Editorial; ಪಿಒಕೆ: ಭುಗಿಲೆದ್ದ ಜನಾಕ್ರೋಶ ಇಕ್ಕಟ್ಟಿಗೆ ಸಿಲುಕಿದ ಪಾಕಿಸ್ಥಾನ


Team Udayavani, May 15, 2024, 6:10 AM IST

ಪಿಒಕೆ

ರಾಜಕೀಯ ಅರಾಜಕತೆ, ಭಯೋತ್ಪಾದಕ ದಾಳಿ, ಆಹಾರ ಅಭಾವ, ದಿವಾಳಿ ಯಾಗಿರುವ ಆರ್ಥಿಕತೆ.. ಹೀಗೆ ಸರಣಿ ಸಂಕಷ್ಟಗಳ ಸುಳಿಯಲ್ಲಿ ಸಿಲುಕಿ ಒದ್ದಾಡು ತ್ತಿರುವ ಪಾಕಿಸ್ಥಾನಕ್ಕೀಗ ಮತ್ತೂಂದು ಸಮಸ್ಯೆ ಎದುರಾಗಿದೆ. ಸ್ವಾತಂತ್ರ್ಯದ ಸಂದರ್ಭ ದಲ್ಲಿ ಪಾಕಿಸ್ಥಾನ ಕುತಂತ್ರದಿಂದ ಅತಿಕ್ರಮಿಸಿದ್ದ ಭಾರತದ ಭಾಗವಾಗಿದ್ದ ಹಾಲಿ ಪಾಕ್‌ ಆಕ್ರಮಿತ ಕಾಶ್ಮೀರ(ಪಿಒಕೆ)ವನ್ನು ತನ್ನ ತೆಕ್ಕೆಯಲ್ಲಿ ಉಳಿಸಿಕೊಳ್ಳುವುದೇ ಅಲ್ಲಿನ ಸರಕಾರದ ಪಾಲಿಗೆ ಬಲುದೊಡ್ಡ ಸವಾಲಾಗಿದೆ. ಪಿಒಕೆ ಜನತೆ ಈಗ ಬಹಿರಂ ಗವಾಗಿ ಬೀದಿಗಿಳಿದು ಪಾಕಿಸ್ಥಾನ ಸರಕಾರದ ಮಲತಾಯಿ ಧೋರಣೆ, ಬೆಲೆ ಏರಿಕೆ, ಹೆಚ್ಚಿನ ಪ್ರಮಾಣದಲ್ಲಿ ತೆರಿಗೆ ವಸೂಲು, ವಿದ್ಯುತ್‌ ದರ ಹೆಚ್ಚಳ ಹಾಗೂ ಸರಕಾರಿ ಸೌಲಭ್ಯ ನೀಡಿಕೆಯಲ್ಲೂ ತಾರತಮ್ಯ ನೀತಿಯನ್ನು ತನ್ನದಾಗಿಸಿಕೊಂಡಿರುವುದರ ವಿರುದ್ಧ ಭಾರೀ ಪ್ರತಿಭಟನೆ ನಡೆಸುತ್ತಿದ್ದಾರೆ. ಅಷ್ಟು ಮಾತ್ರವಲ್ಲದೆ ಪಿಒಕೆಯನ್ನು ಭಾರತದೊಂದಿಗೆ ಸೇರ್ಪಡೆಗೊಳಿಸಬೇಕೆಂಬ ಆಗ್ರಹವೀಗ ಪ್ರತಿಧ್ವನಿಸತೊಡಗಿದೆ.

