ಗ್ರಾಮೀಣ ಜನರ ಮೊರೆಗೆ ಸ್ಪಂದಿಸಿದ ರಾಜ್ಯ ಸರಕಾರ


Team Udayavani, May 13, 2022, 6:00 AM IST

ಗ್ರಾಮೀಣ ಜನರ ಮೊರೆಗೆ ಸ್ಪಂದಿಸಿದ ರಾಜ್ಯ ಸರಕಾರ

ಪಟ್ಟಣ ಪಂಚಾಯತ್‌, ಪುರಸಭೆ ವ್ಯಾಪ್ತಿಯಲ್ಲಿ ಖಾಸಗಿ ಜಾಗದ ಮಾರಾಟ, ಮನೆ, ಕಟ್ಟಡಗಳ ನಿರ್ಮಾಣಕ್ಕೆ ನಗರ ಯೋಜನೆ ವಿಭಾಗದಿಂದ ಅನುಮತಿ ಪಡೆಯುವುದನ್ನು ಈ ಹಿಂದೆ ಕಡ್ಡಾಯಗೊಳಿಸಿದ್ದ ರಾಜ್ಯ ಸರಕಾರ ಇದೀಗ ಕೊನೆಗೂ ಜನಾಗ್ರಹಕ್ಕೆ ಮಣಿದು ಹಾಲಿ ಕಾಯ್ದೆಗೆ ತಿದ್ದುಪಡಿ ತಂದು ಈ ನಿಯಮದಿಂದ ವಿನಾಯಿತಿ ನೀಡಲು ತೀರ್ಮಾನಿಸಿದೆ.

ಟೌನ್‌ ಪ್ಲಾನಿಂಗ್‌ ಅನುಮತಿ ಕಡ್ಡಾಯ ನಿಯಮ ಜಾರಿಯಾದಂದಿನಿಂದ ಮನೆ, ಕಟ್ಟಡ ನಿರ್ಮಾಣ ಅನುಮತಿ, 11 ಇ-ನಕ್ಷೆ, ಆಸ್ತಿ ಮಾರಾಟಕ್ಕಾಗಿ ಜನರು ನಗರ ಯೋಜನೆ ಪ್ರಾಧಿಕಾರ ಕಚೇರಿ ಇರುವ ನಗರಕ್ಕೆ ಜನರು ಅಲೆದಾಡುವಂತಾಗಿತ್ತು. ಪುರಸಭೆ, ಪಟ್ಟಣ ಪಂಚಾಯತ್‌ ವ್ಯಾಪ್ತಿಯಲ್ಲಿ ನಗರ ಯೋಜನಾ ಪ್ರಾಧಿಕಾರ ಇರುವುದು ತೀರಾ ವಿರಳವಾಗಿರುವುದರಿಂದ ಜನರು ಇವೆಲ್ಲವುಗಳಿಗೆ ಅನುಮತಿ ಪಡೆಯಲು ಜಿಲ್ಲಾ ಕೇಂದ್ರವನ್ನೇ ಆಶ್ರಯಿಸಬೇಕಾದ ಅನಿವಾರ್ಯತೆ ಸೃಷ್ಟಿಯಾಗಿತ್ತು. ಅಷ್ಟು ಮಾತ್ರವಲ್ಲದೆ ಜನರ ಈ ಅರ್ಜಿಗಳಿಗೆ ನಗರ ಯೋಜನೆ ಪ್ರಾಧಿಕಾರ ಒಂದಲ್ಲ ಒಂದು ತಗಾದೆ ತೆಗೆದು ಅದಕ್ಕೆ ಅನುಮತಿ ನೀಡಲು ಸತಾಯಿಸುತ್ತಿದ್ದ ಪ್ರಸಂಗಗಳೂ ಸಾಮಾನ್ಯವಾಗಿದ್ದವು. ಇದೇ ಕಾರಣದಿಂದ ಮನೆ, ಕಟ್ಟಡ ನಿರ್ಮಾಣಕ್ಕಾಗಿ ಜನರು ಸಾಲಕ್ಕಾಗಿ ಅರ್ಜಿ ಸಲ್ಲಿಸಿದ ಸಂದರ್ಭದಲ್ಲಿ ದಾಖಲೆಪತ್ರಗಳು ಸಮರ್ಪಕವಾಗಿಲ್ಲ ಎಂಬ ಕಾರಣವೊಡ್ಡಿ ಅರ್ಜಿಯನ್ನು ತಿರಸ್ಕರಿಸುತ್ತಿದ್ದ ಘಟನೆಗಳೂ ನಡೆಯುತ್ತಿದ್ದವು.

