State Govt: ಗ್ರಾಮೀಣರ ಆರೋಗ್ಯ ಸುರಕ್ಷೆ ಮಹತ್ವಾಕಾಂಕ್ಷೆ ಈಡೇರಲಿ


Team Udayavani, Oct 25, 2024, 6:15 AM IST

ಗ್ರಾಮೀಣರ ಆರೋಗ್ಯ ಸುರಕ್ಷೆ ಮಹತ್ವಾಕಾಂಕ್ಷೆ ಈಡೇರಲಿ

ರಾಜ್ಯ ಸರಕಾರದ ಬಲು ನಿರೀಕ್ಷಿತ ಮತ್ತು ಮಹತ್ವಾಕಾಂಕ್ಷಿ ಗೃಹ ಆರೋಗ್ಯ ಯೋಜನೆಗೆ ಗುರುವಾರ ಅಧಿಕೃತವಾಗಿ ಚಾಲನೆ ನೀಡಲಾಗಿದೆ. ಗ್ರಾಮೀಣ ಭಾಗದ ಜನರ ಮನೆ ಬಾಗಿಲಿಗೆ ಉತ್ತಮ ಆರೋಗ್ಯ ಸೇವೆಯನ್ನು ತಲುಪಿಸುವ ಮತ್ತು ಜನರನ್ನು ಸಾಮಾನ್ಯವಾಗಿ ಕಾಡುವ ಅಸಾಂಕ್ರಾಮಿಕ ರೋಗಗಳ ನಿಯಂತ್ರಣ ಮತ್ತು ನಿರ್ವಹಣೆಯ ಮಹತ್ತರ ಉದ್ದೇಶವನ್ನು ಈ ಯೋಜನೆ ಒಳಗೊಂಡಿದೆ.

ಮೊದಲ ಹಂತದಲ್ಲಿ ಪ್ರಾಯೋಗಿಕ ನೆಲೆಯಲ್ಲಿ ಕೋಲಾರ ಜಿಲ್ಲೆಯಲ್ಲಿ ಈ ಯೋಜನೆಯನ್ನು ಜಾರಿಗೊಳಿಸಲಾಗಿದ್ದು, ಮುಂದಿನ 3 ತಿಂಗಳ ಒಳಗಾಗಿ ರಾಜ್ಯಾದ್ಯಂತ ಯೋಜನೆಯನ್ನು ವಿಸ್ತರಿಸುವ ಗುರಿಯನ್ನು ಸರಕಾರ ಹಾಕಿ ಕೊಂಡಿದೆ. ಗ್ರಾಮೀಣ ಪ್ರದೇಶಗಳಲ್ಲಿ ಮನೆಮನೆಗೆ ಆಶಾ ಕಾರ್ಯಕರ್ತೆಯರು ಮತ್ತು ಸಮುದಾಯ ಆರೋಗ್ಯ ಕೇಂದ್ರ ಕಾರ್ಯಕರ್ತೆಯರ ತಂಡ ತೆರಳಿ 30 ವರ್ಷಕ್ಕೆ ಮೇಲ್ಪಟ್ಟ ಎಲ್ಲ ಸದಸ್ಯರ ಆರೋಗ್ಯ ತಪಾಸಣೆ ನಡೆಸಲಿದೆ.