ಪಿಒಕೆಯ ಜನರು ಪಾಕಿಸ್ಥಾನ ಸರಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವುದು ಇದೇ ಮೊದಲೇನಲ್ಲ. ಕಳೆದ ಹಲವಾರು ವರ್ಷಗಳಿಂದ ಪಿಒಕೆಯಲ್ಲಿ ಇಂತಹ ಪ್ರತಿಭಟನೆಗಳನ್ನು ನಡೆಸುತ್ತಲೇ ಬಂದಿದ್ದಾರೆ. ಹಾಗೆಯೇ ಪಿಒಕೆಯನ್ನು ಭಾರತ ದೊಂದಿಗೆ ವಿಲೀನಗೊಳಿಸಬೇಕೆಂಬ ಬೇಡಿಕೆಯನ್ನು ಇರಿಸಿದ್ದಾರೆ. ಈ ಸಂದರ್ಭ ದಲ್ಲೆಲ್ಲ ಪಾಕಿಸ್ಥಾನ ಸರಕಾರ ಅಲ್ಲಿನ ಹೋರಾಟಗಾರರು ಮತ್ತು ಸ್ಥಳೀಯ ಜನತೆಯ ಮೂಗಿಗೆ ತುಪ್ಪ ಸವರಿ ಅವರ ಆಕ್ರೋಶವನ್ನು ಒಂದಿಷ್ಟು ಕಡಿಮೆಗೊಳಿಸಿ, ಪರಿಸ್ಥಿತಿಯನ್ನು ತಣ್ಣಗಾಗಿಸುತ್ತ ಬಂದಿದೆ. ಆದರೆ ಈ ಬಾರಿ ಜನರು ಪಿಒಕೆಯ ಸ್ವಾತಂತ್ರ್ಯಕ್ಕಾಗಿ ಪಟ್ಟು ಹಿಡಿದಿದ್ದು, ಪಾಕಿಸ್ಥಾನ ಸರಕಾರದ ಯಾವುದೇ ಭರವಸೆ, ಆಮಿಷಗಳಿಗೆ ಸೊಪ್ಪು ಹಾಕದಿರಲು ನಿರ್ಧರಿಸಿದಂತಿದೆ.

ಕಳೆದೆರಡು ವರ್ಷಗಳಿಂದ ಪಾಕಿಸ್ಥಾನ ಆರ್ಥಿಕವಾಗಿ ಸಂಪೂರ್ಣವಾಗಿ ಜರ್ಝರಿತವಾಗಿದೆ. ತಿಂಗಳುಗಳ ಹಿಂದೆ ನಡೆದ ಚುನಾವಣೆಯಲ್ಲೂ ಅತಂತ್ರ ಸ್ಥಿತಿ ನಿಮಾಣವಾಗಿತ್ತಾದರೂ ಪಿಎಂಎಲ್‌-ಎನ್‌ ಮತ್ತು ಪಿಪಿಪಿ ಮೈತ್ರಿಕೂಟ ಸರಕಾರ ರಚಿಸಿತ್ತು. ಆದರೆ ಮೈತ್ರಿ ಸರಕಾರ ಕೂಡ “ನಾಮ್‌ ಕೇ ವಾಸ್ತೆ’ ಎಂಬಂತಾಗಿದ್ದು, ದೇಶ ಎದುರಿಸುತ್ತಿರುವ ಗಂಭೀರ ಸಮಸ್ಯೆಗಳಿಂದ ಜನತೆಯನ್ನು ಪಾರು ಮಾಡಲು ಹರಸಾಹಸ ಪಡುತ್ತಿದೆ. ದೇಶದ ಮುಖ್ಯ ಆಹಾರ ಧಾನ್ಯವಾದ ಗೋಧಿಯ ಅಭಾವ ತೀವ್ರವಾಗಿದ್ದು ಜನರು ಒಂದು ಹೊತ್ತಿನ ಊಟಕ್ಕೂ ಪ್ರಯಾಸ ಪಡುವಂತಾಗಿದೆ.