ಹಾಲಿ ಪಟ್ಟಣ ಪಂಚಾಯತ್‌ ಮತ್ತು ಪುರಸಭೆ ಮುಂದಿನ ದಿನಗಳಲ್ಲಿ ಬೇಕಾಬಿಟ್ಟಿಯಾಗಿ ಅಭಿವೃದ್ಧಿ ಹೊಂದಿದಲ್ಲಿ ಈಗಿನ ನಗರಗಳು ಎದುರಿಸುತಿ¤ರುವ ಸಮಸ್ಯೆಯನ್ನೇ ಈ ಪಟ್ಟಣಗಳೂ ಎದುರಿಸಬೇಕಾಗಿ ಬರಬಹುದು ಎಂಬ ದೂರದೃಷ್ಟಿಯಿಂದ ಸರಕಾರ ಈ ನಿಯಮವನ್ನು ಜಾರಿಗೊಳಿಸಿತ್ತಾದರೂ ಈ ಪಟ್ಟಣಗಳಲ್ಲಿನ ವಾಸ್ತವ ಸ್ಥಿತಿಯನ್ನು ಅರಿಯುವ ಕನಿಷ್ಠ ಪ್ರಯತ್ನವನ್ನೂ ಮಾಡದೆ ಏಕಾಏಕಿಯಾಗಿ ನಿಯಮ ಜಾರಿಗೊಳಿಸಿದ್ದರಿಂದಾಗಿ ನಗರೇತರ ಪ್ರದೇಶಗಳ ಜನರು ತೀವ್ರ ಸಂಕಷ್ಟ ಅನುಭವಿಸುವಂತಾಗಿತ್ತು. ಅಷ್ಟು ಮಾತ್ರವಲ್ಲದೆ ಕರಾವಳಿ ಮತ್ತು ಮಲೆನಾಡು ಪ್ರದೇಶಗಳಲ್ಲಿ ಅರಣ್ಯ ಪ್ರದೇಶಗಳಲ್ಲಿ ಮನೆ ನಿರ್ಮಿಸಿಕೊಳ್ಳುವ ಪಟ್ಟಾ ಜಮೀನುಗಳಿಗೂ ಟೌನ್‌ ಪ್ಲಾನಿಂಗ್‌ ನಿಯಮ ಅನ್ವಯವಾಗುತ್ತಿದ್ದುದರಿಂದ ಮನೆ ನಿರ್ಮಾಣ ಇವರ ಪಾಲಿಗೆ ಕನಸಿನ ಮಾತಾಗಿ ಬಿಟ್ಟಿತ್ತು. ಈ ಗೊಂದಲಕಾರಿ ನಿಯಮದಿಂದಾಗಿ ಗ್ರಾ. ಪಂ. ಮಟ್ಟದಲ್ಲಿ ಮನೆ, ಕಟ್ಟಡ ನಿರ್ಮಾಣ ಕಾರ್ಯಗಳು ಬಹುತೇಕ ಸ್ಥಗಿತವಾಗಿದ್ದವು. ಸಹಜ ವಾಗಿ ನಗರ ಯೋಜನೆ ಪ್ರಾಧಿಕಾರದ ಕಚೇರಿಗಳಲ್ಲಿ ಇಂಥ ಅರ್ಜಿಗಳ ರಾಶಿಯೇ ಬೀಳುವಂತಾಗಿತ್ತಲ್ಲದೆ ಅಗತ್ಯ ಸಿಬಂದಿಯ ಕೊರತೆಯಿಂದಾಗಿ ಅರ್ಜಿಗಳ ವಿಲೇವಾರಿಯೂ ಆಮೆಗತಿಯಲ್ಲಿ ಸಾಗಿತ್ತು. ಈ ಎಲ್ಲ ಸಮಸ್ಯೆಗಳಿಂದ ರೋಸಿ ಹೋಗಿದ್ದ ಜನತೆ ನಿರಂತರವಾಗಿ ಈ ನಿಯಮ ದಿಂದ ಗ್ರಾಮ ಪಂಚಾಯತ್‌, ಪಟ್ಟಣ ಪಂಚಾಯತ್‌ ಮತ್ತು ಪುರಸಭೆ ಗಳನ್ನು ಹೊರಗಿಡುವಂತೆ ಮನವಿ ಸಲ್ಲಿಸುತ್ತಲೇ ಬಂದಿದ್ದರು.

