ಒಬಿಸಿ ಮೀಸಲಾತಿ: ರಾಜ್ಯಗಳಿಗೆ ಅಧಿಕಾರ ಸ್ವಾಗತಾರ್ಹ ಕ್ರಮ


Team Udayavani, Aug 10, 2021, 6:10 AM IST

ಒಬಿಸಿ ಮೀಸಲಾತಿ: ರಾಜ್ಯಗಳಿಗೆ ಅಧಿಕಾರ ಸ್ವಾಗತಾರ್ಹ ಕ್ರಮ

ಒಬಿಸಿ ಮೀಸಲಾತಿ ಪಟ್ಟಿ ರೂಪಿಸುವಲ್ಲಿ ರಾಜ್ಯಗಳಿಗೇ ಅಧಿಕಾರ ನೀಡುವ ಕುರಿತಂತೆ ಸಂಸತ್‌ನಲ್ಲಿ ಸಂವಿಧಾನ ತಿದ್ದುಪಡಿ ಮಸೂದೆ ಮಂಡಿಸಲು ಮುಂದಾಗಿರುವ ಕೇಂದ್ರ ಸರಕಾರದ ಕ್ರಮ ಸ್ವಾಗತಾರ್ಹವಾದದ್ದು. ಮರಾಠಾ ಮೀಸಲಾತಿ ಸಂಬಂಧ ಈಗಾಗಲೇ ಸುಪ್ರೀಂ ಕೋರ್ಟ್‌, ರಾಜ್ಯಗಳಿಗೆ ಮೀಸಲಾತಿ ಪಟ್ಟಿ ನಿರ್ಧರಿಸುವ ಹಕ್ಕು ಇಲ್ಲ ಎಂದು ತೀರ್ಪು ನೀಡಿದ್ದು, ಇದರಿಂದ ಭಾರೀ ಹಿನ್ನಡೆಯಾಗಿತ್ತು. ಆದರೆ ಈಗ ಕೇಂದ್ರ ಸರಕಾರವೇ ರಾಜ್ಯಗಳಿಗೆ ಅಧಿಕಾರ ನೀಡುವ ಸಲುವಾಗಿ ಸಂವಿಧಾನ ತಿದ್ದುಪಡಿ ಮಸೂದೆ ಮಂಡಿಸಲು ಮುಂದಾಗಿದೆ. ಒಂದು ವೇಳೆ ಸಂಸತ್‌ನ ಎರಡೂ ಸದನಗಳಲ್ಲಿ ಪಾಸಾದರೆ, ರಾಜ್ಯಗಳಿಗೇ ಮತ್ತೆ ಅಧಿಕಾರ ಸಿಗಲಿದೆ.

ಟೀಕಾಕಾರರ ಲೆಕ್ಕಾಚಾರದಲ್ಲಿ ಕೇಂದ್ರ ಸರಕಾರ, ಮುಂಬರುವ ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಇಂಥದ್ದೊಂದು ಕ್ರಮಕ್ಕೆ ಮುಂದಾಗಿದೆ. ಇಲ್ಲದಿದ್ದರೆ ಅದು ಒಬಿಸಿ ಪಟ್ಟಿ ಮಾಡುವ ಅಧಿಕಾರವನ್ನು ತನ್ನ ಬಳಿಯೇ ಇರಿಸಿಕೊಳ್ಳುತ್ತಿತ್ತು ಎಂದು ವಾದಿಸುವವರಿದ್ದಾರೆ. ಆದರೆ ಇಂಥ ಟೀಕೆ-ಆರೋಪಗಳು ಸಹಜವಾಗಿಯೇ ಕೇಳಿಬರುವಂಥವು. ಇದರಲ್ಲಿ ಕೆಲವೊಮ್ಮೆ ಸತ್ಯವೂ ಇರುತ್ತದೆ, ಕೆಲವೊಮ್ಮೆ ಅಸತ್ಯವೂ ಇರುತ್ತದೆ. ಆದರೆ ಈಗ ಕೇಂದ್ರ ಸರಕಾರದ ನಡೆ ಮಾತ್ರ ರಾಜ್ಯ ಸರಕಾರಗಳಿಗೆ ಉಪಯೋಗವಾಗುವಂಥದ್ದು.

