ಅಗಲಿದ ಪ್ರಣವ್‌


Team Udayavani, Sep 1, 2020, 5:55 AM IST

ಅಗಲಿದ ಪ್ರಣವ್‌

ಮಾಜಿ ರಾಷ್ಟ್ರಪತಿ, ಕಾಂಗ್ರೆಸ್‌ ಹಿರಿಯ ನಾಯಕ ಪ್ರಣವ್‌ ಮುಖರ್ಜಿ ಭಾರತೀಯ ರಾಜಕಾರಣದಲ್ಲಿ, ಜನಮಾನಸದಲ್ಲಿ ವಿಶಿಷ್ಟ ಸ್ಥಾನ ಪಡೆದವರು.

ತಮ್ಮ ನೇರ ನಿಷ್ಠುರ ನಡೆಗಳಿಂದ ಗುರುತಿಸಿಕೊಂಡಿದ್ದ ಪ್ರಣವ್‌ ಮುಖರ್ಜಿ ಎಲ್ಲರಿಗೂ ಪ್ರೀತಿಯ ಪ್ರಣವ್‌ ದಾ ಆಗಿದ್ದವರು. ತಮ್ಮ ಹೆಗಲೇರಿದ ಜವಾಬ್ದಾರಿಗಳನ್ನೆಲ್ಲ ನಿಷ್ಠೆಯಿಂದ ನಿಭಾಯಿಸಿದವರು.

ವಿತ್ತ ಸಚಿವರಾಗಿ ಅವರು ತಂದ ಕೆಲವು ಸುಧಾರಣೆಗಳು ಭಾರತೀಯ ಆರ್ಥಿಕತೆಯ ದಿಕ್ಕನ್ನೇ ಬದಲಿಸುವಲ್ಲಿ ಪ್ರಮುಖ ಪಾತ್ರ ವಹಿಸಿದವು ಎಂದರೆ ಸುಳ್ಳಾಗದು.

ಈ ಕಾರಣಕ್ಕಾಗಿಯೇ ಆಧುನಿಕ ಭಾರತದ ಆರ್ಥಿಕ ಸುಧಾರಣೆಯ ವಿಚಾರ ಪ್ರಸ್ತಾಪವಾಗುವಾಗೆಲ್ಲ, ಕಡ್ಡಾಯವಾಗಿ ಪ್ರಣವ್‌ ಮುಖರ್ಜಿ ಹೆಸರು ಬಂದೇ ಬರುತ್ತದೆ.

ಸರಕು ಮತ್ತು ಸೇವಾ ತೆರಿಗೆಯನ್ನು ಜಾರಿಗೆ ತರಲು ಶ್ರಮಿಸಿದವರಲ್ಲಿ ಪ್ರಣವ್‌ ಕೂಡ ಒಬ್ಬರು. ಮೂಲ ಸೌಕರ್ಯಾಭಿವೃದ್ಧಿ ಯೋಜನೆಗಳಿಗೆ ಬಲ ನೀಡುವುದೇ ಆರ್ಥಿಕ ಬಲದ ಮೂಲ ಮಂತ್ರ ಎಂದು ಬಲವಾಗಿ ಪ್ರತಿಪಾದಿಸುತ್ತಿದ್ದ ಪ್ರಣವ್‌ ರಾಷ್ಟ್ರೀಯ ಅಭಿವೃದ್ಧಿ ಯೋಜನೆಗಳು, ವಿದ್ಯುತ್‌ ಸೇವಾ ಯೋಜನೆಗಳ ವಿಸ್ತರಣೆ ಸೇರಿದಂತೆ ಹಲವಾರು ಜನಪರ ಯೋಜನೆಗಳಿಗೆ ಕಾರಣವಾದವರು.

