Editorial; ಹಣದುಬ್ಬರ ಗಮನಾರ್ಹ ಇಳಿಕೆ ಸರಕಾರ, ಆರ್‌ಬಿಐ ನಿರಾಳ


Team Udayavani, Aug 13, 2024, 11:27 PM IST

Significant decrease in inflation, government, RBI relaxed

ಜನರನ್ನು ಅದರಲ್ಲೂ ಜನಸಾಮಾನ್ಯರ ದೈನಂದಿನ ಜೀವನ ಮತ್ತು ದೇಶದ ಆರ್ಥಿಕತೆಯೊಂದಿಗೆ ನೇರ ಸಂಬಂಧ ಹೊಂದಿರುವ ಹಣದುಬ್ಬರ ನಿಯಂತ್ರಣದ ಪ್ರಶ್ನೆ ಬಂದಾಗಲೆಲ್ಲ ಇದು ಸರಕಾರ ಮತ್ತು ಆರ್‌ಬಿಐ ಪಾಲಿಗೆ ಕಬ್ಬಿಣದ ಕಡಲೆಯೇ. ತೈಲ, ಆಹಾರ ಪದಾರ್ಥಗಳು ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆಯಾದಾಗಲೆಲ್ಲ ಹಣದುಬ್ಬರ ಹೆಚ್ಚಾಗಿ ಜನಸಾಮಾನ್ಯರನ್ನು ಮತ್ತು ಸರಕಾರವನ್ನು ಇನ್ನಿಲ್ಲದಂತೆ ಕಾಡುತ್ತಲೇ ಬಂದಿದೆ. ಆದರೆ ಜುಲೈ ತಿಂಗಳಲ್ಲಿ ಹಣದುಬ್ಬರ ನಿರೀಕ್ಷೆಗೂ ಮೀರಿ ಇಳಿಕೆಯಾಗಿದೆ. ಇದು ಸರಕಾರ ಮತ್ತು ಆರ್‌ಬಿಐಯ ನಿಟ್ಟುಸಿರಿಗೆ ಕಾರಣವಾಗಿದ್ದರೆ, ಜನಸಾಮಾನ್ಯರು ಕೂಡ ಒಂದಿಷ್ಟು ನಿರಾಳರಾಗುವ ಬೆಳವಣಿಗೆಯಾಗಿದೆ.

ಕಳೆದ ಐದು ವರ್ಷಗಳಲ್ಲಿಯೇ ಮೊದಲ ಬಾರಿಗೆ ದೇಶದಲ್ಲಿ ಚಿಲ್ಲರೆ ಹಣದುಬ್ಬರ ಅತೀ ಕನಿಷ್ಠ ಅಂದರೆ ಶೇ. 3.54ಕ್ಕೆ ಇಳಿದಿದೆ. ಇದು ಭಾರತೀಯ ರಿಸರ್ವ್‌ ಬ್ಯಾಂಕ್‌ ನಿಗದಿಪಡಿಸಿರುವ ಶೇ.4ಕ್ಕಿಂತ ಕಡಿಮೆ ಎಂಬುದು ಕೂಡ ಅತ್ಯಂತ ಗಮನಾರ್ಹ. ರಾಷ್ಟ್ರೀಯ ಸಾಂಖೀಕ ಕಚೇರಿ ಬಿಡುಗಡೆ ಮಾಡಿರುವ ಜುಲೈ ತಿಂಗಳ ದತ್ತಾಂಶಗಳ ಪ್ರಕಾರ, ಆಹಾರ ವಸ್ತುಗಳ ಸಹಿತ ಅಗತ್ಯ ವಸ್ತುಗಳ ಬೆಲೆಯಲ್ಲಿ ಇಳಿಕೆಯಾಗಿರುವುದೇ ಹಣದುಬ್ಬರ ಇಷ್ಟೊಂದು ಕಡಿಮೆಯಾಗಲು ಪ್ರಮುಖ ಕಾರಣ. ಈ ಹಿಂದೆ ಅಂದರೆ 2019ರ ಸೆಪ್ಟಂಬರ್‌ನಲ್ಲಿ ಚಿಲ್ಲರೆ ಹಣದುಬ್ಬರವು ಶೇ. 3.99ರಷ್ಟು ದಾಖಲಾಗಿತ್ತು.