ಮಹಾರಾಷ್ಟ್ರದಲ್ಲಿ ಮರಾಠರಿಗೆ ಅಲ್ಲಿನ ಸರಕಾರವೇ ಮೀಸಲಾತಿ ನೀಡಿತ್ತು. ಆದರೆ ಇದನ್ನು ಸುಪ್ರೀಂ ಕೋರ್ಟ್‌ ರಾಜ್ಯಗಳಿಗೆ ಇಂಥ ಅಧಿಕಾರವೇ ಇಲ್ಲ ಎಂಬ ಕಾರಣದಿಂದಾಗಿ ತೆಗೆದುಹಾಕಿತ್ತು. ಅಲ್ಲದೇ ಇಂಥ ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದ ವರ್ಗಗಳಿಗೆ ಮೀಸಲಾತಿ ನೀಡುವ ಅಧಿಕಾರ ಕೇಂದ್ರ ಸರಕಾರಕ್ಕೆ ಮಾತ್ರ ಇದೆ ಎಂದೂ ಹೇಳಿತ್ತು. ಆದರೆ ಕೇಂದ್ರ ಸರಕಾರವೇ ಸುಪ್ರೀಂ ಕೋರ್ಟ್‌ ತೀರ್ಪು ಪ್ರಶ್ನಿಸಿ, ಮರುಪರಿಶೀಲನೆಗೆ ಅರ್ಜಿ ಸಲ್ಲಿಸಿದ್ದರೂ, ಕೋರ್ಟ್‌ ತಳ್ಳಿಹಾಕಿತ್ತು.

ಈಗ ಬೇರೆ ದಾರಿ ಇಲ್ಲದೇ ಕೇಂದ್ರ ಸರಕಾರ ಸಂವಿಧಾನ ತಿದ್ದುಪಡಿಯ ದಾರಿ ಹಿಡಿದಿದೆ. ಒಂದು ವೇಳೆ ಮೂರನೇ ಎರಡು ಬಹುಮತದಿಂದ ಸಂಸತ್‌ನಲ್ಲಿ ಅಂಗೀಕಾರವಾದರೆ, ಕರ್ನಾಟಕವೂ ಸೇರಿ ಬಹಳಷ್ಟು ರಾಜ್ಯಗಳಲ್ಲಿ ಕಾಯುತ್ತಿರುವ ಹಿಂದುಳಿದ ವರ್ಗಗಳಿಗೆ ಅನುಕೂಲವಾಗಲಿದೆ. ಹಾಗೆಯೇ ಕರ್ನಾಟಕದಲ್ಲೂ ಪಂಚಮಸಾಲಿ ಸೇರಿದಂತೆ ಕೆಲವು ಸಮುದಾಯಗಳು ಹಿಂದುಳಿದ ವರ್ಗಕ್ಕೆ ಸೇರಿಸಬೇಕು ಎಂಬ ಬಗ್ಗೆ ಬೇಡಿಕೆ ಇಟ್ಟಿದ್ದು, ಇದನ್ನು ಬಗೆಹರಿಸುವುದು ಸುಲಭವಾಗಲಿದೆ.

