Reading Hobby ಮಕ್ಕಳಲ್ಲಿ ಓದುವ ಅಭ್ಯಾಸ ವೃದ್ಧಿಗೆ ಕಾರ್ಯಕ್ರಮ ಸ್ತುತ್ಯರ್ಹ


Team Udayavani, Jul 30, 2024, 6:00 AM IST

Reading Hobby ಮಕ್ಕಳಲ್ಲಿ ಓದುವ ಅಭ್ಯಾಸ ವೃದ್ಧಿಗೆ ಕಾರ್ಯಕ್ರಮ ಸ್ತುತ್ಯರ್ಹ

ಡಿಜಿಟಲ್‌ ಯುಗದಲ್ಲಿ ಸಾಮಾಜಿಕ ಜಾಲತಾಣಗಳು, ಸ್ಮಾರ್ಟ್‌ಫೋನ್‌ಗಳ ಬಳಕೆಯ ಪ್ರಭಾವದಿಂದ ಶಾಲಾ ಮಕ್ಕಳಲ್ಲಿ ದಿನದಿಂದ ದಿನಕ್ಕೆ ಓದುವ ಹವ್ಯಾಸ ಕುಂಠಿತವಾಗುತ್ತಿರುವುದನ್ನು ಸಾಕಷ್ಟು ಅಧ್ಯಯನ ವರದಿಗಳು ಖಚಿತಪಡಿಸಿವೆ. ಈ ಹಿನ್ನೆಲೆಯಲ್ಲಿ ಮಕ್ಕಳಲ್ಲಿ ಓದುವ ಹವ್ಯಾಸವನ್ನು ಹೆಚ್ಚಿಸುವುದಕ್ಕಾಗಿ ರಾಜ್ಯದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ “ಓದುವ ಹವ್ಯಾಸ ಜ್ಞಾನದ ವಿಕಾಸ’ ಎಂಬ ವಿನೂತನ ಪ್ರಯತ್ನಕ್ಕೆ ಮುಂದಾಗಿರುವುದು ಸ್ವಾಗತಾರ್ಹವಾಗಿದೆ.

ಈ ವಿನೂತನ ಯೋಜನೆಯಡಿ 1ರಿಂದ 10ನೇ ತರಗತಿಯವರೆಗೆ ಓದುತ್ತಿರುವ ಮಕ್ಕಳು ವಾರದಲ್ಲಿ ಒಂದು ಅವಧಿ ಗ್ರಂಥಾಲಯದಲ್ಲಿ ಕಳೆಯುವುದು ಮತ್ತು ಪ್ರತಿ ಶಾಲೆಯು ಅತ್ಯುತ್ತಮ ಗ್ರಂಥಾಲಯ ಹೊಂದುವುದನ್ನು ಕಡ್ಡಾಯ ಗೊಳಿಸಲಾಗಿದೆ. ಮಕ್ಕಳಿಗೆ ಅನುಕೂಲವಾಗುವ ರೀತಿಯಲ್ಲಿ “ಮಕ್ಕಳ ಸ್ನೇಹಿ ಗ್ರಂಥಾಲಯ’ ಅಥವಾ “ಓದುವ ಮೂಲೆ’ (ರೀಡಿಂಗ್‌ ಕಾರ್ನರ್‌) ಸ್ಥಾಪನೆ, ಗ್ರಂಥಾಲಯದ ಅವಧಿ ಅಥವಾ ಯಾವುದೇ ಸಮಯದಲ್ಲಿ ಯಾವುದೇ ಅಡಚಣೆ ಇಲ್ಲದೆ ಮಕ್ಕಳು ಸ್ವತಂತ್ರವಾಗಿ ಈ ಸ್ಥಳವನ್ನು ಬಳಸಿಕೊಳ್ಳವುದು, ಮಕ್ಕಳಿಗೆ ಸುಲಭವಾಗಿ ಪುಸ್ತಕಗಳು ದೊರೆಯುವಂತೆಯೂ ಮಾಡುವುದು ಸೇರಿ ಅನೇಕ ಮಾರ್ಗದರ್ಶಿ ಸೂತ್ರಗಳನ್ನು ಬಿಡುಗಡೆ ಮಾಡಲಾಗಿದೆ. ಮಕ್ಕಳ ಬೌದ್ಧಿಕ ವಿಕಾಸದ ದೃಷ್ಟಿಯಿಂದ ರಾಜ್ಯ ಸರಕಾರದ ಈ ನಡೆಯು ಅತ್ಯುತ್ತಮ ಹೆಜ್ಜೆಯಾಗಿದೆ.