ವಿದೇಶಿ ಹಣಕಾಸು ಸಂಸ್ಥೆಗಳನ್ನು ಅಂಗಲಾಚಿ ಆರ್ಥಿಕ ನೆರವನ್ನು ಪಡೆದಿದ್ದರೂ ಅದು “ಬಕಾಸುರನ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ’ ಎಂಬಂತಾಗಿದೆ. ಪಿಒಕೆಯಂತೂ ಪಾಕಿಸ್ಥಾನ ಸರಕಾರಕ್ಕೆ ಪ್ರಯೋಗಶಾಲೆಯಂತಾಗಿದ್ದು ಇಲ್ಲಿನ ಜನರು ಬೆಲೆ ಏರಿಕೆಯಿಂದ ಹೈರಾಣಾಗಿದ್ದಾರೆ. ಇವೆಲ್ಲದರಿಂದ ಬೇಸತ್ತಿರುವ ಪಿಒಕೆಯ ಜನರು ಬೀದಿಗಿಳಿದಿದ್ದಾರೆ. ಪಿಒಕೆ ಜನತೆ ಭಾರತದೊಂದಿಗೆ ವಿಲೀನಗೊಳಿಸುವಂತೆ ಬೇಡಿಕೆ ಇಡುತ್ತಿದ್ದಂತೆಯೇ ಪಾಕಿಸ್ಥಾನ ಸರಕಾರಕ್ಕೆ ಪ್ರತಿಭಟನೆಯ ತೀವ್ರತೆಯ ಬಿಸಿ ತಟ್ಟಿ ಪಿಒಕೆಗಾಗಿ 2,300 ಪಾಕಿಸ್ಥಾನಿ ಕೋ.ರೂ.ಗಳ ಪ್ಯಾಕೇಜ್‌ ಅನ್ನು ಘೋಷಿಸಿದೆ. ಆದರೆ ಸರಕಾರದ ಈ ಭರವಸೆಗೆ ಸೊಪ್ಪು ಹಾಕದ ಪಿಒಕೆ ಜನರು ಮಂಗಳವಾರ ತಮ್ಮ ಪ್ರತಿಭಟನೆಯನ್ನು ತೀವ್ರ ಗೊಳಿಸಿದ್ದಾರೆ. ಪಾಕಿಸ್ಥಾನ ಸರಕಾರದ ಬಲ ಪ್ರಯೋಗಕ್ಕೂ ಜಗ್ಗದ ಜನರು, ಯೋಧರ ಬಂದೂಕಿಗೆ ಎದೆಯೊಡ್ಡಿ ತಮ್ಮ ಹೋರಾಟವನ್ನು ತೀವ್ರಗೊಳಿಸಿದ್ದಾರೆ.

ಪಿಒಕೆಯಲ್ಲಿನ ಎಲ್ಲ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಅವಲೋಕಿಸುತ್ತಿರುವ ಭಾರತ ಸರಕಾರ, ಸದ್ಯೋಭವಿಷ್ಯದಲ್ಲಿ ಅಲ್ಲಿನ ಜನರೇ ಪಿಒಕೆಯನ್ನು ಭಾರತ ದೊಂದಿಗೆ ವಿಲೀನಗೊಳಿಸಲಿದ್ದಾರೆ ಎಂಬ ತುಂಬು ವಿಶ್ವಾಸದಲ್ಲಿದೆ. ಒಟ್ಟಾರೆ ಪಾಕಿ ಸ್ಥಾನದ ಸದ್ಯದ ಪರಿಸ್ಥಿತಿ “ಮಾಡಿದ್ದುಣ್ಣೋ ಮಹಾರಾಯ’ ಎನ್ನುವಂತಾಗಿದೆ. ಕಳೆದ ಏಳೂವರೆ ದಶಕಗಳಿಂದ ಭಾರತ ಪ್ರತಿಪಾದಿಸುತ್ತಲೇ ಬಂದಿದ್ದ “ಪಿಒಕೆ ತನ್ನ ಅವಿಭಾಜ್ಯ ಅಂಗ’ ಎಂಬ ವಾದಕ್ಕೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮತ್ತಷ್ಟು ಬಲ ಲಭಿಸಿದಂತಾಗಿದೆ.