ಅದರಲ್ಲೂ ಮುಖ್ಯವಾಗಿ ಮಧುಮೇಹ, ರಕ್ತದೊತ್ತಡಕ್ಕೆ ಸಂಬಂಧಿಸಿದ ಪರೀಕ್ಷೆ ನಡೆಸಿ, ವೈದ್ಯರ ಸಲಹೆಯಂತೆ ನಿರಂತರ ಉಚಿತ ಔಷಧಗಳ ವಿತರಣೆ ನಡೆಸಲಾಗುವುದು. ಇನ್ನು ಇತ್ತೀಚಿನ ವರ್ಷಗಳಲ್ಲಿ ಒಂದಿಷ್ಟು ಹೆಚ್ಚಿನ ಸಂಖ್ಯೆಯ ಜನರನ್ನು ಬಾಧಿಸುತ್ತಿರುವ ಬಾಯಿ, ಸ್ತನ, ಗರ್ಭಕಂಠದ ಕ್ಯಾನ್ಸರ್‌ ಮತ್ತು ಮಾನಸಿಕ ಆರೋಗ್ಯಕ್ಕೆ ಸಂಬಂಧಿಸಿದಂತೆ ಪ್ರಾಥಮಿಕ ಹಂತದ ತಪಾಸಣೆ ನಡೆಸಿ, ಪಡೆಯಬೇಕಾದ ಚಿಕಿತ್ಸೆ, ಔಷಧೋಪಚಾರದ ಬಗೆಗೆ ವೈದ್ಯರ ಮಾರ್ಗದರ್ಶನ ದಂತೆ ರೋಗಿಗಳಿಗೆ ತಿಳಿ ಹೇಳಲಾಗುವುದು. ಅವಶ್ಯವಿದ್ದಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಸರಕಾರಿ ಆಸ್ಪತ್ರೆಗಳಿಗೆ ದಾಖಲಿಸುವ ವ್ಯವಸ್ಥೆಯನ್ನು ಕೂಡ ತಂಡ ಮಾಡಲಿದೆ.

ಗೃಹ ಆರೋಗ್ಯ ಯೋಜನೆಯ ಉದ್ದೇಶ ಮತ್ತು ಕಾರ್ಯವಿಧಾನಗಳು ಪರಿಣಾಮಕಾರಿಯಾಗಿ ಜಾರಿಯಾಗಿದ್ದೇ ಆದಲ್ಲಿ ಗ್ರಾಮೀಣ ಜನರ ಪಾಲಿಗೆ ಸಂಜೀವಿನಿಯಾಗಲಿರುವುದು ನಿಶ್ಚಿತ. ಅಸಾಂಕ್ರಾಮಿಕ ಮತ್ತು ಕ್ಯಾನ್ಸರ್‌ನಂತಹ ಮಾರಕ ಕಾಯಿಲೆಗಳನ್ನು ಪ್ರಾಥಮಿಕ ಹಂತದಲ್ಲಿಯೇ ಪತ್ತೆಹಚ್ಚಿ ಸೂಕ್ತ ಔಷಧೋಪಚಾರ, ಚಿಕಿತ್ಸೆ, ಆಹಾರಸೇವನೆ ಕ್ರಮ ಮತ್ತು ಜೀವನಶೈಲಿಯಲ್ಲಿ ಬದಲಾವಣೆಯಂತಹ ಕ್ರಮಗಳಿಂದ ಅಕಾಲಿಕ ಮರಣ ಮತ್ತು ಮಾಹಿತಿಯ ಕೊರತೆಯಿಂದ ಬೇಕಾಬಿಟ್ಟಿ ಔಷಧಗಳನ್ನು ಸೇವಿಸುವುದರಿಂದ ಎದುರಾಗುವ ಅಡ್ಡ ಪರಿಣಾಮಗಳನ್ನು ತಡೆಗಟ್ಟಲು ಸಾಧ್ಯವಾಗಲಿದೆ. ಇವೆಲ್ಲದಕ್ಕಿಂತ ಮುಖ್ಯ ವಾಗಿ ಗ್ರಾಮೀಣ ಜನರ ಆರೋಗ್ಯ ರಕ್ಷಣೆಯನ್ನು ಖಾತರಿಪಡಿಸಿದಂತಾಗಲಿದೆ.