ಬೇಸಗೆಯಲ್ಲಿ ಅಧಿಕ ತಾಪಮಾನದ ಪರಿಣಾಮ ದೇಶದ ಹಲವೆಡೆ ಒಂದಿಷ್ಟು ಮುಂಚಿತವಾಗಿ ಬೇಸಗೆ ಮಳೆ ಸುರಿದಿತ್ತು. ಹೀಗಾಗಿ ರೈತರು ಕೆಲವು ಆಹಾರ ಬೆಳೆಗಳ ಬಿತ್ತನೆ, ನಾಟಿ ಕಾರ್ಯವನ್ನು ನಿಗದಿತ ಅವಧಿಗೂ ಮುನ್ನವೇ ಆರಂಭಿಸಿದ್ದರಿಂದಾಗಿ ಮಾರುಕಟ್ಟೆಗೆ ಕೆಲವು ಬೆಳೆಗಳು ಸಾಕಷ್ಟು ಮುಂಚಿತವಾಗಿ ಪೂರೈಕೆಯಾಗಿವೆ. ಬೇಡಿಕೆಗೆ ತಕ್ಕಷ್ಟು ಪೂರೈಕೆ ಇದ್ದುದರಿಂದಾಗಿ ಆಹಾರ ಪದಾರ್ಥಗಳ ಬೆಲೆ ಹೆಚ್ಚೇನೂ ಏರಿಳಿತ ಕಾಣದೆ ಯಥಾಸ್ಥಿತಿಯನ್ನು ಕಾಯ್ದುಕೊಳ್ಳುವಲ್ಲಿ ಸಫ‌ಲವಾಗಿದೆ.

ಇದೇ ವೇಳೆ ನಿವ್ವಳ ತೆರಿಗೆ ಸಂಗ್ರಹ ಕೂಡ ಶೇ.22.48ರಷ್ಟು ಹೆಚ್ಚಳ ಕಂಡಿದೆ. ಉತ್ಪಾದನ ವಲಯ ಒಂದಿಷ್ಟು ಹಿನ್ನಡೆ ಕಂಡಿದೆಯಾದರೂ ಮುಂದಿನ ದಿನಗಳಲ್ಲಿ ಈ ಕ್ಷೇತ್ರವೂ ಚೇತರಿಸಿಕೊಳ್ಳುವ ಲಕ್ಷಣಗಳು ಗೋಚರಿಸುತ್ತಿವೆ. ಒಟ್ಟಾರೆ ಬೆಳವಣಿಗೆಗೆಗಳು ದೇಶದ ಆರ್ಥಿಕತೆಯನ್ನು ಇನ್ನಷ್ಟು ಸದೃಢಗೊಳಿಸಲು ಪೂರಕವಾಗಿವೆ. ಆರ್‌ಬಿಐ ಮತ್ತು ಸರಕಾರದ ಕಠಿನ ನಿಲುವಿನ ಪರಿಣಾಮ ಒಂದೆಡೆಯಿಂದ ಸರಕಾರದ ಬೊಕ್ಕಸ ತುಂಬುತ್ತಿದ್ದರೆ ಮತ್ತೂಂದೆಡೆಯಿಂದ ದೇಶದ ಆರ್ಥಿಕತೆ ವಿಶ್ವದಲ್ಲಿಯೇ ಮುಂಚೂಣಿಯಲ್ಲಿ ಬೆಳವಣಿಗೆ ಹೊಂದುತ್ತಿದೆ.