ಏನೇ ಆಗಲಿ, ಮೀಸಲಾತಿ ನಿಗದಿ ಮಾಡುವ ಅಧಿಕಾರ ಸಿಕ್ಕಿದೆ ಎಂಬ ಕಾರಣಕ್ಕಾಗಿ ರಾಜ್ಯಗಳು ತಮಗೆ ಬೇಕಾದವರು ಮತ್ತು ಮತಗಳಿಕೆಗಾಗಿ ಬಳಸಿಕೊಳ್ಳಬಾರದು. ಕೆಲವೊಂದು ವರ್ಗಗಳನ್ನು ಗುರಿಯಾಗಿರಿಸಿಕೊಂಡು, ಹೆಚ್ಚಿನ ವೋಟ್‌ ಬರಬಹುದು ಎಂಬ ಕಾರಣಕ್ಕಾಗಿ ಅಂಥವರಿಗೆ ಮೀಸಲಾತಿ ನೀಡುವ ಪದ್ಧತಿಗಳು ಜಾರಿಯಾಗಬಾರದು. ಹೀಗೆ ಮಾಡಿದಲ್ಲಿ ಮೀಸಲಾತಿ ಕುರಿತಂತೆ ಜನರಲ್ಲಿ ನಂಬಿಕೆ ಹೋಗಬಹುದು ಮತ್ತು ಸರಕಾರದ ನಿರ್ಧಾರಗಳನ್ನು ಪ್ರಶ್ನಿಸಿ ಜನ ಕೋರ್ಟ್‌ ಮೊರೆ ಹೋಗಬಹುದು. ಹೀಗಾಗಿ ಮೀಸಲಾತಿ ನೀಡುವಾಗ ಅಳೆದು ತೂಗಿ, ನಿಜವಾಗಿಯೂ ಹಿಂದುಳಿದವರಿಗೆ ಮಾತ್ರ ಕೊಡಬೇಕು. ಆಗ ಮಾತ್ರ ರಾಜ್ಯಗಳಿಗೆ ಸಿಕ್ಕಿದ ಅಧಿಕಾರ ಸರಿಯಾದ ಲೆಕ್ಕಾಚಾರದಲ್ಲಿ ಬಳಕೆಯಾದಂತೆ ಆಗುತ್ತದೆ.

ಟಾಪ್ ನ್ಯೂಸ್

1-horoscope

Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Drug ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು; ಬೆಂಗಳೂರು,ಮಂಗಳೂರಲ್ಲಿ ಡ್ರಗ್ಸ್‌ ಹಾವಳಿ ಹೆಚ್ಚಳ

Karnataka Govt.,; ಡ್ರಗ್‌ ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Assembly Election: ಜಮ್ಮು-ಕಾಶ್ಮೀರದಲ್ಲಿ ಪ್ರಜಾಪ್ರಭುತ್ವದ ಹಬ್ಬ

Assembly Election: ಜಮ್ಮು-ಕಾಶ್ಮೀರದಲ್ಲಿ ಪ್ರಜಾಪ್ರಭುತ್ವದ ಹಬ್ಬ

Namma-clinic

Karnataka; ಬಸ್‌ ನಿಲ್ದಾಣಗಳಲ್ಲಿ ನಮ್ಮ ಕ್ಲಿನಿಕ್‌ ಸಮುಚಿತ ನಿರ್ಧಾರ

ರೈತರ ಹಿತರಕ್ಷಣೆ ನೆಪದಲ್ಲಿ ಗ್ರಾಹಕರಿಗೆ ಬರೆ ಸಲ್ಲದು

ರೈತರ ಹಿತರಕ್ಷಣೆ ನೆಪದಲ್ಲಿ ಗ್ರಾಹಕರಿಗೆ ಬರೆ ಸಲ್ಲದು

ಪರೀಕ್ಷಾ ಅಕ್ರಮಗಳ ತಡೆಗೆ ಎಸ್‌ಎಸ್‌ಸಿ ಕಠಿನ ನಿಲುವುಪರೀಕ್ಷಾ ಅಕ್ರಮಗಳ ತಡೆಗೆ ಎಸ್‌ಎಸ್‌ಸಿ ಕಠಿನ ನಿಲುವು

ಪರೀಕ್ಷಾ ಅಕ್ರಮಗಳ ತಡೆಗೆ ಎಸ್‌ಎಸ್‌ಸಿ ಕಠಿನ ನಿಲುವು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-horoscope

Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.