಲು ನೀಲನಕಾಶೆಯೊಂದನ್ನು ರೂಪಿಸಿ, ಕಾರ್ಯೋನ್ಮುಖವಾಗಬೇಕು. ರಾಜ್ಯದ ಬಹುತೇಕ ಅಣೆಕಟ್ಟುಗಳು ಹಳೆಯದಾಗಿರುವುದರಿಂದ ಅವುಗಳ ಸಮರ್ಪಕ ನಿರ್ವಹಣೆ, ತುಂಬಿರುವ ಹೂಳು ತೆರವು, ಸಣ್ಣಪುಟ್ಟ ಬಿರುಕು ಅಥವಾ ತಾಂತ್ರಿಕ ಲೋಪಗಳನ್ನು ಪ್ರಾಥಮಿಕ ಹಂತದಲ್ಲಿಯೇ ದುರಸ್ತಿ ಪಡಿಸುವ ಮತ್ತು ನಿರ್ದಿಷ್ಟ ಅವಧಿಗೊಮ್ಮೆ ಅಣೆಕಟ್ಟುಗಳನ್ನು ಸಮಗ್ರವಾಗಿ ನಿರ್ವಹಣೆ ಮಾಡುವ ವ್ಯವಸ್ಥೆಯೊಂದನ್ನು ಸರಕಾರ ರೂಪಿಸಬೇಕು. ಇಂತಹ ಸಣ್ಣಪುಟ್ಟ ಲೋಪ, ಪ್ರಮಾದ, ನಿರ್ಲಕ್ಷ್ಯ ಕೃಷಿಬೆಳೆಗಳ ಹಾನಿಗೆ ಮಾತ್ರವಲ್ಲದೆ ಈ ಅಣೆಕಟ್ಟುಗಳ ಕೆಳಭಾಗದಲ್ಲಿರುವ ಜನರ ಪ್ರಾಣಕ್ಕೇ ಸಂಚಕಾರ ತಂದೊಡ್ಡುವ ಆತಂಕವಿರುವು­ದರಿಂದ ಸರಕಾರ ಇಂತಹ ವಿಷಯಗಳಲ್ಲಿ ಉದಾಸೀನ ತೋರುವುದು ಬಲುದೊಡ್ಡ ಅನಾಹುತಕ್ಕೆ ಕೈಯಾರೆ ಆಹ್ವಾನ ನೀಡಿದಂತೆ ಎಂಬುದನ್ನು ಮರೆಯಬಾರದು.

ಟಾಪ್ ನ್ಯೂಸ್

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Nirashritha

Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ

1-horoscope

Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Assembly Election: ಜಮ್ಮು-ಕಾಶ್ಮೀರದಲ್ಲಿ ಪ್ರಜಾಪ್ರಭುತ್ವದ ಹಬ್ಬ

Assembly Election: ಜಮ್ಮು-ಕಾಶ್ಮೀರದಲ್ಲಿ ಪ್ರಜಾಪ್ರಭುತ್ವದ ಹಬ್ಬ

Namma-clinic

Karnataka; ಬಸ್‌ ನಿಲ್ದಾಣಗಳಲ್ಲಿ ನಮ್ಮ ಕ್ಲಿನಿಕ್‌ ಸಮುಚಿತ ನಿರ್ಧಾರ

ರೈತರ ಹಿತರಕ್ಷಣೆ ನೆಪದಲ್ಲಿ ಗ್ರಾಹಕರಿಗೆ ಬರೆ ಸಲ್ಲದು

ರೈತರ ಹಿತರಕ್ಷಣೆ ನೆಪದಲ್ಲಿ ಗ್ರಾಹಕರಿಗೆ ಬರೆ ಸಲ್ಲದು

ಪರೀಕ್ಷಾ ಅಕ್ರಮಗಳ ತಡೆಗೆ ಎಸ್‌ಎಸ್‌ಸಿ ಕಠಿನ ನಿಲುವುಪರೀಕ್ಷಾ ಅಕ್ರಮಗಳ ತಡೆಗೆ ಎಸ್‌ಎಸ್‌ಸಿ ಕಠಿನ ನಿಲುವು

ಪರೀಕ್ಷಾ ಅಕ್ರಮಗಳ ತಡೆಗೆ ಎಸ್‌ಎಸ್‌ಸಿ ಕಠಿನ ನಿಲುವು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Nirashritha

Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ

1-horoscope

Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.