ಪ್ರವೇಶ ಪತ್ರದ ವಿಚಾರದಲ್ಲಿ ಮಕ್ಕಳ ಜೀವನದ ಜತೆ ಆಟ ಬೇಡ 


Team Udayavani, Jul 16, 2021, 6:40 AM IST

ಪ್ರವೇಶ ಪತ್ರದ ವಿಚಾರದಲ್ಲಿ ಮಕ್ಕಳ ಜೀವನದ ಜತೆ ಆಟ ಬೇಡ 

ಜುಲೈ 19 ಹಾಗೂ 22ರಂದು ಎಸೆಸೆಲ್ಸಿ ಪರೀಕ್ಷೆ ನಡೆಸಲು ರಾಜ್ಯ ಸರಕಾರ ಹಾಗೂ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ, ಜಿಲ್ಲಾಡಳಿತಗಳು ಎಲ್ಲ ರೀತಿಯ ಸಿದ್ಧತೆ ಮಾಡಿಕೊಂಡಿವೆ. ಆದರೆ ಪರೀಕ್ಷೆ ಬರೆಯಬೇಕಿ ರುವ ಅನೇಕ ವಿದ್ಯಾರ್ಥಿಗಳಿಗೆ ಇನ್ನು ಪ್ರವೇಶ ಪತ್ರವೇ ಸಿಕ್ಕಿಲ್ಲ. ಪ್ರವೇಶ ಪತ್ರ ಇಲ್ಲದೇ ಯಾವೊಬ್ಬ ವಿದ್ಯಾರ್ಥಿಯೂ ಪರೀಕ್ಷೆ ಬರೆಯಲು ಸಾಧ್ಯವಿಲ್ಲ. ಹೀಗಾಗಿ ಅತೀ ತುರ್ತಾಗಿ ವಿದ್ಯಾರ್ಥಿಗಳಿಗೆ ಪ್ರವೇಶ ಪತ್ರ ಒದಗಿಸುವ ಕಾರ್ಯವನ್ನು ಸರಕಾರ ಮಾಡಬೇಕಿದೆ.

ಕೊರೊನಾದಿಂದ 2020-21ನೇ ಶೈಕ್ಷಣಿಕ ಚಟುವಟಿಕೆಗಳು ಭೌತಿಕ ವಾಗಿ ಸರಿಯಾಗಿ ನಡೆದಿಲ್ಲ. ವಿದ್ಯಾಗಮ, ಆನ್‌ಲೈನ್‌ ತರಗತಿ, ಪೂರ್ವ ಮುದ್ರಿತ ವೀಡಿಯೋ ತರಗತಿ ಹೀಗೆ ಸ್ಥಳೀಯ ಸೌಲಭ್ಯಗಳ ಅನುಸಾರ ತರ ಗತಿ ನಡೆದಿತ್ತು. ಹೀಗಾಗಿ ಅನೇಕ ಹೆತ್ತವ‌ರು ತಮ್ಮ ಮಕ್ಕಳನ್ನು ಶಾಲೆಗೆ ದಾಖಲು ಮಾಡಿರಲಿಲ್ಲ ಮತ್ತು ಶುಲ್ಕ ಪಾವತಿಸಿಲ್ಲ. ಆದರೆ ಎಸೆಸೆಲ್ಸಿ ಪರೀಕ್ಷೆಗೆ ಸಂಬಂಧಿಸಿದ ಶುಲ್ಕ ಪಾವತಿಸಿದ್ದಾರೆ. ಶಾಲಾ ಮುಖ್ಯೋ ಪಾಧ್ಯಾಯರ ಮೂಲಕ ವಿದ್ಯಾರ್ಥಿಗಳಿಗೆ ಪ್ರವೇಶ ಪತ್ರ ಆನ್‌ಲೈನ್‌ ಮೂಲಕ ಡೌನ್‌ಲೋಡ್‌ ಮಾಡಿಕೊಳ್ಳಲು ಈಗಾಗಲೇ ಅವಕಾಶ ನೀಡಿ ದ್ದರಿಂದ ಬಹುತೇಕ ಸರಕಾರಿ, ಅನುದಾನಿತ ಹಾಗೂ ಖಾಸಗಿ ಪ್ರೌಢಶಾಲಾ ಮುಖ್ಯಶಿಕ್ಷಕರು ಪ್ರವೇಶ ಪತ್ರ ಡೌನ್‌ಲೋಡ್‌ ಮಾಡಿಕೊಂಡಿದ್ದಾರೆ. ಆದರೆ ಕೆಲವೇ ಕೆಲವು ಖಾಸಗಿ ಶಾಲೆಗಳು ಶುಲ್ಕ ಪಾವತಿಸದ ವಿದ್ಯಾರ್ಥಿ ಗಳಿಗೆ ಪ್ರವೇಶ ಪತ್ರ ನೀಡುತ್ತಿಲ್ಲ. ಇದರಿಂದ ವಿದ್ಯಾರ್ಥಿಗಳು ಹಾಗೂ ಅವರ ಹೆತ್ತವ‌ರು ಗೊಂದಲ ಹಾಗೂ ಆತಂಕಕ್ಕೆ ಒಳಗಾಗಿದ್ದಾರೆ.