ಗೃಹ ಆರೋಗ್ಯ ಯೋಜನೆಯ ಉದ್ದೇಶ ಅತ್ಯಂತ ದೂರದೃಷ್ಟಿಯಿಂದ ಕೂಡಿದ್ದಾಗಿದೆ ಎಂಬುದರಲ್ಲಿ ಎರಡು ಮಾತಿಲ್ಲವಾದರೂ ಇದು ಕೇವಲ ಆರಂಭಶೂರತನಕ್ಕೆ ಸೀಮಿತವಾಗದಂತೆ ಎಚ್ಚರ ವಹಿಸಬೇಕು. ಈಗಾಗಲೇ ಸಮುದಾಯ ಆರೋಗ್ಯ ಕೇಂದ್ರದ ಕಾರ್ಯಕರ್ತರು ಮತ್ತು ಆಶಾ ಕಾರ್ಯಕರ್ತೆಯರು ಕಾರ್ಯಬಾಹುಳ್ಯದಿಂದ ನಲುಗಿ ಹೋಗಿದ್ದು ಈಗ ಮತ್ತೂಂದು ಹೆಚ್ಚುವರಿ ಕರ್ತವ್ಯವನ್ನು ಇವರಿಗೆ ವಹಿಸುವುದರಿಂದ ಇವರ ಮೇಲಾಗುವ ಪರಿಣಾಮವನ್ನು ಸರ್ಕಾರ ಅರ್ಥ ಮಾಡಿಕೊಳ್ಳಬೇಕು. ಈ ಕಾರ್ಯಕರ್ತರ ಕೊರತೆಯನ್ನು ನೀಗಿಸಲು ಮತ್ತು ಹೆಚ್ಚುವರಿ ಕೆಲಸಕ್ಕೆ ಸೂಕ್ತ ಸಂಭಾವನೆ ನೀಡುವ ಕನಿಷ್ಠ ಔದಾರ್ಯವನ್ನಾದರೂ ಸರಕಾರ ತೋರಬೇಕು.

ಜನರ ತಪಾಸಣೆಗಾಗಿ ಆರೋಗ್ಯ ಕಾರ್ಯಕರ್ತರಿಗೆ ಸೂಕ್ತ ಮತ್ತು ಸಮರ್ಪಕ ವೈದ್ಯಕೀಯ ಪರಿಕರಗಳನ್ನೊಳಗೊಂಡ ಕಿಟ್‌ ಪೂರೈಕೆ ಹಾಗೂ ಪರೀಕ್ಷೆ, ತಪಾಸಣೆ ಸಂದರ್ಭದಲ್ಲಿ ವೈದ್ಯಕೀಯ ನಿಯಮಾವಳಿಗಳು ಮತ್ತು ಮಾರ್ಗದರ್ಶಿ ಸೂತ್ರ ಗಳು ಪಾಲನೆಯಾಗುವುದನ್ನು ಖಾತರಿಪಡಿಸಿಕೊಳ್ಳಬೇಕು. ಇಲ್ಲವಾದಲ್ಲಿ ಯೋಜನೆಯ ಮೂಲೋದ್ದೇಶಕ್ಕೇ ಕೊಡಲಿಯೇಟು ಬೀಳುವ ಸಾಧ್ಯತೆ ಇದೆ. ಅನುಷ್ಠಾನ ಹಂತದಲ್ಲಿ ಕಂಡುಬರುವ ಎಲ್ಲ ಲೋಪದೋಷ ಮತ್ತು ಕಾರ್ಯ ವಿಧಾನದಲ್ಲಿನ ಸಮಸ್ಯೆಗಳಿಗೆ ಸೂಕ್ತ ಪರಿಹಾರೋಪಾಯ ಕಂಡುಕೊಂಡು ಆ ಬಳಿಕ ಯೋಜನೆಯನ್ನು ಇತರೆಡೆೆ ವಿಸ್ತರಿಸಿದಲ್ಲಿ ಯೋಜನೆ ನಿರೀಕ್ಷಿತ ಗುರಿ ತಲುಪಿ ಉದ್ದೇಶಿತ ಸಾಧನೆ ಕಾರ್ಯಸಾಧ್ಯವಾಗುವುದರಲ್ಲಿ ಸಂಶಯವಿಲ್ಲ.

ಟಾಪ್ ನ್ಯೂಸ್

2-shimogga

Shivamogga: ಲಾರಿ- ಬೈಕ್ ಭೀಕರ ಅಪಘಾತ; ಇಬ್ಬರ ಸಾವು, ಓರ್ವ ಗಂಭೀರ

1-horoscope

Horoscope: ಹೊಸ ಅವಕಾಶಗಳು ಅಯಾಚಿತವಾಗಿ ಲಭಿಸುವ ಸಾಧ್ಯತೆ, ವಧೂವರಾನ್ವೇಷಿಗಳಿಗೆ ಅನುಕೂಲ

office- bank

Work from home ಬಿಡಿ, ಆರೋಗ್ಯಕ್ಕಾಗಿ ಆಫೀಸಿಗೆ ನಡಿ: ಅಧ್ಯಯನ

1-aa

Congress MLA; ಸೈಲ್‌ ಬಂಧನ.. ಇಂದು ಶಿಕ್ಷೆ ಪ್ರಮಾಣ ಪ್ರಕಟ: ಏನಿದು ಪ್ರಕರಣ?