90ರ ದಶಕದಿಂದ ಏರುಗತಿಯಲ್ಲಿ ಸಾಗುತ್ತಿದ್ದ ವಿತ್ತೀಯ ಕೊರತೆಯನ್ನು ನಿಯಂತ್ರಣಕ್ಕೆ ತರುವ ವಿಚಾರದಲ್ಲಾಗಲಿ, ಲೈಸನ್ಸ್‌ ರಾಜ್‌ ಪದ್ಧತಿ ಕೊನೆಗೊಳ್ಳುವ ವಿಚಾರದಲ್ಲೇ ಆಗಲಿ ಪ್ರಣವ್‌ ನೀಡಿದ ಕೊಡುಗೆಗೆ ಸರಿಸಮನಾದದು ಇಲ್ಲ.
ಪ್ರಣವ್‌ ತಮ್ಮ ದಶಕಗಳ ರಾಜಕೀಯ ಜೀವನದಲ್ಲಿ ಹಲವಾರು ಉನ್ನತ ಸ್ಥಾನಗಳನ್ನು ಅಲಂಕರಿಸಿದವರು.

ವಿದೇಶಾಂಗ, ವಾಣಿಜ್ಯ, ರಕ್ಷಣೆ, ಕೈಗಾರಿಕೆ ಇಲಾಖೆಗಳ ಸಚಿವರಾಗಿ ಛಾಪು ಮೂಡಿಸಿದ್ದ ಅವರು ಭಾರತದ ಪ್ರಧಾನಿಯಾಗಬೇಕಿತ್ತು ಎನ್ನುವುದು ಬಹುಜನರ ನಿರೀಕ್ಷೆ ಹಾಗೂ ಬಯಕೆಯಾಗಿತ್ತಾದರೂ ಈ ವಿಚಾರದಲ್ಲಿ ಅವರಿಗೆ ಕಾಂಗ್ರೆಸ್‌ನಿಂದ ನ್ಯಾಯ ಸಲ್ಲಲೇ ಇಲ್ಲ. ಸ್ವಾತಂತ್ರ್ಯ ಹೋರಾಟಗಾರ ರಾಜಕೀಯ ಕುಟುಂಬದಲ್ಲಿ ಜನಿಸಿದ ಪ್ರಣವ್‌ ಬೋಧಕರಾಗಿ, ಪತ್ರಕರ್ತರಾಗಿ ದುಡಿದವರು.

ಇಂದಿರಾ, ರಾಜೀವ್‌, ಸೋನಿಯಾ ಹಾಗೂ ರಾಹುಲ್‌ ಗಾಂಧಿಯವರೆಗೆ ಗಾಂಧಿ ಕುಟುಂಬಕ್ಕೆ ಆಪ್ತರಾಗಿದ್ದ ಪ್ರಣವ್‌ ಕೆಲವೊಮ್ಮೆ ಈ ನಿಷ್ಠೆಯಿಂದಾಗಿ ಟೀಕೆಗೂ ಒಳಗಾಗಿದ್ದರು.

ರಾಷ್ಟ್ರಪತಿಯಾಗಿ ಅವರು ಕೈಗೊಂಡ ಕಾರ್ಯಗಳು ಎಲ್ಲ ವಲಯದಿಂದಲೂ ಶ್ಲಾಘನೆಗೆ ಒಳಗಾಗಿದ್ದವು. ಕಟ್ಟಾ ಕಾಂಗ್ರೆಸ್ಸಿಗರಾದರೂ, ಎದುರಾಳಿ ಪಕ್ಷಗಳ ನಾಯಕರೊಂದಿಗೂ ಉತ್ತಮ ಬಾಂಧವ್ಯ ಹೊಂದಿ ಅಜಾತಶತ್ರುವೇ ಆಗಿದ್ದರು.

ಪ್ರಧಾನಿ ಮೋದಿಯವರೊಂದಿಗೂ ಬಹಳ ಆಪ್ತತೆ ಇಟ್ಟುಕೊಂಡಿದ್ದ ಅವರು ಜಿಎಸ್‌ಟಿ ಸೇರಿದಂತೆ ಮೋದಿ ಸರಕಾರ ತಂದ ಹಲವು ಕಾನೂನುಗಳಿಗೆ ಅಂಕಿತಹಾಕಿದ್ದರು.