ಸರಕಾರ ಮತ್ತು ಶಿಕ್ಷಣ ಇಲಾಖೆ ಇದನ್ನು ಗಂಭೀರವಾಗಿ ಪರಿಗಣಿಸಿ, ಎಲ್ಲ ವಿದ್ಯಾರ್ಥಿಗಳಿಗೂ ಪ್ರವೇಶ ಪತ್ರ ದೊರೆಯುವಂತೆ ಮಾಡಬೇಕು.  ಈಗಾಗಲೇ ಬಿಇಓ ಕಚೇರಿ ಮೂಲಕ ಪ್ರವೇಶ ಪತ್ರ ಪಡೆಯಬಹುದೆಂಬ ನಿರ್ಧಾರ ಕೈಗೊಂಡಿದ್ದು, ಇದು ಪರಿಣಾಮಕಾರಿಯಾಗಿ ಜಾರಿಗೆ ಬರಬೇಕು. ಶಾಲೆಯಲ್ಲಿ ದಾಖಲಾತಿ ಶುಲ್ಕ ಪಾವತಿಸಿಲ್ಲ ಎಂಬ ಕಾರಣಕ್ಕಾಗಿ ವಿದ್ಯಾರ್ಥಿ ಗಳ ಶೈಕ್ಷಣಿಕ ಭವಿಷ್ಯ ಹಾಳು ಮಾಡುವುದು ಸರಿಯಲ್ಲ. ಕೊರೊನಾ ತಂದೊಡ್ಡಿರುವ ಹಲವು ರೀತಿಯ ಸಮಸ್ಯೆ, ಆರ್ಥಿಕ ಸಂಕಷ್ಟದಿಂದ ಶುಲ್ಕ ಪಾವತಿಸಲೂ ಸಾಧ್ಯವಾಗದೇ ಇರಬಹುದು. ಮುಂದೆ ಕಂತುಗಳ ರೂಪ ದಲ್ಲಿ ಶುಲ್ಕ ಪಾವತಿ ಮಾಡಬಹುದು. ಇದಕ್ಕಾಗಿ ಮಕ್ಕಳ ಹೆತ್ತವ‌ರಿಗೆ ಸರಕಾರವೇ ಸಮಯಾವಕಾಶ ಕಲ್ಪಿಸಬೇಕಾಗುತ್ತದೆ. ಇವೆೆಲ್ಲದಕ್ಕೂ ಮಿಗಿ ಲಾಗಿ ಎಲ್ಲರಿಗೂ ಪ್ರವೇಶ ಪತ್ರ ಸಿಗುವಂತೆ ಮಾಡಬೇಕು.