ಕೋವಿಡ್‌ ಕಾಲಘಟ್ಟದಲ್ಲಿ ದೊಡ್ಡವರೂ ಸೇರಿದಂತೆ ಮಕ್ಕಳೂ ಸ್ಮಾರ್ಟ್‌ ಫೋನ್‌ ಮೊರೆ ಹೋಗುವುದು ಅನಿವಾರ್ಯವಾಗಿತ್ತು. ಕಲಿಕೆಗೆ ಬೇರೆ ದಾರಿಯೇ ಇರಲಿಲ್ಲ. ಆಗ ನೆರವಿಗೆ ಬಂದಿದ್ದೇ ಸ್ಮಾರ್ಟ್‌ಫೋನ್‌ಗಳು ಅಥವಾ ಆನ್‌ಲೈನ್‌ ಮೂಲಕ ಕಲಿಯುವ ಪದ್ಧತಿ. ಆದರೆ ಶೈಕ್ಷಣಿಕ ವ್ಯವಸ್ಥೆಯು ಕೋವಿಡ್‌ ಪೂರ್ವ ಸ್ಥಿತಿಗೆ ಮರಳಿ, ಶಾಲೆಗಳು ಎಂದಿನಂತೆ ಆರಂಭವಾದರೂ ಮಕ್ಕಳು ಮಾತ್ರ ಫೋನ್‌ಗಳನ್ನು ಕೆಳಗಿಟ್ಟಿಲ್ಲ! ಇಂಥ ಪರಿಸ್ಥಿತಿಯಲ್ಲಿ ಮಕ್ಕಳಲ್ಲಿ ಓದುವ ಹವ್ಯಾಸವನ್ನು ಬೆಳೆಸುವುದು ಸುಲಭದ ಮಾತಲ್ಲ.

6ರಿಂದ 10 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್‌ ಕಲಿಕೆ ಸರಿಯಲ್ಲ ಎಂದು ವಿಶ್ವ ಸಂಸ್ಥೆಯೂ ಶಿಫಾರಸು ಮಾಡಿದೆ. ಡಿಜಿಟಲ್‌ ಕಲಿಕೆ ಆಧುನಿಕ ಕಾಲದ ಅಗತ್ಯವಾದರೂ ಮಕ್ಕಳ ಒಟ್ಟಾರೆ ಕಲಿಕೆಯನ್ನು ಅದು ಪರಿಣಾಮಕಾರಿಯಾಗಿ ಪ್ರತಿನಿಧಿಸುವುದಿಲ್ಲ. ಸಾಂಪ್ರದಾಯಿಕ ಮಾದರಿ ಅಂದರೆ, ಓದುವುದು, ಬರೆಯುವುದು, ಕೇಳುವುದು, ತಿಳಿದುಕೊಳ್ಳುವಂಥ ಪ್ರಕ್ರಿಯೆಗಳು ಹೆಚ್ಚು ಪರಿಣಾಮಕಾರಿಯಾಗಿರುತ್ತವೆ. ಈ ಒಟ್ಟು ಪ್ರಕ್ರಿಯೆಗೆ ಓದುವ ಹವ್ಯಾಸವು ಪೂರಕವಾಗಿರುತ್ತದೆ. ಹಾಗಾಗಿ ಮಕ್ಕಳನ್ನು ಮತ್ತೆ ಓದುವ ಹವ್ಯಾಸದ ಹಳಿಗೆ ತರುವುದು ಈಗಿನ ತುರ್ತೂ ಹೌದು.

