ಐಎಎಸ್‌-ಐಪಿಎಸ್‌ ರಂಪಾಟ: ಸರಕಾರದ ಮೌನ ಪ್ರಶ್ನಾರ್ಹ


Team Udayavani, Feb 20, 2023, 7:25 AM IST

ಐಎಎಸ್‌-ಐಪಿಎಸ್‌ ರಂಪಾಟ: ಸರಕಾರದ ಮೌನ ಪ್ರಶ್ನಾರ್ಹ

ಕರ್ನಾಟಕ ಮತ್ತೆ ಐಎಎಸ್‌-ಐಪಿಎಸ್‌ ಅಧಿಕಾರಿಗಳೀರ್ವರ ಬಹಿರಂಗ ವಾಕ್ಸಮರಕ್ಕೆ ಸಾಕ್ಷಿಯಾಗುತ್ತಿದೆ. ಜವಾಬ್ದಾರಿಯುತ ಸ್ಥಾನದಲ್ಲಿರುವ ಉನ್ನತ ಅಧಿಕಾರಿಗಳೇ ಹೀಗೆ ಸಾರ್ವಜನಿಕವಾಗಿ ರಂಪಾಟ ನಡೆಸುತ್ತಿರುವುದು ಇಡೀ ರಾಜ್ಯವನ್ನು ಮುಜುಗರಕ್ಕೀಡು ಮಾಡಿದೆ. ಐಪಿಎಸ್‌ ಅಧಿಕಾರಿ ಡಿ. ರೂಪಾ ಮೌದ್ಗಿಲ್‌ ಮತ್ತು ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ನಡುವಿನ ಈ ಮುಸುಕಿನ ಗುದ್ದಾಟ ರವಿವಾರ ಧುತ್ತನೆ ಭುಗಿಲೆದ್ದಿರುವುದೇ ಅಲ್ಲದೇ ಎಲ್ಲ ಸೇವಾ ನಿಯಮಾವಳಿಗಳು ಮತ್ತು ನೈತಿಕತೆಯ ಎಲ್ಲೆಯನ್ನು ಮೀರಿದೆ.