ವರ್ಷ ಪೂರ್ತಿ ಅಧ್ಯಯನ ಮಾಡಿ, ಈಗ ಪರೀಕ್ಷೆ ಬರೆಯಲು ಸಾಧ್ಯ ವಾಗದೇ ಇದ್ದರೆ ವಿದ್ಯಾರ್ಥಿಗಳು ಮಾನಸಿಕವಾಗಿ ಕುಗ್ಗಿ ಹೋಗುವ ಸಾಧ್ಯತೆ ಯಿದೆ. ಶುಲ್ಕ ಪಾವತಿಸದೇ ಇರಲು ಕೌಟುಂಬಿಕವಾಗಿ ಹಲವು ಸಮಸ್ಯೆ ಹೆತ್ತವ‌ರಿಗೆ ಇರಬಹುದು. ಆದರೆ ಅದೊಂದೇ ಕಾರಣ ಕ್ಕಾಗಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಸಾಧ್ಯವಾಗಿಲ್ಲ ಎಂದಾ ದರೆ ಸಾಮಾಜಿಕವಾಗಿಯೂ ಅನೇಕ ಸಮಸ್ಯೆ ಎದುರಾಗಲಿದೆ. ಹೀಗಾಗಿ ಸರಕಾರ  ಜಾಣ ನಡೆಯ ಮೂಲಕ ತುರ್ತಾಗಿ ಪ್ರವೇಶ ಪತ್ರ ಒದಗಿಸಿ ಪರೀಕ್ಷೆ ಬರೆಯಲು ಅವಕಾಶ ಮಾಡಿ ಕೊಡಬೇಕು. ಈ ವರ್ಷ ಎಲ್ಲರೂ ತೇರ್ಗಡೆಯಾಗಲಿರು ವುದರಿಂದ ಅಂಕಪಟ್ಟಿಗಾಗಿ ವಿದ್ಯಾರ್ಥಿಗಳು ಅಲೆದಾಡುವ ಪರಿಸ್ಥಿತಿ ನಿರ್ಮಾಣ ವಾಗದಂತೆಯೂ ಸರಕಾರ ಎಚ್ಚರ ವಹಿಸಬೇಕು. ಶುಲ್ಕ ಪಾವತಿಸಿಲ್ಲ ಎಂದು ಅಂಕಪಟ್ಟಿ, ವರ್ಗಾವಣೆ ಪತ್ರ ಇತ್ಯಾದಿ ದಾಖಲೆ ಶಾಲಾಡಳಿತ ಮಂಡಳಿ ನೀಡದೇ ಇದ್ದರೆ ವಿದ್ಯಾರ್ಥಿಗಳಿಗೆ ಇನ್ನಷ್ಟು ಸಮಸ್ಯೆ ಯಾಗಲಿದೆ. ಹೀಗಾಗಿ ಇದನ್ನು ಸರಕಾರ ಸೂಕ್ಷ್ಮವಾಗಿ ಬಗೆಹರಿಸಬೇಕಿದೆ.

 

ಟಾಪ್ ನ್ಯೂಸ್

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Assembly Election: ಜಮ್ಮು-ಕಾಶ್ಮೀರದಲ್ಲಿ ಪ್ರಜಾಪ್ರಭುತ್ವದ ಹಬ್ಬ

Assembly Election: ಜಮ್ಮು-ಕಾಶ್ಮೀರದಲ್ಲಿ ಪ್ರಜಾಪ್ರಭುತ್ವದ ಹಬ್ಬ

Namma-clinic

Karnataka; ಬಸ್‌ ನಿಲ್ದಾಣಗಳಲ್ಲಿ ನಮ್ಮ ಕ್ಲಿನಿಕ್‌ ಸಮುಚಿತ ನಿರ್ಧಾರ

ರೈತರ ಹಿತರಕ್ಷಣೆ ನೆಪದಲ್ಲಿ ಗ್ರಾಹಕರಿಗೆ ಬರೆ ಸಲ್ಲದು

ರೈತರ ಹಿತರಕ್ಷಣೆ ನೆಪದಲ್ಲಿ ಗ್ರಾಹಕರಿಗೆ ಬರೆ ಸಲ್ಲದು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

1-japp

Japan ಆ್ಯನಿಮೇಟೆಡ್‌ ರಾಮಾಯಣ ಅ.18ಕ್ಕೆ ಮರು ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.