ಪಿಯುಸಿ ಫ‌ಲಿತಾಂಶ ಗುಣಾತ್ಮಕ ಮನಸ್ಥಿತಿ ಮುಖ್ಯ


Team Udayavani, Jul 15, 2020, 6:10 AM IST

ಪಿಯುಸಿ ಫ‌ಲಿತಾಂಶ ಗುಣಾತ್ಮಕ ಮನಸ್ಥಿತಿ ಮುಖ್ಯ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಜುಲೈ 18ರ ಹೊತ್ತಿಗೆ ಪ್ರಕಟವಾಗಬಹುದು ಎಂದು ನಿರೀಕ್ಷಿಸಲಾಗಿದ್ದ ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆಗಳ ಫ‌ಲಿತಾಂಶ ನಾಲ್ಕು ದಿನ ಮುಂಚೆಯೇ ಹೊರಬಿದ್ದಿದೆ.

ವಿದ್ಯಾರ್ಥಿ ಜೀವನದಲ್ಲಿ ಪ್ರಮುಖ ಘಟ್ಟವಾಗಿರುವ ಪಿಯುಸಿ ಫ‌ಲಿತಾಂಶವು ಈ ಬಾರಿ ಕೋವಿಡ್‌-19 ಬಿಕ್ಕಟ್ಟಿನ ನಡುವೆಯೇ ಬಂದಿದೆ.

ಗಮನಾರ್ಹ ಸಂಗತಿಯೆಂದರೆ, ಕಳೆದ ಬಾರಿಗಿಂತ ಈ ವರ್ಷ ಫ‌ಲಿತಾಂಶದಲ್ಲಿ ಹೆಚ್ಚಳ ಕಂಡುಬಂದಿರುವುದು. ಮತ್ತೆ ಎಂದಿನಂತೆ ಬಾಲಕಿಯರೇ ಪಿಯುಸಿಯಲ್ಲಿ ಮೇಲುಗೈ ಸಾಧಿಸಿದ್ದಾರೆ.

ಉಡುಪಿ ಈ ಬಾರಿಯೂ ಪ್ರಥಮ ಸ್ಥಾನ ಪಡೆದರೆ, ದಕ್ಷಿಣ ಕನ್ನಡ ದ್ವಿತೀಯ ಸ್ಥಾನ ಮತ್ತು ಕೊಡಗು ಜಿಲ್ಲೆ ಮೂರನೇ ಸ್ಥಾನದಲ್ಲಿದೆ. ಅದರಲ್ಲೂ ಗಮನಾರ್ಹವಾಗಿ ಉಡುಪಿ ಜಿಲ್ಲೆಯ ವಿದ್ಯಾರ್ಥಿನಿಯರು ಆರು ಪ್ರಮುಖ ರ್‍ಯಾಂಕ್‌ಗಳನ್ನು ಪಡೆದುಕೊಂಡಿದ್ದಾರೆನ್ನುವುದು ಶ್ಲಾಘನೀಯ ವಿಚಾರ.

ಇನ್ನೊಂದೆಡೆ ಚಿತ್ರದುರ್ಗ, ರಾಯಚೂರು ಮತ್ತು ವಿಜಯಪುರ ಕೊನೆಯ ಮೂರು ಸ್ಥಾನಗಳಲ್ಲಿರುವುದು ಬೇಸರದ ವಿಷಯ. ಅಲ್ಲಿನ ಶಿಕ್ಷಣ ವ್ಯವಸ್ಥೆಯಲ್ಲಿ ಆಮೂಲಾಗ್ರ ಬದಲಾವಣೆ ಆಗಬೇಕಾದ ಅಗತ್ಯವನ್ನು ಇದು ಸಾರುತ್ತಿದೆ.

ಇದೇ ವೇಳೆಯಲ್ಲೇ, ಅನೇಕ ವಿದ್ಯಾರ್ಥಿಗಳು ಯಾವುದೋ ಕಾರಣಕ್ಕೆ ನಪಾಸಾಗಿದ್ದಾರೆ ಅಥವಾ ಅವರು ನಿರೀಕ್ಷಿಸಿದಷ್ಟು ಫ‌ಲಿತಾಂಶ ಸಿಗದಿರಬಹುದು. ಆದರೆ, ಈ ವಿಚಾರದಲ್ಲಿ ಅಧೀರರಾಗಬೇಕಾದ ಅಗತ್ಯವಿಲ್ಲ. ಪರೀಕ್ಷೆಯಲ್ಲಿ ನಪಾಸಾದಾಕ್ಷಣ ಎಲ್ಲಾ ಮುಗಿದುಹೋಯಿತು ಎಂದು ಚಿಂತಿಸುವುದರಲ್ಲಿ ಅರ್ಥವೇ ಇಲ್ಲ. ಮತ್ತೆ ಮರುಪರೀಕ್ಷೆಯ ಅವಕಾಶವಿದ್ದೇ ಇರುತ್ತದೆ.