ಈ ಹಿಂದೆಯೂ ಇವರೀರ್ವರ ನಡುವೆ ಕೆಸರೆರಚಾಟ ನಡೆದಿತ್ತಾದರೂ ಸರಕಾರ ಮತ್ತು ಉನ್ನತ ಅಧಿಕಾರಿಗಳ ಮಧ್ಯಪ್ರವೇಶದಿಂದಾಗಿ ಒಂದಿಷ್ಟು ಶಾಂತ ವಾಗಿತ್ತು. ರವಿವಾರ ಏಕಾಏಕಿಯಾಗಿ ಡಿ. ರೂಪಾ ಮೌದ್ಗಿಲ್‌ ಸರಣಿ ಟ್ವೀಟ್‌ಗಳ ಮೂಲಕ ರೋಹಿಣಿ ಸಿಂಧೂರಿ ಅವರ ವಿರುದ್ಧ ಆರೋಪಗಳ ಸುರಿಮಳೆಗೈದಿದ್ದೇ ಅಲ್ಲದೆ ರೋಹಿಣಿ ಅವರು ಕೆಲವೊಂದು ಪುರುಷ ಅಧಿಕಾರಿಗಳಿಗೆ ಕಳುಹಿಸಿರುವ ರೆನ್ನಲಾಗಿರುವ ರೋಹಿಣಿ ಅವರ ವೈಯಕ್ತಿಕ ಫೋಟೋಗಳನ್ನು ಕೂಡ ಅಪ್‌ಲೋಡ್‌ ಮಾಡುವ ಮೂಲಕ ಕೊಳಚೆಯನ್ನು ಮತ್ತಷ್ಟು ಕೆದಕಿದ್ದಾರೆ. ಐಜಿಪಿ ಯಾಗಿರುವ ರೂಪಾ ಮೌದ್ಗಿಲ್‌ ಅವರ ಈ ನಡೆ ತೀರಾ ಅತಿರೇಕವಾಗಿದ್ದು ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಐಎಎಸ್‌ ಅಧಿಕಾರಿಯಾಗಿದ್ದ ಡಿ.ಕೆ.ರವಿ ಅವರ ಆತ್ಮಹತ್ಯೆ ಪ್ರಕರಣದ ಸಂದರ್ಭ ದಲ್ಲಿ ರೋಹಿಣಿ ಸಿಂಧೂರಿ ಅವರ ಹೆಸರು ತಳಕು ಹಾಕಿಕೊಂಡು ಒಂದಿಷ್ಟು ಊಹಾಪೋಹಗಳಿಗೆ ಕಾರಣವಾಗಿತ್ತು. ಇದಾದ ಬಳಿಕ ನಿರಂತರವಾಗಿ ರೋಹಿಣಿ ಸಿಂಧೂರಿ ಒಂದಲ್ಲ ಒಂದು ವಿವಾದದಲ್ಲಿ ಸಿಲುಕುತ್ತಲೇ ಬಂದಿದ್ದಾರೆ. ಸತತ ವರ್ಗಾವಣೆಯ ಹೊರತಾಗಿಯೂ ಅವರು ತಮ್ಮ ವರ್ತನೆಯನ್ನು ತಿದ್ದಿಕೊಳ್ಳುತ್ತಿಲ್ಲ. ಅಷ್ಟು ಮಾತ್ರವಲ್ಲದೆ ಹಿರಿಯ ಮತ್ತು ಸಹವರ್ತಿ ಅಧಿಕಾರಿಗಳು, ಆಯಾಯ ಜಿಲ್ಲೆಗಳ ಶಾಸಕರು, ಸಂಸದರನ್ನು ಎದುರು ಹಾಕಿಕೊಳ್ಳುತ್ತಲೇ ಬಂದಿರುವ ಅವರು ಈ ಕಾರಣದಿಂದಾಗಿಯೇ ಯಾವುದೇ ಜಿಲ್ಲೆ ಅಥವಾ ಇಲಾಖೆಯಲ್ಲಾಗಲಿ ಒಂದಿಷ್ಟು ತಿಂಗಳುಗಳ ಕಾಲ ಕರ್ತವ್ಯ ನಿರ್ವಹಿಸಲಾಗದ ಅನಿವಾರ್ಯ ಪರಿಸ್ಥಿತಿ ಯನ್ನು ತಾವೇ ಸೃಷ್ಟಿಸಿಕೊಂಡಿದ್ದಾರೆ ಎಂಬ ಮಾತುಗಳೂ ಅಧಿಕಾರಿ ವರ್ಗದಿಂದ ಕೇಳಿಬಂದಿದ್ದವು. ಐಪಿಎಸ್‌ ಅಧಿಕಾರಿಯಾಗಿರುವ ಐಜಿಪಿ ಡಿ. ರೂಪಾ ಮೌದ್ಗಿಲ್‌ ಈ ಬಾರಿ ಕೆಲವೊಂದು ಗಂಭೀರವಾದ ಆರೋಪಗಳನ್ನು ರೋಹಿಣಿ ಸಿಂಧೂರಿ ವಿರುದ್ಧ ಮಾಡಿರುವುದೇ ಅಲ್ಲದೆ ರಾಜಕೀಯ ಮತ್ತು ಆಡಳಿತಾತ್ಮಕವಾದ ಕೆಲವೊಂದು ಸೂಕ್ಷ್ಮ ವಿಷಯಗಳನ್ನು ಪ್ರಸ್ತಾವಿಸಿ ಪ್ರಶ್ನೆಗಳನ್ನು ಎತ್ತಿದ್ದಾರೆ. ಆದರೆ ಈ ಎಲ್ಲ ಆರೋಪಗಳನ್ನು ರೋಹಿಣಿ ಸಿಂಧೂರಿ ತಳ್ಳಿಹಾಕಿದ್ದು ಸಕ್ಷಮ ಪ್ರಾಧಿಕಾರದ ಮುಂದೆ ವೈಯಕ್ತಿಕ ನಿಂದೆ ಮತ್ತು ತೇಜೋವಧೆ ಆರೋಪಗಳಡಿ ರೂಪಾ ವಿರುದ್ಧ ದೂರು ದಾಖಲಿಸುವುದಾಗಿ ತಿಳಿಸಿದ್ದಾರೆ.