ಓದುವ ಹವ್ಯಾಸವು ಮಕ್ಕಳಲ್ಲಿ ಶಬ್ದ ಭಂಡಾರ ವೃದ್ಧಿಸಲು ಕಾರಣವಾಗುತ್ತದೆ. ಮಕ್ಕಳ ಗ್ರಹಿಕಾ ಸಾಮರ್ಥ್ಯ, ಏಕಾಗ್ರತೆಯ ಶಕ್ತಿ, ಭಾಷಾ ಕೌಶಲ ಮತ್ತು ಸೃಜನಾತ್ಮಕ ಬರವಣಿಗೆಗೆ ಪೂರಕವಾಗಿರುತ್ತದೆ. ಜತೆಗೆ ವಿಮಶಾìತ್ಮಕ ಚಿಂತನೆ, ತಾರ್ಕಿಕತೆ, ವಿಶ್ಲೇಷಣೆ ಸಾಮರ್ಥ್ಯ, ಸಾರಾಂಶ ಮಾಡುವ ಕ್ಷಮತೆ, ಕಲ್ಪನಾ ಶಕ್ತಿ, ಸೃಜನಶೀಲತೆಯನ್ನು ಬೆಳೆಸುವಲ್ಲಿ ಓದುವ ಹವ್ಯಾಸವು ಅತ್ಯಂತ ಪ್ರಮುಖ ಸಾಧನವಾಗಿದೆ. ಹಾಗಾಗಿ “ಓದುವ ಹವ್ಯಾಸ ಜ್ಞಾನದ ವಿಕಾಸ’ ಎಂಬ ನೂತನ ಕಾರ್ಯಕ್ರಮ ಕೇವಲ ಆರಂಭಶೂರತ್ವಕ್ಕೆ ಸೀಮಿತವಾಗಿರದೆ ಸಮರ್ಪಕವಾಗಿ ಜಾರಿಗೊಳಿಸುವತ್ತ ಅಧಿಕಾರಿಗಳು ಮುತುವರ್ಜಿ ವಹಿಸಬೇಕು. ಏಕೆಂದರೆ ಸರಕಾರದ ಅನೇಕ ಯೋಜನೆಗಳು ಮತ್ತು ಕಾರ್ಯಕ್ರಮಗಳು ಭಾರೀ ಸದ್ದಿನೊಂದಿಗೆ ಆರಂಭವಾಗಿ, ಅನಂತರ ಸದ್ದಿಲ್ಲದೇ ಮರೆಯಾಗುತ್ತವೆ. ಎಲ್ಲಕ್ಕೂ ಮಿಗಿಲಾಗಿ ಶಾಲೆಗಳಲ್ಲಿ ಸುಸಜ್ಜಿತ ಗ್ರಂಥಾಲಯ ಸ್ಥಾಪನೆಗೆ ಗಮನನೀಡಬೇಕು. ಮಕ್ಕಳ ಸಮಗ್ರ ಬೆಳವಣಿಗೆಗೆ ಪೂರಕವಾಗಿರುವ ಈ ಯೋಜನೆಯನ್ನು ಯಾವುದೇ ಲೋಪಕ್ಕೆ ಅವಕಾಶ ಇಲ್ಲದಂತೆ ಜಾರಿಗೊಳಿಸಬೇಕು.

ಟಾಪ್ ನ್ಯೂಸ್

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Assembly Election: ಜಮ್ಮು-ಕಾಶ್ಮೀರದಲ್ಲಿ ಪ್ರಜಾಪ್ರಭುತ್ವದ ಹಬ್ಬ

Assembly Election: ಜಮ್ಮು-ಕಾಶ್ಮೀರದಲ್ಲಿ ಪ್ರಜಾಪ್ರಭುತ್ವದ ಹಬ್ಬ

Namma-clinic

Karnataka; ಬಸ್‌ ನಿಲ್ದಾಣಗಳಲ್ಲಿ ನಮ್ಮ ಕ್ಲಿನಿಕ್‌ ಸಮುಚಿತ ನಿರ್ಧಾರ

ರೈತರ ಹಿತರಕ್ಷಣೆ ನೆಪದಲ್ಲಿ ಗ್ರಾಹಕರಿಗೆ ಬರೆ ಸಲ್ಲದು

ರೈತರ ಹಿತರಕ್ಷಣೆ ನೆಪದಲ್ಲಿ ಗ್ರಾಹಕರಿಗೆ ಬರೆ ಸಲ್ಲದು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

1-japp

Japan ಆ್ಯನಿಮೇಟೆಡ್‌ ರಾಮಾಯಣ ಅ.18ಕ್ಕೆ ಮರು ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.