ಏತನ್ಮಧ್ಯೆ ಆಗಸ್ಟ್‌-ಸೆಪ್ಟಂಬರ್‌ ತಿಂಗಳ ಅವಧಿಯಲ್ಲಿ ದೇಶದ ಹಲವೆಡೆ ಭಾರೀ ಮಳೆಯಾಗಿ ಪ್ರವಾಹ ತಲೆದೋರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದ್ದು, ಬೆಳೆ ಹಾನಿಗೀಡಾಗುವ ಆತಂಕ ತಲೆದೋರಿದೆ. ಹೀಗಾದಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಆಹಾರ ಪದಾರ್ಥಗಳು ಮಾರುಕಟ್ಟೆಗೆ ಆವಕವಾಗುವ ಸಾಧ್ಯತೆಗಳು ಕಡಿಮೆ. ಅಷ್ಟು ಮಾತ್ರವಲ್ಲದೆ ಮುಂದಿನ ದಿನಗಳಲ್ಲಿ ಹಬ್ಬಗಳ ಸರಣಿ ಆರಂಭಗೊಳ್ಳಲಿದ್ದು ಆಹಾರ ಪದಾರ್ಥಗಳಿಗೆ ಹೆಚ್ಚಿನ ಬೇಡಿಕೆ ಕುದುರಲಿದೆ. ಕಾಳಸಂತೆಕೋರರು ಮತ್ತು ಸಗಟು ವ್ಯಾಪಾರಿಗಳು ಇದನ್ನು ದಾಳವಾಗಿ ಬಳಸಿಕೊಳ್ಳುವ ಎಲ್ಲ ಸಾಧ್ಯತೆಗಳಿರುವುದರಿಂದ ಸರಕಾರ ಇತ್ತ ನಿಗಾ ವಹಿಸಬೇಕು. ಬೆಳೆಗಳ ಸಮರ್ಪಕ ಮತ್ತು ಸುವ್ಯವಸ್ಥಿತ ದಾಸ್ತಾನಿಗೆ ಅಗತ್ಯ ಗೋದಾಮುಗಳ ವ್ಯವಸ್ಥೆಯನ್ನು ಮಾಡಬೇಕು. ಮಾರುಕಟ್ಟೆಯಲ್ಲಿ ಈ ವಸ್ತುಗಳ ಅಭಾವ ಎದುರಾದಲ್ಲಿ ತನ್ನ ದಾಸ್ತಾನಿನಲ್ಲಿರುವ ಸರಕನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿ ಗ್ರಾಹಕರ ಮೇಲೆ ಹೆಚ್ಚಿನ ಹೊರೆ ಬೀಳದಂತೆ ಎಚ್ಚರ ವಹಿಸಬೇಕು. ಇಲ್ಲವಾದಲ್ಲಿ ಚಿಲ್ಲರೆ ಹಣದುಬ್ಬರ ಮತ್ತೆ ಏರು ಹಾದಿಯನ್ನು ಹಿಡಿದು ಆರ್ಥಿಕತೆಯ ನಾಗಾಲೋಟಕ್ಕೆ ಕಡಿವಾಣ ಹಾಕಲಿದೆ.

ಟಾಪ್ ನ್ಯೂಸ್

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Assembly Election: ಜಮ್ಮು-ಕಾಶ್ಮೀರದಲ್ಲಿ ಪ್ರಜಾಪ್ರಭುತ್ವದ ಹಬ್ಬ

Assembly Election: ಜಮ್ಮು-ಕಾಶ್ಮೀರದಲ್ಲಿ ಪ್ರಜಾಪ್ರಭುತ್ವದ ಹಬ್ಬ

Namma-clinic

Karnataka; ಬಸ್‌ ನಿಲ್ದಾಣಗಳಲ್ಲಿ ನಮ್ಮ ಕ್ಲಿನಿಕ್‌ ಸಮುಚಿತ ನಿರ್ಧಾರ

ರೈತರ ಹಿತರಕ್ಷಣೆ ನೆಪದಲ್ಲಿ ಗ್ರಾಹಕರಿಗೆ ಬರೆ ಸಲ್ಲದು

ರೈತರ ಹಿತರಕ್ಷಣೆ ನೆಪದಲ್ಲಿ ಗ್ರಾಹಕರಿಗೆ ಬರೆ ಸಲ್ಲದು

ಪರೀಕ್ಷಾ ಅಕ್ರಮಗಳ ತಡೆಗೆ ಎಸ್‌ಎಸ್‌ಸಿ ಕಠಿನ ನಿಲುವುಪರೀಕ್ಷಾ ಅಕ್ರಮಗಳ ತಡೆಗೆ ಎಸ್‌ಎಸ್‌ಸಿ ಕಠಿನ ನಿಲುವು

ಪರೀಕ್ಷಾ ಅಕ್ರಮಗಳ ತಡೆಗೆ ಎಸ್‌ಎಸ್‌ಸಿ ಕಠಿನ ನಿಲುವು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.