ಜವಾಬ್ದಾರಿಯುತ ಸ್ಥಾನದಲ್ಲಿರುವ ಇಬ್ಬರು ಹಿರಿಯ ಅಧಿಕಾರಿಗಳು ಇಡೀ ರಾಜ್ಯದ ಜನತೆಗೆ ಪುಕ್ಕಟೆ ಮನೋರಂಜನೆ ಒದಗಿಸುತ್ತಿದ್ದಾರೆ. ಈ ಅಧಿಕಾರಿಗಳ ತಿಳಿಗೇಡಿ ಮತ್ತು ನಾಚಿಕೆಗೇಡಿನ ವರ್ತನೆ ವಿರುದ್ಧ ಜನ ಆಕ್ರೋಶ ವ್ಯಕ್ತಪಡಿಸ ತೊಡಗಿದ್ದಾರೆ. ಅಲ್ಲದೆ ಈ ವಿಚಾರದಲ್ಲಿ ಸರಕಾರ ಮೌನಕ್ಕೆ ಶರಣಾಗಿರುವುದು ಸಹಜವಾಗಿಯೇ ಜನರಲ್ಲಿ ಒಂದಿಷ್ಟು ಅಚ್ಚರಿ ಮೂಡಿಸಿದೆ. ಇನ್ನಾದರೂ ಸರಕಾರ ಎಚ್ಚೆತ್ತುಕೊಂಡು ತತ್‌ಕ್ಷಣ ಮಧ್ಯಪ್ರವೇಶಿಸಿ ರಾಜಿ ಸಂಧಾನ, ಎಚ್ಚರಿಕೆಯ ಬದಲಾಗಿ ಈ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿéಣ್ಯ ಕ್ರಮ ಕೈಗೊಳ್ಳಬೇಕು. ಈರ್ವ ರನ್ನೂ ತತ್‌ಕ್ಷಣದಿಂದ ಜಾರಿಗೆ ಬರುವಂತೆ ತಾತ್ಕಾಲಿಕವಾಗಿ ಕರ್ತವ್ಯದಿಂದ ಅಮಾನತುಗೊಳಿಸಿ ಕಾನೂನು ಮತ್ತು ಸೇವಾ ನಿಯಮಾವಳಿಗಳಿಗೆ ಅನು ಸಾರವಾಗಿ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕು. ಈ ಮೂಲಕ ಸರಕಾರ, ಕಾನೂನು ನಿಯಮಾವಳಿಗಳು ಮತ್ತದರ ವ್ಯಾಪ್ತಿಯನ್ನು ಅಧಿಕಾರಿಗಳಿಗೆ ನೆನಪಿಸಿಕೊಡುವ ತನ್ನ ಹೊಣೆಗಾರಿಕೆಯನ್ನು ಸೂಕ್ತವಾಗಿ ನಿಭಾಯಿಸಬೇಕು. ಇದು ಎಲ್ಲ ಅಧಿಕಾರಿವರ್ಗಕ್ಕೆ ಪಾಠವಾಗಬೇಕು.

ಟಾಪ್ ನ್ಯೂಸ್

The owner of the betting app promoted by Bollywood actresses is Pakistani!

Betting App; ಬಾಲಿವುಡ್‌ ನಟಿಯರು ಪ್ರಚಾರ ಮಾಡಿದ್ದ ಬೆಟ್ಟಿಂಗ್ ಆ್ಯಪ್‌‌ ಮಾಲಕ ಪಾಕಿಸ್ತಾನಿ!

K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

Shiva Rajkumar: ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!

Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Earthquake…! ರೋಡ್‌ ರೋಲರ್‌ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

Earthquake…! ರೋಡ್‌ ರೋಲರ್‌ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

WTC 25; India’s Test Championship finals road gets tough; Here’s the calculation

WTC 25; ಕಠಿಣವಾಯ್ತು ಭಾರತದ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ ಹಾದಿ; ಹೀಗಿದೆ ಲೆಕ್ಕಾಚಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

hdd

Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ

ಹೈನುಗಾರರ ಅಳಲಿಗೆ ಸರಕಾರ ತತ್‌ಕ್ಷಣ ಸ್ಪಂದಿಸಲಿ

Karnataka Govt.,: ಹೈನುಗಾರರ ಅಳಲಿಗೆ ಸರಕಾರ ತತ್‌ಕ್ಷಣ ಸ್ಪಂದಿಸಲಿ

ಪಡಿತರ ವ್ಯವಸ್ಥೆ ಸಮರ್ಪಕವಾಗಲಿ

ಪಡಿತರ ವ್ಯವಸ್ಥೆ ಸಮರ್ಪಕವಾಗಲಿ

MONEY (2)

Loan; ಅಡಮಾನ ರಹಿತ ಸಾಲ ಹೆಚ್ಚಳ: ಬ್ಯಾಂಕ್‌ಗಳ ಸ್ಪಂದನೆ ಮುಖ್ಯ

Karnataka ಹೈಕೋರ್ಟ್‌ನಲ್ಲಿ ಕನ್ನಡದಲ್ಲಿ ತೀರ್ಪು ಇನ್ನಾದರೂ ಸರಕಾರ ಎಚ್ಚೆತ್ತುಕೊಳ್ಳಲಿ

Karnataka ಹೈಕೋರ್ಟ್‌ನಲ್ಲಿ ಕನ್ನಡದಲ್ಲಿ ತೀರ್ಪು ಇನ್ನಾದರೂ ಸರಕಾರ ಎಚ್ಚೆತ್ತುಕೊಳ್ಳಲಿ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

The owner of the betting app promoted by Bollywood actresses is Pakistani!

Betting App; ಬಾಲಿವುಡ್‌ ನಟಿಯರು ಪ್ರಚಾರ ಮಾಡಿದ್ದ ಬೆಟ್ಟಿಂಗ್ ಆ್ಯಪ್‌‌ ಮಾಲಕ ಪಾಕಿಸ್ತಾನಿ!

Battery theft at Dharwad District Collector’s Office

Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ

K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

Shiva Rajkumar: ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!

Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.