ಟಾಪ್ ನ್ಯೂಸ್

MOdi (3)

Jammu and Kashmir ಜನತೆ ಭ್ರಷ್ಟ ಮುಕ್ತ ಸರಕಾರ ಬಯಸಿದ್ದಾರೆ: ಮೋದಿ

UNITED NATIONS

UN ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸ್ಥಾನ: ಪೋರ್ಚುಗಲ್‌ ಬೆಂಬಲ

1-wewewq

PM ರೇಸ್‌ನಲ್ಲಿ ನಾನು ಇಲ್ಲ; ಬೇಕಿದ್ದರೇ ಮೋದಿ ಕೇಳಿ: ಗಡ್ಕರಿ

Manglrui

Mangaluru: ಸಂಸ್ಥೆಯ ಬೆಳವಣಿಗೆಯಲ್ಲಿ ಮಾನವ ಸಂಪನ್ಮೂಲ ಪಾತ್ರ ಪ್ರಮುಖ: ಮಂಜುನಾಥ ಭಂಡಾರಿ

1-asasa

Test; ನ್ಯೂಜಿಲ್ಯಾಂಡ್‌ ಆಲೌಟ್‌ 88 : ಲಂಕೆಗೆ 514 ರನ್‌ ದಾಖಲೆ ಮುನ್ನಡೆ

dinesh-gu

Dinesh Gundurao; ತಿಂಗಳೊಳಗೆ ಗೃಹ ಆರೋಗ್ಯ ಯೋಜನೆ ಜಾರಿ

leopard

leopard: ಮೂಲ್ಕಿ ಕೊಯ್ಯಾರಿನಲ್ಲಿ ಸಣ್ಣ ಮರಿಯೊಂದಿಗೆ ಚಿರತೆ ಪ್ರತ್ಯಕ್ಷ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WHO

Permanent Member: ಭದ್ರತಾ ಮಂಡಳಿ ಖಾಯಂ ಸದಸ್ಯತ್ವ: ಭಾರತಕ್ಕೆ ಆನೆಬಲ

Fake-Medicine

Quality Poor Medicine: ಮಾರುಕಟ್ಟೆಗೆ ನಕಲಿ ಔಷಧ ಪ್ರವೇಶ ತಪ್ಪಿಸಿ

railaw

Indian Railway: ರೈಲು ಹಳಿ ತಪ್ಪಿಸುವ ಯತ್ನ ಆಮೂಲಾಗ್ರ ತನಿಖೆ ಅಗತ್ಯ

traffic

Traffic Rules: ಸಂಚಾರ ನಿಯಮಾವಳಿಗಳು ಕಟ್ಟುನಿಟ್ಟಾಗಿ ಅನುಷ್ಠಾನಗೊಳ್ಳಲಿ

supreme-Court

Supreme Court: ಪೋಕ್ಸೋ ವ್ಯಾಪ್ತಿ ವಿಸ್ತರಣೆ: ಸುಪ್ರೀಂ ತೀರ್ಪು ಐತಿಹಾಸಿಕ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

congress

Haryana ಅನ್ನದಾತರ ಕಲ್ಯಾಣಕ್ಕೆ ಆಯೋಗ ರಚನೆ: ಕಾಂಗ್ರೆಸ್‌ ವಾಗ್ಧಾನ

MOdi (3)

Jammu and Kashmir ಜನತೆ ಭ್ರಷ್ಟ ಮುಕ್ತ ಸರಕಾರ ಬಯಸಿದ್ದಾರೆ: ಮೋದಿ

court

Jama Masjid:ಮಾಜಿ ಪಿಎಂ ಸಹಿ ಕಡತ ಸಲ್ಲಿಸದ್ದಕ್ಕೆ ಕೋರ್ಟ್‌ ಟೀಕೆ

UNITED NATIONS

UN ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸ್ಥಾನ: ಪೋರ್ಚುಗಲ್‌ ಬೆಂಬಲ

1-wewewq

PM ರೇಸ್‌ನಲ್ಲಿ ನಾನು ಇಲ್ಲ; ಬೇಕಿದ್ದರೇ ಮೋದಿ ಕೇಳಿ: ಗಡ್ಕರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.