ಈಗ ರಾಜ್ಯ ಸಚಿವ ಸಂಪುಟ ಕೊನೆಗೂ ಕಾಯ್ದೆಗೆ ತಿದ್ದುಪಡಿ ತರಲು ಸಮ್ಮತಿಸಿದೆ. ಆದರೆ ಈ ವ್ಯಾಪ್ತಿಯಲ್ಲಿ ಒಂದು ಎಕ್ರೆಗಿಂತ ಹೆಚ್ಚಿನ ಪ್ರದೇಶ ದಲ್ಲಿ ಬಡಾವಣೆ ನಿರ್ಮಾಣ, ನಿವೇಶನ, ಕಟ್ಟಡ ನಿರ್ಮಾಣ ಮಾಡ ಬೇಕಾದರೆ ನಗರ ಯೋಜನೆ ಪ್ರಾಧಿಕಾರದ ಅನುಮತಿಯನ್ನು ಪಡೆದು ಕೊಳ್ಳುವುದು ಕಡ್ಡಾಯವಾಗಿದೆ. ಒಟ್ಟಾರೆ ರಾಜ್ಯ ಸರಕಾರದ ಈ ನಿರ್ಧಾರದಿಂದ ಗ್ರಾಮೀಣ ಮತ್ತು ಅರೆ ನಗರ ಪ್ರದೇಶದ ಜನರು ನಿಟ್ಟುಸಿರು ಬಿಡುವಂತಾಗಿದೆ.

 

ಟಾಪ್ ನ್ಯೂಸ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-editorial

Editorial: ವಿದ್ಯಾರ್ಹತೆಗೆ ದೇಶವ್ಯಾಪಿ ಮಾನ್ಯತೆ, ಹೈಕೋರ್ಟ್‌ ತೀರ್ಪು ನ್ಯಾಯೋಚಿತ

13-editorial

Temperature: ಸಂಪಾದಕೀಯ-ತಾಪಮಾನ ಹೆಚ್ಚಳದ ಆತಂಕ: ಮುಂಜಾಗ್ರತೆಯೇ ಮದ್ದು

ಉಚಿತಗಳ ಆಮಿಷಗಳಿಗೆ ಕಡಿವಾಣ: ಚು.ಆಯೋಗ ಬದ್ಧತೆ ತೋರಲಿ

ಉಚಿತಗಳ ಆಮಿಷಗಳಿಗೆ ಕಡಿವಾಣ: ಚು.ಆಯೋಗ ಬದ್ಧತೆ ತೋರಲಿ

vidhana-Soudha

Editorial: ಪ್ರಾಥಮಿಕ ಶಾಲಾ ಶಿಕ್ಷಕರ ಪಠ್ಯೇತರ ಹೊರೆ ಇಳಿಸಿ

ಮಹಿಳಾ ಆರೋಪಿಗಳ ಬಂಧನ ವೇಳೆ ವಿವೇಚನೆ ಅತ್ಯವಶ್ಯ

ಮಹಿಳಾ ಆರೋಪಿಗಳ ಬಂಧನ ವೇಳೆ ವಿವೇಚನೆ ಅತ್ಯವಶ್ಯ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1sadgu

Pariksha Pe Charcha: ಸಾರ್ಟ್‌ಫೋನ್‌ಗಿಂತಲೂ ನೀವು ಸಾರ್ಟ್‌ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.