ಮೊದಲಿನಿಂದಲೂ ಉಗ್ರವಾದ, ಮೂಲಭೂತವಾದವನ್ನು ಕಟುಮಾತಿನಲ್ಲೇ ಟೀಕಿಸುತ್ತಾ ಬರುತ್ತಿದ್ದ ಅವರು ವೆಂಕಟರಾಮನ್‌ ಅನಂತರ ಅತಿಹೆಚ್ಚು ಕ್ಷ‌ಮಾದಾನ ಅರ್ಜಿಗಳನ್ನು ತಿರಸ್ಕರಿಸಿದ ರಾಷ್ಟ್ರಪತಿಯಾಗಿ ಗುರುತಿಸಿಕೊಂಡವರು.

ಒಟ್ಟಲ್ಲಿ ಪ್ರಣವ್‌ ಮುಖರ್ಜಿ ಪ್ರಧಾನಿಯಾಗಬೇಕಿತ್ತು ಎನ್ನುವ ಅನೇಕ ಕಾಂಗ್ರೆಸ್ಸಿಗರ ಬಯಕೆ ಬಯಕೆಯಾಗಿಯೇ ಉಳಿದುಹೋಯಿತು. ಆದರೆ ಜನಪರ ಕಾರ್ಯ ಮಾಡಲು ಪ್ರಧಾನಿ ಹುದ್ದೆಯೇ ಬೇಕಾಗಿಲ್ಲ ಎನ್ನುವುದನ್ನು ತಮಗೆ ಸಿಕ್ಕ ಜವಾಬ್ದಾರಿಗಳನ್ನು ದೇಶ ಹಿತದ ದೃಷ್ಟಿಯಿಂದ ನಿರ್ವಹಿಸುವ ಮೂಲಕ ತೋರಿಸಿಕೊಟ್ಟರು.

ಹಿರಿಯರೊಬ್ಬರು ಅಗಲಿದಾಗ ಎಂಡ್‌ ಆಫ್ ಆ್ಯನ್‌ ಎರಾ ಎನ್ನುವುದು ಒಂದು ಕ್ಲೀಷೆಯಾಗಿದೆ. ಆದರೆ ಪ್ರಣವ್‌ ಮುಖರ್ಜಿ ಅವರ ವಿಚಾರದಲ್ಲಿ ಈ ಮಾತು ಅಕ್ಷರಶಃ ಅನ್ವಯವಾಗುತ್ತದೆ.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-editorial

Editorial: ವಿದ್ಯಾರ್ಹತೆಗೆ ದೇಶವ್ಯಾಪಿ ಮಾನ್ಯತೆ, ಹೈಕೋರ್ಟ್‌ ತೀರ್ಪು ನ್ಯಾಯೋಚಿತ

13-editorial

Temperature: ಸಂಪಾದಕೀಯ-ತಾಪಮಾನ ಹೆಚ್ಚಳದ ಆತಂಕ: ಮುಂಜಾಗ್ರತೆಯೇ ಮದ್ದು

ಉಚಿತಗಳ ಆಮಿಷಗಳಿಗೆ ಕಡಿವಾಣ: ಚು.ಆಯೋಗ ಬದ್ಧತೆ ತೋರಲಿ

ಉಚಿತಗಳ ಆಮಿಷಗಳಿಗೆ ಕಡಿವಾಣ: ಚು.ಆಯೋಗ ಬದ್ಧತೆ ತೋರಲಿ

vidhana-Soudha

Editorial: ಪ್ರಾಥಮಿಕ ಶಾಲಾ ಶಿಕ್ಷಕರ ಪಠ್ಯೇತರ ಹೊರೆ ಇಳಿಸಿ

ಮಹಿಳಾ ಆರೋಪಿಗಳ ಬಂಧನ ವೇಳೆ ವಿವೇಚನೆ ಅತ್ಯವಶ್ಯ

ಮಹಿಳಾ ಆರೋಪಿಗಳ ಬಂಧನ ವೇಳೆ ವಿವೇಚನೆ ಅತ್ಯವಶ್ಯ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.