1-neol

Tata Sons;ಅಧ್ಯಕ್ಷ ಸ್ಥಾನಕ್ಕೆ ನಿಯೋಲ್‌ ಟಾಟಾ ನೇಮಕ ಅಸಾಧ್ಯ!

1-reee

North Korea vs South Korea: ಮತ್ತೆ ಬಲೂನ್‌ವಾರ್‌

Udayavani: “ಚಿಣ್ಣರ ಬಣ್ಣ 2024′ ನಾಳೆ ಆರಂಭ

Udayavani: “ಚಿಣ್ಣರ ಬಣ್ಣ 2024′ ನಾಳೆ ಆರಂಭ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಾಯುಮಾಲಿನ್ಯ ನಿಯಂತ್ರಣ ಕಠಿನ ನಿಲುವು ಅನಿವಾರ್ಯ

India: ವಾಯುಮಾಲಿನ್ಯ ನಿಯಂತ್ರಣ ಕಠಿನ ನಿಲುವು ಅನಿವಾರ್ಯ

Flight: ಹುಸಿ ಬಾಂಬ್‌ ಬೆದರಿಕೆ: ಕಠಿನ ಶಿಕ್ಷೆ ಅಗತ್ಯ

Flight: ಹುಸಿ ಬಾಂಬ್‌ ಬೆದರಿಕೆ: ಕಠಿನ ಶಿಕ್ಷೆ ಅಗತ್ಯ

ARMY (2)

Jammu and Kashmir; ಉಗ್ರರ ದಮನದ ಜತೆಯಲ್ಲಿ ನಾಗರಿಕರ ರಕ್ಷಣೆಯೂ ಮುಖ್ಯ

Server Down: ಪಡಿತರ ವಿತರಣ ವ್ಯವಸ್ಥೆಯ ಸಮಸ್ಯೆ ಶೀಘ್ರ ಬಗೆಹರಿಯಲಿ

Server Down: ಪಡಿತರ ವಿತರಣ ವ್ಯವಸ್ಥೆಯ ಸಮಸ್ಯೆ ಶೀಘ್ರ ಬಗೆಹರಿಯಲಿ

Agricultural: ರೈತರ ಸಂಕಷ್ಟಕ್ಕೆ ಸ್ಪಂದನೆ ಮೊದಲ ಆದ್ಯತೆಯಾಗಲಿ

Agricultural: ರೈತರ ಸಂಕಷ್ಟಕ್ಕೆ ಸ್ಪಂದನೆ ಮೊದಲ ಆದ್ಯತೆಯಾಗಲಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

WhatsApp Image 2024-10-25 at 02.11.37

Legislative council bypolls: ಒಬಿಸಿ ಸಮುದಾಯದ ಗೆಲುವು; ಜೆ.ಪಿ.ನಡ್ಡಾ

WhatsApp Image 2024-10-25 at 02.14.40

Dakshina Kannada: ಎಸೆಸೆಲ್ಸಿಯ 4,742 ವಿದ್ಯಾರ್ಥಿಗಳಿಗೆ ‘ದತ್ತಾಂಶ ಸೂತ್ರ’!

WhatsApp Image 2024-10-25 at 02.16.30

Aranthodu: ಕಾಡಾನೆಗಳಿಂದ ಕೃಷಿಗೆ ಹಾನಿ

2-shimogga

Shivamogga: ಲಾರಿ- ಬೈಕ್ ಭೀಕರ ಅಪಘಾತ; ಇಬ್ಬರ ಸಾವು, ಓರ್ವ ಗಂಭೀರ

1

Surathkal: ತುಳುನಾಡಿನ ಆಹಾರ, ಐತಿಹಾಸಿಕ ಪರಂಪರೆ ಮಾಹಿತಿಗೆ ‘ಸೊಲ್ಮೆಲು’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.