ಎಲ್ಲಕ್ಕಿಂತ ಮುಖ್ಯವಾಗಿ ನೆನಪಿಡಬೇಕಾದ ಸಂಗತಿಯೆಂದರೆ, ಬದುಕು ಎಲ್ಲರಿಗೂ ಬೆಳೆಯುವ, ಬೆಳಗುವ ಅವಕಾಶಗಳನ್ನು ಖಂಡಿತ ಕಲ್ಪಿಸುತ್ತದೆ. ನಪಾಸಾದಾಕ್ಷಣ ಏನೋ ದೊಡ್ಡ ತಪ್ಪಾಗಿಬಿಟ್ಟಿದೆ ಎಂಬ ಭಾವನೆ, ಕೀಳರಿಮೆ ಖಂಡಿತ ಬೇಡ. ಜೀವನದಲ್ಲಿ ಎದುರಾಗುವ ಅಡ್ಡಿಗಳು ನಮ್ಮನ್ನು ಮತ್ತಷ್ಟು ಬಲಿಷ್ಠರನ್ನಾಗಿಸುವುದಕ್ಕೇ ಬಂದಿರುತ್ತವೆ ಎನ್ನುವುದನ್ನು ಮರೆಯದಿರಿ.

ನಿಮ್ಮೆಲ್ಲರ ಮುಂದೆ ಮತ್ತೆ ಅವಕಾಶವಿದ್ದು, ಈ ಬಾರಿ ಗುಣಾತ್ಮಕ ಮನಃಸ್ಥಿತಿಯೊಂದಿಗೆ ಸಜ್ಜಾಗಿ. ಆಪ್ತರೊಂದಿಗೆ ಮಾತನಾಡಿ, ಮನಸ್ಸನ್ನು ಹಗುರಾಗಿಸಿಕೊಳ್ಳಿ. ಪೋಷಕರೂ ಸಹ ತಮ್ಮ ಮಕ್ಕಳ ಮೇಲೆ ಈ ಫ‌ಲಿತಾಂಶಗಳಿಂದಾಗಿ ಋಣಾತ್ಮಕ ಪರಿಣಾಮ ಉಂಟಾಗದಂತೆ ಎಚ್ಚರಿಕೆ ವಹಿಸುವುದು ಮುಖ್ಯ.

ಇನ್ನು, ಫ‌ಲಿತಾಂಶ ಬಂದಾಯಿತು, ಮುಂದೇನು? ಎಂದು ಕೆಲವು ವಿದ್ಯಾರ್ಥಿಗಳು ಆತಂಕ ವ್ಯಕ್ತಪಡಿಸುತ್ತಿರುವ ವರದಿಗಳು ಬರುತ್ತಿವೆ. ಕೋವಿಡ್‌-19 ಬಿಕ್ಕಟ್ಟು ಮುಂದುವರಿದಿರುವುದರಿಂದ, ಅವರಲ್ಲಿ ಇಂಥ ಪ್ರಶ್ನೆ ಎದುರಾಗಿರುವುದು ಸಹಜವೇ.

ಆದರೆ, ಶಿಕ್ಷಣ ಇಲಾಖೆ ಆ ಬಗ್ಗೆ ಚಿಂತನೆ ನಡೆಸುತ್ತಿರುವ ಕಾರಣ, ನಿಮಗೆ ಆ ಬಗ್ಗೆ ಅನಗತ್ಯ ಚಿಂತೆ ಬೇಡ. ಎಲ್ಲವೂ ಸರಿಯಾಗುತ್ತದೆ. ಈ ಬಗ್ಗೆ ಹೆಚ್ಚು ನಿಮ್ಮಲ್ಲಿರಲಿ.

ಮುಂದಿನ ಪಯಣಕ್ಕೆ ಎಲ್ಲರಿಗೂ ಆಲ್‌ ದಿ ಬೆಸ್ಟ್‌!

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-editorial

Editorial: ವಿದ್ಯಾರ್ಹತೆಗೆ ದೇಶವ್ಯಾಪಿ ಮಾನ್ಯತೆ, ಹೈಕೋರ್ಟ್‌ ತೀರ್ಪು ನ್ಯಾಯೋಚಿತ

13-editorial

Temperature: ಸಂಪಾದಕೀಯ-ತಾಪಮಾನ ಹೆಚ್ಚಳದ ಆತಂಕ: ಮುಂಜಾಗ್ರತೆಯೇ ಮದ್ದು

ಉಚಿತಗಳ ಆಮಿಷಗಳಿಗೆ ಕಡಿವಾಣ: ಚು.ಆಯೋಗ ಬದ್ಧತೆ ತೋರಲಿ

ಉಚಿತಗಳ ಆಮಿಷಗಳಿಗೆ ಕಡಿವಾಣ: ಚು.ಆಯೋಗ ಬದ್ಧತೆ ತೋರಲಿ

vidhana-Soudha

Editorial: ಪ್ರಾಥಮಿಕ ಶಾಲಾ ಶಿಕ್ಷಕರ ಪಠ್ಯೇತರ ಹೊರೆ ಇಳಿಸಿ

ಮಹಿಳಾ ಆರೋಪಿಗಳ ಬಂಧನ ವೇಳೆ ವಿವೇಚನೆ ಅತ್ಯವಶ್ಯ

ಮಹಿಳಾ ಆರೋಪಿಗಳ ಬಂಧನ ವೇಳೆ ವಿವೇಚನೆ ಅತ್ಯವಶ್ಯ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.